US Open: ಒಸಾಕಾ, ವಾವ್ರಿಂಕಾಗೆ ವೈಲ್ಡ್‌ ಕಾರ್ಡ್‌


Team Udayavani, Aug 15, 2024, 11:25 PM IST

OSAKA

ನ್ಯೂಯಾರ್ಕ್‌: ವರ್ಷಾಂತ್ಯದ ಯುಎಸ್‌ ಓಪನ್‌ (US Open) ಗ್ರ್ಯಾನ್‌ಸ್ಲಾಮ್‌ ಪಂದ್ಯಾ ವಳಿಯ ವೈಲ್ಡ್‌ಕಾರ್ಡ್‌ ಆಟಗಾರರ ಯಾದಿ ಪ್ರಕಟಗೊಂಡಿದೆ. ಎರಡು ಬಾರಿಯ ಚಾಂಪಿಯನ್‌ ನವೋಮಿ ಒಸಾಕಾ, ಮಾಜಿ ಚಾಂಪಿಯನ್‌ಗಳಾದ ಸ್ಟಾನಿಸ್ಲಾಸ್‌ ವಾವ್ರಿಂಕ, ಡೊಮಿನಿಕ್‌ ಥೀಮ್‌ ಮತ್ತು ಬಿಯಾಂಕಾ ಆ್ಯಂಡ್ರಿಸ್ಕೂ ಇವರಲ್ಲಿ ಪ್ರಮುಖರು.

ನವೋಮಿ ಒಸಾಕಾ ತಮ್ಮ 4 ಗ್ರ್ಯಾನ್‌ಸ್ಲಾಮ್‌ ಗೆಲುವುಗಳಲ್ಲಿ ಮೊದಲ ಎರಡನ್ನು ಇಲ್ಲಿಯೇ ಜಯಿಸಿದ್ದರು (2018, 2020). ಆದರೆ ಉಳಿದ ಮಾಜಿ ಚಾಂಪಿಯನ್‌ಗಳಂತೆ ಒಸಾಕಾ ಅವರಿಗೆ ಈ ಬಾರಿ ನೇರ ಆಯ್ಕೆ ಸಾಧ್ಯವಾಗಲಿಲ್ಲ. ಉನ್ನತ ರ್‍ಯಾಂಕಿಂಗ್‌ ಕೂಡ ಹೊಂದಿರಲಿಲ್ಲ.

2019ರಲ್ಲಿ ಸೆರೆನಾ ವಿಲಿಯಮ್ಸ್‌ ಅವರನ್ನು ಮಣಿಸಿ ಯುಎಸ್‌ ಓಪನ್‌ ಚಾಂಪಿಯನ್‌ ಆಗಿದ್ದ ಕೆನಡಾದ ಬಿಯಾಂಕಾ ಆ್ಯಂಡ್ರಿಸ್ಕೂ ಬೆನ್ನುನೋವಿನಿಂದಾಗಿ 9 ತಿಂಗಳು ವಿಶ್ರಾಂತಿಯಲ್ಲಿದ್ದರು. ಬಳಿಕ ಈ ವರ್ಷದ ಫ್ರೆಂಚ್‌ ಓಪನ್‌ನಲ್ಲಿ ಆಡಲಿಳಿದಿದ್ದರು.

ಆಸ್ಟ್ರಿಯಾದ ಡೊಮಿನಿಕ್‌ ಥೀಮ್‌ ಪಾಲಿಗೆ ಇದು ಕೊನೆಯ ಗ್ರ್ಯಾನ್‌ಸ್ಲಾಮ್‌ ಪಂದ್ಯಾವಳಿಯಾಗಿದೆ. ಯುಎಸ್‌ ಓಪನ್‌ ಬಳಿಕ ಅವರು ಟೆನಿಸ್‌ ನಿವೃತ್ತಿ ಘೋಷಿಸಲಿದ್ದಾರೆ. ಇವರು ತಮ್ಮ ಏಕೈಕ ಗ್ರ್ಯಾನ್‌ಸ್ಲಾಮ್‌ ಪ್ರಶಸ್ತಿಯನ್ನು 2020ರ ಯುಎಸ್‌ ಓಪನ್‌ ಪಂದ್ಯಾವಳಿಯಲ್ಲಿ ಜಯಿಸಿದ್ದರು.

39 ವರ್ಷದ ಸ್ಟಾನಿಸ್ಲಾಸ್‌ ವಾವ್ರಿಂಕ 2016ರ ಯುಎಸ್‌ ಓಪನ್‌ ಚಾಂಪಿಯನ್‌. ಒಂದು ಕಾಲದಲ್ಲಿ ನಂ.3 ಟೆನಿಸಿಗನಾಗಿದ್ದ ವಾವ್ರಿಂಕ, ಈಗ ನೂರರಾಚೆ ಕುಸಿದಿದ್ದಾರೆ. ಇದು ಅವರ 72ನೇ ಗ್ರ್ಯಾನ್‌ಸ್ಲಾಮ್‌ ಪಂದ್ಯಾವಳಿ. ಸಾರ್ವಕಾಲಿಕ ದಾಖಲೆಯ ಯಾದಿಯಲ್ಲಿ ಇವರಿಗೆ 5ನೇ ಸ್ಥಾನ.

