![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Aug 16, 2024, 4:34 PM IST
ಬೆಳಗಾವಿ: ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ವಿಚಾರವಾಗಿ ಅಧಿವೇಶನದಲ್ಲಿ ಧ್ವನಿ ಎತ್ತದ ಸಮುದಾಯದ ಶಾಸಕರ ವಿರುದ್ಧ ಕೂಡಲಸಂಗಮ ಪಂಚಮಸಾಲಿ ಪೀಠದ ಜಗದ್ಗುರು ಬಸವಜಯ ಮೃತ್ಯುಂಜಯ ಶ್ರೀ ಆಕ್ರೋಶ ಹೊರಹಾಕಿದರು.
ಬೆಳಗಾವಿಯಲ್ಲಿ ಶುಕ್ರವಾರ (ಆ.16) ಮಾತನಾಡಿದ ಅವರು, ಬೊಮ್ಮಾಯಿ, ಯಡಿಯೂರಪ್ಪ ಸರ್ಕಾರದಲ್ಲಿ ಸದನದ ಬಾವಿಗಿಳಿದು ಹೋರಾಟ ಮಾಡಿದ್ದೀರಿ. ಆದರೆ ಈ ಸರ್ಕಾರದಲ್ಲಿ ಯಾಕೆ ಮಾಡುತ್ತಿಲ್ಲ ಎಂದು ಕಾಂಗ್ರೆಸ್ ಶಾಸಕರು ವಿರುದ್ದ ಸ್ವಾಮೀಜಿ ಗರಂ ಆದರು.
ನನಗಂತೂ ಬಹಳ ನೋವಾಗಿದೆ, ಗುರುಗಳಾದಂತವರು ಮಠ ಬಿಟ್ಟು ಅವರ ಮನೆಬಾಗಿಲಿಗೆ ಹೋಗಿದ್ದೆ. ಪತ್ರ ಚಳವಳಿ ಮೂಲಕ ಎಲ್ಲಾ ಶಾಸಕರ ಮನೆಬಾಗಿಲಿಗೆ ಹೋಗಿ ಮನವಿ ಸಲ್ಲಿಸಿದ್ದೆ. ಅಧಿವೇಶನದಲ್ಲಿ ಈ ಬಗ್ಗೆ ಚರ್ಚಿಸುವಂತೆ ಶಾಸಕರು ಪತ್ರ ಬರೆದರು. ಆದರೆ ಸ್ಪೀಕರ್ ಹತ್ತಿರ ಹೋಗಿ ಇದನ್ನು ಅಜೆಂಡಾಗೆ ಸೇರಿಸಿ ಎನ್ನುವ ಪ್ರಯತ್ನ ಯಾರೂ ಮಾಡಲಿಲ್ಲ. ಅವಕಾಶ ಕೊಡದಿದ್ದರೆ ನೀವು ಪ್ರತಿಭಟಿಸಬೇಕಿತ್ತು, ಸಭೆ ತ್ಯಾಗ ಮಾಡಬೇಕಾಗಿತ್ತು. ಸಿಎಂ ಮನೆಗೆ ಹೋಗಿ ಒತ್ತಡವನ್ನು ತರಬೇಕಾಗಿತ್ತು, ಅದನ್ನೂ ಮಾಡಿಲ್ಲ. ಇಡೀ ರಾಜ್ಯದಲ್ಲಿರುವ ಸಮುದಾಯದ ಜನರಿಗೆ ಅಸಮಾಧಾನ ಕಾಡುತ್ತಿದೆ ಎಂದರು.
ಕೆಲವು ಶಾಸಕರು ಪ್ರಯತ್ನ ಮಾಡಿರಬಹುದು. ಆದರೆ ಉಳಿದ ಶಾಸಕರು ಅವಕಾಶ ಸಿಗದಿದ್ದಾಗ ಸಭಾತ್ಯಾಗ ಮಾಡಿ ಸಿಎಂ ಮನೆಗೆ ಹೋಗಬೇಕಿತ್ತು. ನೀವು ಪ್ರಶ್ನೆ ಮಾಡಿಲ್ಲ ಎಂಬ ನೋವು ನಮ್ಮನ್ನು ಕಾಡುತ್ತಿದೆ. ಸರ್ಕಾರ ಬಂದು ಒಂದೂವರೆ ವರ್ಷ ಆದರೂ ಒಂದು ಸಭೆ ಮಾಡಲಾಗುತ್ತಿಲ್ಲ. ಸಮಾಜದ ಬಗ್ಗೆ ಕಳಕಳಿ ಇದ್ದರೆ ಸಿಎಂ ಮನೆಗೆ ಹೋಗಿ ಚರ್ಚಿಸಿ ಎಂದು ಸ್ವಾಮೀಜಿ ಕಿಡಿಕಾರಿದರು.
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.