Tungabhadra Dam: ಇಂದಿನಿಂದ ಗೇಟ್ ಅವಳವಡಿಕೆ; 2 ಬೃಹತ್ ಕ್ರೇನ್ ಆಗಮನ
ವೆಲ್ಡಿಂಗ್ ಕೆಲಸದಲ್ಲಿ ನಿರತರಾದ ಸಿಬಂದಿ
Team Udayavani, Aug 15, 2024, 6:55 AM IST
ಕೊಪ್ಪಳ/ಹೊಸಪೇಟೆ ತುಂಗಭದ್ರಾ ಜಲಾಶಯದ 19ನೇ ಕ್ರೆಸ್ಟ್ಗೇಟ್ ಚೈನ್ ಲಿಂಕ್ ಮುರಿದ ಹಿನ್ನೆಲೆಯಲ್ಲಿ ತಾತ್ಕಾಲಿಕ ತಡೆಗೆ ಸ್ಟಾಪ್ ಲಾಗ್ ಗೇಟ್ ನಿರ್ಮಾಣಕ್ಕೆ ವಿಜಯನಗರ ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅಹ್ಮದ್ ಖಾನ್ ಬುಧವಾರ ಪೂಜೆ ನೆರವೇರಿಸಿದ್ದು, ಗೇಟ್ ಅಳವಡಿಕೆಗೆ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ಗುರುವಾರದಿಂದ ಗೇಟ್ ಅಳವಡಿಕೆ ಕಾರ್ಯ ಆರಂಭವಾಗಲಿದ್ದು, ಎರಡು ದಿನಗಳಲ್ಲಿ ಪೂರ್ಣಗೊಳ್ಳುವ ಸಾಧ್ಯತೆ ಇದೆ.
ಹೊಸ ಗೇಟ್ ಅಳವಡಿಕೆಗೆ ಬುಧವಾರ ಎರಡು ಕ್ರೇನ್ಗಳು ಆಗಮಿಸಿದ್ದು, ಮೊದಲು ಗೇಟ್ನ ಅಳವಡಿಕೆ ಹೇಗೆ ನಡೆಸಬೇಕು, ಕ್ರೇನ್ಗಳ ಸಂಚಾರದ ವಿಧಾನಗಳ ತಿಳಿಯಲು ಟ್ರಯಲ್ ಪರೀಕ್ಷೆ ಮಾಡಲಾಯಿತು. ಎಂಜಿನಿಯರ್ಗಳ ಜತೆಗೂ ಚರ್ಚೆ ನಡೆಸಲಾಯಿತು. ತಜ್ಞರ ತಂಡ ಗೇಟ್ ಅಳವಡಿಕೆ ಪೂರ್ವದಲ್ಲಿ ಗೇಟ್ ಅಳವಡಿಕೆಗೆ ಬೇಕಿರುವ ಪ್ರೇಮ್ ಸೇರಿದಂತೆ ಇತರ ವೆಲ್ಡಿಂಗ್ಗೆ ಅಗತ್ಯ ಸಾಮಗ್ರಿಗಳನ್ನು ಪೂರೈಕೆ ಮಾಡಿ ವ್ಯವಸ್ಥೆ ಮಾಡಿಟ್ಟುಕೊಂಡಿದ್ದಾರೆ.
ಜಿಂದಾಲ್ನಲ್ಲಿ ಮೂರು ಗೇಟ್ಗಳು ಸಿದ್ಧಗೊಳ್ಳುತ್ತಿದ್ದು, ಅದರಲ್ಲಿ 1 ಗೇಟ್, ಹಿಂದೂಸ್ಥಾನ್ ಹಾಗೂ ನಾರಾಯಣ ಎಂಜಿನಿಯರಿಂಗ್ ವರ್ಕ್ಸ್ ನಿಂದ ತಲಾ ಒಂದು ಗೇಟ್ ಆ. 15ರಂದು ಡ್ಯಾಂಗೆ ಆಗಮಿಸಲಿದೆ. ಆ ಬಳಿಕ ಅಳವಡಿಕೆ ಕಾರ್ಯ ಶುರುವಾಗಲಿದೆ. ಬುಧವಾರ ಅಳವಡಿಕೆಗೆ ಬೇಕಾದ ತಾಂತ್ರಿಕ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಅಧಿಕಾರಿ ವಲಯದಿಂದ ಮಾಹಿತಿ ಲಭ್ಯವಾಗಿದೆ.