ಇತರ ವೈಲ್ಡ್‌ಕಾರ್ಡ್‌ ಪ್ರವೇಶಿಗರು
ವೈಲ್ಡ್‌ಕಾರ್ಡ್‌ ಪಡೆದ ಇತರ ಆಟಗಾರ್ತಿಯ ರೆಂದರೆ ಅಮೆರಿಕದ ಅಮಂಡಾ ಅನಿಸಿಮೋವಾ, ಮೆಕಾರ್ಟಿನಿ ಕೆಸ್ಲರ್‌, ಅಲೆಕ್ಸಾ ನೋಯೆಲ್‌, ಇವಾ ಜೋವಿಕ್‌, ಫ್ರಾನ್ಸ್‌ನ ಕ್ಲೋ ಪಾಕೆಟ್‌, ಆಸ್ಟ್ರೇಲಿಯದ ಟಾಯ್ಲಾ  ಪ್ರಸ್ಟನ್‌. ಪುರುಷರ ವಿಭಾಗದಿಂದ ಅಮೆರಿಕದ ಕ್ರಿಸ್‌ ಯೂಬ್ಯಾಂಕ್ಸ್‌, ಲರ್ನರ್‌ ಟೀನ್‌, ಝಕಾರಿ ಸ್ವಾಕ, ಮ್ಯಾಥ್ಯೂ ಫೋರ್ಬ್ಸ್‌ , ಫ್ರಾನ್ಸ್‌ನ ಅಲೆಕ್ಸಾಂಡ್ರೆ ಮುಲ್ಲರ್‌, ಆಸ್ಟ್ರೇಲಿಯದ ಟ್ರಿಸ್ಟನ್‌ ಸ್ಕೂಲ್‌ಕೇಟ್‌ ವೈಲ್ಡ್‌ಕಾರ್ಡ್‌ ಪಡೆದಿದ್ದಾರೆ.

ಟಾಪ್ ನ್ಯೂಸ್

da

Davanagere: ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲು ತೂರಾಟ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Modi (2)

PM ಮೋದಿ ಅಮೆರಿಕ ಪ್ರವಾಸ; ಮಣಿಪುರಕ್ಕೆ ಹೋಗುವುದಿಲ್ಲವೇಕೆ?:ಕಾಂಗ್ರೆಸ್ ಪ್ರಶ್ನೆ

High Court: ಮಹಿಳೆ ಅಪಹರಣ ಕೇಸ್‌; ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

High Court: ಮಹಿಳೆ ಅಪಹರಣ ಕೇಸ್‌; ಎಚ್‌.ಡಿ.ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

11

Eshwara Khandre: ಮಹದಾಯಿಗೆ ಅನುಮತಿ ಸಿಗೋವರೆಗೂ ಮರ ಕಡಿಯಲು ಬಿಡಲ್ಲ

H.D.Kumaraswamy

H. D. Kumaraswamy: ರಾಜಕೀಯ ಮಾಡಲು, ಬೆಂಕಿ ಹಚ್ಚಲು ಬಂದಿಲ್ಲ

1-frr

BJP ಶಾಸಕ ಮುನಿರತ್ನಗೆ ಷರತ್ತುಬದ್ಧ ಜಾಮೀನು; ಆದರೂ ತಪ್ಪಿಲ್ಲ ಸಂಕಷ್ಟ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

da

Davanagere: ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲು ತೂರಾಟ

POCSO ಪ್ರಕರಣ : ಜ್ಯೋತಿಷಿ ನರಸಿಂಹ ಪ್ರಸಾದ್‌ ಪಾಂಗಣ್ಣಾಯ ಬಂಧನ

POCSO ಪ್ರಕರಣ : ಜ್ಯೋತಿಷಿ ನರಸಿಂಹ ಪ್ರಸಾದ್‌ ಪಾಂಗಣ್ಣಾಯ ಬಂಧನ

Kundapura: ಪ್ರಾಣಿ ತ್ಯಾಜ್ಯ ಚೀಲದಲ್ಲಿ ಪತ್ತೆ… ಕೇಸು ದಾಖಲು

Kundapura: ಪ್ರಾಣಿ ತ್ಯಾಜ್ಯ ಚೀಲದಲ್ಲಿ ಪತ್ತೆ… ಕೇಸು ದಾಖಲು

1-baa

Mangalore Port ಇಬ್ಬರು ಬಾಲಕಾರ್ಮಿಕರ ರಕ್ಷಣೆ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

da

Davanagere: ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲು ತೂರಾಟ

POCSO ಪ್ರಕರಣ : ಜ್ಯೋತಿಷಿ ನರಸಿಂಹ ಪ್ರಸಾದ್‌ ಪಾಂಗಣ್ಣಾಯ ಬಂಧನ

POCSO ಪ್ರಕರಣ : ಜ್ಯೋತಿಷಿ ನರಸಿಂಹ ಪ್ರಸಾದ್‌ ಪಾಂಗಣ್ಣಾಯ ಬಂಧನ

Kundapura: ಪ್ರಾಣಿ ತ್ಯಾಜ್ಯ ಚೀಲದಲ್ಲಿ ಪತ್ತೆ… ಕೇಸು ದಾಖಲು

Kundapura: ಪ್ರಾಣಿ ತ್ಯಾಜ್ಯ ಚೀಲದಲ್ಲಿ ಪತ್ತೆ… ಕೇಸು ದಾಖಲು

1-baa

Mangalore Port ಇಬ್ಬರು ಬಾಲಕಾರ್ಮಿಕರ ರಕ್ಷಣೆ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.