BJP ಬೇಗುದಿ ವರಿಷ್ಠರ ಗಮನಕ್ಕೆ ತರುವೆ: ಆರ್.ಅಶೋಕ್
ರಾಜ್ಯ ಬಿಜೆಪಿ ಗೊಂದಲಗಳು ಕೇಂದ್ರದ ನಾಯಕರ ಗಮನಕ್ಕಿದೆ
Team Udayavani, Aug 15, 2024, 7:15 AM IST
ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದಿಂದ ಬಿ.ವೈ. ವಿಜಯೇಂದ್ರ ಬದಲಾವಣೆ ಬಗ್ಗೆ ಹಿರಿಯ ಶಾಸಕರು ಮಾಡುತ್ತಿರುವ ಆಗ್ರಹದ ಬಗ್ಗೆ ವಿಪಕ್ಷ ನಾಯಕ ಆರ್. ಅಶೋಕ್ ಕೊನೆಗೂ ಪ್ರತಿಕ್ರಿಯೆ ನೀಡಿದ್ದು, “ಈ ವಿಚಾರ ಈಗಾಗಲೇ ಬಹಳ ಚರ್ಚೆ ಆಗಿದೆ. ಕೇಂದ್ರ ನಾಯಕರು ಇದನ್ನೆಲ್ಲ ಗಮನಿಸುತ್ತಿದ್ದು, ಸೂಕ್ತ ಸಂದರ್ಭದಲ್ಲಿ ನಿಲುವು ತೆಗೆದುಕೊಳ್ಳುತ್ತಾರೆ’ ಎಂದು ಅಚ್ಚರಿಯ ಹೇಳಿಕೆ ನೀಡಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರ ಜತೆಗೆ ಮಾತನಾಡಿದ ಅವರು, ನಾನು ಸಮಯ ನೋಡಿ ದಿಲ್ಲಿಗೆ ಹೋಗಿ ರಾಜ್ಯದಲ್ಲಿ ನಡೆಯುತ್ತಿರುವ ಬೆಳವಣಿಗೆಗಳನ್ನು ವರಿಷ್ಠರ ಗಮನಕ್ಕೆ ತರುತ್ತೇನೆ. ಎಲ್ಲದಕ್ಕೂ ಒಂದು ಪರಿಹಾರ ಇದ್ದೇ ಇರುತ್ತದೆ. ಅದನ್ನು ದಿಲ್ಲಿಯ ನಾಯಕರು ಶೀಘ್ರ ಮಾಡಬೇಕೆಂಬುದು ನನ್ನ ವಿನಂತಿ ಎಂದು ತಿಳಿಸಿದ್ದಾರೆ.
ಬಳ್ಳಾರಿ ಪಾದ ಯಾತ್ರೆಗೆ ಅಭ್ಯಂತರ ಇಲ್ಲ
ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದ ಹಗರಣ ಸಂಬಂಧ ಪ್ರತ್ಯೇಕಪಾದಯಾತ್ರೆ ನಡೆಸಬೇಕೆಂದು ಪಕ್ಷದಲ್ಲಿ ನಡೆಯುತ್ತಿರುವ ಚರ್ಚೆಗೆ ಉತ್ತರಿಸಿದ ಅಶೋಕ್, ಬಳ್ಳಾರಿ ಪಾದಯಾತ್ರೆ ಬಗ್ಗೆ ಮೊದಲೇ ಪ್ರಸ್ತಾವನೆ ಇತ್ತು. ಯಾವುದನ್ನು ಮೊದಲು ಮಾಡಬೇಕೆಂಬ ಪ್ರಶ್ನೆ ಬಂದಾಗ ಮುಡಾ ಅನಂತರ ಬಳ್ಳಾರಿ ಎಂಬ ತೀರ್ಮಾನವಾಯ್ತು. ಬಿಜೆಪಿಯ ಹಿರಿಯ ಮುಖಂಡರು ಬಳ್ಳಾರಿ ಪಾದಯಾತ್ರೆ ಮಾಡಲು ತೀರ್ಮಾನಿಸಿ¨ªಾರೆ. ನಮ್ಮದು ಅದಕ್ಕೆ ಏನೂ ಅಭ್ಯಂತರ ಇಲ್ಲ. ಕೇಂದ್ರೀಯ ನಾಯಕರು ಒಪ್ಪಿಗೆ ಕೊಡಬೇಕು. ಒಪ್ಪಿಗೆ ಕೊಟ್ಟರೆ ನಾನೂ ಬಳ್ಳಾರಿ ಪಾದಯಾತ್ರೆಯಲ್ಲಿ ಭಾಗವಹಿಸುತ್ತೇನೆ. ಎಲ್ಲರೂ ಒಟ್ಟಾಗಿ ಹೋಗಬೇಕೆಂಬುದು ನನ್ನ ಉದ್ದೇಶ ಎಂದರು.
