Bengaluru: ವಿಧಾನಸೌಧದ ಎದುರೇ ಬೈಕ್‌ಗೆ ಬೆಂಕಿ ಹಚ್ಚಿದ ಭೂಪ!

ದೂರು ನೀಡಲು ಠಾಣೆಗೆ ಹೋಗಿದ್ದ ತಾಯಿಗೆ ನಿಂದಿಸಿದ್ದ ಪೊಲೀಸರ ಮೇಲೆ ಸಿಟ್ಟು; ತನ್ನದೇ ಎಲೆಕ್ಟ್ರಿಕ್‌ ಬೈಕ್‌ಗೆ ಬೆಂಕಿ ಹಚ್ಚಿ ಆಕ್ರೋಶ

Team Udayavani, Aug 15, 2024, 1:27 PM IST

4-blr

ಬೆಂಗಳೂರು: ನಾಪತ್ತೆ ದೂರು ನೀಡಲು ಹೋದ ತಾಯಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿದ ಪೊಲೀಸರ ಮೇಲಿನ ಕೋಪಕ್ಕೆ ಯುವಕನೊಬ್ಬ ವಿಧಾನಸೌಧ ಮುಂಭಾಗ ತನ್ನ ಎಲೆಕ್ಟ್ರಿಕ್‌ ಬೈಕ್‌ಗೆ ಬೆಂಕಿ ಹಾಕಿ ಆಕ್ರೋಶ ವ್ಯಕ್ತಪಡಿಸಿದ್ದಾನೆ. ಈ ಸಂಬಂಧ ಯುವಕನನ್ನು ಬಂಧಿಸಲಾಗಿದೆ.

ಚಿತ್ರದುರ್ಗ ಜಿಲ್ಲೆ ಚಳ್ಳಕೆರೆಯ ಪೃಥ್ವಿರಾಜ್‌(27) ಬಂಧಿತ ಆರೋಪಿ.

ಬುಧವಾರ ಮಧ್ಯಾಹ್ನ 3 ಗಂಟೆ ಸುಮಾರಿಗೆ ವಿಧಾನಸೌಧ ಮುಂಭಾಗ ಬೈಕ್‌ಗೆ ಬೆಂಕಿ ಹಚ್ಚಿ ಪೊಲೀಸರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾನೆ. ಈ ಸಂಬಂಧ ಸಾರ್ವಜನಿಕ ಸ್ಥಳದಲ್ಲಿ ಬೆಂಕಿ ಹಾಕಿ ದುರ್ವರ್ತನೆ ತೋರಿದ ಆರೋಪದಡಿ ಪ್ರಕರಣ ದಾಖಲಿಸಿಕೊಂಡಿರುವ ವಿಧಾನಸೌಧ ಠಾಣೆ ಪೊಲೀಸರು, ಆರೋಪಿಯನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.

ಡಿಪ್ಲೊಮಾ ಪದವಿ ಪಡೆದಿರುವ ಪೃಥ್ವಿರಾಜ್‌ ಯಶವಂತ ಪುರದಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದಾನೆ. 15 ದಿನಗಳ ಹಿಂದೆ ಸ್ನೇಹಿತರ ಜತೆಗೆ ಪ್ರವಾಸಕ್ಕೆ ತೆರಳಿದ್ದ. 3 ದಿನ ಕಳೆದರೂ ಚಳ್ಳಕೆರೆಯಲ್ಲಿದ್ದ ತಾಯಿಗೆ ಕರೆ ಮಾಡಿರಲಿಲ್ಲ. ತಾಯಿ ಕರೆ ಮಾಡಿದಾಗ ಈತನ ಮೊಬೈಲ್‌ ಸ್ವಿಚ್ಡ್ ಆಫ್ ಆಗಿತ್ತು. ಅದರಿಂದ ಗಾಬರಿಗೊಂಡಿದ್ದ ತಾಯಿ, ಚಳ್ಳಕೆರೆ ಪೊಲೀಸ್‌ ಠಾಣೆಗೆ ತೆರಳಿ ಮಗನ ನಾಪತ್ತೆ ಪ್ರಕರಣ ದಾಖಲಿಸುವಂತೆ ಕೋರಿ ದ್ದರು. ದೂರು ಸ್ವೀಕರಿದ ಪೊಲೀಸರು, ಆಕೆಯನ್ನು ನಿಂದಿಸಿ ವಾಪಸ್‌ ಕಳುಹಿಸಿದ್ದರು ಎಂದು ಹೇಳಲಾಗಿದೆ.

