Udupi ಗೀತಾರ್ಥ ಚಿಂತನೆ-7; ಸಕಲಜೀವರಾಶಿಗಳ ಉದ್ಧಾರದ ಗುರಿ


Team Udayavani, Aug 16, 2024, 12:35 AM IST

Udupi ಗೀತಾರ್ಥ ಚಿಂತನೆ-7; ಸಕಲಜೀವರಾಶಿಗಳ ಉದ್ಧಾರದ ಗುರಿ

ವೇದಗಳನ್ನು ಅರಿಯದವರಿಗೂ ವೇದಜ್ಞಾನವನ್ನು ಮಹಾಭಾರತದಲ್ಲಿ ಸಿಗುವಂತೆ ಮಾಡಿದ್ದು, ಎಲ್ಲರೂ ಭಗವಂತನ ಪದತಲದ ಸೇವೆಯನ್ನು ಸಲ್ಲಿಸಬಹುದಾದ ಮಾರ್ಗವನ್ನು ತೋರಿಸಿದ್ದು ವೇದವ್ಯಾಸರು ಮಾಡಿದ ಬಹುದೊಡ್ಡ ಲೋಕೋಪಕಾರಕತ್ವ. ದೇವತೆಗಳು ಪ್ರಾರ್ಥಿಸುವಾಗ ಮನುಷ್ಯರ ಉದ್ಧಾರಕ್ಕಾಗಿ ಎಂಬ ಬೇಡಿಕೆ ಸಲ್ಲಿಸಿದ್ದರೂ ಸರ್ವಪ್ರಾಣಿಗಳಿಗೂ ಒಳಿತಾಗುವ ಗುರಿ ಅವತಾರದ ಮೂಲದಲ್ಲಿದೆ. ಕೆಲವು ಪ್ರಾಣಿಗಳು ಸ್ವಭಾವತಃ ಪ್ರಾಣಿಗಳಲ್ಲ.

ಉದಾಹರಣೆ ಹೇಳುವುದಾದರೆ ಜಡಭರತರು ಜಿಂಕೆಯಾದದ್ದು. ಇದು ಭಗವಂತನಿಗೆ ಸರ್ವಜೀವಿಗಳ ಮೇಲಿರುವ ವಾತ್ಸಲ್ಯವನ್ನು ತೋರಿಸುತ್ತದೆ. 84 ಲಕ್ಷ ಜೀವರಾಶಿಗಳಲ್ಲಿ ಕೊನೆಯ ಸ್ತರದ ಜೀವ “ತೃಣ’ದ್ದು. ಅದಕ್ಕಾಗಿಯೇ “ತೃಣಸಮಾನ’ ಎಂಬ ಮಾತು ಬಂದದ್ದು. ಕೇವಲ ಇಷ್ಟೇ ಅಲ್ಲ ಭಗವದವತಾರದಲ್ಲಿ ಬ್ರಹ್ಮರುದ್ರಾದಿ ದೇವತೆಗಳ ಲಕ್ಷ್ಯವೂ ಇದೆ. ಕೇವಲ ಮನುಷ್ಯರ ಮಟ್ಟಿಗಾಗಿದ್ದರೆ ಬ್ರಹ್ಮದೇವರು ಅವತಾರವೆತ್ತಿದ್ದರೆ ಸಾಕಿತ್ತು.

ಬ್ರಹ್ಮನಿಗೂ ಅಗತ್ಯವಾದ್ದರಿಂದ ಭಗವಂತನೇ ಬರಬೇಕಾಗಿತ್ತು. ಈ ಅಂಶ “ನಾರಾಯಣಾಷ್ಟಾಕ್ಷರಕಲ್ಪ’ದಲ್ಲಿದೆ ಎಂಬ ಪ್ರಮಾಣವನ್ನು ಶ್ರೀಮದಾಚಾರ್ಯರು ತೋರಿಸಿದ್ದಾರೆ. ಜೀವರಾಶಿಗಳಲ್ಲಿ ಕೊನೆಯದಾದ “ತೃಣ’ದಿಂದ ತೊಡಗಿ, ಹಿರಿಯನಾದ ಬ್ರಹ್ಮನ ವರೆಗೆ ಗಮನವಿರಿಸಿಕೊಂಡು ವೇದವ್ಯಾಸರ ಅವತಾರವಾಯಿತು. ಯತಿಗಳಾಗಲೀ, ಗೃಹಸ್ಥರಾಗಲೀ ಅಗಲಿದವರಿಗೆ ತರ್ಪಣ ಕೊಡುವಾಗ “ಆಬ್ರಹ್ಮಸ್ತಂಬಪರ್ಯಂತಂ ದೇವರ್ಷಿಪಿತೃಮಾನವಾಃ|’ ಎಂದು ಹೇಳುವುದಿದೆ. ತೃಣದಿಂದ ತೊಡಗಿ ಬ್ರಹ್ಮನವರೆಗೆ ಸಕಲ ಜೀವಿಗಳಿಗೆ ತೃಪ್ತಿಯಾಗುವಂತೆ ಹಾರೈಸುವ ಉದಾತ್ತ ಚಿಂತನೆಯ ಮಂತ್ರವಿದು.

