Reservoir ವಾಕ್ಸಮರ ನಿಲ್ಲಿಸಿ, ಜಲಾಶಯಗಳ ಸುರಕ್ಷೆಯತ್ತ ಲಕ್ಷ್ಯ ಹರಿಸಿ


Team Udayavani, Aug 15, 2024, 6:00 AM IST

Reservoir ವಾಕ್ಸಮರ ನಿಲ್ಲಿಸಿ, ಜಲಾಶಯಗಳ ಸುರಕ್ಷೆಯತ್ತ ಲಕ್ಷ್ಯ ಹರಿಸಿ

ತುಂಗಭದ್ರಾ ಜಲಾಶಯದ 19ನೇ ಕ್ರೆಸ್ಟ್‌ಗೇಟ್‌ ಮುರಿದ ಘಟನೆಗೆ ಸಂಬಂಧಿಸಿ ದಂತೆ ಈಗ ರಾಜಕೀಯ ಕೆಸರೆರಚಾಟ ತೀವ್ರಗೊಂಡಿದೆ. ಆಡಳಿತ ಮತ್ತು ವಿಪಕ್ಷ ನಾಯಕರು ಪರಸ್ಪರ ಆರೋಪ-ಪ್ರತ್ಯಾರೋಪಗಳ ವಿನಿಮಯದಲ್ಲಿ ತೊಡಗಿ ಕೊಂಡಿದ್ದಾರೆ. ರಾಜಕೀಯ ನಾಯಕರ ಈ ಕಚ್ಚಾಟದ ನಡುವೆಯೇ ಜಲಾಶಯದ ಮುರಿದಿರುವ ಗೇಟ್‌ಗೆ ಹೊಸದಾಗಿ ಗೇಟ್‌ ಅಳವಡಿಸುವ ಕಾರ್ಯಕ್ಕೆ ಬುಧವಾರ ಚಾಲನೆ ನೀಡಲಾಗಿದೆ. ಮುಂದಿನ ಎರಡು ದಿನಗಳಲ್ಲಿ ಹೊಸ ಗೇಟ್‌ ಅಳವಡಿಕೆ ಕಾರ್ಯವನ್ನು ಪೂರ್ಣಗೊಳಿಸುವ ವಿಶ್ವಾಸವನ್ನು ಈ ಕೆಲಸದಲ್ಲಿ ತೊಡಗಿಸಿಕೊಂಡಿ ರುವ ತಂತ್ರಜ್ಞರು ವ್ಯಕ್ತಪಡಿಸಿದ್ದಾರೆ.

ತುಂಗಭದ್ರಾ ಜಲಾಶಯದ ಗೇಟ್‌ ಮುರಿದ ಕ್ಷಣದಲ್ಲಿ ನಮ್ಮ ರಾಜಕೀಯ ನಾಯಕರು ತೋರಿದ್ದ ಒಂದಿಷ್ಟು ಮುತ್ಸದ್ಧಿತನ ಎರಡು ದಿನಗಳ ಬಳಿಕ ಮರೆತು ಹೋದಂತೆ ಕಾಣುತ್ತಿದೆ. ಸದ್ಯ ಏನಿದ್ದರೂ ಜಲಾಶಯದಲ್ಲಿ ಸಾಧ್ಯವಾದಷ್ಟು ಮಟ್ಟಿಗೆ ನೀರನ್ನು ಉಳಿಸಿಕೊಂಡು ಹೊಸ ಗೇಟ್‌ ಅಳವಡಿಸಿ, ಮತ್ತೆ ಜಲಾಶಯ ತುಂಬುವಂತೆ ಮಾಡುವುದು ನಮ್ಮ ನಾಯಕರ ಆದ್ಯತೆಯಾಗಬೇಕಿತ್ತೇ ವಿನಾ ಪರಸ್ಪರ ದೂಷಣೆ ಯಲ್ಲ. ದುರದೃಷ್ಟವಶಾತ್‌ ನಮ್ಮ ನಾಯಕರು ಇಲ್ಲೂ ಎಂದಿನ ಚಾಳಿಯನ್ನು ಬಿಡಲೇ ಇಲ್ಲ. ಮುಖ್ಯಮಂತ್ರಿ, ಕೇಂದ್ರ ಸಚಿವರು, ರಾಜ್ಯದ ಹಿರಿಯ ಸಚಿವರಾದಿ ಯಾಗಿ ಎಲ್ಲರೂ ತುಂಗಭದ್ರಾ ಜಲಾಶಯದ ಗೇಟ್‌ ಮುರಿದ ಘಟನೆಯನ್ನು ಮುಂದಿಟ್ಟು ರಾಜಕೀಯ ಚರ್ಚೆ ಮಾಡಿದ್ದಾರೆ. ಆಡಳಿತದಲ್ಲಿರುವವರಾದರೂ ಒಂದಿಷ್ಟು ತಾಳ್ಮೆ, ವಿವೇಚನೆಯಿಂದ ವರ್ತಿಸಿ, ತನ್ನ ಹೊಣೆಗಾರಿಕೆ, ಉತ್ತರದಾಯಿತ್ವವನ್ನು ನಿಭಾಯಿಸಿಯಾರು ಎಂಬ ರಾಜ್ಯದ ಪ್ರಜ್ಞಾವಂತ ಜನರ ನಿರೀಕ್ಷೆ ಹುಸಿಯಾಗಿದೆ. ಸದ್ಯಕ್ಕಂತೂ ಹೊಸ ಗೇಟ್‌ ಅಳವಡಿಕೆ ಕಾರ್ಯಕ್ಕಿಂತ ಹೆಚ್ಚಾಗಿ ರಾಜಕೀಯ ನಾಯಕರ ವಾಕ್ಸಮರವೇ ಭಾರೀ ಸದ್ದು ಮಾಡುತ್ತಿರುವುದು ಮಾತ್ರ ವಿಪರ್ಯಾಸ.ಜಲಾಶಯದ ಮುರಿದು ಹೋಗಿರುವ ಗೇಟ್‌ನ ಬದಲಾಗಿ ಹೊಸ ಗೇಟ್‌ ಅಳವಡಿಕೆ ಕಾರ್ಯವೇನೋ ನಡೆಯುತ್ತಿದೆ. ಇದು ಶೀಘ್ರ ಪೂರ್ಣವಾಗಿ ಜಲಾಶ ಯದಲ್ಲಿ ಮತ್ತೆ ನೀರಿನ ಸಂಗ್ರಹ ಹೆಚ್ಚಿ, ಮುಂದಿನ ಬೆಳೆಗೆ ನೀರು ಲಭಿಸುವಂತಾಗಲಿ ಎಂಬ ಆಶಯದೊಂದಿಗೆ ರೈತರು ಆಗಸದತ್ತ ದೃಷ್ಟಿ ಬೀರಿದ್ದಾರೆ.

