Independence: ರಾಷ್ಟ್ರವನ್ನು ಅರಾಜಕತೆಗೆ ಒಯ್ಯುವವರು ಇದ್ದಾರೆ ಎಚ್ಚರವಾಗಿರಿ: ಪ್ರಧಾನಿ

ಭಾರತದ ಪ್ರಗತಿಯು ಯಾರಿಗೂ ಅಪಾಯ ತಂದೊಡ್ಡಲ್ಲ

Team Udayavani, Aug 16, 2024, 12:33 AM IST

MOdi-selur

ಹೊಸದಿಲ್ಲಿ: ಭಾರತದ ಏಳಿಗೆಯನ್ನು ಸಹಿಸಲಾಗದ ಕೆಲವು ಜನರಿದ್ದು, ಅವರ ಮನಸ್ಸು ನಕಾರಾತ್ಮಕ ಯೋಚನೆಗಳಿಂದಲೇ ತುಂಬಿರುತ್ತದೆ. ಅಂತಹ ಜನ ರಿಂದ ದೇಶದ ಜನತೆ ಜಾಗೃತರಾಗಿರಬೇಕು ಎಂದು ಪ್ರಧಾನಿ ಮೋದಿ ವಿಪಕ್ಷಗಳ ವಿರುದ್ಧ ಪರೋಕ್ಷ ದಾಳಿ ನಡೆಸಿದ್ದಾರೆ.

ಕೆಲವರು ನಕಾರಾತ್ಮಕ ಯೋಚನೆಗಳನ್ನೇ ಹೊಂದಿದ್ದು ಅವರು ದೇಶದ ಏಳಿಗೆ ಸಹಿಸುತ್ತಿಲ್ಲ. ಭಾರತವನ್ನು ಅರಾಜಕತೆ ಹಾಗೂ ವಿನಾಶದೆಡೆಗೆ ಕರೆದೊಯ್ಯಲು ಪ್ರಯತ್ನಿಸುತ್ತಿರುವವರಿಗೆ ದೇಶವನ್ನು ರಕ್ಷಿಸಬೇಕು ಎಂದಿದ್ದಾರೆ. ನಾವು ದೇಶವನ್ನು ಪ್ರಗತಿಯತ್ತ ಕೊಂಡೊಯ್ಯಲು ಪ್ರಯತ್ನಿಸುತ್ತಿದ್ದೇವೆ. ಆದರೆ ಕೆಲವರು ಯಾವುದೇ ಲಾಭವಿಲ್ಲದಿದ್ದರೆ ದೇಶದ ಪ್ರಗತಿ ಬಗ್ಗೆ, ಒಳಿತಿನ ಬಗ್ಗೆ ಚಿಂತಿಸುವುದಿಲ್ಲ. ಇಂತಹ ನಿರಾಶಾವಾದಿಗಳಿಂದ ನಾವು ಜಾಗೃತ ರಾಗಿರಬೇಕು.

ದೇಶದಲ್ಲಿ ಆಂತರಿಕವಾಗಿ ಹಾಗೂ ಬಾಹ್ಯವಾಗಿ ಈಗಾಗಲೇ ಸಾಕಷ್ಟು ಸಮಸ್ಯೆಗಳಿದ್ದು, ಇವರಿಂದ ಅದು ಹೆಚ್ಚುತ್ತಲೇ ಹೋಗುತ್ತದೆ. ಆ ರೀತಿಯ ಕೆಲವು ಶಕ್ತಿಗಳಿಗೆ ನಾನು ಹೇಳುವುದಿಷ್ಟೇ, ಭಾರತದ ಪ್ರಗತಿಯು ಯಾರಿಗೂ ಅಪಾಯ ತಂದೊಡ್ಡಲ್ಲ. ವಿಶ್ವವು ಭಾರತದ ಪ್ರಗತಿಯನ್ನು ನೊಡಿ ಚಿಂತಿಸಬೇಕಿಲ್ಲ ಎಂದಿದ್ದಾರೆ.