ನಮ್ಮಲ್ಲೂ ಸ್ವಲ್ಪ ಎಡರು-ತೊಡರು, ಭಿನ್ನಾಭಿಪ್ರಾಯಗಳು ಇವೆ. ಅವನ್ನು ಸರಿಪಡಿಸಿಕೊಂಡು ಹೋಗುವುದು ಮುಂಬರುವ ಚುನಾವಣೆಗಳ ದೃಷ್ಟಿಯಿಂದ ಒಳ್ಳೆಯದು. ಬಳ್ಳಾರಿ ಪಾದಯಾತ್ರೆಗೆ ಕೇಂದ್ರ ಅನುಮತಿ ಕೊಟ್ಟರೆ ಯಾರು ಭಾಗವಹಿಸಬೇಕೆಂಬುದನ್ನು ಕೇಂದ್ರ ತೀರ್ಮಾನ ಮಾಡುತ್ತದೆ, ನಾವಲ್ಲ.
ಮುಡಾ ಪಾದಯಾತ್ರೆಯಲ್ಲಿ ಕೇಂದ್ರ ನಾಯಕರು ನನಗೆ ದೂರ ವಾಣಿ ಕರೆ ಮಾಡಿ ಭಾಗವಹಿಸುವಂತೆ ಹೇಳಿದ್ದರು. ಕೇಂದ್ರ ಅನುಮತಿ ಕೊಟ್ಟ ಬಳಿಕ ಎಲ್ಲ ನಾಯಕರೂ ಭಾಗವಹಿಸಬೇಕು. ಯಾರು ಮುಂಚೂಣಿಯಲ್ಲಿ ಇರಬೇಕೆಂದು ಅವರೇ ನಿರ್ಧರಿಸುತ್ತಾರೆ ಎಂದರು.
ಸಿ.ಟಿ. ರವಿಗೆ ತಿರುಗೇಟು
ಸಿ.ಟಿ. ರವಿ ಮಾಡಿರುವ ಹೊಂದಾಣಿಕೆ ರಾಜಕಾರಣದ ಬಗ್ಗೆ ಪ್ರತಿಕ್ರಿಯೆ ನೀಡಿದ ಆರ್.ಅಶೋ ಕ್, ಆಗಾಗ ಈ ವಿಚಾರ ಬಂದೇ ಬರುತ್ತದೆ. ಬರೀ ಹೊಂದಾಣಿಕೆ ಅಂದರೆ ಏನೂ ಆಗುವುದಿಲ್ಲ. ಸವಿಸ್ತಾರ ದಾಖಲೆ ಕೊಟ್ಟರೆ ಆಗ ಸರಿ ಹೋಗುತ್ತದೆ. ಏನೇ ಇದ್ದರೂ ಇದನ್ನು ನಾಲ್ಕು ಗೋಡೆ ಮಧ್ಯೆ ಪಕ್ಷದ ವೇದಿಕೆಯಲ್ಲಿ ಚರ್ಚೆಯಾಗಬೇಕು. ಹಾದಿಬೀದಿಗಳಲ್ಲಿ ಚರ್ಚೆ ಮಾಡುವುದು ಒಳ್ಳೆಯದಲ್ಲ ಎಂದು ತಿರುಗೇಟು ನೀಡಿದರು.
ಬಿಜೆಪಿ ನಾಯಕರ ಮೇಲಿನ ಪ್ರಕರಣಗಳ ತನಿಖೆಗೆ ರಾಜ್ಯ ಸರಕಾರ ಮುಂದಾಗಿರುವ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ ಅಶೋ ಕ್, ಸರಕಾರ ತಪ್ಪು ಮಾಡಿದಾಗ ಬಯಲಿಗೆ ತರಲೆಂದೇ ಜನ ನಮ್ಮನ್ನು ಇಲ್ಲಿ ಕೂರಿಸಿ¨ªಾರೆ. ಬೆದರಿಕೆ ಹಾಕುವುದು, ನಿಮ್ಮದೆಲ್ಲ ತೆಗೆಯುತ್ತೇನೆ ಎಂದರೆ ಯಾರೂ ಅಂಜುವುದಿಲ್ಲ. ತೆಗೆಯುವಂತಿದ್ದರೆ ಇವರು ವಿಪಕ್ಷದಲ್ಲಿದ್ದಾಗ ಕಳ್ಳೇಕಾಯಿ ತಿನ್ನುತ್ತಿದ್ದರಾ? ಎಂದು ಪ್ರಶ್ನಿಸಿದರು.
ಸಂಘ ರಾಜಕೀಯ ಮಾಡುವುದಿಲ್ಲ
ಬಿಜೆಪಿ ಬೆಳವಣಿಗೆಗಳ ಬಗ್ಗೆ ಆರೆಸ್ಸೆಸ್ ಸಭೆ ಸಾಧ್ಯತೆ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ ಅಶೋ ಕ್, ಸಂಘದಿಂದ ಸಭೆ ಕರೆದಿರುವುದು ನನ್ನ ಗಮನದಲ್ಲಿ ಇಲ್ಲ. ಯಾವುದೇ ರಾಜಕಾರಣವನ್ನು ಸಂಘ ಮಾಡುವುದಿಲ್ಲ. 40 ವರ್ಷದ ಹಿಂದೆಯೇ ನಾನು ಆರೆಸ್ಸೆಸ್ ಚಡ್ಡಿ ಹಾಕಿದವನು. ಅದರ ನೀತಿ, ನಿಯಮ ಎಲ್ಲವೂ ನನಗೂ ಗೊತ್ತಿದೆ. ಆರೆಸ್ಸೆಸ್ ಎಂಬುದು ಸ್ವಯಂ ಸೇವಾ ಸಂಸ್ಥೆ. ಅದು ರಾಜಕಾರಣದಲ್ಲಿ ಭಾಗವಹಿಸುವುದು ನನಗೆ ಗೊತ್ತಿಲ್ಲ ಎಂದರು.
ಪರ-ವಿರೋಧ ಬಣದಿಂದ ಸಂತೋಷ್ ಭೇಟಿ
ಬಿಜೆಪಿ ರಾಜ್ಯ ಘಟಕದ ವಿದ್ಯಮಾನ ಗೊಂದ ಲದ ಗೂಡಾಗಿರುವ ಸಂದರ್ಭದಲ್ಲೇ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಬೆಂಗಳೂರಿಗೆ ಆಗಮಿಸಿದ್ದು, ಪಕ್ಷದ ಕಚೇರಿಯಲ್ಲಿ ಚಟುವಟಿಕೆ ತೀವ್ರಗೊಂಡಿದೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಸೇರಿದಂತೆ ಪರ-ವಿರೋಧ ಬಣದವರು ಸಂತೋಷ್ ಭೇಟಿ ಮಾಡಿದ್ದಾರೆ. ವಿಜಯೇಂದ್ರ, ಸಂತೋಷ್ ಮಾತುಕತೆಯ ವಿವರ ಲಭ್ಯವಾಗಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.