ರೈತರಿಗೆ ತಮ್ಮ ಬೆಳೆ ಉಳಿಸಿಕೊಳ್ಳುವ ಚಿಂತೆಯಾದರೆ ರಾಜಕೀಯ ಪಕ್ಷಗಳು ಮತ್ತವುಗಳ ನಾಯಕರಂತೂ ಈ ಘಟನೆಯಿಂದ ಎಷ್ಟರಮಟ್ಟಿಗೆ ರಾಜಕೀಯ ಲಾಭ ಪಡೆದುಕೊಳ್ಳಬಹುದು ಎಂಬ ಲೆಕ್ಕಾಚಾರಕ್ಕೆ ಹೆಚ್ಚು ತಲೆಕೆಡಿಸಿಕೊಂಡಂತೆ ಕಾಣಿಸುತ್ತಿದೆ.
ಇನ್ನಾದರೂ ನಾಯಕರು ಒಂದಿಷ್ಟು ವಿವೇಚನೆಯಿಂದ ವರ್ತಿಸಿ, ಇಡೀ ಘಟನಾ ವಳಿಯ ಬಗೆಗೆ ಸಮಗ್ರ ಅವಲೋಕನ ನಡೆಸಬೇಕಿದೆ. ತುಂಗಭದ್ರಾ ಜಲಾಶಯದ ಗೇಟ್‌ ಮುರಿದ ಘಟನೆಯನ್ನು ಸೂಕ್ಷ್ಮವಾಗಿ ಅವಲೋಕಿಸಿದಾಗ ಬಲುದೊಡ್ಡ ದುರ್ಘ‌ಟನೆಯೊಂದು ಸಣ್ಣದರಲ್ಲಿ ಘಟಿಸಿ, ಅದೃಷ್ಟವಶಾತ್‌ ಭಾರೀ ಅನಾಹುತ ತಪ್ಪಿಹೋಯಿತು ಎಂಬುದು ಯಾರಿಗೂ ಅರ್ಥವಾಗದ ವಿಷಯವೇನಲ್ಲ. ಈ ಘಟನೆಯಿಂದಲಾದರೂ ನಮ್ಮನ್ನಾಳುವವರು, ನೀರಾವರಿ ಇಲಾಖಾ ಅಧಿಕಾರಿಗಳು, ಸಂಬಂಧಿತ ಇಲಾಖೆಯ ತಜ್ಞರು ಎಚ್ಚೆತ್ತುಕೊಂಡು ಭವಿಷ್ಯದಲ್ಲಿ ಇಂತಹ ಅನಾಹುತ ಸಂಭವಿಸದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲೇಬೇಕು. ರಾಜ್ಯದಲ್ಲಿನ ಬಹುತೇಕ ಅಣೆಕಟ್ಟುಗಳು ಸೂಕ್ತ ಮತ್ತು ಸಮರ್ಪಕ ನಿರ್ವಹಣೆ ಇಲ್ಲದೆ ಸೊರಗಿ ಹೋಗಿವೆ. ಒಂದೆಡೆಯಿಂದ ಹವಾಮಾನ ವೈಪರೀತ್ಯದ ಪರಿಣಾಮ ಪ್ರಸಕ್ತ ಮುಂಗಾರಿನಲ್ಲಿ ರಾಜ್ಯದೆಲ್ಲೆಡೆ ಭಾರೀ ಮಳೆಯಾಗುತ್ತಿದೆ. ಇಂತಹ ಸ್ಥಿತಿಯಲ್ಲಿ ನಮ್ಮ ಅಣೆಕಟ್ಟುಗಳು ಎಷ್ಟು ಸುರಕ್ಷಿತ ಎಂಬ ಬಗ್ಗೆ ಪ್ರಜ್ಞಾಪೂರ್ವಕವಾಗಿ ಚಿಂತಿಸಿ, ಇರುವ ಸಮಸ್ಯೆಗಳು ಮತ್ತು ಲೋಪದೋಷಗಳನ್ನು ಸರಿಪಡಿಸಲು ಅಗತ್ಯ ಕ್ರಮ ಕೈಗೊಳ್ಳ ಬೇಕು. ಬರಿಯ ತಜ್ಞರ ಸಮಿತಿ ನೇಮಕ ಮಾಡಿ, ವರದಿ ಪಡೆಯುವುದರಿಂದ ಯಾವುದೇ ಪ್ರಯೋಜನವಿಲ್ಲ. ಸಮಿತಿಯ ಶಿಫಾರಸುಗಳ ಅನುಷ್ಠಾನಕ್ಕೆ ಸರಕಾರ ತನ್ನ ಇಚ್ಛಾಶಕ್ತಿ ಮತ್ತು ಬದ್ಧತೆಯನ್ನು ತೋರಿದಾಗ ಮಾತ್ರ ಇಂತಹ ದುರ್ಘ‌ಟನೆಗಳನ್ನು ತಪ್ಪಿಸಲು ಸಾಧ್ಯ.

