Jammu Kashmir ಚುನಾವಣೆ ಮೊದಲು ಅಧಿಕಾರಿಗಳ ವರ್ಗಾವಣೆ ಯಾಕೆ?: ಕಿಡಿಕಾರಿದ ಒಮರ್‌ ಅಬ್ದುಲ್ಲಾ


Team Udayavani, Aug 16, 2024, 6:25 PM IST

Why the transfer of officials before the Jammu Kashmir elections?: Omar Abdullah slams LG

ಶ್ರೀನಗರ: ಬರೋಬ್ಬರಿ ಹತ್ತು ವರ್ಷಗಳ ಬಳಿಕ ಜಮ್ಮು ಕಾಶ್ಮೀರ (Jammu Kashmir) ವಿಧಾನಸಭೆ ಚುನಾವಣೆಗೆ ಸಜ್ಜಾಗಿದೆ. ಶುಕ್ರವಾರ (ಆ.16) ರಾಷ್ಟ್ರೀಯ ಚುನಾವಣೆ ಆಯೋಗ ಜಮ್ಮು ಕಾಶ್ಮೀರದಲ್ಲಿ ಚುನಾವಣೆ ಘೋಷಣೆ ಮಾಡಿದೆ. ಮೂರು ಹಂತದಲ್ಲಿ ಇಲ್ಲಿ ಮತದಾನ ನಡೆಯಲಿದೆ.

ಇದರ ಮಧ್ಯೆ ಜಮ್ಮು ಕಾಶ್ಮೀರದ ಆಡಳಿತ ಮತ್ತು ಪೊಲೀಸ್‌ ಇಲಾಖೆಯಲ್ಲಿ ಹಲವು ಬದಲಾವಣೆ ತಂದಿರುವುದು ಅಸಮಾಧಾನಕ್ಕೆ ಕಾರಣವಾಗಿದೆ. ಕೇಂದ್ರದ ನೇತೃತ್ವದ ಆಡಳಿತ ಮತ್ತು ಕೇಂದ್ರಾಡಳಿತ ಪ್ರದೇಶದ ಪ್ರಾದೇಶಿಕ ರಾಜಕೀಯ ಪಕ್ಷಗಳು ಬದಲಾವಣೆಗಳ ಬಗ್ಗೆ ಭಿನ್ನಾಭಿಪ್ರಾಯ ಹೊಂದಿವೆ.

ಗುರುವಾರ ಜಮ್ಮು ಕಾಶ್ಮೀರಕ್ಕೆ ಹೊಸ ಪೊಲೀಸ್ ಮಹಾನಿರ್ದೇಶಕರ (DGP) ನೇಮಕವಾಗಿತ್ತು. ಇದರ ಬೆನ್ನಲ್ಲೇ ಇಂದು 30ಕ್ಕೂ ಹೆಚ್ಚು ಪೊಲೀಸ್‌ ಅಧಿಕಾರಿಗಳ ವರ್ಗಾವಣೆ ಮಾಡಲಾಗಿದೆ. ಚುನಾವಣಾ ಆಯೋಗವು ವಿಧಾನಸಭೆ ಚುನಾವಣೆ ಘೋಷಣೆ ಮಾಡುವ ಕೆಲವೇ ಗಂಟೆಗಳ ಮೊದಲು ಈ ಬೆಳವಣಿಗೆ ನಡೆದಿದೆ.

ನ್ಯಾಷನಲ್ ಕಾನ್ಫರೆನ್ಸ್ ನಾಯಕ ಒಮರ್ ಅಬ್ದುಲ್ಲಾ (Omar Abdullah) ಅವರು ಇದರ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದು, ವರ್ಗಾವಣೆ ಆದೇಶದ ಹಿಂದೆ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ “ಪಕ್ಷಪಾತದ ಉದ್ದೇಶ” ಹೊಂದಿದ್ದಾರೆ ಎಂದು ಆರೋಪಿಸಿದ್ದಾರೆ.

ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿರುವ ಒಮರ್‌ ಅಬ್ದುಲ್ಲಾ, “ನಿನ್ನೆ ಸಂಜೆ ಮತ್ತು ಇಂದು ಬೆಳಗ್ಗೆ ಯಾಕೆ ಇಷ್ಟು ಪೊಲೀಸ್‌ ಮತ್ತು ಆಡಳಿತಾತ್ಮಕ ಅಧಿಕಾರಿಗಳ ವರ್ಗಾವಣೆ ಮಾಡಲಾಗಿದೆ. ಬಿಜೆಪಿಯಿಂದ ನೇಮಕಗೊಂಡ ಎಲ್‌ಜಿ ತನ್ನ ಪಕ್ಷ ಮತ್ತು ಅದರ ಮಿತ್ರಪಕ್ಷಗಳಿಗೆ ಅನುಕೂಲವಾಗುವಂತೆ ಇದನ್ನು ರೂಪಿಸಿದಂತಿದೆ” ಎಂದು ಹೇಳಿದ್ದಾರೆ.

ಡಿಐಜಿ-ಎಸ್‌ ಎಸ್‌ ಪಿ ದರ್ಜೆಯ ಅಧಿಕಾರಿಗಳ ವರ್ಗಾವಣೆ ಮಾಡಲಾಗಿದೆ. ಐಪಿಎಸ್‌ ಅಧಿಕಾರಿ ನಿತೀಶ್‌ ಕುಮಾರ್‌ ಅವರನ್ನು ಸಿಐಡಿ ಮುಖ್ಯಸ್ಥರನ್ನಾಗಿ ನೇಮಿಸಿದೆ.

