Daddalakadu : ದಡ್ಡಲಕಾಡು ರಸ್ತೆ ಅವ್ಯವಸ್ಥೆ: ಸಂಚಾರಕ್ಕೆ ಸಂಚಕಾರ
ಪ್ರತೀ ಮಳೆಗಾಲದಲ್ಲೂ ನಿರ್ಮಾಣವಾಗುತ್ತಿದೆ ಹೊಂಡಗುಂಡಿ
Team Udayavani, Aug 15, 2024, 2:31 PM IST
ದಡ್ಡಲಕಾಡು: ಕೊಟ್ಟಾರ ಸಮೀಪದ ದಡ್ಡಲಕಾಡು ರಸ್ತೆ ಹೊಂಡ ಗುಂಡಿಗಳಿಂದ ಕೂಡಿದ್ದು ಸಂಚಾರಕ್ಕೆ ಅಯೋಗ್ಯವಾಗಿ ಪರಿಣಮಿಸಿದೆ. ಕಳೆದ ಐದಾರು ವರ್ಷಗಳಿಂದ ರಸ್ತೆ ಅವ್ಯವಸ್ಥೆ ಯಿಂದ ಕೂಡಿದೆ. ಕಳಪೆ ಕಾಮಗಾರಿ ಯಿಂದ ರಸ್ತೆ ಪೂರ್ತಿ ಗುಂಡಿಯಿಂದ ಕೂಡಿದೆ.
ನಗರದ ಕಾಪಿಕಾಡ್ನಿಂದ ದಡ್ಡಲ ಕಾಡು ಮುಖೇನ ಕೊಟ್ಟಾರ ಸಂಪರ್ಕ ರಸ್ತೆ ಪೂರ್ತಿ ಹೊಂಡಗಳೇ ಇವೆ. ಈ ರಸ್ತೆಯನ್ನು ಅನೇಕ ಬಾರಿ ಡಾಮರು ನಡೆಸಿದರೂ ಇಲ್ಲಿನ ಹೊಂಡ ಗುಂಡಿಗಳಿಗೆ ಮುಕ್ತಿ ಎಂಬುವುದು ಸಿಗುತ್ತಿಲ್ಲ.
ಈ ಹಿಂದೆ ಡಾಮರು ಹಾಕಿದ ಕೆಲವೇ ತಿಂಗಳಲ್ಲಿ ರಸ್ತೆ ಪೂರ್ತಿ ಗುಂಡಿ ಬಿದ್ದಿರುವ ಉದಾಹರಣೆಗಳಿವೆ. ಇದೀಗ ಮಳೆಗಾಲ ಆರಂಭದಲ್ಲಿ ರಸ್ತೆಯ ಮತ್ತಷ್ಟು ಕಡೆಗಳಲ್ಲಿ ಗುಂಡಿಗಳಾಗಿದ್ದು, ಇದರಿಂದಾಗಿ ವಾಹನ ಸವಾರರಿಗೆ ಮತ್ತು ಸಾರ್ವಜನಿಕರಿಗೆ ತೊಂದರೆ ಉಂಟಾ ಗುತ್ತಿದೆ.