ಟಾಪ್ ನ್ಯೂಸ್

“ಹಾಲಿನ ದರ ಹೆಚ್ಚಳ ಬಗ್ಗೆ ಸಿಎಂ ಸಿದ್ದರಾಮಯ್ಯ ನಿರ್ಧಾರ’: ಕೆಎಂಎಫ್ ಅಧ್ಯಕ್ಷ

KMF; “ಹಾಲಿನ ದರ ಹೆಚ್ಚಳ ಬಗ್ಗೆ ಸಿಎಂ ಸಿದ್ದರಾಮಯ್ಯ ನಿರ್ಧಾರ’: ಭೀಮಾ ನಾಯ್ಕ

Karnataka ಸುವರ್ಣ ಸಂಭ್ರಮದಲ್ಲಿ ಕನ್ನಡ ಜನೋತ್ಸವ

Karnataka ಸುವರ್ಣ ಸಂಭ್ರಮದಲ್ಲಿ ಕನ್ನಡ ಜನೋತ್ಸವ

Tungabhadra ಡ್ಯಾಂನ ಎಲ್ಲ 33 ಗೇಟ್‌ ಬದಲಿಸಲು ತಜ್ಞರ ಸಲಹೆ

Tungabhadra ಡ್ಯಾಂನ ಎಲ್ಲ 33 ಗೇಟ್‌ ಬದಲಿಸಲು ತಜ್ಞರ ಸಲಹೆ

modi (4)