4 ದಿನದಲ್ಲಿ 21 ಟಿಎಂಸಿ ಹೊರಕ್ಕೆ
ತುಂಗಭದ್ರಾ ಜಲಾಶಯದಿಂದ ಪ್ರತಿದಿನ 1.20 ಲಕ್ಷ ಕ್ಯೂಸೆಕ್ ನೀರು ನದಿಗೆ ಹರಿಸುತ್ತಿರುವುದರಿಂದ ಕೇವಲ ನಾಲ್ಕು ದಿನದಲ್ಲಿ 21 ಟಿಎಂಸಿಯಷ್ಟು ನೀರು ಹರಿದು ಹೋಗಿದೆ. ಆ. 10ರಂದು 104 ಟಿಎಂಸಿ ನೀರು ಸಂಗ್ರಹವಾಗಿತ್ತು. ಬುಧವಾರಕ್ಕೆ ಡ್ಯಾಂನಲ್ಲಿ 83 ಟಿಎಂಸಿ ನೀರು ಮಾತ್ರ ಉಳಿದಿತ್ತು. ಮಲೆನಾಡು ಪ್ರದೇಶದಲ್ಲಿ ಮತ್ತೆ ಮಳೆ ಆಗುತ್ತಿರುವುದರಿಂದ ನದಿಗೆ 32 ಸಾವಿರ ಕ್ಯೂಸೆಕ್ನಷ್ಟು ಒಳ ಹರಿವು ಹೆಚ್ಚಾಗಿದೆ.
ಕಾಲಕಾಲಕ್ಕೆ ಡ್ಯಾಂ ನಿರ್ವಹಣೆ ಆಗಲಿ
ತುಂಗಭದ್ರಾ ಡ್ಯಾಂ ಅನ್ನು ಕಾಲಕಾಲಕ್ಕೆ ನಿರ್ವಹಣೆ ಮಾಡಬೇಕಿದೆ. ಸರಕಾರ ಈಗಾಗಲೇ ತುರ್ತು ಕ್ರಮ ಕೈಗೊಂಡಿದೆ. ಸ್ಥಳದಲ್ಲಿನ ಎಂಜಿನಿಯರ್ ಹಾಗೂ ಗೇಟ್ ಅಳವಡಿಕೆ ಮಾಡುವ ತಜ್ಞರ ಜತೆಗೆ ಚರ್ಚೆ ಮಾಡಿದ್ದೇನೆ. 2-3 ದಿನದಲ್ಲಿ ಗೇಟ್ ಅಳವಡಿಕೆ ಕಾರ್ಯ ಮುಗಿಯುವ ನಿರೀಕ್ಷೆ ಇದೆ ಎಂದು ತಜ್ಞರು ತಿಳಿಸಿದ್ದಾರೆ. ರೈತರು ಆತಂಕ ಪಡುವ ಅಗತ್ಯವಿಲ್ಲ ಎಂದು ಸಿಎಂ ಹೇಳಿದ್ದಾರೆ.
-ಸುತ್ತೂರು ಶ್ರೀ ಶಿವರಾತ್ರೀಶ್ವರ ,ದೇಶಿಕೇಂದ್ರ ಸ್ವಾಮೀಜಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಗಂಗಾವತಿ: ನಗರಸಭೆಯ ಸಾಮಾನ್ಯ ಸಭೆಯಲ್ಲಿ ನಿಯಮಮೀರಿ ಮಹಿಳಾ ಸದಸ್ಯರ ಪತಿರಾಯರು,ಸಂಬಂಧಿಗಳು ಭಾಗಿ
Koppal; ಪ್ರಚೋದನಕಾರಿ ಹೇಳಿಕೆ ಕೊಟ್ಟರೆ ಸಹಿಸಲ್ಲ: ಸಚಿವ ಶಿವರಾಜ ತಂಗಡಗಿ
ಕೊಪ್ಪಳ: ಅದಾಲತ್ನಲ್ಲಿ ಒಂದಾದ 14 ಜೋಡಿ ಇತ್ಯರ್ಥವಾದ 35,721 ಪ್ರಕರಣಗಳು
Koppala: ಮುನಿರತ್ನ ವಿಚಾರದಲ್ಲಿ ಯಾವುದೇ ರಾಜಕೀಯ ಇಲ್ಲ: ಸಚಿವ ಶಿವರಾಜ ತಂಗಡಗಿ
ಗಂಗಾವತಿ: ಮೀಸಲು ಅರಣ್ಯದಲ್ಲಿ ಅವ್ಯಾಹತ ಮರಳು ದಂಧೆ – ಹದಗೆಟ್ಟ ರಸ್ತೆ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Congress-NC ಮೈತ್ರಿಗೆ ಪಾಕ್ ಬೆಂಬಲ, 370ನೇ ವಿಧಿ ಮರುಸ್ಥಾಪನೆ ಅಸಾಧ್ಯ: ಪ್ರಧಾನಿ: ಮೋದಿ
Chess Olympiad: ಚೀನ, ಜಾರ್ಜಿಯ ವಿರುದ್ಧ ಭಾರತಕ್ಕೆ ಜಯ
High Court: ಬಾಂಬ್ ಸ್ಫೋಟ ಹೇಳಿಕೆ; ಶೋಭಾ ಕರಂದ್ಲಾಜೆ ಮೇಲಿನ ಕೇಸ್ ರದ್ದು
15ನೇ ವಿಶ್ವ ಅಗ್ನಿಶಾಮಕ ಕ್ರೀಡಾಕೂಟ: 2 ಚಿನ್ನ ಗೆದ್ದ ಅಶ್ವಿನ್ ಸನಿಲ್ ಕುರ್ಕಾಲು
Commonwealth ಚಾಂಪಿಯನ್ಶಿಪ್ : ಅಲ್ಲುರಿ ಅಜಯ್ಗೆ ಬಂಗಾರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.