ನಗರದ ಪ್ರಮುಖ ಕೇಂದ್ರವಾದ ಕೊಟ್ಟಾರವನ್ನು ಸಂಪರ್ಕಿಸಲು ಕೆಎಸ್ಸಾ ರ್ಟಿಸಿ ಬಸ್ ನಿಲ್ದಾಣದಿಂದ ಕೊಟ್ಟಾರ ಸಂಪರ್ಕ ಇರುವ ಈ ರಸ್ತೆಯಲ್ಲಿ ದಡ್ಡಲಕಾಡು ಸಮೀಪ ನಿತ್ಯ ಗುಂಡಿ ಗಳಿಂದ ಕೂಡಿರುವ ರಸ್ತೆಯಲ್ಲೇ ಸಂಚಾರ ನಡೆಸಬೇಕಾದ ಅನಿವಾರ್ಯತೆ ವಾಹನ ಸವಾರರದ್ದು. ಕೊಟ್ಟಾರ ಸಂಪರ್ಕದ ರಸ್ತೆ ಬಹುತೇಕ ಕಾಂಕ್ರೀಟ್ ರಸ್ತೆಯಾಗಿದ್ದು, ದಡ್ಡಲಕಾಡು ಪ್ರದೇಶದಲ್ಲಿ ಮಾತ್ರವೇ ಡಾಮರು ರಸ್ತೆಯಾಗಿದೆ. ಇದೇ ಕಾರಣದಿಂದ ಇಲ್ಲಿ ಹೊಂಡಗುಂಡಿಗಳಿಗೆ ಮುಕ್ತಿ ಸಿಗುತ್ತಿಲ್ಲ.
ಮಳೆ ಸುರಿಯುವ ವೇಳೆ ರಸ್ತೆ ಜಲಾವೃತ
ಜೋರಾಗಿ ಮಳೆ ಸುರಿದರೆ ಈ ರಸ್ತೆಯಲ್ಲಿ ವಾಹನ ಸಂಚಾರಕ್ಕೆ ತೊಂದರೆಯಾಗುತ್ತದೆ. ಅಲ್ಪ ತಗ್ಗು ಪ್ರದೇಶವಾಗಿರುವ ಕಾರಣ ರಸ್ತೆಯಲ್ಲಿ ನೀರು ತುಂಬಿಕೊಳ್ಳುತ್ತದೆ. ಇದರಿಂದಾಗಿ ಹೊಂಡಗುಂಡಿಗಳು ಗೋಚರಕ್ಕೆ ಬರದೆ ಸವಾರರು ಪರದಾಡುವಂತಾಗಿದೆ.
ಮಳೆ ನೀರು ಹರಿಯಲು ಚರಂಡಿ ಇಲ್ಲ
ಇನ್ನು, ಈ ಪ್ರದೇಶದಲ್ಲಿ ಮಳೆ ನೀರು ಹರಿಯಲು ಚರಂಡಿಯ ವ್ಯವಸ್ಥೆ ಇಲ್ಲ. ಇದರಿಂದ ಮಳೆ ನೀರು ರಸ್ತೆಯಲ್ಲೇ ಹರಿದು ಸಮಸ್ಯೆ ತಲೆದೋರಿದೆ.
ಮಳೆ ನೀರು ರಸ್ತೆಯನ್ನು ಸಂಪೂರ್ಣ ಆವರಿಸಿಕೊಳ್ಳುವ ಕಾರಣ ಪಾದಚಾರಿ ಗಳಿಗೆ ತೆರಳಲು ಅವಕಾಶಗಳೇ ಇಲ್ಲ ಎಂಬಂತಾಗಿದೆ. ಇದೇ ಭಾಗದಲ್ಲಿ ಒಂದು ರಸ್ತೆ ಉರ್ವಸ್ಟೋರ್ಗೆ ಸಂಪರ್ಕ ಕಲ್ಪಿಸು ತ್ತಿದ್ದು, ಇಲ್ಲಿ ಯಾವುದೇ ಮುನ್ನೆಚ್ಚರಿಕೆಫಲಕ ಇಲ್ಲದಿರುವುದು ಅಪಾಯಕ್ಕೆ ಆಹ್ವಾನ.
