Bantwal: ಡ್ರಾಪ್‌ ಕೊಡುವ ನೆಪದಲ್ಲಿ ಹಲ್ಲೆ; ನಗದು-ಚಿನ್ನದ ಸರ ದರೋಡೆ


Team Udayavani, Aug 15, 2024, 8:34 PM IST

sara

ಬಂಟ್ವಾಳ: ಕೊಡಗು ಮೂಲದ ವ್ಯಕ್ತಿಯೊಬ್ಬರು ಬಿ.ಸಿ. ರೋಡಿನಿಂದ ನರಿಕೊಂಬುವಿಗೆ ಹೋಗಲು ವಾಹನಕ್ಕೆ ಕಾಯುತ್ತಿದ್ದ ಸಂದರ್ಭ ಕಾರಿನಲ್ಲಿ ಬಂದ ತಂಡವೊಂದು ಡ್ರಾಪ್‌ ಕೊಡುವ ನೆಪದಲ್ಲಿ ಹಲ್ಲೆ ನಡೆಸಿ ನಗದು ಹಾಗೂ ಚಿನ್ನದ ಸರ ದರೋಡೆ ಮಾಡಿದ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ಕೊಡಗಿನ ವೀರಾಜಪೇಟೆ ನಿವಾಸಿ ಎಂ. ಗಂಗಾಧರ ಅವರು ದರೋಡೆಗೊಳಗಾದವರು. ಅವರು ಆ. 9ರಂದು ವಿರಾಜಪೇಟೆಯಿಂದ ಬಿ.ಸಿ. ರೋಡಿಗೆ ಬಂದು ನರಿಕೊಂಬುನಲ್ಲಿರುವ ಅಣ್ಣನ ಮನೆಗೆ ತೆರಳುವುದಕ್ಕೆ ರಾತ್ರಿ ಯಾವುದಾದರೂ ವಾಹನ ಸಿಗುತ್ತದೆಯೋ ಎಂದು ಕಾಯುತ್ತಿದ್ದರು.

ಈ ವೇಳೆ ಬಿಳಿ ಬಣ್ಣದ ಕಾರೊಂದು ಅವರ ಬಳಿ ಬಂದು ನಿಂತಿದ್ದು, ಅದರಲ್ಲಿದ್ದ ಅಪರಿಚಿತರು ತಾವು ಪಾಣೆಮಂಗಳೂರು ಕಡೆಗೆ ತೆರಳುತ್ತಿದ್ದು ಅಲ್ಲಿವರೆಗೆ ಬರುವಂತೆ ತಿಳಿಸಿದ್ದಾರೆ. ಹಾಗಾಗಿ ಅವರು ಹಿಂದಿನ ಸೀಟಿನಲ್ಲಿ ಕುಳಿತಿದ್ದಾರೆ. ಕಾರು ಸ್ವಲ್ಪ ಮುಂದೆ ಚಲಿಸಿದಾಗ ಕಾರಿನ ಹಿಂದಿನ ಸೀಟಿನಲ್ಲಿ ಕುಳಿತಿದ್ದ ಇಬ್ಬರು ಅಪರಿಚಿತರು ಗಂಗಾಧರ್‌ ಮೇಲೆ ಹಲ್ಲೆ ನಡೆಸಿ ಅವರ ಬಳಿಯಿದ್ದ 80,000 ರೂ. ಮೌಲ್ಯದ ಚಿನ್ನದ ಸರ ಹಾಗೂ 2 ಸಾವಿರ ರೂ. ನಗದು ಕಸಿದುಕೊಂಡು ಬಳಿಕ ಅವರನ್ನು ಕಾರಿನಿಂದ ದೂಡಿ ಹಾಕಿ ಪರಾರಿಯಾಗಿದ್ದಾರೆ.

