Wenlock Hospital; 17 ಕೋ.ರೂ. ವೆಚ್ಚದ “ಕ್ರಿಟಿಕಲ್ ಕೇರ್’ ಮಂಜೂರು
ವೆನ್ಲಾಕ್ ಆಸ್ಪತ್ರೆಯ ನೂತನ ಸರ್ಜಿಕಲ್ ಸ್ಪೆಷಾಲಿಟಿ ಬ್ಲಾಕ್ ಉದ್ಘಾಟಿಸಿ ಗುಂಡೂರಾವ್
Team Udayavani, Aug 15, 2024, 11:23 PM IST
ಮಂಗಳೂರು: ವೆನ್ಲಾಕ್ ಆಸ್ಪತ್ರೆ(Wenlock Hospital) ಸುಸಜ್ಜಿತವಾಗಿ ಸೇವೆಗೆ ಸಿದ್ಧಗೊಂಡಿದೆ. ಆಧುನಿಕ ತಂತ್ರಜ್ಞಾನ ಬಳಸಿ ನೂತನ ಆಸ್ಪತ್ರೆಯನ್ನು ಖಾಸಗಿಗೆ ಸಮಾನಾಗಿ ಅಭಿವೃದ್ಧಿ ಮಾಡಲಾಗಿದೆ. ರಾಜ್ಯದ ಉನ್ನತ ಆಸ್ಪತ್ರೆಗಳ ಪೈಕಿ ವೆನ್ಲಾಕ್ ಒಂದಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್(Dinesh Gundu Rao )ಹೇಳಿದರು.
ದ.ಕ. ಜಿಲ್ಲಾಡಳಿತ, ಜಿ. ಪಂ., ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಮಂಗಳೂರು ಸ್ಮಾರ್ಟ್ಸಿಟಿ ಲಿ.ಹಾಗೂ ವೆನ್ಲಾಕ್ ವತಿಯಿಂದ ನಿರ್ಮಾಣಗೊಂಡ ವೆನ್ಲಾಕ್ನ ನೂತನ ಸರ್ಜಿಕಲ್ ಸೂಪರ್ ಸ್ಪೆಷಾಲಿಟಿ ಕಟ್ಟಡವನ್ನು ಗುರುವಾರ ಉದ್ಘಾಟಿಸಿ ಅವರು ಮಾತನಾಡಿದರು.
250 ಹಾಸಿಗೆಯ ಆಸ್ಪತ್ರೆಯನ್ನು 63 ಕೋ. ರೂ. ವೆಚ್ಚದಲ್ಲಿ ನಿರ್ಮಿಸಲಾಗಿದೆ. ಹೆಚ್ಚುವರಿಯಾಗಿ 17 ಕೋ. ರೂ. ವೆಚ್ಚದಲ್ಲಿ ಕ್ರಿಟಿಕಲ್ ಕೇರ್ ಮಂಜೂರಾಗಿದ್ದು, ಶೀಘ್ರ ಟೆಂಡರ್ ಕರೆದು ಕೆಲಸ ಆರಂಭಿಸಲಾಗುವುದು ಎಂದರು.
ಸಂಸದ ಕ್ಯಾ| ಬ್ರಿಜೇಶ್ ಚೌಟ ಮಾತನಾಡಿ, ಕರ್ನಾಟಕಕ್ಕೆ ಏಮ್ಸ್ ಆಸ್ಪತ್ರೆ ಆಗತ್ಯವಾಗಿದ್ದು, ಮಂಗಳೂರಿನಲ್ಲೇ ಇದು ಸ್ಥಾಪನೆಯಾಗುವ ನಿಟ್ಟಿನಲ್ಲಿ ಜತೆಯಾಗಿ ಶ್ರಮಿಸೋಣ ಎಂದರು.