“ಈ ಕ್ರಮವು ಚುನಾವಣಾ ಪ್ರಕ್ರಿಯೆಯ ಸಮಗ್ರತೆಯನ್ನು ಹಾಳುಮಾಡುವ ಉದ್ದೇಶವನ್ನು ಸ್ಪಷ್ಟವಾಗಿ ತೋರುತ್ತದೆ, ಇದು ಆಡಳಿತ ಪಕ್ಷವು ಪ್ರತಿಪಕ್ಷದ ಮೇಲೆ ಅನಗತ್ಯ ಆಡಳಿತಾತ್ಮಕ ಲಾಭವನ್ನು ಪಡೆಯುವುದನ್ನು ತಡೆಯಲು ಅಂತಹ ವರ್ಗಾವಣೆಗಳನ್ನು ನಿರ್ಬಂಧಿಸುತ್ತದೆ. ಎಲ್‌ಜಿ (ಲೆಫ್ಟಿನೆಂಟ್‌ ಗವರ್ನರ್) ಸರ್ಕಾರವು ಸಂಪೂರ್ಣ ಆಡಳಿತಾತ್ಮಕ ವ್ಯವಸ್ಥೆಯನ್ನು ವ್ಯೂಹಾತ್ಮಕವಾಗಿ ಬುಡಮೇಲು ಮಾಡಿದೆ, ಮುಕ್ತ ಮತ್ತು ನ್ಯಾಯಸಮ್ಮತ ಚುನಾವಣೆಯ ತತ್ವಗಳನ್ನು ರಾಜಿ ಮಾಡಿದೆ. ಈ ಅಬ್ಬರದ ಪ್ರಯತ್ನವನ್ನು ಕೂಲಂಕುಷವಾಗಿ ತನಿಖೆ ಮಾಡಲು ಮತ್ತು ಈ ಆದೇಶಗಳ ಅನುಷ್ಠಾನವನ್ನು ತಕ್ಷಣವೇ ಅಮಾನತುಗೊಳಿಸಲು @ECISVEEP ಗೆ ನಾವು ಕರೆ ನೀಡುತ್ತೇವೆ” ಎಂದು ಅಬ್ದುಲ್ಲಾ ಹೇಳಿದರು.

ರಾಷ್ಟ್ರೀಯ ಚುನಾವಣಾ ಆಯೋಗವು ವಿಧಾನಸಭಾ ಚುನಾವಣೆಯ ದಿನಾಂಕ ಘೋಷಣೆ ಮಾಡಿದ್ದು, ಜಮ್ಮು ಕಾಶ್ಮೀರದಲ್ಲಿ ಮೂರು ಹಂತದಲ್ಲಿ ಚುನಾವಣೆ ನಡೆಯಲಿದೆ.

ಮೊದಲ ಹಂತದ ಮತದಾನ: ಸೆ.18

ಎರಡನೇ ಹಂತದ ಮತದಾನ: ಸೆ.25

ಮೂರನೇ ಹಂತದ ಮತದಾನ: ಅ.01

ಮತ ಎಣಿಕೆ: ಅ.04

ಮೊದಲ ಹಂತದಲ್ಲಿ 24 ವಿಧಾನಸಭಾ ಕ್ಷೇತ್ರಗಳಲ್ಲಿ ಮತದಾನ ನಡೆದರೆ, ಎರಡನೇ ಹಂತದಲ್ಲಿ 26 ವಿಧಾನಸಭಾ ಕ್ಷೇತ್ರಗಳಲ್ಲಿ ಮತ್ತು ಮೂರನೇ ಹಂತದಲ್ಲಿ 40 ವಿಧಾನಸಭಾ ಕ್ಷೇತ್ರಗಳಲ್ಲಿ ಮತದಾನ ನಡೆಯಲಿದೆ.

ಟಾಪ್ ನ್ಯೂಸ್

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Modi (2)

PM ಮೋದಿ ಅಮೆರಿಕ ಪ್ರವಾಸ; ಮಣಿಪುರಕ್ಕೆ ಹೋಗುವುದಿಲ್ಲವೇಕೆ?:ಕಾಂಗ್ರೆಸ್ ಪ್ರಶ್ನೆ

High Court: ಮಹಿಳೆ ಅಪಹರಣ ಕೇಸ್‌; ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

High Court: ಮಹಿಳೆ ಅಪಹರಣ ಕೇಸ್‌; ಎಚ್‌.ಡಿ.ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

11

Eshwara Khandre: ಮಹದಾಯಿಗೆ ಅನುಮತಿ ಸಿಗೋವರೆಗೂ ಮರ ಕಡಿಯಲು ಬಿಡಲ್ಲ

H.D.Kumaraswamy

H. D. Kumaraswamy: ರಾಜಕೀಯ ಮಾಡಲು, ಬೆಂಕಿ ಹಚ್ಚಲು ಬಂದಿಲ್ಲ

1-frr

BJP ಶಾಸಕ ಮುನಿರತ್ನಗೆ ಷರತ್ತುