Cricket Festival: ಇಂದಿನಿಂದ ಮಹಾರಾಜ ಟ್ರೋಫಿ ಟಿ20

6 ತಂಡಗಳ ಮಧ್ಯೆ ಹಣಾಹಣಿ,  17 ದಿನ, 33 ಪಂದ್ಯ

Team Udayavani, Aug 14, 2024, 10:41 PM IST

MAHARAJA-Trophy

ಬೆಂಗಳೂರು: “ಮಹಾರಾಜ ಟ್ರೋಫಿ’ ಟಿ20 ಪಂದ್ಯಾವಳಿ ಕನ್ನಡಿಗರಿಗೆ ಕ್ರಿಕೆಟ್‌ ರಸದೌತಣ ಬಡಿಸಲು ತಯಾರಾಗಿದೆ. ಗುರುವಾರದಿಂದ ಮೊದಲ್ಗೊಂಡು 17 ದಿನಗಳ ಕಾಲ ನಡೆಯಲಿರುವ ರಾಜ್ಯದ ಈ ಕ್ರಿಕೆಟ್‌ ಹಬ್ಬ, ಸೆ. ಒಂದರಂದು ಕೊನೆಗೊಳ್ಳಲಿದೆ.

ಟೂರ್ನಿಯ ಎಲ್ಲ ಪಂದ್ಯಗಳು ಬೆಂಗಳೂರಿನ “ಎಂ. ಚಿನ್ನಸ್ವಾಮಿ ಸ್ಟೇಡಿಯಂ’ನಲ್ಲಿ ನಡೆಯಲಿವೆ. ಒಟ್ಟು 6 ತಂಡಗಳು ಟ್ರೋಫಿಗಾಗಿ ಸೆಣಸಾಡಲಿವೆ. ಇವುಗಳೆಂದರೆ ಬೆಂಗಳೂರು ಬ್ಲಾಸ್ಟರ್, ಹುಬ್ಬಳ್ಳಿ ಟೈಗರ್, ಗುಲ್ಬರ್ಗ ಮಿಸ್ಟಿಕ್ಸ್‌, ಮೈಸೂರು ವಾರಿಯರ್, ಮಂಗಳೂರು ಡ್ರ್ಯಾಗನ್ಸ್‌, ಶಿವಮೊಗ್ಗ ಲಯನ್ಸ್‌. ಲೀಗ್‌, ಸೆಮಿಫೈನಲ್‌ ಮತ್ತು ಫೈನಲ್‌ ಸೇರಿ ಒಟ್ಟು 33 ಪಂದ್ಯ ಗಳು ರಂಜಿಸಲಿವೆ. ಎರಡು ಪಂದ್ಯ ಗಳಿರುವ ದಿನ ಅಪರಾಹ್ನ 3 ಗಂಟೆಗೆ ಮತ್ತು ರಾತ್ರಿ 7 ಗಂಟೆಗೆ ಆರಂಭಗೊಳ್ಳಲಿವೆ.

ಕೆಪಿಎಲ್‌ನ ಹೆಸರು ಬದಲು
ಕರ್ನಾಟಕ ರಾಜ್ಯ ಕ್ರಿಕೆಟ್‌ ಅಸೋಸಿಯೇಶನ್‌ (ಕೆಎಸ್‌ಸಿಎ) ಮುಂದಾಳತ್ವದಲ್ಲಿ ನಡೆಯುತ್ತಿರುವ ಮಹಾರಾಜ ಟ್ರೋಫಿ 3ನೇ ಆವೃತ್ತಿ ಇದು. 2022ರಲ್ಲಿ ಮೊದಲ ಆವೃತ್ತಿ ನಡೆದಾಗ ಟೂರ್ನಿಗೆ ಕರ್ನಾಟಕ ಪ್ರೀಮಿಯರ್‌ ಲೀಗ್‌ (ಕೆಪಿ ಎಲ್‌) ಎಂದು ಕರೆಯಲಾಗಿತ್ತು. ಆದರೆ ಬಳಿಕ, ಮೈಸೂರು ಮಹಾರಾಜರಾಗಿದ್ದ ಜಯಚಾಮರಾಜ ಒಡೆಯರ್‌ ಸ್ಮರಣಾರ್ಥ, “ಮಹಾರಾಜ ಟ್ರೊಫಿ’ ಎಂದು ಬದಲಾಯಿಸಲಾಯಿತು.

