Sheik Hasina ಹೇಳಿಕೆ ಭಾರತದ ಬಾಂಧವ್ಯಕ್ಕೆ ಅಡ್ಡಿ: ಬಾಂಗ್ಲಾ
ದಾಳಿ ವರದಿಯೂ ಅತಿ ರಂಜಿತ: ಸರಕಾರ
Team Udayavani, Aug 16, 2024, 12:04 AM IST
ಢಾಕಾ: ಬಾಂಗ್ಲಾದೇಶದಲ್ಲಿನ ಹಿಂಸಾ ಚಾರದ ಬಗ್ಗೆ ಭಾರತದಲ್ಲಿ ಕುಳಿತು ಮಾಜಿ ಪ್ರಧಾನಿ ಶೇಖ್ ಹಸೀನಾ ಟೀಕೆ ವ್ಯಕ್ತಪಡಿಸುವುದಕ್ಕೆ ಅಲ್ಲಿನ ಮಧ್ಯಾಂತರ ಸರಕಾರ ಆಕ್ಷೇಪ ವ್ಯಕ್ತಪಡಿಸಿದೆ.
ಮಾಜಿ ಪ್ರಧಾನಿ ಹೇಳಿಕೆಗಳು ಭಾರತ ಮತ್ತು ಬಾಂಗ್ಲಾ ನಡುವಿನ ದ್ವಿಪಕ್ಷೀಯ ಬಾಂಧವ್ಯ ಸುಧಾರಿಸಲು ಅಡ್ಡಿ ಎಂದು ಸರಕಾರದ ಸಲಹೆಗಾರ ಮೊಹಮ್ಮದ್ ತೌಹೀದ್ ಹುಸೇನ್ ಹೇಳಿದ್ದಾರೆ. ತಮ್ಮ ಪುತ್ರ ಸಜೀಬ್ ವಾಜೆದ್ ಟ್ವೀಟ್ ಮೂಲಕ ದೇಶದಲ್ಲಿನ ಹಿಂಸಾಕೃತ್ಯಗಳು ಖಂಡನೀಯ ಎಂದು ಟೀಕಿಸಿದ್ದು ಸರಕಾರದ ಗಮನಕ್ಕೆ ಬಂದಿದೆ ಎಂದಿದ್ದಾರೆ. ಜತೆಗೆ ಹಿಂದೂಗಳು ಸೇರಿದಂತೆ ಅಲ್ಪಸಂಖ್ಯಾಕರ ಮೇಲೆ ದಾಳಿಗಳು ನಡೆದ ಬಗ್ಗೆ ಅತಿರಂಜಿತ ವರದಿಗಳು ಪ್ರಕಟವಾಗುತ್ತಿವೆ. ಅದು ಸರಿಯಲ್ಲ ಎಂದೂ ಹುಸೇನ್ ಆಕ್ಷೇಪಿಸಿದ್ದಾರೆ.
ಬಂಗಬಂಧು ಪುಣ್ಯಸ್ಮರಣೆ ರಜೆಗೆ ಕತ್ತರಿ
ಬಾಂಗ್ಲಾದೇಶ ಸ್ಥಾಪಕರಾದ ಬಂಗಬಂಧು ಶೇಖ್ ಮುಜಿಬುರ್ ರೆಹಮಾನ್ ಅವರ ಪುಣ್ಯ ಸ್ಮರಣಾರ್ಥವಾಗಿ ನೀಡಲಾಗುತ್ತಿದ್ದ ಆ.15ರಂದು ನೀಡಲಾಗುತ್ತಿದ್ದ ಸಾರ್ವಜನಿಕ ರಜೆಯನ್ನು ಬಾಂಗ್ಲಾ ದೇಶದ ಮಧ್ಯಾಂತರ ಸರಕಾರ ರದ್ದುಗೊಳಿಸಿದೆ. ಹೊಸ ಸರಕಾರದ ಸಲಹಾ ಸಮಿತಿ ಈ ಬಗ್ಗೆ ಸಮರ್ಥನೆ ನೀಡಿ, ರಾಜಕೀಯ ಪಕ್ಷಗಳ ಜತೆಗೆ ಸಮಾಲೋಚನೆ ನಡೆಸಿ ಈ ತೀರ್ಮಾನ ಕೈ ಗೊಳ್ಳಲಾಗಿದೆ ಎಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jammu and Kashmir:ಕಲಂ 370 ಪುನರ್ ಜಾರಿ-ಕಾಂಗ್ರೆಸ್, ಎನ್ ಸಿ ನಿಲುವಿಗೆ ಪಾಕ್ ಬೆಂಬಲ!
Legal Bid: ಯುರೋಪಿನಲ್ಲಿ 13,000 ಕೋಟಿ ರೂ. ಕಾನೂನು ಸಮರ ಗೆದ್ದ ಗೂಗಲ್!
Explode in Lebanon: ಪೇಜರ್ ಬಳಿಕ ವಾಕಿಟಾಕಿ ಸ್ಫೋಟ: 14 ಮಂದಿ ಸಾವು
Israel: ಹೆಜ್ಬುಲ್ಲಾ ಬಳಸಿದ್ದ ಪೇಜರ್ಸ್ ಒಳಗೆ ಸ್ಫೋಟಕ ಅಳವಡಿಸಿದ್ದ ಇಸ್ರೇಲ್ ನ ಮೊಸ್ಸಾದ್!
Diddy ;ಸೆ*ಕ್ಸ್ ದಂಧೆ ಆರೋಪ: ಅಮೆರಿಕದ ಖ್ಯಾತ ಹಿಪ್-ಹಾಪ್ ಸ್ಟಾರ್ ಬಂಧನ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.