ಬಳಿಕ ಗಂಗಾಧರ್‌ ಈ ಕುರಿತು ತನ್ನ ಮನೆಯವರು ಹಾಗೂ ಅಣ್ಣನಿಗೆ ವಿಷಯ ತಿಳಿಸಿದ್ದು, ಗಾಯಗೊಂಡಿದ್ದ ಅವರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ಘಟನೆ ಆ. 9ರಂದು ನಡೆದರೂ ಅವರು ಆ. 14ರಂದು ಪೊಲೀಸರಿಗೆ ದೂರು ನೀಡಿದ್ದು, ಬಂಟ್ವಾಳ ನಗರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ಟಾಪ್ ನ್ಯೂಸ್

da

Davanagere: ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲು ತೂರಾಟ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Modi (2)

PM ಮೋದಿ ಅಮೆರಿಕ ಪ್ರವಾಸ; ಮಣಿಪುರಕ್ಕೆ ಹೋಗುವುದಿಲ್ಲವೇಕೆ?:ಕಾಂಗ್ರೆಸ್ ಪ್ರಶ್ನೆ

High Court: ಮಹಿಳೆ ಅಪಹರಣ ಕೇಸ್‌; ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

High Court: ಮಹಿಳೆ ಅಪಹರಣ ಕೇಸ್‌; ಎಚ್‌.ಡಿ.ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

11

Eshwara Khandre: ಮಹದಾಯಿಗೆ ಅನುಮತಿ ಸಿಗೋವರೆಗೂ ಮರ ಕಡಿಯಲು ಬಿಡಲ್ಲ

H.D.Kumaraswamy

H. D. Kumaraswamy: ರಾಜಕೀಯ ಮಾಡಲು, ಬೆಂಕಿ ಹಚ್ಚಲು ಬಂದಿಲ್ಲ

1-frr

BJP ಶಾಸಕ ಮುನಿರತ್ನಗೆ ಷರತ್ತುಬದ್ಧ ಜಾಮೀನು; ಆದರೂ ತಪ್ಪಿಲ್ಲ ಸಂಕಷ್ಟ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kundapura: ಪ್ರಾಣಿ ತ್ಯಾಜ್ಯ ಚೀಲದಲ್ಲಿ ಪತ್ತೆ… ಕೇಸು ದಾಖಲು

Kundapura: ಪ್ರಾಣಿ ತ್ಯಾಜ್ಯ ಚೀಲದಲ್ಲಿ ಪತ್ತೆ… ಕೇಸು ದಾಖಲು

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

1

Amparu: ರೆಸ್ಟೋರೆಂಟ್‌ನಲ್ಲಿ ಹೊಡೆದಾಟ

sand

Kundapura: ಮರಳು ಅಕ್ರಮ ಸಾಗಾಟ ಪತ್ತೆ

4

Kundapura: ಕೆಲಸವಿಲ್ಲದೆ ಜುಗುಪ್ಸೆ: ಯುವಕ ಆತ್ಮಹತ್ಯೆ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

da

Davanagere: ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲು ತೂರಾಟ

POCSO ಪ್ರಕರಣ : ಜ್ಯೋತಿಷಿ ನರಸಿಂಹ ಪ್ರಸಾದ್‌ ಪಾಂಗಣ್ಣಾಯ ಬಂಧನ

POCSO ಪ್ರಕರಣ : ಜ್ಯೋತಿಷಿ ನರಸಿಂಹ ಪ್ರಸಾದ್‌ ಪಾಂಗಣ್ಣಾಯ ಬಂಧನ

Kundapura: ಪ್ರಾಣಿ ತ್ಯಾಜ್ಯ ಚೀಲದಲ್ಲಿ ಪತ್ತೆ… ಕೇಸು ದಾಖಲು

Kundapura: ಪ್ರಾಣಿ ತ್ಯಾಜ್ಯ ಚೀಲದಲ್ಲಿ ಪತ್ತೆ… ಕೇಸು ದಾಖಲು

1-baa

Mangalore Port ಇಬ್ಬರು ಬಾಲಕಾರ್ಮಿಕರ ರಕ್ಷಣೆ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.