Congress-NC ಮೈತ್ರಿಗೆ ಪಾಕ್‌ ಬೆಂಬಲ, 370ನೇ ವಿಧಿ ಮರುಸ್ಥಾಪನೆ ಅಸಾಧ್ಯ: ಪ್ರಧಾನಿ: ಮೋದಿ

High Court: ಬಾಂಬ್‌ ಸ್ಫೋಟ ಹೇಳಿಕೆ; ಶೋಭಾ ಕರಂದ್ಲಾಜೆ ಮೇಲಿನ ಕೇಸ್‌ ರದ್ದು

High Court: ಬಾಂಬ್‌ ಸ್ಫೋಟ ಹೇಳಿಕೆ; ಶೋಭಾ ಕರಂದ್ಲಾಜೆ ಮೇಲಿನ ಕೇಸ್‌ ರದ್ದು

High Court; “ಅರ್ಧ ಪಾಕಿಸ್ಥಾನ’: ಯತ್ನಾಳ್‌ ಹೇಳಿಕೆಗೆ ಹೈಕೋರ್ಟ್‌ ಸಿಟ್ಟು

High Court; “ಅರ್ಧ ಪಾಕಿಸ್ಥಾನ’: ಯತ್ನಾಳ್‌ ಹೇಳಿಕೆಗೆ ಹೈಕೋರ್ಟ್‌ ಸಿಟ್ಟು

Kasturi Rangan ವರದಿ ಹಿನ್ನೆಲೆ: ನಯನಾ ಮೋಟಮ್ಮ ರಾಜೀನಾಮೆ ಬೆದರಿಕೆ

Kasturi Rangan ವರದಿ ಹಿನ್ನೆಲೆ: ನಯನಾ ಮೋಟಮ್ಮ ರಾಜೀನಾಮೆ ಬೆದರಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಾದಕ ದ್ರವ್ಯ ಹಾವಳಿ ತಡೆಗೆ ಕಾರ್ಯಪಡೆ ರಚನೆ ಸ್ವಾಗತಾರ್ಹ

ಮಾದಕ ದ್ರವ್ಯ ಹಾವಳಿ ತಡೆಗೆ ಕಾರ್ಯಪಡೆ ರಚನೆ ಸ್ವಾಗತಾರ್ಹ

Assembly Election: ಜಮ್ಮು-ಕಾಶ್ಮೀರದಲ್ಲಿ ಪ್ರಜಾಪ್ರಭುತ್ವದ ಹಬ್ಬ

Assembly Election: ಜಮ್ಮು-ಕಾಶ್ಮೀರದಲ್ಲಿ ಪ್ರಜಾಪ್ರಭುತ್ವದ ಹಬ್ಬ

Namma-clinic

Karnataka; ಬಸ್‌ ನಿಲ್ದಾಣಗಳಲ್ಲಿ ನಮ್ಮ ಕ್ಲಿನಿಕ್‌ ಸಮುಚಿತ ನಿರ್ಧಾರ

ರೈತರ ಹಿತರಕ್ಷಣೆ ನೆಪದಲ್ಲಿ ಗ್ರಾಹಕರಿಗೆ ಬರೆ ಸಲ್ಲದು

ರೈತರ ಹಿತರಕ್ಷಣೆ ನೆಪದಲ್ಲಿ ಗ್ರಾಹಕರಿಗೆ ಬರೆ ಸಲ್ಲದು

ಪರೀಕ್ಷಾ ಅಕ್ರಮಗಳ ತಡೆಗೆ ಎಸ್‌ಎಸ್‌ಸಿ ಕಠಿನ ನಿಲುವುಪರೀಕ್ಷಾ ಅಕ್ರಮಗಳ ತಡೆಗೆ ಎಸ್‌ಎಸ್‌ಸಿ ಕಠಿನ ನಿಲುವು

ಪರೀಕ್ಷಾ ಅಕ್ರಮಗಳ ತಡೆಗೆ ಎಸ್‌ಎಸ್‌ಸಿ ಕಠಿನ ನಿಲುವು

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

1-eeeeee

Train ಹಳಿಯ ಮೇಲೆ ರಾಡ್‌: ಹಳಿ ತಪ್ಪಿಸಲು ಮತ್ತೆ ಯತ್ನ, ತಪ್ಪಿದ ಅನಾಹುತ

“ಹಾಲಿನ ದರ ಹೆಚ್ಚಳ ಬಗ್ಗೆ ಸಿಎಂ ಸಿದ್ದರಾಮಯ್ಯ ನಿರ್ಧಾರ’: ಕೆಎಂಎಫ್ ಅಧ್ಯಕ್ಷ

KMF; “ಹಾಲಿನ ದರ ಹೆಚ್ಚಳ ಬಗ್ಗೆ ಸಿಎಂ ಸಿದ್ದರಾಮಯ್ಯ ನಿರ್ಧಾರ’: ಭೀಮಾ ನಾಯ್ಕ

firee

Bihar;ಜಮೀನು ವಿವಾದ: 21 ದಲಿತರ ಮನೆಗಳಿಗೆ ಬೆಂಕಿ

Karnataka ಸುವರ್ಣ ಸಂಭ್ರಮದಲ್ಲಿ ಕನ್ನಡ ಜನೋತ್ಸವ

Karnataka ಸುವರ್ಣ ಸಂಭ್ರಮದಲ್ಲಿ ಕನ್ನಡ ಜನೋತ್ಸವ

J-P-Nadda

PM ಮೋದಿಗೆ ಕಾಂಗ್ರೆಸಿಗರಿಂದ ಬೈಗುಳ: ಖರ್ಗೆ ಪತ್ರಕ್ಕೆ ನಡ್ಡಾ ತೀಕ್ಷ್ಣ ಪ್ರತ್ಯುತ್ತರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.