Mangaluru:ಡೆಡ್‌ ಎಂಡಲ್ಲಿ ನಿವೇಶನವಿದ್ದರೆ,ಕಾಲುದಾರಿ ಅಗಲ ಇಲ್ಲದಿದ್ದರೆ ಅರ್ಜಿ ತಿರಸ್ಕೃತ!

ಕೊನೆ ನಿವೇಶನ ವಿನ್ಯಾಸಕ್ಕೆ ವಿಘ್ನ

Team Udayavani, Aug 15, 2024, 1:29 PM IST

Mangaluru:ಡೆಡ್‌ ಎಂಡಲ್ಲಿ ನಿವೇಶನವಿದ್ದರೆ,ಕಾಲುದಾರಿ ಅಗಲ ಇಲ್ಲದಿದ್ದರೆ ಅರ್ಜಿ ತಿರಸ್ಕೃತ!

ಮಹಾನಗರ: ನಗರದ ಹಲವೆಡೆ ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದಿಂದ ಏಕ ನಿವೇಶನ ವಿನ್ಯಾಸ ಅನುಮೋದನೆಗೆ ಕಳೆದ ಕೆಲವು ತಿಂಗಳುಗಳಿಂದ ಅಡ್ಡಿಯಾಗುತ್ತಿದೆ.

ಸಾಮಾನ್ಯವಾಗಿ ರಸ್ತೆಯೊಂದರ ಕೊನೆಯಲ್ಲಿ ನಿವೇಶನವಿದ್ದಾಗ ಅದಕ್ಕೆ ಅಗಲ ರಸ್ತೆ ಇಲ್ಲದೆ ಕನಿಷ್ಠ ಅಗಲದ ಕಾಲು ದಾರಿ ಇರುವ ಅನೇಕ ಪ್ರಕರಣಗಳು ನಗರದಲ್ಲಿವೆ. ಅಂತಹ ನಿವೇಶನಗಳನ್ನು ಯಾರಾದರೂ ಖರೀದಿಸಿ ಮನೆ ನಿರ್ಮಿಸಲು ಮುಂದಾಗುವಾಗ ಅದಕ್ಕೆ ಏಕ ನಿವೇಶನ ವಿನ್ಯಾಸ ಅನುಮೋದನೆ ಬೇಕಾಗುತ್ತದೆ.

ಹಿಂದೆ ಇಂತಹ ಸಂದರ್ಭಗಳಲ್ಲಿ ಮುಡಾ ಅಧಿಕಾರಿಗಳು ಅನುಮೋದನೆ ಕೊಡುತ್ತಿದ್ದರು. ಆದರೆ ಈಗಿನ ಆಯುಕ್ತರು ಇದಕ್ಕೆ ತಡೆಯೊಡ್ಡಿದ್ದಾರೆ, ಇದರಿಂದ ಮನೆಗೆಂದು ಸೈಟ್‌ ಖರೀದಿಸಿದವರು ನಿವೇಶನ ಅಭಿವೃದ್ಧಿ ಮಾಡಲಾಗದೆ ಕಂಗಾಲಾಗಿದ್ದಾರೆ. ಅವರು ಏಕನಿವೇಶನ ವಿನ್ಯಾಸ ಅನುಮೋದನೆ ಪಡೆಯದೆ ಬ್ಯಾಂಕ್‌ ಸಾಲ ಮಾಡುವಂತಿಲ್ಲ, ಮನೆ ನಿರ್ಮಾಣದ ಪರವಾನಿಗೆಯನ್ನೂ ಪಡೆಯಲಾಗದು.

ಮನೆಗೆಂದು ಜಾಗ ಖರೀದಿಸಿದವರು, ಕುಟುಂಬದ ಪಾಲಿನಲ್ಲಿ ನಿವೇಶನ ಪಡೆದವರು, ಇಂತಹ ಇಕ್ಕಟ್ಟಿನ ಜಾಗದಲ್ಲಿದ್ದರೆ ಅವರೆಲ್ಲರೂ ಈ ಕಿರಿಕಿರಿ ಅನುಭವಿಸುತ್ತಿದ್ದಾರೆ.

