Independence Day: 2036ರ ಒಲಿಂಪಿಕ್ಸ್‌  ಆಯೋಜಿಸಲು ಭಾರತ ಬದ್ಧ: ಪ್ರಧಾನಿ

ಒಲಿಂಪಿಕ್ಸ್‌ ಆಯೋಜನೆಗೆ ಭಾರತ ಕಳೆದ ಒಂದು ವರ್ಷದಿಂದ ಉತ್ಸುಕತೆ, ಸ್ವಾತಂತ್ರೋತ್ಸವ ಭಾಷಣದಲ್ಲಿ ನರೇಂದ್ರ ಮೋದಿ ಘೋಷಣೆ

Team Udayavani, Aug 16, 2024, 6:31 AM IST

MOdi

ಹೊಸದಿಲ್ಲಿ: ಜಗತ್ತಿನ ಅತೀ ದೊಡ್ಡ ಕ್ರೀಡಾಹಬ್ಬವಾಗಿರುವ ಒಲಿಂಪಿಕ್ಸ್‌ ಕೂಟವನ್ನು ಆಯೋಜಿಸುವ ಸಾಮರ್ಥ್ಯ ಭಾರತಕ್ಕಿದ್ದು, 2036ರಲ್ಲಿ ಇದನ್ನು ನಡೆಸಲು ಸಕಲ ಪ್ರಯತ್ನ ಮಾಡುತ್ತಿರುವುದಾಗಿ ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ಸ್ವಾತಂತ್ರೋತ್ಸವ ಕಾರ್ಯಕ್ರಮದಲ್ಲಿ ದೇಶವನ್ನುದ್ದೇಶಿಸಿ ಮಾತನಾಡಿದ ಮೋದಿ, “ದೇಶವು ಒಲಿಂಪಿಕ್ಸ್‌ ಕ್ರೀಡಾ ಕೂಟವನ್ನು ಆಯೋಜಿಸಲು ಸಿದ್ಧತೆ ನಡೆಸುತ್ತಿದೆ. 2036ರಲ್ಲಿ ನಡೆಯಲಿರುವ ಒಲಿಂಪಿಕ್ಸ್‌ ಭಾರತದ ನೆಲದಲ್ಲಿ ನಡೆಯಬೇಕು ಎಂಬುದು ಭಾರತೀಯರ ಕನಸಾಗಿದೆ. ಅದಕ್ಕಾಗಿ ತಯಾರಿ ಮಾಡಿಕೊಂಡು ಮುಂದೆ ಸಾಗುತ್ತಿದ್ದೇವೆ’ ಎಂದರು.

ಇದೇ ಸಂದರ್ಭದಲ್ಲಿ ಪ್ಯಾರಿಸ್‌ ಒಲಿಂಪಿಕ್ಸ್‌ನಲ್ಲಿ ಉತ್ತಮ ಪ್ರದರ್ಶನ ನೀಡಿದ ಭಾರತೀಯ ಆಟಗಾರರನ್ನು ಅಭಿನಂದಿಸಿದ ಪ್ರಧಾನಿ ಮೋದಿ, “ಒಲಿಂಪಿಕ್ಸ್‌ ಜಗತ್ತಿನಲ್ಲಿ ಭಾರತದ ಧ್ವಜವನ್ನು ಹಾರಿಸಿದ ನಮ್ಮ ಕ್ರೀಡಾ ಸಾಧಕರು ಇಂದು ತ್ರಿವರ್ಣ ಧ್ವಜದ ಕೆಳಗೆ ನಮ್ಮೊಂದಿಗೆ ಕುಳಿತಿದ್ದಾರೆ. 140 ಕೋಟಿ ದೇಶವಾಸಿಗಳ ಪರವಾಗಿ ನಾನು ನಮ್ಮ ದೇಶದ ಎಲ್ಲ ಆಟಗಾರರನ್ನು ಅಭಿನಂದಿಸುತ್ತೇನೆ. ಇನ್ನು ಕೆಲವೇ ದಿನ ಗಳಲ್ಲಿ ಪ್ಯಾರಾಲಿಂಪಿಕ್ಸ್‌ಗಾಗಿ ಭಾರತದ ತಂಡ ಪ್ಯಾರಿಸ್‌ಗೆ ತೆರಳಲಿದೆ. ಅವರಿಗೆ ಶುಭಾಶಯ ಕೋರುತ್ತೇವೆ’ ಎಂದರು.