ರಾಜಕೀಯ ಹಿನ್ನೆಲೆ ಇಲ್ಲದ 1 ಲಕ್ಷ ಯುವ ಜನ ಬರಲಿ: ಮೋದಿ
ಹೊಸದಿಲ್ಲಿ: ಉತ್ತಮ ಜನಪ್ರತಿನಿಧಿಗಳನ್ನು ರೂಪಿಸುವ ನಿಟ್ಟಿನಲ್ಲಿ ರಾಜಕೀಯ ಹಿನ್ನೆಲೆ ಇಲ್ಲದೇ ಇರುವ 1 ಲಕ್ಷ ಯುವಕರು ರಾಜಕೀಯ ಪ್ರವೇಶಿಸಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಈ ಮೂಲಕ ಜಾತಿ ಆಧಾರಿತ ಮತ್ತು ಕುಟುಂಬ ರಾಜಕಾರಣವನ್ನು ದೇಶದ ರಾಜಕೀಯ ವ್ಯವಸ್ಥೆಯಿಂದ ಕಿತ್ತು ಹಾಕಲು ಸಾಧ್ಯವಾಗಲಿದೆ ಎಂದರು.

ಪಂಚಾಯತ್‌, ನಗರ ಸ್ಥಳೀಯ ಸಂಸ್ಥೆಗಳು, ವಿಧಾನಸಭೆ, ಲೋಕಸಭೆ ಸೇರಿ ಯಾವುದೇ ಹಂತದಲ್ಲಿ ಅವರ ಕುಟುಂಬ ಸದಸ್ಯರು ಮತ್ತು ಪೋಷಕರು ಇರಬಾರದು. ದೇಶದ ರಾಜ ಕೀಯ ವ್ಯವಸ್ಥೆ ಸ್ವತ್ಛಗೊಳಿಸುವ ನಿಟ್ಟಿನಲ್ಲಿ ರಾಜಕೀಯ ಹಿನ್ನೆಲೆ ಇರದ 1 ಲಕ್ಷ ಮಂದಿ ಯುವಕರು ರಾಜ ಕೀಯ ಪ್ರವೇಶ ಮಾಡಿ, ಜನರ ಪ್ರತಿನಿಧಿಗಳಾಗಬೇಕು. ಈ ಮೂಲಕ ರಾಜಕೀಯ ಕ್ಷೇತ್ರದಲ್ಲಿ ಹೊಸ ಚಿಂತನೆ ಮತ್ತು ದೃಷ್ಟಿಕೋನಗಳನ್ನು ಹೊಂದಿರುವವರು ಜನರ ಪ್ರತಿನಿಧಿಗಳಾಗಬೇಕು ಎಂದರು.

98 ನಿಮಿಷ ಪ್ರಧಾನಿ ದೀರ್ಘ‌ ಭಾಷಣ: ತಮ್ಮದೇ ದಾಖಲೆ ಮುರಿದ ಮೋದಿ
ಇದು ದೇಶದ ಪ್ರಧಾನಿ ಮಾಡಿದ ಇದುವರೆಗಿನ ಸುದೀರ್ಘ‌ ಭಾಷಣವೂ ಹೌದು
ಕೆಂಪುಕೋಟೆಯಲ್ಲಿ ರಾಷ್ಟ್ರವನ್ನುದ್ದೇಶಿಸಿ ಪ್ರಧಾನಿ ನರೇಂದ್ರ ಮೋದಿ ಗುರುವಾರ 98 ನಿಮಿಷಗಳ ಕಾಲ ಭಾಷಣ ಮಾಡಿದ್ದಾರೆ. ಬೆಳಗ್ಗೆ 7.33ರಿಂದ ಬೆಳಗ್ಗೆ 9.12ರ ವರೆಗೆ ಅವರು ಮಾತನಾಡಿದ್ದಾರೆ. ದೇಶದ ಸ್ವಾತಂತ್ರೊéàತ್ಸವದಲ್ಲಿ ದೇಶದ ಪ್ರಧಾನಿಯೊಬ್ಬರು ಮಾಡಿದ ದೀರ್ಘ‌ ಭಾಷಣ ಎಂಬ ಖ್ಯಾತಿಗೂ ಅದು ಪಾತ್ರವಾಗಿದೆ. 2016ರಲ್ಲಿ ಮೋದಿ 96 ನಿಮಿಷಗಳ ಭಾಷಣ ಮಾಡಿದ್ದರು.