ಇನ್ನು ವಾರದ ಬಳಿಕ ಪೃಥ್ವಿರಾಜ್‌ ಮನೆಗೆ ಬಂದಿದ್ದ. ಆಗ ಪೊಲೀಸರು ದೂರು ಸ್ವೀಕರಿಸದೇ ನಿಂದಿಸಿ ಕಳುಹಿಸಿದ್ದರು ಎಂದು ತಾಯಿ ಹೇಳಿದ್ದರು. ಅದರಿಂದ ಸಿಟ್ಟಿಗೆದ್ದ ಪೃಥ್ವಿರಾಜ್‌, ತಾಯಿಯೊಂದಿಗೆ ಠಾಣೆಗೆ ತೆರಳಿ ನಾಪತ್ತೆ ದೂರು ಏಕೆ ಸ್ವೀಕರಿಸಿಲ್ಲ ಎಂದು ಪ್ರಶ್ನಿಸಿದ್ದ. ಆಗ ಪೊಲೀಸರು ಮೊಬೈಲ್‌ ಕಸಿದುಕೊಂಡು ಠಾಣೆಯೊಳಗೆ ಕರೆದೊಯ್ದಿದ್ದರು. ಇದರಿಂದ ಸಿಟ್ಟಿಗೆದ್ದು ಕೃತ್ಯ ಎಸಗಿದ್ದಾನೆ ಎನ್ನಲಾಗಿದೆ.

ವಿಧಾನಸೌಧ ಸ್ಪೋಟಿಸುವುದಾಗಿ ಬೆದರಿಕೆ

ಆರೋಪಿ ಪೃಥ್ವಿರಾಜ್‌ ಕೆಲ ದಿನಗಳ ಹಿಂದೆ ವಿಧಾನಸೌಧ, ಐಐಎಸ್‌ಸಿ ಸೇರಿ ಕೆಲ ಕಟ್ಟಡ ಗಳನ್ನು ಸ್ಫೋಟಿಸುವುದಾಗಿ ವಿಡಿಯೋ ಮಾಡಿ ಸಾಮಾಜಿಕ ಮಾಧ್ಯಮ ಗಳಲ್ಲಿ ಹರಿಬಿಟ್ಟಿದ್ದ. ಅದನ್ನು ಗಮನಿಸಿದ ಚಳ್ಳ ಕೆರೆ ಡಿವೈಎಸ್ಪಿ ಠಾಣೆಗೆ ಕರೆಸಿ ಪ್ರಶ್ನಿಸಿದಾಗ, ಆಗ ಯುವಕ “ಪಿಎಸ್‌ಐ ವಿರುದ್ಧ ಕ್ರಮ ಕೈಗೊಳ್ಳಿ. ಇಲ್ಲವೇ ಪಿಸ್ತೂಲ್‌ನಿಂದ ಪಿಎಸ್‌ಐಗೆ ಗುಂಡು ಹಾರಿಸುತ್ತೇನೆ’ ಎಂದು ಬೆದರಿಕೆ ಒಡ್ಡಿದ್ದ.

ಆಗ ಪೃಥ್ವಿ ಹಾಗೂ ಅವರ ತಾಯಿಗೆ ಡಿವೈಎಸ್ಪಿ ಎಚ್ಚರಿಕೆ ನೀಡಿ ಕಳುಹಿಸಿ ದ್ದರು. ಬುಧವಾರ ಯಶವಂತ ಪುರಕ್ಕೆ ಮನೆಗೆ ಬಂದು ಸ್ವಂತ ಬೈಕ್‌ ಅನ್ನು ವಿಧಾನಸೌಧ ಎದುರು ತಂದು ಬೆಂಕಿ ಹಾಕಿದ್ದಾನೆ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ.

ಏನಿದು ಘಟನೆ?

● ಇತ್ತೀಚೆಗೆ 15 ದಿನ ಕಾಲ ಪ್ರವಾಸಕ್ಕೆ ತೆರಳಿದ್ದ ಯುವಕ, ಆಗ ತಾಯಿಗೆ ಕರೆ ಮಾಡಿರಲಿಲ್ಲ, ಮೊಬೈಲ್‌ ಕೂಡ ಸ್ವಿಚ್ಡ್ ಆಫ್ ಆಗಿತ್ತು

