Independence Day: “ಒಂದು ರಾಷ್ಟ್ರ-ಒಂದು ಚುನಾವಣೆ’ ನನಸಾಗಿಸಲು ಒತ್ತಾಸೆಯಾಗಿ: ಪ್ರಧಾನಿ
ಪದೇ ಪದೇ ಚುನಾವಣೆಗಳಿಂದ ಅಭಿವೃದ್ಧಿಗೆ ಅಡ್ಡಿ: ನರೇಂದ್ರ ಮೋದಿ
Team Udayavani, Aug 16, 2024, 6:20 AM IST
ಹೊಸದಿಲ್ಲಿ: ದೇಶದಲ್ಲಿ ಒಂದರ ಹಿಂದೆ ಮತ್ತೂಂದರಂತೆ ಚುನಾವಣೆಗಳು ನಡೆಯುವುದು ಅಭಿವೃದ್ಧಿಗೆ ತೊಡಕುಂಟು ಮಾಡುತ್ತಿದೆ. ಹಾಗಾಗಿ ಒಂದು ರಾಷ್ಟ್ರ ಒಂದು ಚುನಾವಣೆಯನ್ನು ಜಾರಿಗೊಳಿಸುವ ಅಗತ್ಯವಿದೆ. ಈ ಕನಸನ್ನು ನನಸಾಗಿಸಲು ವಿಪಕ್ಷಗಳೂ ಕೈ ಜೋಡಿಸಬೇಕು ಎಂದು ಪ್ರಧಾನಿ ಮೋದಿ ಕರೆ ನೀಡಿದ್ದಾರೆ.
ಜತೆಗೆ ಹಲವೆಡೆ 6 ತಿಂಗಳಿಗೆ ಒಮ್ಮೆ ಎನ್ನುವಂತೆ ಚುನಾವಣೆಗಳು ನಡೆಯುತ್ತಲೇ ಇರುತ್ತವೆ. ಹೀಗಾಗಿ ಯಾವುದೇ ಯೋಜನೆ, ಅಭಿವೃದ್ಧಿ ಕಾರ್ಯ ಎಲ್ಲವನ್ನೂ ಅವುಗಳ ಜತೆಗೇ ಥಳಕು ಹಾಕಲಾಗುತ್ತಿದೆ. ಪದೇ ಪದೇ ಚುನಾವಣೆ ನಡೆವುದರಿಂದ ಅಭಿವೃದ್ಧಿಗೆ ತೊಡಕಾಗುವುದು ಮಾತ್ರವಲ್ಲದೇ, ಸಂಪನ್ಮೂಲಗಳ ನಷ್ಟವೂ ಆಗುತ್ತಿದೆ. ಇದೆಲ್ಲವನ್ನೂ ಸರಿ ಪಡಿಸಲು ಒಂದು ರಾಷ್ಟ್ರ ಒಂದು ಚುನಾವಣೆ ಜಾರಿಯಾಗಬೇಕು. ಈಗಾಗಲೇ ಈ ಸಂಬಂಧಿಸಿದಂತೆ ರಾಷ್ಟ್ರಾದ್ಯಂತ ಸಮಾಲೋಚನೆಗಳನ್ನು ನಡೆಸಲಾಗಿದೆ.
ಎಲ್ಲ ರಾಜಕೀಯ ಪಕ್ಷಗಳೂ ಅವರವರ ಅಭಿಪ್ರಾಯವನ್ನೂ ನೀಡಿವೆ. ಈ ಕುರಿತು ಉನ್ನತ ಮಟ್ಟದ ಸಮಿತಿಯು ಕೂಡ ಉತ್ತಮ ವರದಿಯನ್ನೇ ನೀಡಿದೆ. ಏಕಕಾಲದ ಚುನಾವಣೆ ಅಭಿವೃದ್ಧಿಯ ಜತೆಗೆ ಸಾಮಾಜಿಕ ಒಗ್ಗಟ್ಟನ್ನು ಬಲಪಡಿಸಿ ಪ್ರಜಾಪ್ರಭುತ್ವದ ಅಡಿಪಾ ಯವನ್ನೂ ಬಲಗೊಳಿಸುತ್ತದೆ, ಭಾರತದ ಆಶೋತ್ತರಗಳ ಈಡೇರಿಕೆಗೂ ನೆರವಾಗುತ್ತದೆ. ಹಾಗಾಗಿ ಈ ಕನಸನ್ನು ಸಾಕಾರಗೊಳಿಸಲು ಎಲ್ಲರೂ ಕೈ ಜೋಡಿಸಬೇಕೆಂದು ಮೋದಿ ಕರೆ ನೀಡಿದ್ದಾರೆ.
