Davanagere: ವಿದ್ಯುತ್ ಶಾಕ್ನಿಂದ ಸ್ಥಳದಲ್ಲೇ ಮೃತಪಟ್ಟ ದಂಪತಿ
Team Udayavani, Aug 15, 2024, 6:41 PM IST
ದಾವಣಗೆರೆ: ವಿದ್ಯುತ್ ಶಾಕ್ನಿಂದ ದಂಪತಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಗುರುವಾರ(ಆ.15) ದಾವಣಗೆರೆ ಕಾಟೇಹಳ್ಳಿಯಲ್ಲಿ ಸಂಭವಿಸಿದೆ. ಕಾಟೇಹಳ್ಳಿ ಗ್ರಾಮದ ನಾಗರಾಜ್(35), ಲತಾ(30) ಸ್ಥಳದಲ್ಲೇ ಮೃತಪಟ್ಟ ದಂಪತಿ.
ಒಂದುವರೆ ಎಕರೆ ನೀರಾವರಿ ಜಮೀನಿನಲ್ಲಿ ಟೊಮೊಟೊ, ಕೋಸು ಬೆಳೆದಿದ್ದರು. ಗುರುವಾರ ಬೆಳಗ್ಗೆ ಎಂದಿನಂತೆ ಜಮೀನಿಗೆ ತೆರಳಿದ್ದರು. ಕಳೆದ ರಾತ್ರಿ ಧಾರಾಕಾರವಾಗಿ ಮಳೆ ಸುರಿದು, ಜಮೀನಿನಲ್ಲಿ ನೀರು ನಿಂತಿತ್ತು. ಟಿಸಿ ಹಾಕಿದ್ದ ವಿದ್ಯುತ್ ಕಂಬದ ತಂತಿಗೆ ಕೈ ಮುಟ್ಟಿದ್ದರಿಂದ ವಿದ್ಯುತ್ ಶಾಕ್ಗೆ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ದಂಪತಿ 3ನೇ ತರಗತಿ ಓದುತ್ತಿರುವ ಸಾನ್ವಿ, ಯುಕೆಜಿ ಓದುತ್ತಿರುವ ಖುಷಿ ಎಂಬ ಇಬ್ಬರು ಪುತ್ರಿಯರ ಅಗಲಿದ್ದಾರೆ. ತಂದೆ- ತಾಯಿ ಇಬ್ಬರ ಕಳೆದುಕೊಂಡ ಮಕ್ಕಳ ರೋಧನ ಹೇಳತೀರದಾಗಿದೆ.
ಘಟನಾ ಸ್ಥಳಕ್ಕೆ ಶಾಸಕ ಭೇಟಿ:
ಕಾಟೇಹಳ್ಳಿ ಗ್ರಾಮದಲ್ಲಿ ವಿದ್ಯುತ್ ಅವಘಡದಿಂದ ದಂಪತಿ ಮೃತಪಟ್ಟಿರುವ ಸುದ್ದಿ ತಿಳಿಯುತ್ತಿದ್ದಂತೆ ಘಟನಾ ಸ್ಥಳಕ್ಕೆ ದೌಡಾಯಿಸಿದ ಮಾಯಗೊಂಡ ಶಾಸಕ ಕೆ.ಎಸ್.ಬಸವಂತಪ್ಪ ಸಂಭವಿಸಿದ ಘಟನೆ ಬಗ್ಗೆ ಗ್ರಾಮಸ್ಥರಿಂದ ಮಾಹಿತಿ ಪಡೆದು ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿದರು. ಬೆಸ್ಕಾಂ ಮತ್ತು ಪೊಲೀಸರಿಗೆ ಮಾಹಿತಿ ನೀಡಿ ಮೃತದೇಹಗಳ ಶವಾಗಾರಕ್ಕೆ ಸಾಗಿಸಲು ನೆರವಾದರು. ಮಕ್ಕಳಿಗೆ ಪರಿಹಾರ ನೀಡಲು ಬೆಸ್ಕಾಂ ಅಧಿಕಾರಿಗಳಿಗೆ ಶಾಸಕ ಬಸವಂತಪ್ಪ ಸೂಚನೆ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nyamathi;ಕೊ*ಲೆ,ಇರಿ*ತ ಪ್ರಕರಣಕ್ಕೆ ಸಂಬಂಧಿಸಿ ಆರು ಮಂದಿ ಬಂಧನ
Davanagere: ಗ್ಯಾರಂಟಿ ಯೋಜನೆಗಳು ಮತ ಪಡೆಯಲೆಂದೇ ರೂಪಿಸಿರುವ ಕಾರ್ಯಕ್ರಮ: ಕೋಡಿಹಳ್ಳಿ
Bhutan ಅಡಿಕೆ ಆಮದು ನಮ್ಮ ಬೆಳೆಗಾರರ ಮೇಲೆ ಪರಿಣಾಮ ಬೀರದು: ಕಿಶೋರ್ ಕುಮಾರ್ ಕೊಡ್ಗಿ
Davanagere: ಮರಳು ತೆಗೆದ ವಿಚಾರದಲ್ಲಿ ಘರ್ಷಣೆ… ಓರ್ವ ಮೃತ್ಯು, ಇನ್ನೋರ್ವ ಗಂಭೀರ
Davanagere; ಪ್ಯಾಲೇಸ್ತೀನ್ ಬಾವುಟದ ಸ್ಟಿಕ್ಕರ್ ಅಂಟಿಸಿಕೊಂಡವರ ವಿರುದ್ಧ ಪ್ರಕರಣ ದಾಖಲು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.