2036ರ ಒಲಿಂಪಿಕ್ಸ್‌ ಆಯೋಜನೆಗೆ ಭಾರತ ಕಳೆದ ಒಂದು ವರ್ಷದಿಂದ ಉತ್ಸುಕತೆ ತೋರುತ್ತಿದ್ದು, ಆತಿಥೇಯ ದೇಶದ ಆಯ್ಕೆ ಮುಂದಿನ ವರ್ಷ ನಡೆಯಲಿದೆ. ಭಾರತದೊಂದಿಗೆ ಸೌದಿ ಅರೇಬಿಯಾ ಮತ್ತು ಟರ್ಕಿ ಕೂಡ ಬಿಡ್‌ ಸಲ್ಲಿಸಲು ಉತ್ಸುಕವಾಗಿವೆ. ಭಾರತದಲ್ಲಿ ಒಲಿಂಪಿಕ್ಸ್‌ ಆಯೋಜನೆಯಾದರೆ ಅಹ್ಮದಾ ಬಾದ್‌ ಪ್ರಮುಖ ನಗರವಾಗಲಿದೆ.

ಒಲಿಂಪಿಕ್ಸ್‌  ಸಾಧಕರ ಕುಶಲ ವಿಚಾರಿಸಿದ ಮೋದಿ
ಪ್ರಧಾನಿ ನರೇಂದ್ರ ಮೋದಿ ಅವರು ಪ್ಯಾರಿಸ್‌ ಒಲಿಂಪಿಕ್ಸ್‌ ನಲ್ಲಿ ಪದಕ ಸಾಧನೆಗೈದ ಭಾರತದ ಕ್ರೀಡಾಪಟುಗಳನ್ನು ಗುರುವಾರ ತಮ್ಮ ನಿವಾಸದಲ್ಲಿ ಭೇಟಿ ಮಾಡಿ ಕುಶಲೋಪರಿ ನಡೆಸಿದರು. ಪ್ಯಾರಿಸ್‌ಗೆ ತೆರಳಿದವರೆಲ್ಲರೂ ಚಾಂಪಿಯನ್ಸ್‌ ಎಂದು ಪ್ರಶಂಸಿಸಿದರು.

ಈ ಸಂದರ್ಭದಲ್ಲಿ ಹಾಕಿ ತಂಡದ ಸದಸ್ಯರು, ಅವಳಿ ಪದಕ ಗೆದ್ದ ಮನು ಭಾಕರ್‌, ಸರಬ್ಜೋತ್‌ ಸಿಂಗ್‌, ಸ್ವಪ್ನಿಲ್‌ ಕುಸಾಲೆ, ಅಮನ್‌ ಸೆಹ್ರಾವತ್‌ ಅವ ರೆಲ್ಲ ಉಪಸ್ಥಿತರಿದ್ದರು. ಆದರೆ ಬೆಳ್ಳಿ ಪದಕ ಜಯಿಸಿದ ನೀರಜ್‌ ಚೋಪ್ರಾ ಜರ್ಮ ನಿಗೆ ತೆರಳಿದ್ದರಿಂದ ಗೈರಾಗಿದ್ದರು. ಇವರೆಲ್ಲರ ಜತೆ ಪ್ಯಾರಿಸ್‌ ಒಲಿಂಪಿಕ್ಸ್‌ ನಲ್ಲಿ ಪಾಲ್ಗೊಂಡ ಲಕ್ಷ್ಯ ಸೇನ್‌, ಮೀರಾಬಾಯಿ ಚಾನು, ಲವ್ಲಿನಾ ಬೊರ್ಗೊಹೇನ್‌ ಕೂಡ ಇದ್ದರು. ಕ್ರೀಡಾ ಸಚಿವ ಮನ್‌ಸುಖ್‌ ಮಾಂಡ ವೀಯ ಮತ್ತು ಭಾರತೀಯ ಒಲಿಂ ಪಿಕ್‌ ಅಸೋಸಿಯೇಶನ್‌ ಅಧ್ಯಕ್ಷೆ ಪಿ.ಟಿ. ಉಷಾ ಹಾಜರಿದ್ದರು.