ಗುಲ್ಬರ್ಗ, ಹುಬ್ಬಳ್ಳಿ ಚಾಂಪಿಯನ್ಸ್‌
ಮಹಾರಾಜ ಟ್ರೋಫಿ 2022ರ ಚೊಚ್ಚಲ ಆವೃತ್ತಿಯಲ್ಲಿ ಗುಲ್ಬರ್ಗ ಮಿಸ್ಟಿಕ್ಸ್‌ ತಂಡ ಚಾಂಪಿಯನ್ಸ್‌ ಪಟ್ಟ ಅಲಂಕರಿಸಿತ್ತು. ಕಳೆದ ವರ್ಷ ಹುಬ್ಬಳ್ಳಿ ಟೈಗರ್ ತಂಡ ಪ್ರಶಸ್ತಿ ಗೆದ್ದಿತ್ತು. ಮನೀಶ್‌ ಪಾಂಡೆ, ವೈಶಾಕ್‌ ವಿಜಯ್‌ ಕುಮಾರ್‌, ಕರುಣ್‌ ನಾಯರ್‌, ದೇವದತ್‌ ಪಡಿಕ್ಕಲ್‌ ಮೊದಲಾದ ತಾರಾ ಆಟಗಾರರು ಈ ಬಾರಿಯ ಪಂದ್ಯಾವಳಿಯಲ್ಲೂ ಕಣಕ್ಕಿಳಿಯುತ್ತಿರುವುದರಿಂದ ಟೂರ್ನಿ ಕುತೂಹಲ ಮೂಡಿಸಿದೆ.

ಎಲ್‌.ಆರ್‌. ಚೇತನ್‌ ದುಬಾರಿ ಆಟಗಾರ
ಈ ಆವೃತ್ತಿಗಾಗಿ ಕಳೆದ ಜು. 25ರಂದು ಬೆಂಗಳೂರಿನಲ್ಲಿ ನಡೆದ ಆಟಗಾರರ ಹರಾಜಿನಲ್ಲಿ ವಿಕೆಟ್‌ ಕೀಪರ್‌ ಕಮ್‌ ಬ್ಯಾಟರ್‌ ಎಲ್‌.ಆರ್‌. ಚೇತನ್‌ ಅತೀ ದುಬಾರಿ ಆಟಗಾರರಾಗಿ ಹೊರಹೊಮ್ಮಿದ್ದರು. ಅವರು 8.6 ಲಕ್ಷ ರೂ.ಗೆ ಬೆಂಗಳೂರು ಪಾಲಾಗಿದ್ದರು. ಉಳಿದಂತೆ ಶ್ರೇಯಸ್‌ ಗೋಪಾಲ್‌ (7.6 ಲಕ್ಷ ರೂ., ಮಂಗಳೂರು), ಕೃಷ್ಣಪ್ಪ ಗೌತಮ್‌ (7.4 ಲಕ್ಷ, ಮೈಸೂರು), ಲವನೀತ್‌ ಸಿಸೋಡಿಯಾ (7.2 ಲಕ್ಷ, ಗುಲ್ಬರ್ಗ), ಮೊಹಮ್ಮದ್‌ ತಾಹ (6.6 ಲಕ್ಷ, ಹುಬ್ಬಳ್ಳಿ) ದುಬಾರಿ 5 ಆಟಗಾರರಲ್ಲಿ ಕಾಣಿಸಿಕೊಂಡಿದ್ದರು.

ಇಂದಿನ ಪಂದ್ಯ
1. ಬೆಂಗಳೂರು-ಗುಲ್ಬರ್ಗ
ಆರಂಭ: ಅ. 3.00
2. ಶಿವಮೊಗ್ಗ-ಮೈಸೂರು
ಆರಂಭ: ರಾತ್ರಿ 7.00
ಪ್ರಸಾರ: ಸ್ಟಾರ್‌ ನ್ಪೋರ್ಟ್ಸ್ 2,
ಸ್ಟಾರ್‌ ನ್ಪೋರ್ಟ್ಸ್ ಕನ್ನಡ

ಟಾಪ್ ನ್ಯೂಸ್

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Modi (2)

PM ಮೋದಿ ಅಮೆರಿಕ ಪ್ರವಾಸ; ಮಣಿಪುರಕ್ಕೆ ಹೋಗುವುದಿಲ್ಲವೇಕೆ?:ಕಾಂಗ್ರೆಸ್ ಪ್ರಶ್ನೆ

High Court: ಮಹಿಳೆ ಅಪಹರಣ ಕೇಸ್‌; ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

High Court: ಮಹಿಳೆ ಅಪಹರಣ ಕೇಸ್‌; ಎಚ್‌.ಡಿ.ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

11

Eshwara Khandre: ಮಹದಾಯಿಗೆ ಅನುಮತಿ ಸಿಗೋವರೆಗೂ ಮರ ಕಡಿಯಲು ಬಿಡಲ್ಲ

H.D.Kumaraswamy

H. D. Kumaraswamy: ರಾಜಕೀಯ ಮಾಡಲು, ಬೆಂಕಿ ಹಚ್ಚಲು ಬಂದಿಲ್ಲ

1-frr

BJP ಶಾಸಕ ಮುನಿರತ್ನಗೆ ಷರತ್ತುಬದ್ಧ ಜಾಮೀನು; ಆದರೂ ತಪ್ಪಿಲ್ಲ ಸಂಕಷ್ಟ!