ಕಡ್ಡಾಯ ನಿಯಮವಿಲ್ಲ

ಪ್ರಸ್ತುತ ಅರ್ಜಿದಾರರಿಗೆ 1 ಮೀಟರ್‌ ಅಗಲದ ಕಾಲುದಾರಿ ಇರುವಲ್ಲಿ ಏಕ ನಿವೇಶನ ವಿನ್ಯಾಸ ಅನುಮೋದನೆ ಕೊಡಲಾಗದು ಎನ್ನುವ ಹಿಂಬರಹ ನೀಡಿ ಕಳುಹಿಸಲಾಗುತ್ತಿದೆ.

ಲಭ್ಯ ಮಾಹಿತಿ ಪ್ರಕಾರ ಮುಡಾದಲ್ಲಿ ಎಲ್ಲೂ ಈ ರೀತಿಯ ನಿಯಮವಿಲ್ಲ, ಕನಿಷ್ಠ 3 ಮೀಟರ್‌ ರಸ್ತೆ ಇರಬೇಕು ಎನ್ನುವ ಅಂಶವನ್ನೇ ಹಿಡಿದುಕೊಂಡು ಅಧಿಕಾರಿಗಳು ಅರ್ಜಿಗಳನ್ನು ತಿರಸ್ಕರಿಸುತ್ತಿದ್ದಾರೆ.

ಹಿಂದೆ ಇಂತಹ ಸನ್ನಿವೇಶಗಳಲ್ಲಿ ಎಲ್ಲೂ ಅರ್ಜಿ ತಿರಸ್ಕರಿಸುತ್ತಿರಲಿಲ್ಲ. ರಾಜ್ಯದ ಇತರ ಕಡೆಗಳಿಂತ ಮಂಗಳೂರಿನ ಭೂವ್ಯವಸ್ಥೆ ಭಿನ್ನ, ಇಲ್ಲಿಗೆ ಬೆಂಗಳೂರಿನ ಮಾದರಿ ನಿಯಮಗಳನ್ನು ಅನ್ವಯಿಸುವುದಕ್ಕಾಗದು, ಈಗ ಕೆಲವು ತಿಂಗಳಿಂದ ಮಂಗಳೂರಿನಲ್ಲಿ ಬದಲಾಗಿರುವ ವ್ಯವಸ್ಥೆ ನಾಗರಿಕರಿಗೆ ಸಮಸ್ಯೆಯಾಗಿದೆ ಎಂದು ನಾಗರಿಕ ಹಿತರಕ್ಷಣ ವೇದಿಕೆಯ ಸಂಚಾಲಕ ಹನುಮಂತ ಕಾಮತ್‌ ಹೇಳುತ್ತಾರೆ.

ಆಯುಕ್ತರು ಎಲ್ಲಿ ಕಾನೂನು ಬಿಗಿಗೊಳಿಸಬೇಕೋ ಅದನ್ನು ಮಾಡಲಿ, ಅದಕ್ಕೆ ಆಕ್ಷೇಪವಿಲ್ಲ, ಬದಲು ಈ ರೀತಿ ಯಾವುದೇ ನಿಯಮದಲ್ಲಿ ಇಲ್ಲದಿರುವ ಅಂಶವನ್ನು ಹೇರಿದರೆ ಜನರಿಗೆ ವಿನಾಕಾರಣ ಸಂಕಷ್ಟ ಎನ್ನುತ್ತಾರೆ.