ಭ್ರಷ್ಟರು, ಭ್ರಷ್ಟಾಚಾರದ ವಿರುದ್ಧ ಕೇಂದ್ರ ಸರಕಾರ ಹೋರಾಟ
ಭ್ರಷ್ಟಾಚಾರದ ವಿರುದ್ಧ ಕೇಂದ್ರ ಸರಕಾರ ಪೂರ್ಣ ಅಸಹಿಷ್ಣು
ಕೇಂದ್ರ ಸರಕಾರ ಭ್ರಷ್ಟಾಚಾರದ ವಿರುದ್ಧ ಪೂರ್ಣ ಅಸಹಿಷ್ಣುತೆ ಹೊಂದಿದೆ. ಅದರ ವಿರುದ್ಧ ಹೋರಾಟ ನಡೆಸಲಿದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ. ಭ್ರಷ್ಟರು ಜನಸಾಮಾನ್ಯರಿಗೆ ಮೋಸ ಮಾಡಲು ಧೈರ್ಯ ಮಾಡದಂತೆ ನಾನು ಅವರ ಮನಸ್ಸಿನಲ್ಲಿ ಭಯ ಹುಟ್ಟುಹಾಕಲು ಇಚ್ಛಿಸುತ್ತೇನೆ ಎಂದರು.
ವಿಪಕ್ಷಗಳ ವಿರುದ್ಧ ಪರೋಕ್ಷ ವಾಗ್ಧಾಳಿ ನಡೆಸಿದ ಮೋದಿ “ಈ ದೇಶದಲ್ಲಿ ಇನ್ನೂ ಹಲವರು ಭ್ರಷ್ಟಾಚಾರವನ್ನು ಹಾಡಿ ಹೊಗಳುತ್ತಾರೆ. ಭ್ರಷ್ಟರನ್ನು ಗೌರವಿಸುತ್ತಾರೆ. ಭ್ರಷ್ಟಾಚಾರವನ್ನು ಸಂಪೂರ್ಣವಾಗಿ ತೊಡೆದುಹಾಕಲು ಶೂನ್ಯ ಸಹಿಷ್ಣುತೆಯೊಂದೇ ಮಾರ್ಗ ಎಂದು ಹೇಳಿದ್ದಾರೆ. ನನ್ನ ಮೇಲೆ ಸಾಕಷ್ಟು ವೈಯಕ್ತಿಕ ದಾಳಿಗಳು ನಡೆದಿವೆ. ಆದರೆ ನನಗೆ ನನ್ನ ಘನತೆಗಿಂತ ಈ ದೇಶ ದೊಡ್ಡದು ಎಂದು ನಂಬಿದ್ದೇನೆ. ನಮ್ಮ ಸರಕಾರವು ದೇಶ ಮೊದಲು ನೀತಿಯ ಅನುಸಾರ ಕಾರ್ಯನಿರ್ವಹಿಸುತ್ತಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
West Bengal: ಪ್ರವಾಹ ಪರಿಸ್ಥಿತಿ ಅವಲೋಕಿಸಲು ಹೋದ ಸಂಸದರು, ಶಾಸಕರಿದ್ದ ದೋಣಿ ಪಲ್ಟಿ
ಪ್ರತೀ ಪೇಜರ್ನಲ್ಲಿ 3 ಗ್ರಾಂ. ಸ್ಫೋಟಕ: ಪೇಜರಲ್ಲಿ ಸ್ಫೋಟಕ ಇಟ್ಟಿದ್ದು ಇಸ್ರೇಲ್ನ ಮೊಸಾದ್?
Mohana Singh: ತೇಜಸ್ ಯುದ್ಧ ವಿಮಾನಕ್ಕೆ ಮೊದಲ ಮಹಿಳಾ ಪೈಲಟ್ ಆಗಿ ಮೋಹನಾ ಸಿಂಗ್ ನೇಮಕ
Laddoo: ತಿರುಪತಿ ಲಡ್ಡಿನಲ್ಲಿ ಪ್ರಾಣಿಗಳ ಕೊಬ್ಬು… YSR ಕಾಂಗ್ರೆಸ್ ವಿರುದ್ಧ ನಾಯ್ಡು ಆರೋಪ
Congress: ಮಹಿಳೆಯರಿಗೆ ಮಾಸಿಕ 2000, ಜಾತಿ ಸಮೀಕ್ಷೆ: ಹರಿಯಾಣ ಕೈ ಭರವಸೆ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Lokesh Kanagaraj: ʼಕೂಲಿʼ ಸಿನಿಮಾದ ದೃಶ್ಯ ಲೀಕ್; ಬೇಸರ ಹೊರ ಹಾಕಿದ ನಿರ್ದೇಶಕ ಲೋಕೇಶ್
Kundapura: ಗಾಂಧಿ ಮೈದಾನದಲ್ಲಿ ಸಮಸ್ಯೆಗಳದ್ದೇ ಆಟ!
ರಸ್ತೆ ಪಕ್ಕ ನಡೆದುಕೊಂಡು ಹೋಗುತ್ತಿದ್ದವರ ಮೇಲೆ ಲಾರಿ ಹರಿದು ಇಬ್ಬರು ಸಾವು
Chikkaballapura; ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ದಲಿತ ಸಂಘಟನೆಗಳ ಪ್ರತಿಭಟನೆ
Bajpe ಬಸ್ ನಿಲ್ದಾಣ ಕಟ್ಟಡ ಪೂರ್ಣ; 90 ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.