ಶ್ರೀಸುಗುಣೇಂದ್ರತೀರ್ಥ ಶ್ರೀಪಾದರು,
ಪರ್ಯಾಯ ಶ್ರೀಪುತ್ತಿಗೆ ಶ್ರೀಕೃಷ್ಣಮಠ,

ಕೋಟಿ ಗೀತಾ ಲೇಖನ ಯಜ್ಞದಲ್ಲಿ ಪಾಲೊಳ್ಳಿ
ಗೀತಾ ಮಂದಿರ,ಉಡುಪಿ
ಸಂಪರ್ಕ ಸಂಖ್ಯೆ: 8055338811

ಟಾಪ್ ನ್ಯೂಸ್

Karnataka ಸುವರ್ಣ ಸಂಭ್ರಮದಲ್ಲಿ ಕನ್ನಡ ಜನೋತ್ಸವ

Karnataka ಸುವರ್ಣ ಸಂಭ್ರಮದಲ್ಲಿ ಕನ್ನಡ ಜನೋತ್ಸವ

Tungabhadra ಡ್ಯಾಂನ ಎಲ್ಲ 33 ಗೇಟ್‌ ಬದಲಿಸಲು ತಜ್ಞರ ಸಲಹೆ

Tungabhadra ಡ್ಯಾಂನ ಎಲ್ಲ 33 ಗೇಟ್‌ ಬದಲಿಸಲು ತಜ್ಞರ ಸಲಹೆ

modi (4)

Congress-NC ಮೈತ್ರಿಗೆ ಪಾಕ್‌ ಬೆಂಬಲ, 370ನೇ ವಿಧಿ ಮರುಸ್ಥಾಪನೆ ಅಸಾಧ್ಯ: ಪ್ರಧಾನಿ: ಮೋದಿ

High Court: ಬಾಂಬ್‌ ಸ್ಫೋಟ ಹೇಳಿಕೆ; ಶೋಭಾ ಕರಂದ್ಲಾಜೆ ಮೇಲಿನ ಕೇಸ್‌ ರದ್ದು

High Court: ಬಾಂಬ್‌ ಸ್ಫೋಟ ಹೇಳಿಕೆ; ಶೋಭಾ ಕರಂದ್ಲಾಜೆ ಮೇಲಿನ ಕೇಸ್‌ ರದ್ದು

High Court; “ಅರ್ಧ ಪಾಕಿಸ್ಥಾನ’: ಯತ್ನಾಳ್‌ ಹೇಳಿಕೆಗೆ ಹೈಕೋರ್ಟ್‌ ಸಿಟ್ಟು

High Court; “ಅರ್ಧ ಪಾಕಿಸ್ಥಾನ’: ಯತ್ನಾಳ್‌ ಹೇಳಿಕೆಗೆ ಹೈಕೋರ್ಟ್‌ ಸಿಟ್ಟು

Kasturi Rangan ವರದಿ ಹಿನ್ನೆಲೆ: ನಯನಾ ಮೋಟಮ್ಮ ರಾಜೀನಾಮೆ ಬೆದರಿಕೆ

Kasturi Rangan ವರದಿ ಹಿನ್ನೆಲೆ: ನಯನಾ ಮೋಟಮ್ಮ ರಾಜೀನಾಮೆ ಬೆದರಿಕೆ

100 ಎಫ್ಐಆರ್‌ ದಾಖಲಿಸಿದರೂ ಹೆದರಲ್ಲ: ಅಶೋಕ್‌

100 ಎಫ್ಐಆರ್‌ ದಾಖಲಿಸಿದರೂ ಹೆದರಲ್ಲ: ಅಶೋಕ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udayavani.com “ನಮ್ಮನೆ ಕೃಷ್ಣ”: ಮೆಚ್ಚುಗೆ ಗಳಿಸಿದ 3ನೇ ರೀಲ್ಸ್ ಪ್ರಸಾರ