● ಮಗನ ನಾಪತ್ತೆ ಕುರಿತು ಚಳ್ಳಕೆರೆ ಠಾಣೆಗೆ ದೂರು ನೀಡಲು ತೆರಳಿದ್ದ ತಾಯಿ

● ಆಗ ದೂರು ಸ್ವೀಕರಿಸದೇ ಪೊಲೀಸರಿಂದ ತಾಯಿಗೆ ನಿಂದನೆ: ಆರೋಪ

● ಪ್ರವಾಸದಿಂದ ವಾಪಸ್‌ ಬಂದ ಬಳಿಕ ಠಾಣೆ ತೆರಳಿ ಪೊಲೀಸರನ್ನು ಪ್ರಶ್ನಿಸಿದ್ದ ಯುವಕ

● ಆಗ ಪೊಲೀಸರು ಯುವಕನಿಂದ ಮೊಬೈಲ್‌ ಕಸಿದುಕೊಂಡಿದ್ದರು: ಆರೋಪ

● ಪೊಲೀಸರ ಮೇಲಿನ ಸಿಟ್ಟಿನಿಂದಾಗಿ ವಿಧಾನಸೌಧ ಬಳಿ ಬೈಕ್‌ಗೆ ಬೆಂಕಿ ಹಚ್ಚಿದ

ಟಾಪ್ ನ್ಯೂಸ್

Bellary: ಜೈಲಿನಲ್ಲಿ ದರ್ಶನ್ ಭೇಟಿ ಮಾಡಿದ ತಾಯಿ, ಅಕ್ಕ

Bellary: ಜೈಲಿನಲ್ಲಿ ದರ್ಶನ್ ಭೇಟಿ ಮಾಡಿದ ತಾಯಿ, ಅಕ್ಕ

Cricket: ಲಂಕಾ ಕ್ರಿಕೆಟಿಗನನ್ನು 20 ವರ್ಷಗಳ ಕಾಲ ಬ್ಯಾನ್‌ ಮಾಡಿದ ಕ್ರಿಕೆಟ್‌ ಆಸ್ಟ್ರೇಲಿಯಾ

Cricket: ಲಂಕಾ ಕ್ರಿಕೆಟಿಗನನ್ನು 20 ವರ್ಷಗಳ ಕಾಲ ಬ್ಯಾನ್‌ ಮಾಡಿದ ಕ್ರಿಕೆಟ್‌ ಆಸ್ಟ್ರೇಲಿಯಾ

Explainer:ಒಂದು ದೇಶ-ಒಂದು ಚುನಾವಣೆ..ರಾಷ್ಟ್ರದ ಹಿತಕ್ಕೊ? ರಾಜಕೀಯ ಪಕ್ಷಗಳ ಹಿತಕ್ಕಾಗಿಯೇೂ?

Explainer:ಒಂದು ದೇಶ-ಒಂದು ಚುನಾವಣೆ..ರಾಷ್ಟ್ರದ ಹಿತಕ್ಕೊ? ರಾಜಕೀಯ ಪಕ್ಷಗಳ ಹಿತಕ್ಕಾಗಿಯೇೂ?

8

Lokesh Kanagaraj: ʼಕೂಲಿʼ ಸಿನಿಮಾದ ದೃಶ್ಯ ಲೀಕ್‌; ಬೇಸರ ಹೊರ ಹಾಕಿದ ನಿರ್ದೇಶಕ ಲೋಕೇಶ್

7-road-mishap

ರಸ್ತೆ ಪಕ್ಕ ನಡೆದುಕೊಂಡು ಹೋಗುತ್ತಿದ್ದವರ ಮೇಲೆ ಲಾರಿ ಹರಿದು ಇಬ್ಬರು ಸಾವು

Chikkaballapura; ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ದಲಿತ ಸಂಘಟನೆಗಳ ಪ್ರತಿಭಟನೆ

Chikkaballapura; ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ದಲಿತ ಸಂಘಟನೆಗಳ ಪ್ರತಿಭಟನೆ

Jammu and Kashmir:ಕಲಂ 370 ಪುನರ್‌ ಜಾರಿ-ಕಾಂಗ್ರೆಸ್‌, ಎನ್‌ ಸಿ ನಿಲುವಿಗೆ ಪಾಕ್‌ ಬೆಂಬಲ!

Jammu and Kashmir:ಕಲಂ 370 ಪುನರ್‌ ಜಾರಿ-ಕಾಂಗ್ರೆಸ್‌, ಎನ್‌ ಸಿ ನಿಲುವಿಗೆ ಪಾಕ್‌ ಬೆಂಬಲ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಪ್ರೇಯಸಿಯ ಪೀಡಿಸುತ್ತಿದ್ದವನಿಗೆ ಪ್ರಿಯಕರನಿಂದ ಚಾಕು ಇರಿತ!

