Madikeri ಮನೆಯಲ್ಲೇ ಅಕ್ರಮ ನಾಡ ಬಂದೂಕು ತಯಾರಿ; ಆರೋಪಿ ಬಂಧನ; ಬಂದೂಕು, ಪಿಸ್ತೂಲ್ ವಶಕ್ಕೆ
Team Udayavani, Aug 16, 2024, 12:48 AM IST
ಮಡಿಕೇರಿ: ಮಡಿಕೇರಿ ತಾಲೂಕಿನ ಭಾಗಮಂಡಲ ಪೊಲೀಸ್ ಠಾಣೆ ವ್ಯಾಪ್ತಿಯ ಸಣ್ಣಪುಲಿಕೋಟು ಗ್ರಾಮದ ಮನೆಯೊಂದರಲ್ಲಿ ಅಕ್ರಮವಾಗಿ ನಾಡ ಬಂದೂಕುಗಳನ್ನು ತಯಾರಿಸಿ ಮಾರಾಟ ಮಾಡುತ್ತಿದ್ದ ಆರೋಪಿ ಹಾಗೂ ಬಂದೂಕು ಖರೀದಿ ಮಾಡಿದ ವ್ಯಕ್ತಿಗಳನ್ನು ಕೊಡಗು ಪೊಲೀಸರು ಬಂಧಿಸಿದ್ದಾರೆ.
ಸಣ್ಣಪುಲಿಕೋಟು ಗ್ರಾಮದ ಬಾಡಿಗೆ ಮನೆಯಲ್ಲಿ ವಾಸವಿದ್ದ ಕೇರಳ ರಾಜ್ಯ ಇಡುಕ್ಕಿ ಜಿಲ್ಲೆ ಮೂಲದ ಸುರೇಶ್ (52) ಬಂಧಿತ ಆರೋಪಿ. ಈತನ ಮನೆ ಮೇಲೆ ದಾಳಿ ಮಾಡಿದಾಗ ಅಕ್ರಮವಾಗಿ ನಾಡ ಬಂದೂಕು ತಯಾರಿಸಲು ಬಳಸುತ್ತಿದ್ದ ಸಾಮಗ್ರಿಗಳು, 2 ನಾಡ ಬಂದೂಕು (ಎಸ್.ಬಿ.ಬಿ.ಎಲ್) ಮತ್ತು 1 ನಾಡ ಪಿಸ್ತೂಲ್ ಪತ್ತೆಯಾಗಿದ್ದು, ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಗ್ರಾಹಕರೂ ಪೊಲೀಸರ ವಶಕ್ಕೆ
ಸುರೇಶ್ ಅಕ್ರಮವಾಗಿ ತಯಾರಿಸಿರುವ ನಾಡ ಬಂದೂಕುಗಳನ್ನು ಖರೀದಿ ಮಾಡಿದ್ದ ಕರಿಕೆ ಚೆತ್ತುಕಾಯ ಗ್ರಾಮದ ಎನ್.ಜೆ. ಶಿವರಾಮ (45), ಪಿರಿಯಾಪಟ್ಟಣದ ಮಾಗಳಿ ಗ್ರಾಮದ ಎಸ್. ರವಿ (35) ಹಾಗೂ ಭಾಗಮಂಡಲ ದೊಡ್ಡಪುಲಿಕೋಟು ಗ್ರಾಮದ ಕೋಟಿ (55) ಅವರನ್ನು ಕೂಡ ವಶಕ್ಕೆ ಪಡೆದು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.
ಅವರ ಬಳಿ ಇದ್ದ ತಲಾ ಒಂದು ನಾಡ ಬಂದೂಕು (ಎಸ್.ಬಿ.ಬಿ.ಎಲ್) ಅನ್ನು ವಶಪಡಿಸಿಕೊಳ್ಳಲಾಗಿದೆ. ಕಾರ್ಯಾಚರಣೆಯಲ್ಲಿ ಒಟ್ಟು 5 ನಾಡ ಬಂದೂಕು (ಎಸ್.ಬಿ.ಬಿ.ಎಲ್) ಮತ್ತು 1 ನಾಡ ಪಿಸ್ತೂಲ್ ವಶಪಡಿಸಿಕೊಳ್ಳಲಾಗಿದೆ.
ಮಡಿಕೇರಿ ಉಪವಿಭಾಗದ ಡಿವೈಎಸ್ಪಿ ಮಹೇಶ್ ಕುಮಾರ್, ಮಡಿಕೇರಿ ಗ್ರಾಮಾಂತರ ವೃತ್ತದ ವೃತ್ತ ನಿರೀಕ್ಷಕ ಅನೂಪ್ ಮಾದಪ್ಪ, ಭಾಗಮಂಡಲ ಠಾಣೆ ಪಿಎಸ್ಐ ಶೋಭಾ ಲಾಮಾಣಿ ಹಾಗೂ ಸಿಬಂದಿಗಳ ವಿಶೇಷ ತಂಡ ಕಾರ್ಯಾಚರಣೆ ನಡೆಸಿದೆ. ಕಾರ್ಯಾಚರಣೆಯ ಬಗ್ಗೆ ಎಸ್ಪಿ ಕೆ. ರಾಮರಾಜನ್ ಶ್ಲಾ ಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.