Udayavani.com “ನಮ್ಮನೆ ಕೃಷ್ಣ”: ತೃತೀಯ ಬಹುಮಾನ ಗಳಿಸಿದ ರೀಲ್ಸ್

ಮುನಿಯಾಲ್‌ ಇನ್ಸ್ಟಿಟ್ಯೂಟ್‌ ಆಫ್ ಆಯುರ್ವೇದ ಮೆಡಿಕಲ್‌ ಕಾಲೇಜು

Sep.20: ಮುನಿಯಾಲ್‌ ಇನ್ಸ್ಟಿಟ್ಯೂಟ್‌ ಆಫ್ ಆಯುರ್ವೇದ ಮೆಡಿಕಲ್‌ ಕಾಲೇಜು ಘಟಿಕೋತ್ಸವ

Udupi: ಯುಜಿಡಿ ಚೇಂಬರ್‌ ಅವ್ಯವಸ್ಥೆಗಿಲ್ಲ ಪರಿಹಾರ

Udupi: ಯುಜಿಡಿ ಚೇಂಬರ್‌ ಅವ್ಯವಸ್ಥೆಗಿಲ್ಲ ಪರಿಹಾರ

ಮಲ್ಪೆ ಸೈಂಟ್‌ಮೇರೀಸ್‌ ದ್ವೀಪದಲ್ಲಿ ಸ್ವತ್ಛತೆ

Malpe ಸೈಂಟ್‌ಮೇರೀಸ್‌ ದ್ವೀಪದಲ್ಲಿ ಸ್ವಚ್ಛತೆ

Udupi: ಜಿಲ್ಲಾ ಕ್ರೀಡಾಂಗಣದ ಸಿಂಥೆಟಿಕ್‌ ಟ್ರ್ಯಾಕ್‌ಗೆ ಹಾನಿ

Udupi: ಜಿಲ್ಲಾ ಕ್ರೀಡಾಂಗಣದ ಸಿಂಥೆಟಿಕ್‌ ಟ್ರ್ಯಾಕ್‌ಗೆ ಹಾನಿ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

firee

Bihar;ಜಮೀನು ವಿವಾದ: 21 ದಲಿತರ ಮನೆಗಳಿಗೆ ಬೆಂಕಿ

Karnataka ಸುವರ್ಣ ಸಂಭ್ರಮದಲ್ಲಿ ಕನ್ನಡ ಜನೋತ್ಸವ

Karnataka ಸುವರ್ಣ ಸಂಭ್ರಮದಲ್ಲಿ ಕನ್ನಡ ಜನೋತ್ಸವ

J-P-Nadda

PM ಮೋದಿಗೆ ಕಾಂಗ್ರೆಸಿಗರಿಂದ ಬೈಗುಳ: ಖರ್ಗೆ ಪತ್ರಕ್ಕೆ ನಡ್ಡಾ ತೀಕ್ಷ್ಣ ಪ್ರತ್ಯುತ್ತರ

Tungabhadra ಡ್ಯಾಂನ ಎಲ್ಲ 33 ಗೇಟ್‌ ಬದಲಿಸಲು ತಜ್ಞರ ಸಲಹೆ

Tungabhadra ಡ್ಯಾಂನ ಎಲ್ಲ 33 ಗೇಟ್‌ ಬದಲಿಸಲು ತಜ್ಞರ ಸಲಹೆ

modi (4)

Congress-NC ಮೈತ್ರಿಗೆ ಪಾಕ್‌ ಬೆಂಬಲ, 370ನೇ ವಿಧಿ ಮರುಸ್ಥಾಪನೆ ಅಸಾಧ್ಯ: ಪ್ರಧಾನಿ: ಮೋದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.