Bengaluru: ಪ್ರೇಯಸಿಯ ಪೀಡಿಸುತ್ತಿದ್ದವನಿಗೆ ಪ್ರಿಯಕರನಿಂದ ಚಾಕು ಇರಿತ!

Bengaluru: ಮೆಜೆಸ್ಟಿಕ್‌ ಬಳಿ ಬಿಎಂಟಿಸಿ ಬಸ್‌ ಡಿಕ್ಕಿ; ಅಂಗವಿಕಲ ಸ್ಥಳದಲ್ಲೇ ಸಾವು

Bengaluru: ಮೆಜೆಸ್ಟಿಕ್‌ ಬಳಿ ಬಿಎಂಟಿಸಿ ಬಸ್‌ ಡಿಕ್ಕಿ; ಅಂಗವಿಕಲ ಸ್ಥಳದಲ್ಲೇ ಸಾವು

Bengaluru: ಪರಪ್ಪನ ಅಗ್ರಹಾರ ಕಾರಾಗೃಹದ‌ಲ್ಲಿ ಮತ್ತೆ 9 ಮೊಬೈಲ್‌ ಫೋನ್‌ಗಳು ಪತ್ತೆ!

Bengaluru: ಪರಪ್ಪನ ಅಗ್ರಹಾರ ಕಾರಾಗೃಹದ‌ಲ್ಲಿ ಮತ್ತೆ 9 ಮೊಬೈಲ್‌ ಫೋನ್‌ಗಳು ಪತ್ತೆ!

Leopard: ಎಲೆಕ್ಟ್ರಾನಿಕ್‌ ಸಿಟಿ ಎನ್‌ಟಿಟಿಎಫ್ ಆವರಣ ಬಳಿ ತಡರಾತ್ರಿ ಚಿರತೆ ಪ್ರತ್ಯಕ್ಷ

Leopard: ಎಲೆಕ್ಟ್ರಾನಿಕ್‌ ಸಿಟಿ ಎನ್‌ಟಿಟಿಎಫ್ ಆವರಣ ಬಳಿ ತಡರಾತ್ರಿ ಚಿರತೆ ಪ್ರತ್ಯಕ್ಷ

6

Anekal: ಶಾಲಾ ಬಸ್‌ ಅಡ್ಡಗಟ್ಟಿ ಚಾಲಕನಿಗೆ ತೀವ್ರ ಹಲ್ಲೆ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Mysore Dasara: ಮರದ ಅಂಬಾರಿ ಹೊತ್ತು ಅಭಿಮನ್ಯು ತಾಲೀಮು

Mysore Dasara: ಮರದ ಅಂಬಾರಿ ಹೊತ್ತು ಅಭಿಮನ್ಯು ತಾಲೀಮು

Bellary: ಜೈಲಿನಲ್ಲಿ ದರ್ಶನ್ ಭೇಟಿ ಮಾಡಿದ ತಾಯಿ, ಅಕ್ಕ

Bellary: ಜೈಲಿನಲ್ಲಿ ದರ್ಶನ್ ಭೇಟಿ ಮಾಡಿದ ತಾಯಿ, ಅಕ್ಕ

8-chikkamagaluru

ಗಣಪತಿ ವಿಸರ್ಜನೆ ವೇಳೆ ಕುಣಿಯುವ ವಿಚಾರಕ್ಕೆ ಗಲಾಟೆ; ಯುವಕನಿಗೆ ಬ್ಲೇಡ್ ನಿಂದ ಹಲ್ಲೆ

Cricket: ಲಂಕಾ ಕ್ರಿಕೆಟಿಗನನ್ನು 20 ವರ್ಷಗಳ ಕಾಲ ಬ್ಯಾನ್‌ ಮಾಡಿದ ಕ್ರಿಕೆಟ್‌ ಆಸ್ಟ್ರೇಲಿಯಾ

Cricket: ಲಂಕಾ ಕ್ರಿಕೆಟಿಗನನ್ನು 20 ವರ್ಷಗಳ ಕಾಲ ಬ್ಯಾನ್‌ ಮಾಡಿದ ಕ್ರಿಕೆಟ್‌ ಆಸ್ಟ್ರೇಲಿಯಾ

ಮಲ್ಪೆ ಸೈಂಟ್‌ಮೇರೀಸ್‌ ದ್ವೀಪದಲ್ಲಿ ಸ್ವತ್ಛತೆ

Malpe ಸೈಂಟ್‌ಮೇರೀಸ್‌ ದ್ವೀಪದಲ್ಲಿ ಸ್ವಚ್ಛತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.