ಹಾಕಿ ಸ್ಟಿಕ್‌, ಜೆರ್ಸಿ ಗಿಫ್ಟ್
ಈ ಸಂದರ್ಭದಲ್ಲಿ ಕಂಚಿನ ಪದಕ ಗೆದ್ದ ಭಾರತೀಯ ಹಾಕಿ ತಂಡದ ನಾಯಕ ಹರ್ಮನ್‌ಪ್ರೀತ್‌ ಸಿಂಗ್‌, ಗೋಲ್‌ಕೀಪರ್‌ ಪಿ.ಆರ್‌. ಶ್ರೀಜೇಶ್‌ ಅವರು ಎಲ್ಲ ಆಟಗಾರರ ಸಹಿಯುಳ್ಳ ಜೆರ್ಸಿ ಹಾಗೂ ಹಾಕಿ ಸ್ಟಿಕ್‌ ಒಂದನ್ನು ಪ್ರಧಾನಿಯವರಿಗೆ ಉಡುಗೊರೆಯಾಗಿ ನೀಡಿದರು. ಕುಸ್ತಿಪಟು ಅಮನ್‌ ಸೆಹ್ರಾವತ್‌ ತಮ್ಮ ಹಸ್ತಾಕ್ಷರವುಳ್ಳ ಜೆರ್ಸಿಯೊಂದನ್ನು ನೆನಪಿನ ಕಾಣಿಕೆಯಾಗಿ ಕೊಟ್ಟರು.
ಶೂಟರ್‌ ಮನು ಭಾಕರ್‌ ಅವರು, ಅವಳಿ ಪದಕ ತಂದಿತ್ತ ಪಿಸ್ತೂಲನ್ನು ಪ್ರಧಾನಿಯವರಿಗೆ ತೋರಿಸುತ್ತ, ಇದರ ಕಾರ್ಯ ವಿಧಾನದ ಕುರಿತು ವಿವರಿಸಿದರು. ಮೋದಿ ಇದನ್ನು ತೀವ್ರ ಕುತೂಹಲದಿಂದ ವೀಕ್ಷಿಸಿದರು.

ಎಲ್ಲರೂ ಚಾಂಪಿಯನ್ಸ್‌
“ಪ್ಯಾರಿಸ್‌ ಒಲಿಂಪಿಕ್ಸ್‌ನಲ್ಲಿ ಭಾರತವನ್ನು ಪ್ರತಿನಿಧಿಸಿದವರನ್ನು ಭೇಟಿಯಾಗಿ ಖುಷಿಯಾಯಿತು. ಪ್ಯಾರಿಸ್‌ಗೆ ತೆರಳಿದವರೆಲ್ಲರೂ ಚಾಂಪಿಯನ್ಸ್‌. ಭಾರತ ಸರಕಾರ ಕ್ರೀಡೆಗೆ ಉನ್ನತ ಮಟ್ಟದ ಬೆಂಬಲ ನೀಡುವುದನ್ನು ಮುಂದುವರಿಸಲಿದೆ’ ಎಂದು ಮೋದಿ ಟ್ವೀಟ್‌ ಮಾಡಿದರು.

