Thirthahalli: ಬಿಸಿಲಿನ ತಾಪ, ಧ್ವಜಾರೋಹಣದ ವೇಳೆ ಕುಸಿದು ಬಿದ್ದ ಮಕ್ಕಳು !
Team Udayavani, Aug 15, 2024, 4:32 PM IST
ತೀರ್ಥಹಳ್ಳಿ: 78 ನೇ ವರ್ಷದ ಸ್ವಾತಂತ್ರ್ಯ ದಿನದ ಧ್ವಜಾರೋಹಣ ವೇಳೆ ವಿಪರೀತ ಬಿಸಿಲಿನ ತಾಪಕ್ಕೆ ಮಕ್ಕಳು ನಿತ್ರಾಣವಾಗಿ ಕುಸಿದುಬಿದ್ದ ಘಟನೆ (ಆ.15) ತೀರ್ಥಹಳ್ಳಿಯಲ್ಲಿ ನಡೆದಿದೆ.
ಯು ಆರ್ ಅನಂತಮೂರ್ತಿ ಪ್ರೌಢಶಾಲೆಯ ಕ್ರೀಡಾಂಗಣದಲ್ಲಿ ತಾಲೂಕು ದಂಡಾಧಿಕಾರಿಗಳ ಭಾಷಣದ ನಂತರದಲ್ಲಿ ಮಕ್ಕಳು ಕುಸಿದು ಬಿದ್ದಿದ್ದಾರೆ. ತಹಸೀಲ್ದಾರ್ ಜಕ್ಕಣ್ಣ ಗೌಡರ್ ರವರು ಸ್ವಾತಂತ್ರ್ಯ ದಿನಾಚರಣೆ ಕುರಿತು ಭಾಷಣ ಮಾಡಿ ಮುಗಿಸಿದ್ದರು. ಇದಕ್ಕೂ ಮೊದಲು ಧ್ವಜಾರೋಹಣ ನಂತರ ಮಕ್ಕಳ ಪಥಸಂಚಲನ ಹೀಗೆ ತುಂಬ ಹೊತ್ತು ಬಿಸಿಲಿನಲ್ಲೇ ನಿಂತಿದ್ದ ಮಕ್ಕಳು ಸುಸ್ತಾಗಿ ಕುಸಿದು ಬಿದ್ದಿದ್ದಾರೆ.
ಬಿಸಿಲಿನ ತಾಪಕ್ಕೆ ಕುವೆಂಪು ಶಾಲೆಯ ವಿದ್ಯಾರ್ಥಿಯೊರ್ವ ಕುಸಿದು ಬಿದ್ದು ಮೂಗಿನಲ್ಲಿ ರಕ್ತಸ್ತ್ರಾವವಾಗಲು ಆರಂಭವಾಗಿತ್ತು. ನಂತರ ಸ್ಥಳದಲ್ಲಿಯೇ ಇದ್ದಂತಹ ತಹಸೀಲ್ದಾರ್ ರವರ ವಾಹನದಲ್ಲಿಯೇ ಆಸ್ಪತ್ರೆಗೆ ಕರೆದೋಯ್ದು ನಂತರ ವಿದ್ಯಾರ್ಥಿ ಮನೆಗೆ ಬಿಡಲಾಯಿತು. ಆಸ್ಪತ್ರೆಗೆ ಕರೆದುಕೊಂಡು ಹೋಗುವ ಸಂದರ್ಭದಲ್ಲಿ ಕುವೆಂಪು ಶಾಲೆಗೆ ಸಂಬಂಧ ಪಟ್ಟ ಶಿಕ್ಷಕ ರೊಬ್ಬರು ನಿಮಗೆ ಈ ಹುಡುಗನನ್ನು ಕರೆದುಕೊಂಡು ಹೋಗಲು ಹೇಳಿದ್ಯಾರು? ಎಂದು ಕಂದಾಯ ಇಲಾಖೆ ಅಧಿಕಾರಿಯೊಬ್ಬರಿಗೆ ಏರು ದ್ವನಿಯಲ್ಲಿ ಘಧರಿಸಿ ಕೇಳಿದ್ದು ಕುವೆಂಪು ಶಾಲೆಯ ಶಿಕ್ಷಕರ ನಡೆಗೆ ತಾಲೂಕು ಕಚೇರಿಯ ವಾಹನ ಚಾಲಕರು ಸೇರಿದಂತೆ ಸಾರ್ವಜನಿಕರು ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.
ಇತ್ತ ಕುಸಿದು ಬಿದ್ದ ವಿದ್ಯಾರ್ಥಿ ಮೂಗಿನಲ್ಲಿ ರಕ್ತಸ್ತ್ರಾವವಾಗುವ ವಿಷಯ ತಿಳಿಯುತ್ತಿದ್ದಂತೆ ತಹಸೀಲ್ದಾರ್ ವಾಹನ ಚಾಲಕರಾದ ಕಿರಣ್ ಕುಳಗೇರಿ ಮತ್ತು ರಾಘವೇಂದ್ರ ಹೊರಬೈಲು ಇಬ್ಬರು ಸೇರಿ ತಡ ಮಾಡದೇ ತಹಸೀಲ್ದಾರ್ ವಾಹನದಲ್ಲೇ ವಿದ್ಯಾರ್ಥಿಯನ್ನು ಆಸ್ಪತ್ರೆಗೆ ಕರೆದೋಯ್ದರು.
ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಕೆಲವೊಂದು ಎಡವಟ್ಟುಗಳು!
ಇನ್ನೂ ಉಳಿದಂತೆ 78 ನೇ ಸ್ವಾತಂತ್ರ್ಯೋತ್ಸವದ ಸಂಭ್ರಮದಲ್ಲಿ ಧ್ವಜಾರೋಹಣ ಹಬ್ಬದ ವಾತಾವರಣ ಆದರೂ ವೇದಿಕೆಗೆ ಶಾಮೀಯಾನ ಕೂಡ ಹಾಕದಿರುವುದು ಕಂಡು ಬಂದಿತು. ಧ್ವಜಾರೋಹಣ ಕಟ್ಟೆಗೆ ಸುಣ್ಣ ಬಣ್ಣ ಕಾಣದಿದ್ದರೂ ಕೂಡ ಮಳೆಯಲ್ಲಿ ಪಾಚಿ ಕಟ್ಟಿದ ಸ್ಥಿತಿಯಲ್ಲಿ ಇದ್ದು ಕೊನೆ ಪಕ್ಷ ಧ್ವಜದ ಕಟ್ಟೆಯನ್ನಾದರು ತಿಕ್ಕಿ ತೊಳೆಯಬಹುದಿತ್ತಲ್ವೇ? ಎಂದು ಸ್ಥಳದಲ್ಲಿ ಹಾಜರಿದ್ದ ಆನೇಕ ಸಾರ್ವಜನಿಕರಿಂದ ಮಾತು ಕೇಳಿ ಬರುತ್ತಿತ್ತು.
ಧ್ವಜಾರೋಹಣ ನೆರವೇರಿಸಿ ನಂತರದ ಸಭಾ ಕಾರ್ಯಕ್ರಮ ಯು ಆರ್ ಅನಂತಮೂರ್ತಿ ಪ್ರೌಢಶಾಲೆಯ ಒಳಗಿರುವ ಸಭಾಂಗಣದಲ್ಲಿ ಆಯೋಜಿಸಲಾಗಿತ್ತು. ಆದರೆ ಕೊನೆ ಘಳಿಗೆಯಲ್ಲಿ ವೇದಿಕೆ ಕಾರ್ಯಕ್ರಮ ಯು.ಆರ್ ಅನಂತಮೂರ್ತಿ ಪ್ರೌಢಶಾಲೆ ಕ್ರೀಡಾಂಗಣದಲ್ಲಿ ಬದಲಾವಣೆ ಅಗಿದ್ದರಿಂದ ಅಲ್ಲಿ ಕುಡಿಯುವ ನೀರಿನ ವ್ಯವಸ್ಥೆ ಕೂಡ ಸರಿ ಇಲ್ಲದೆ ಇರುವುದು ಗಮನಿಸಿ ತುಂಗಾ ನದಿ ಪಕ್ಕದಲ್ಲಿ ಇದ್ದು ನೀರಿಗೂ ಬರ ಬಂತೇ ಎಂದು ಶಾಲಾ ಮಕ್ಕಳಿಂದ ಹಿಡಿದು ಫೊಷಕರು ಸೇರಿದಂತೆ ಅನೇಕ ಗಣ್ಯರು ಕೂಡ ಕಾರ್ಯಕ್ರಮ ಆಯೋಜಕರಿಗೆ ಹಿಡಿ ಶಾಪ ಹಾಕುತ್ತ ಧ್ವಜದ ಕಂಬಕ್ಕೆ ಸ್ವಾತಂತ್ರ್ಯ ಸಿಕ್ಕರೂ ಧ್ವಜದ ಕಟ್ಟೆಗೆ ಸ್ವಾತಂತ್ರ್ಯ ಸಿಗಲಿಲ್ವಾ ಎಂದು ಸ್ಥಳದಲ್ಲಿ ಇದ್ದ ಸಾರ್ವಜನಿಕರು ಮಾತನಾಡುತ್ತಾ ಇರುವುದು ಕಂಡು ಬಂತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shivamogga ವಾಯುವಿಹಾರ ಮಾಡುತ್ತಿದ್ದ ಎಂಬಿಬಿಎಸ್ ವಿದ್ಯಾರ್ಥಿ ಕುಸಿದು ಸಾ*ವು !
Sagara: ವಿದ್ಯುತ್ ಸಂಪರ್ಕ ಕಡಿತಗೊಳಿಸುತ್ತಿರುವ ಮೆಸ್ಕಾಂ ನೀತಿ ಖಂಡನೆ; ಪ್ರತಿಭಟನೆ
Shimoga: ವಿವಾದಿತ ಫ್ಲೆಕ್ಸ್ ಹಾಗು ಖಡ್ಗ ತೆರವು ಮಾಡಿದ ಪೊಲೀಸರು
Traffic: ಆಗುಂಬೆ ಘಾಟಿಯಲ್ಲಿ ವಾಹನ ಬ್ರೇಕ್ ಫೇಲ್, ಟ್ರಾಫಿಕ್ ನಲ್ಲಿ ಸಿಲುಕಿದ ಆಂಬ್ಯುಲೆನ್ಸ್
B. Y. Vijayendra ಬಗ್ಗೆ ಹಾದಿಯಲ್ಲಿ ಮಾತನಾಡುವುದು ಸಲ್ಲ: ರೇಣುಕಾಚಾರ್ಯ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.