ಅದೇ ಅತೀ ದೀರ್ಘಾವಧಿಯ ಭಾಷಣವಾಗಿತ್ತು. ಇದೀಗ ಆ ದಾಖಲೆಯನ್ನೂ ಪ್ರಧಾನಿ ಮೀರಿಸಿದ್ದಾರೆ. 2014ರಲ್ಲಿ ಮೊದಲ ಬಾರಿಗೆ ಪ್ರಧಾನಿ ಕೆಂಪು ಕೋಟೆಯಲ್ಲಿ ಧ್ವಜಾರೋಹಣ ಮಾಡಿದ್ದರು, ಈ ವೇಳೆ 65 ನಿಮಿಷ ಭಾಷಣ ಮಾಡಿದ್ದರು. 1947ರಲ್ಲಿ ಮೊದಲ ಪ್ರಧಾನಿ ಜವಾಹರ್‌ಲಾಲ್‌ ನೆಹರೂ 72 ನಿಮಿಷ, 1997ರಲ್ಲಿ ಐ.ಕೆ. ಗುಜ್ರಾಲ್‌ 71 ನಿಮಿಷ, 1954ರಲ್ಲಿ ನೆಹರೂ ಮತ್ತು 1966ರಲ್ಲಿ ಇಂದಿರಾ ಗಾಂಧಿಯವರು ತಲಾ 14 ನಿಮಿಷ ಮಾತನಾಡಿದ್ದರು.

ಟಾಪ್ ನ್ಯೂಸ್

8

Lokesh Kanagaraj: ʼಕೂಲಿʼ ಸಿನಿಮಾದ ದೃಶ್ಯ ಲೀಕ್‌; ಬೇಸರ ಹೊರ ಹಾಕಿದ ನಿರ್ದೇಶಕ ಲೋಕೇಶ್

7-road-mishap

ರಸ್ತೆ ಪಕ್ಕ ನಡೆದುಕೊಂಡು ಹೋಗುತ್ತಿದ್ದವರ ಮೇಲೆ ಲಾರಿ ಹರಿದು ಇಬ್ಬರು ಸಾವು

Chikkaballapura; ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ದಲಿತ ಸಂಘಟನೆಗಳ ಪ್ರತಿಭಟನೆ

Chikkaballapura; ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ದಲಿತ ಸಂಘಟನೆಗಳ ಪ್ರತಿಭಟನೆ

Jammu and Kashmir:ಕಲಂ 370 ಪುನರ್‌ ಜಾರಿ-ಕಾಂಗ್ರೆಸ್‌, ಎನ್‌ ಸಿ ನಿಲುವಿಗೆ ಪಾಕ್‌ ಬೆಂಬಲ!

Jammu and Kashmir:ಕಲಂ 370 ಪುನರ್‌ ಜಾರಿ-ಕಾಂಗ್ರೆಸ್‌, ಎನ್‌ ಸಿ ನಿಲುವಿಗೆ ಪಾಕ್‌ ಬೆಂಬಲ!

Jani Master: ಲೈಂಗಿಕ ಕಿರುಕುಳ ಪ್ರಕರಣ; ನೃತ್ಯ ಸಂಯೋಜಕ ಜಾನಿ ಮಾಸ್ಟರ್‌ ಬಂಧನ

Jani Master: ಲೈಂಗಿಕ ಕಿರುಕುಳ ಪ್ರಕರಣ; ನೃತ್ಯ ಸಂಯೋಜಕ ಜಾನಿ ಮಾಸ್ಟರ್‌ ಬಂಧನ

Mangaluru: ನೂತನ ಮೇಯರ್ ಆಗಿ ಮನೋಜ್ ಕುಮಾರ್ ಕೋಡಿಕಲ್, ಉಪಮೇಯರ್ ಆಗಿ ಭಾನುಮತಿ ಆಯ್ಕೆ

Mangaluru: ನೂತನ ಮೇಯರ್ ಆಗಿ ಮನೋಜ್ ಕುಮಾರ್ ಕೋಡಿಕಲ್, ಉಪಮೇಯರ್ ಆಗಿ ಭಾನುಮತಿ ಆಯ್ಕೆ

5-savanur

ಖಾಯಂ ಪಿಡಿಓ, ಕಾರ್ಯದರ್ಶಿ ನೇಮಕಕ್ಕೆ ಒತ್ತಾಯ;ಗ್ರಾ.ಪಂ.ಸಾಮಾನ್ಯ ಸಭೆ ಬಹಿಷ್ಕರಿಸಿ ಪ್ರತಿಭಟನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

birboom

West Bengal: ಪ್ರವಾಹ ಪರಿಸ್ಥಿತಿ ಅವಲೋಕಿಸಲು ಹೋದ ಸಂಸದರು, ಶಾಸಕರಿದ್ದ ದೋಣಿ ಪಲ್ಟಿ

ಪ್ರತೀ ಪೇಜರ್‌ನಲ್ಲಿ 3 ಗ್ರಾಂ. ಸ್ಫೋಟಕ: ಪೇಜರಲ್ಲಿ ಸ್ಫೋಟಕ ಇಟ್ಟಿದ್ದು ಇಸ್ರೇಲ್‌ನ ಮೊಸಾದ್‌?