ಟಾಪ್ ನ್ಯೂಸ್

INDvsBAN: Ashwin, Jadeja prop up slumping India; A local boy scored a century

‌INDvsBAN: ಕುಸಿದ ಭಾರತಕ್ಕೆ ಆಸರೆಯಾದ ಅಶ್ವಿನ್‌, ಜಡೇಜಾ; ಶತಕ ಬಾರಿಸಿದ ಲೋಕಲ್‌ ಬಾಯ್

Haryana: Financial assistance to women, MSP promised; BJP manifesto released

Haryana: ಮಹಿಳೆಯರಿಗೆ ವಿತ್ತ ನೆರವು, ಎಂಎಸ್‌ ಪಿ ಭರವಸೆ; ಬಿಜೆಪಿ ಪ್ರಣಾಳಿಕೆ ಬಿಡುಗಡೆ

By Election: Announcement of By-Election for the Dakshina Kannada Local Bodies Constituency

By Election: ದ. ಕನ್ನಡ ಸ್ಥಳೀಯ ಸಂಸ್ಥೆಗಳ ಪರಿಷತ್ ಕ್ಷೇತ್ರಕ್ಕೆ ಉಪ ಚುನಾವಣೆ ಘೋಷಣೆ

Vijayapura: ಗ್ರಾ.ಪಂ ಕಾಯಕ ಮಿತ್ರ ಸಿಬ್ಬಂದಿ ಮೇಲೆ ಗ್ರಾಪಂ ಉಪಾಧ್ಯಕ್ಷೆ ಚಪ್ಪಲಿಯಿಂದ ಹಲ್ಲೆ

Vijayapura: ಗ್ರಾ.ಪಂ ಕಾಯಕ ಮಿತ್ರ ಸಿಬ್ಬಂದಿ ಮೇಲೆ ಗ್ರಾಪಂ ಉಪಾಧ್ಯಕ್ಷೆ ಚಪ್ಪಲಿಯಿಂದ ಹಲ್ಲೆ

Job Opportunities:ಪಂಜಾಬ್‌ and ಸಿಂಧ್‌ ಬ್ಯಾಂಕ್‌-213 ಆಫೀಸರ್‌ ಹುದ್ದೆಗೆ ಅರ್ಜಿ ಆಹ್ವಾನ

Job Opportunities:ಪಂಜಾಬ್‌ and ಸಿಂಧ್‌ ಬ್ಯಾಂಕ್‌-213 ಆಫೀಸರ್‌ ಹುದ್ದೆಗೆ ಅರ್ಜಿ ಆಹ್ವಾನ

INDvsBAN: ”ಈತ ಭಾರತದ ಬಾಬರ್‌ ಅಜಂ..”: ಟೀಂ ಇಂಡಿಯಾ ಆಟಗಾರನಿಗೆ ನೆಟ್ಟಿಗರ ತರಾಟೆ

INDvsBAN: ”ಈತ ಭಾರತದ ಬಾಬರ್‌ ಅಜಂ..”: ಟೀಂ ಇಂಡಿಯಾ ಆಟಗಾರನಿಗೆ ನೆಟ್ಟಿಗರ ತರಾಟೆ

Salim Khan: ಬುರ್ಖಾಧಾರಿ ಮಹಿಳೆಯಿಂದ ಸಲ್ಮಾನ್‌ ತಂದೆಗೆ ಬೆದರಿಕೆ; ಅಸಲಿಗೆ ಆಗಿದ್ದೇನು?

Salim Khan: ಬುರ್ಖಾಧಾರಿ ಮಹಿಳೆಯಿಂದ ಸಲ್ಮಾನ್‌ ತಂದೆಗೆ ಬೆದರಿಕೆ; ಅಸಲಿಗೆ ಆಗಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