ಶಾಸಕ ವೇದವ್ಯಾಸ್ ಕಾಮತ್ ಅಧ್ಯಕ್ಷತೆ ವಹಿಸಿದ್ದರು. ಸ್ಪೀಕರ್ ಖಾದರ್ ಶಾಸಕ ಅಶೋಕ್ ಕುಮಾರ್ ರೈ, ವಿಧಾನ ಪರಿಷತ್ ಸದಸ್ಯ ಐವನ್ ಡಿ’ಸೋಜಾ, ದ.ಕ. ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ., ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ತಾರನಾಥ ಗಟ್ಟಿ, ಗೇರು ನಿಗಮದ ಅಧ್ಯಕ್ಷೆ ಮಮತಾ ಗಟ್ಟಿ, ಮುಡಾ ಅಧ್ಯಕ್ಷ ಸದಾಶಿವ ಉಳ್ಳಾಲ್, ಕೆಎಂಸಿ ಆಸ್ಪತ್ರೆ ಡೀನ್ ಡಾ| ಬಿ. ಉಣ್ಣಿಕೃಷ್ಣನ್, ಮಣಿಪಾಲ್ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ನ ಪ್ರೊವೈಸ್ ಚಾನ್ಸಿಲರ್ ಡಾ| ದಿಲೀಪ್ ನಾಯಕ್, ಪಾಲಿಕೆ ವಿಪಕ್ಷ ನಾಯಕ ಪ್ರವೀಣ್ಚಂದ್ರ ಆಳ್ವ, ಜಿ.ಪಂ. ಸಿಇಒ ಡಾ| ಆನಂದ್ ಕೆ., ಪಾಲಿಕೆ ಆಯುಕ್ತ ಆನಂದ್ ಸಿ.ಎಲ್., ದ.ಕ. ಆರೋಗ್ಯಾಧಿಕಾರಿ ಡಾ| ಎಚ್.ಆರ್. ತಿಮ್ಮಯ್ಯ ಮುಂತಾದವರಿದ್ದರು. ವೆನ್ಲಾಕ್ ಅಧೀಕ್ಷಕಿ ಡಾ| ಜೆಸಿಂತಾ ಡಿ’ಸೋಜಾ ಸ್ವಾಗತಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bajpe ಬಸ್ ನಿಲ್ದಾಣ ಕಟ್ಟಡ ಪೂರ್ಣ; 90 ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣ
Mangaluru: ನೂತನ ಮೇಯರ್ ಆಗಿ ಮನೋಜ್ ಕುಮಾರ್ ಕೋಡಿಕಲ್, ಉಪಮೇಯರ್ ಆಗಿ ಭಾನುಮತಿ ಆಯ್ಕೆ
Health Department: ಮಂಗನ ಕಾಯಿಲೆ ಆತಂಕ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿಶೇಷ ನಿಗಾ
Mangaluru: ಹಳಿ ನಿರ್ವಹಣೆ ಕಾಮಗಾರಿ; ರೈಲು ಸೇವೆಯಲ್ಲಿ ವ್ಯತ್ಯಯ
Mangaluru: ಕದ್ರಿ ಪಾರ್ಕ್ನಲ್ಲಿ ರಾಜ್ಯದ ಎರಡನೇ ಅತಿ ಎತ್ತರದ ರಾಷ್ಟ್ರ ಧ್ವಜಸ್ತಂಭ ಅನಾವರಣ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Lokesh Kanagaraj: ʼಕೂಲಿʼ ಸಿನಿಮಾದ ದೃಶ್ಯ ಲೀಕ್; ಬೇಸರ ಹೊರ ಹಾಕಿದ ನಿರ್ದೇಶಕ ಲೋಕೇಶ್
Kundapura: ಗಾಂಧಿ ಮೈದಾನದಲ್ಲಿ ಸಮಸ್ಯೆಗಳದ್ದೇ ಆಟ!
ರಸ್ತೆ ಪಕ್ಕ ನಡೆದುಕೊಂಡು ಹೋಗುತ್ತಿದ್ದವರ ಮೇಲೆ ಲಾರಿ ಹರಿದು ಇಬ್ಬರು ಸಾವು
Chikkaballapura; ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ದಲಿತ ಸಂಘಟನೆಗಳ ಪ್ರತಿಭಟನೆ
Bajpe ಬಸ್ ನಿಲ್ದಾಣ ಕಟ್ಟಡ ಪೂರ್ಣ; 90 ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.