ಪ್ರತೀ ಪೇಜರ್‌ನಲ್ಲಿ 3 ಗ್ರಾಂ. ಸ್ಫೋಟಕ: ಪೇಜರಲ್ಲಿ ಸ್ಫೋಟಕ ಇಟ್ಟಿದ್ದು ಇಸ್ರೇಲ್‌ನ ಮೊಸಾದ್‌?

Mohana Singh: ತೇಜಸ್‌ ಯುದ್ಧ ವಿಮಾನಕ್ಕೆ ಮೊದಲ ಮಹಿಳಾ ಪೈಲಟ್‌ ಆಗಿ ಮೋಹನಾ ಸಿಂಗ್‌ ನೇಮಕ

Mohana Singh: ತೇಜಸ್‌ ಯುದ್ಧ ವಿಮಾನಕ್ಕೆ ಮೊದಲ ಮಹಿಳಾ ಪೈಲಟ್‌ ಆಗಿ ಮೋಹನಾ ಸಿಂಗ್‌ ನೇಮಕ

TTD: ತಿರುಪತಿ ಲಡ್ಡಿನಲ್ಲಿ ಪ್ರಾಣಿಗಳ ಕೊಬ್ಬು: ನಾಯ್ಡು ಆರೋಪಕ್ಕೆ YSR ಕಾಂಗ್ರೆಸ್ ತಿರುಗೇಟು

Laddoo: ತಿರುಪತಿ ಲಡ್ಡಿನಲ್ಲಿ ಪ್ರಾಣಿಗಳ ಕೊಬ್ಬು… YSR ಕಾಂಗ್ರೆಸ್ ವಿರುದ್ಧ ನಾಯ್ಡು ಆರೋಪ

Congress: ಮಹಿಳೆಯರಿಗೆ ಮಾಸಿಕ 2000, ಜಾತಿ ಸಮೀಕ್ಷೆ: ಹರಿಯಾಣ ಕೈ ಭರವಸೆ

Congress: ಮಹಿಳೆಯರಿಗೆ ಮಾಸಿಕ 2000, ಜಾತಿ ಸಮೀಕ್ಷೆ: ಹರಿಯಾಣ ಕೈ ಭರವಸೆ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

8

Lokesh Kanagaraj: ʼಕೂಲಿʼ ಸಿನಿಮಾದ ದೃಶ್ಯ ಲೀಕ್‌; ಬೇಸರ ಹೊರ ಹಾಕಿದ ನಿರ್ದೇಶಕ ಲೋಕೇಶ್

Kundapura: ಗಾಂಧಿ ಮೈದಾನದಲ್ಲಿ ಸಮಸ್ಯೆಗಳದ್ದೇ ಆಟ!

Kundapura: ಗಾಂಧಿ ಮೈದಾನದಲ್ಲಿ ಸಮಸ್ಯೆಗಳದ್ದೇ ಆಟ!

7-road-mishap

ರಸ್ತೆ ಪಕ್ಕ ನಡೆದುಕೊಂಡು ಹೋಗುತ್ತಿದ್ದವರ ಮೇಲೆ ಲಾರಿ ಹರಿದು ಇಬ್ಬರು ಸಾವು

Chikkaballapura; ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ದಲಿತ ಸಂಘಟನೆಗಳ ಪ್ರತಿಭಟನೆ

Chikkaballapura; ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ದಲಿತ ಸಂಘಟನೆಗಳ ಪ್ರತಿಭಟನೆ

Bajpe ಬಸ್‌ ನಿಲ್ದಾಣ ಕಟ್ಟಡ ಪೂರ್ಣ;  90 ಲಕ್ಷ ರೂ. ವೆಚ್ಚದಲ್ಲಿ  ನಿರ್ಮಾಣ

Bajpe ಬಸ್‌ ನಿಲ್ದಾಣ ಕಟ್ಟಡ ಪೂರ್ಣ;  90 ಲಕ್ಷ ರೂ. ವೆಚ್ಚದಲ್ಲಿ  ನಿರ್ಮಾಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.