ಅರ್ಜಿಗಳನ್ನು ತಿರಸ್ಕರಿಸುವಂತಿಲ್ಲ

ರಸ್ತೆ ಅಗಲವಿಲ್ಲ ಎಂದು ಮುಡಾದವರು ಏಕನಿವೇಶನ ವಿನ್ಯಾಸ ಅನುಮೋದನೆ ಅರ್ಜಿಗಳನ್ನು ತಿರಸ್ಕರಿಸುವಂತಿಲ್ಲ, ಮಂಗಳೂರಿನ ಭೂಲಕ್ಷಣಗಳೇ ಬೇರೆ ಇವೆ, ಇದನ್ನು ಹಿರಿಯ ಅಧಿಕಾರಿಗಳ ಗಮನಕ್ಕೆ ತರಲಾಗುವುದು.
-ವೇದವ್ಯಾಸ ಕಾಮತ್‌, ಶಾಸಕರು

ಟಾಪ್ ನ್ಯೂಸ್

BJP ಶಾಸಕ ಬಸನಗೌಡ ಪಾಟೀಲ ಯತ್ನಾಳ ವಿರುದ್ದ‌ ದೂರು ದಾಖಲು

BJP ಶಾಸಕ ಬಸನಗೌಡ ಪಾಟೀಲ ಯತ್ನಾಳ ವಿರುದ್ದ‌ ದೂರು ದಾಖಲು

Attigere: ಶಾಲಾ ಆವರಣದಲ್ಲಿ ಬರೋಬ್ಬರಿ 15 ಅಡಿ ಉದ್ದದ ಕಾಳಿಂಗ ಸರ್ಪ ಸೆರೆ

Attigere: ಶಾಲಾ ಆವರಣದಲ್ಲಿ ಬರೋಬ್ಬರಿ 15 ಅಡಿ ಉದ್ದದ ಕಾಳಿಂಗ ಸರ್ಪ ಸೆರೆ

Vinay Kulakarni

BJP ದ್ವೇಷದ ರಾಜಕಾರಣಕ್ಕೆ ನಾನೇ ದೊಡ್ಡ ಸಾಕ್ಷಿ‌: ಶಾಸಕ ವಿನಯ ಕುಲಕರ್ಣಿ ಆಕ್ರೋಶ

Yakshagana: ಶತಾವಧಾನಿ ಗಣೇಶ್ ರಿಗೆ ಉತ್ತರ ಕನ್ನಡ ಜಿಲ್ಲಾ ಯಕ್ಷಶ್ರೀ ಪ್ರಶಸ್ತಿ ಘೋಷಣೆ

Udayavani.com “ನಮ್ಮನೆ ಕೃಷ್ಣ”: ದ್ವಿತೀಯ ಬಹುಮಾನ ಗಳಿಸಿದ ರೀಲ್ಸ್

Udayavani.com “ನಮ್ಮನೆ ಕೃಷ್ಣ”: ದ್ವಿತೀಯ ಬಹುಮಾನ ಗಳಿಸಿದ ರೀಲ್ಸ್

kejriwal-2

AAP ಬೇಡಿಕೆ: ನಿರ್ಗಮಿತ ಸಿಎಂ ಕೇಜ್ರಿವಾಲ್ ಅವರಿಗೆ ಸರಕಾರಿ ವಸತಿ ಕಲ್ಪಿಸಿ

Sagara: ಲೈಂಗಿಕ ದೌರ್ಜನ್ಯ ಎಸಗುವವರನ್ನು ಗಲ್ಲಿಗೇರಿಸಿ: ಬೇಳೂರು

Sagara: ಲೈಂಗಿಕ ದೌರ್ಜನ್ಯ ಎಸಗುವವರನ್ನು ಗಲ್ಲಿಗೇರಿಸಿ: ಬೇಳೂರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru: ಜಮೀನಿನ ಪಾಲು ಕೇಳಿದ್ದ ತಮ್ಮನನ್ನೇ ಹತ್ಯೆ ಮಾಡಿದ್ದ ಅಣ್ಣನಿಗೆ ಜೀವಾವಧಿ ಶಿಕ್ಷೆ