HP ಯಿಂದ ಹೊಸ ಪ್ರಿಂಟರ್‌ಗಳ ಬಿಡುಗಡೆ

HP ಯಿಂದ ಹೊಸ ಪ್ರಿಂಟರ್‌ಗಳ ಬಿಡುಗಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

INDvsBAN: Ashwin, Jadeja prop up slumping India; A local boy scored a century

‌INDvsBAN: ಕುಸಿದ ಭಾರತಕ್ಕೆ ಆಸರೆಯಾದ ಅಶ್ವಿನ್‌, ಜಡೇಜಾ; ಶತಕ ಬಾರಿಸಿದ ಲೋಕಲ್‌ ಬಾಯ್

INDvsBAN: ”ಈತ ಭಾರತದ ಬಾಬರ್‌ ಅಜಂ..”: ಟೀಂ ಇಂಡಿಯಾ ಆಟಗಾರನಿಗೆ ನೆಟ್ಟಿಗರ ತರಾಟೆ

INDvsBAN: ”ಈತ ಭಾರತದ ಬಾಬರ್‌ ಅಜಂ..”: ಟೀಂ ಇಂಡಿಯಾ ಆಟಗಾರನಿಗೆ ನೆಟ್ಟಿಗರ ತರಾಟೆ

Cricket: ಲಂಕಾ ಕ್ರಿಕೆಟಿಗನನ್ನು 20 ವರ್ಷಗಳ ಕಾಲ ಬ್ಯಾನ್‌ ಮಾಡಿದ ಕ್ರಿಕೆಟ್‌ ಆಸ್ಟ್ರೇಲಿಯಾ

Cricket: ಲಂಕಾ ಕ್ರಿಕೆಟಿಗನನ್ನು 20 ವರ್ಷಗಳ ಕಾಲ ಬ್ಯಾನ್‌ ಮಾಡಿದ ಕ್ರಿಕೆಟ್‌ ಆಸ್ಟ್ರೇಲಿಯಾ

Ricky Ponting: ಡೆಲ್ಲಿಯಿಂದ ಪಂಜಾಬ್‌ ಗೆ ಬಂದ ರಿಕಿ ಪಾಂಟಿಂಗ್‌

Ricky Ponting: ಡೆಲ್ಲಿಯಿಂದ ಪಂಜಾಬ್‌ ಗೆ ಬಂದ ರಿಕಿ ಪಾಂಟಿಂಗ್‌

Test Series: ಭಾರತ-ಬಾಂಗ್ಲಾ ತಂಡಗಳಿಗೆ ರಿಯಲ್‌ ಟೆಸ್ಟ್‌

Test Series: ಭಾರತ-ಬಾಂಗ್ಲಾ ತಂಡಗಳಿಗೆ ರಿಯಲ್‌ ಟೆಸ್ಟ್‌

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Kundapura: ಪ್ರಾಣಿ ತ್ಯಾಜ್ಯ ಚೀಲದಲ್ಲಿ ಪತ್ತೆ… ಕೇಸು ದಾಖಲು

Kundapura: ಪ್ರಾಣಿ ತ್ಯಾಜ್ಯ ಚೀಲದಲ್ಲಿ ಪತ್ತೆ… ಕೇಸು ದಾಖಲು

1-baa

Mangalore Port ಇಬ್ಬರು ಬಾಲಕಾರ್ಮಿಕರ ರಕ್ಷಣೆ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

12

High Court: ಬಿಎಸ್‌ವೈ ಪೋಕ್ಸೋ ಕೇಸ್‌: ಸೆ.27ಕ್ಕೆ ವಿಚಾರಣೆ ಮುಂದಕ್ಕೆ

Modi (2)

PM ಮೋದಿ ಅಮೆರಿಕ ಪ್ರವಾಸ; ಮಣಿಪುರಕ್ಕೆ ಹೋಗುವುದಿಲ್ಲವೇಕೆ?:ಕಾಂಗ್ರೆಸ್ ಪ್ರಶ್ನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.