INDvsBAN: Ashwin, Jadeja prop up slumping India; A local boy scored a century

‌INDvsBAN: ಕುಸಿದ ಭಾರತಕ್ಕೆ ಆಸರೆಯಾದ ಅಶ್ವಿನ್‌, ಜಡೇಜಾ; ಶತಕ ಬಾರಿಸಿದ ಲೋಕಲ್‌ ಬಾಯ್

INDvsBAN: ”ಈತ ಭಾರತದ ಬಾಬರ್‌ ಅಜಂ..”: ಟೀಂ ಇಂಡಿಯಾ ಆಟಗಾರನಿಗೆ ನೆಟ್ಟಿಗರ ತರಾಟೆ

INDvsBAN: ”ಈತ ಭಾರತದ ಬಾಬರ್‌ ಅಜಂ..”: ಟೀಂ ಇಂಡಿಯಾ ಆಟಗಾರನಿಗೆ ನೆಟ್ಟಿಗರ ತರಾಟೆ

Cricket: ಲಂಕಾ ಕ್ರಿಕೆಟಿಗನನ್ನು 20 ವರ್ಷಗಳ ಕಾಲ ಬ್ಯಾನ್‌ ಮಾಡಿದ ಕ್ರಿಕೆಟ್‌ ಆಸ್ಟ್ರೇಲಿಯಾ

Cricket: ಲಂಕಾ ಕ್ರಿಕೆಟಿಗನನ್ನು 20 ವರ್ಷಗಳ ಕಾಲ ಬ್ಯಾನ್‌ ಮಾಡಿದ ಕ್ರಿಕೆಟ್‌ ಆಸ್ಟ್ರೇಲಿಯಾ

Ricky Ponting: ಡೆಲ್ಲಿಯಿಂದ ಪಂಜಾಬ್‌ ಗೆ ಬಂದ ರಿಕಿ ಪಾಂಟಿಂಗ್‌

Ricky Ponting: ಡೆಲ್ಲಿಯಿಂದ ಪಂಜಾಬ್‌ ಗೆ ಬಂದ ರಿಕಿ ಪಾಂಟಿಂಗ್‌

Test Series: ಭಾರತ-ಬಾಂಗ್ಲಾ ತಂಡಗಳಿಗೆ ರಿಯಲ್‌ ಟೆಸ್ಟ್‌

Test Series: ಭಾರತ-ಬಾಂಗ್ಲಾ ತಂಡಗಳಿಗೆ ರಿಯಲ್‌ ಟೆಸ್ಟ್‌

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

INDvsBAN: Ashwin, Jadeja prop up slumping India; A local boy scored a century

‌INDvsBAN: ಕುಸಿದ ಭಾರತಕ್ಕೆ ಆಸರೆಯಾದ ಅಶ್ವಿನ್‌, ಜಡೇಜಾ; ಶತಕ ಬಾರಿಸಿದ ಲೋಕಲ್‌ ಬಾಯ್

1-wewqe

Contractors Association ಅಧ್ಯಕ್ಷ ಕೆಂಪಣ್ಣ ವಿಧಿವಶ; ಗಣ್ಯರ ಸಂತಾಪ

Kolar: ಹಕ್ಕಿಪಿಕ್ಕಿ ಕಾಲೋನಿ ಮಕ್ಕಳಿಗೆ ಅಕ್ಕಿ,ಮೊಟ್ಟೆ ಕೊಟ್ಟಿಲ್ಲ!

Kolar: ಹಕ್ಕಿಪಿಕ್ಕಿ ಕಾಲೋನಿ ಮಕ್ಕಳಿಗೆ ಅಕ್ಕಿ,ಮೊಟ್ಟೆ ಕೊಟ್ಟಿಲ್ಲ!

Haryana: Financial assistance to women, MSP promised; BJP manifesto released

Haryana: ಮಹಿಳೆಯರಿಗೆ ವಿತ್ತ ನೆರವು, ಎಂಎಸ್‌ ಪಿ ಭರವಸೆ; ಬಿಜೆಪಿ ಪ್ರಣಾಳಿಕೆ ಬಿಡುಗಡೆ

ಮುನಿಯಾಲ್‌ ಇನ್ಸ್ಟಿಟ್ಯೂಟ್‌ ಆಫ್ ಆಯುರ್ವೇದ ಮೆಡಿಕಲ್‌ ಕಾಲೇಜು

Sep.20: ಮುನಿಯಾಲ್‌ ಇನ್ಸ್ಟಿಟ್ಯೂಟ್‌ ಆಫ್ ಆಯುರ್ವೇದ ಮೆಡಿಕಲ್‌ ಕಾಲೇಜು ಘಟಿಕೋತ್ಸವ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.