Mangaluru: ಜಮೀನಿನ ಪಾಲು ಕೇಳಿದ್ದ ತಮ್ಮನನ್ನೇ ಹತ್ಯೆ ಮಾಡಿದ್ದ ಅಣ್ಣನಿಗೆ ಜೀವಾವಧಿ ಶಿಕ್ಷೆ

Mangaluru: ಕಾಲರಾ ಭೀತಿ… ನಿಗಾ ವಹಿಸಲು ಜಿಲ್ಲಾ ಆರೋಗ್ಯಾಧಿಕಾರಿ ಸೂಚನೆ

Mangaluru: ಕಾಲರಾ ಭೀತಿ… ನಿಗಾ ವಹಿಸಲು ಜಿಲ್ಲಾ ಆರೋಗ್ಯಾಧಿಕಾರಿ ಸೂಚನೆ

1-gttt

Politicians ಜಾತಿ, ಧರ್ಮಗಳ ಮೂಲಕ ನಮ್ಮನ್ನು ಪ್ರತ್ಯೇಕಿಸುತ್ತಿದ್ದಾರೆ: ತುಷಾರ್‌ ಗಾಂಧಿ

Hampankatta: ಪಾರ್ಕಿಂಗ್‌ ಸಮಸ್ಯೆಗೆ ‘ಮಲ್ಟಿ ಲೆವೆಲ್‌’ ಉತ್ತರ!

Hampankatta: ಪಾರ್ಕಿಂಗ್‌ ಸಮಸ್ಯೆಗೆ ‘ಮಲ್ಟಿ ಲೆವೆಲ್‌’ ಉತ್ತರ!

ಕೊರಗ ಸಮುದಾಯದಿಂದ ಅಹೋರಾತ್ರಿ ಧರಣಿ

Mulki: ಕೊರಗ ಸಮುದಾಯದಿಂದ ಅಹೋರಾತ್ರಿ ಧರಣಿ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

BJP ಶಾಸಕ ಬಸನಗೌಡ ಪಾಟೀಲ ಯತ್ನಾಳ ವಿರುದ್ದ‌ ದೂರು ದಾಖಲು

BJP ಶಾಸಕ ಬಸನಗೌಡ ಪಾಟೀಲ ಯತ್ನಾಳ ವಿರುದ್ದ‌ ದೂರು ದಾಖಲು

Attigere: ಶಾಲಾ ಆವರಣದಲ್ಲಿ ಬರೋಬ್ಬರಿ 15 ಅಡಿ ಉದ್ದದ ಕಾಳಿಂಗ ಸರ್ಪ ಸೆರೆ

Attigere: ಶಾಲಾ ಆವರಣದಲ್ಲಿ ಬರೋಬ್ಬರಿ 15 ಅಡಿ ಉದ್ದದ ಕಾಳಿಂಗ ಸರ್ಪ ಸೆರೆ

Vinay Kulakarni

BJP ದ್ವೇಷದ ರಾಜಕಾರಣಕ್ಕೆ ನಾನೇ ದೊಡ್ಡ ಸಾಕ್ಷಿ‌: ಶಾಸಕ ವಿನಯ ಕುಲಕರ್ಣಿ ಆಕ್ರೋಶ

Yakshagana: ಶತಾವಧಾನಿ ಗಣೇಶ್ ರಿಗೆ ಉತ್ತರ ಕನ್ನಡ ಜಿಲ್ಲಾ ಯಕ್ಷಶ್ರೀ ಪ್ರಶಸ್ತಿ ಘೋಷಣೆ

Udayavani.com “ನಮ್ಮನೆ ಕೃಷ್ಣ”: ದ್ವಿತೀಯ ಬಹುಮಾನ ಗಳಿಸಿದ ರೀಲ್ಸ್

Udayavani.com “ನಮ್ಮನೆ ಕೃಷ್ಣ”: ದ್ವಿತೀಯ ಬಹುಮಾನ ಗಳಿಸಿದ ರೀಲ್ಸ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.