Siruguppa: ತುಂಗಭದ್ರಾ ನದಿಗೆ ಹಾರಿದ ರಾಜಸ್ಥಾನ್ ಮೂಲದ ಯುವಕ
Team Udayavani, Aug 15, 2024, 2:53 PM IST
ಸಿರುಗುಪ್ಪ: ತಾಲೂಕಿನ ದೇಶನೂರು ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ತುಂಗಭದ್ರಾನದಿಯ ಸೇತುವೆ ಮೇಲಿಂದ ರಾಜಸ್ಥಾನ ಮೂಲದ ಯುವಕನೊಬ್ಬ ನದಿಗೆ ಹಾರಿದ ಘಟನೆ ಗುರುವಾರ (ಆ.೧೫) ನಡೆದಿದೆ.
ನದಿಗೆ ಹಾರಿದ ಯುವಕನನ್ನು ಧನ್ಯರಾಮಕುಶಾಲ್ರಾಮ್(20) ಎಂದು ಗುರುತಿಸಲಾಗಿದೆ.
ಮಧ್ಯಾಹ್ನ 12 ಗಂಟೆಗೆ ಯುವಕನು ನದಿಗೆ ಹಾರಿದ್ದಾನೆಂದು ಹೇಳಲಾಗುತ್ತಿದೆ. ಆದರೆ ಯುವಕ ನದಿಗೆ ಹಾರಿದ ಬಗ್ಗೆ ಯಾವುದೇ ಸಾರ್ವಜನಿಕರು ನೋಡಿಲ್ಲವೆಂದು ಹೇಳಲಾಗುತ್ತಿದೆ,ಆದರೆ ನದಿ ದಡದಲ್ಲಿ ಯುವಕನಿಗೆ ಸೇರಿದ ಬೈಕ್ ಪತ್ತೆಯಾಗಿದ್ದು,ಯುವಕ ನದಿಗೆ ಹಾರಿದ್ದಾನೆಂದು ಹೇಳಲಾಗುತ್ತಿದ್ದು.ಸ್ಥಳಕ್ಕೆ ತಹಸೀಲ್ದಾರ್ ಎಚ್ ವಿಶ್ವನಾಥ್, ಡಿ ವೈ ಎಸ್ ಪಿ ವೆಂಕಟೇಶ್, ಸಿಪಿಐ ಹನುಮಂತಪ್ಪ, ಪಿಎಸ್ಐ ಪರಶುರಾಮ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ರಾಜಸ್ಥಾನ ಮೂಲದ ಯುವಕನು ತುಂಗಭದ್ರಾ ನದಿಗೆ ಹಾರಿದ್ದಾನೆಂದು ಹೇಳಲಾಗುತ್ತಿದೆ. ಆದರೆ ಯುವಕ ನದಿಗೆ ಹಾರಿದ ಬಗ್ಗೆ ಪ್ರತ್ಯಕ್ಷ ಸಾಕ್ಷಿಗಳು ಇಲ್ಲ. ಆದರೆ ಯುವಕನಿಗೆ ಸೇರಿದ ಬೈಕ್ ಸೇತುವೆ ಸಮೀಪ ಪತ್ತೆಯಾಗಿದ್ದು,ಯುವಕನ ಶವ ಪತ್ತೆಗಾಗಿ ಅಗ್ನಿಶಾಮಕ ದಳ ಸಿಬ್ಬಂದಿ ಮತ್ತು ನುರಿತ ಈಜುಗಾರರಿಂದ ಕಾರ್ಯಾಚರಣೆ ಆರಂಭಿಸಲಾಗಿದೆ ಎಂದು ಡಿವೈಎಸ್ಪಿ ವೆಂಕಟೇಶ್ ಅವರು ತಿಳಿಸಿದ್ದಾರೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.