ಉರ್ವಸ್ಟೋರ್ನಿಂದ ದಡ್ಡಲಕಾಡು ಸಂಪರ್ಕದ ರಸ್ತೆಯೂ ಕೂಡ ಅವ್ಯವಸ್ಥೆಯಿಂದ ಕೂಡಿದೆ. ಉರ್ವಸ್ಟೋರ್ ಸಮೀಪ ಹೊಂಡಗುಂಡಿಗಳಿಂದಾಗಿ ಸವಾರರು ಪರದಾಡು ವಂತಾಗಿದೆ. ಹೆಚ್ಚಿನ ಆಟೋ ರಿಕ್ಷಾಗಳು ಈ ರಸ್ತೆಯಲ್ಲಿ ಸಂಚರಿಸುತ್ತಿದ್ದು, ನಿತ್ಯ ಪರದಾಡು ವಂತಾಗಿದೆ. ಇನ್ನೊಂದೆಡೆ ಸಾರ್ವಜನಿಕರಿಗೆ ಈ ರಸ್ತೆ ಪಕ್ಕದಲ್ಲಿ ನಡೆದಾಡಲು ಫುಟ್ ಪಾತ್ ಇಲ್ಲ. ಜನರು ನಡೆದುಕೊಂಡು ಹೋಗಲು ಭಯ ಪಡುತ್ತಿದ್ದಾರೆ. ಮಳೆ ನೀರು ಹರಿದು ಹೋಗಲು ಸರಿಯಾದ ಚರಂಡಿ ಇಲ್ಲದೆ ರಸ್ತೆಯಲ್ಲಿ ನೀರು ತುಂಬಿಕೊಳ್ಳುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ಜಮೀನಿನ ಪಾಲು ಕೇಳಿದ್ದ ತಮ್ಮನನ್ನೇ ಹತ್ಯೆ ಮಾಡಿದ್ದ ಅಣ್ಣನಿಗೆ ಜೀವಾವಧಿ ಶಿಕ್ಷೆ
Mangaluru: ಕಾಲರಾ ಭೀತಿ… ನಿಗಾ ವಹಿಸಲು ಜಿಲ್ಲಾ ಆರೋಗ್ಯಾಧಿಕಾರಿ ಸೂಚನೆ
Politicians ಜಾತಿ, ಧರ್ಮಗಳ ಮೂಲಕ ನಮ್ಮನ್ನು ಪ್ರತ್ಯೇಕಿಸುತ್ತಿದ್ದಾರೆ: ತುಷಾರ್ ಗಾಂಧಿ
Hampankatta: ಪಾರ್ಕಿಂಗ್ ಸಮಸ್ಯೆಗೆ ‘ಮಲ್ಟಿ ಲೆವೆಲ್’ ಉತ್ತರ!
Mulki: ಕೊರಗ ಸಮುದಾಯದಿಂದ ಅಹೋರಾತ್ರಿ ಧರಣಿ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Mangaluru: ಜಮೀನಿನ ಪಾಲು ಕೇಳಿದ್ದ ತಮ್ಮನನ್ನೇ ಹತ್ಯೆ ಮಾಡಿದ್ದ ಅಣ್ಣನಿಗೆ ಜೀವಾವಧಿ ಶಿಕ್ಷೆ
SC ಭವಾನಿ ರೇವಣ್ಣ ನಿರೀಕ್ಷಣಾ ಜಾಮೀನು ರದ್ದು ಅರ್ಜಿ ಎರಡು ವಾರ ಮುಂದೂಡಿಕೆ
Recipe: ಫಾಸ್ಟ್ ಫುಡ್ ಆಹಾರಗಳಿಗೆ ಮಾರು ಹೋಗುವ ಬದಲು ಈ ಫುಡ್ ಟ್ರೈ ಮಾಡಿ…
IPL 2025: ಮತ್ತೆ ರಾಹುಲ್ ದ್ರಾವಿಡ್ ಜತೆ ಸೇರಿದ ವಿಕ್ರಮ್ ರಾಥೋರ್
Stock Market: ಸಾರ್ವಕಾಲಿಕ ದಾಖಲೆ ಬರೆದ ಷೇರುಪೇಟೆ; ಹೂಡಿಕೆದಾರರಿಗೆ 6 ಲಕ್ಷ ಕೋಟಿ ರೂ. ಲಾಭ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.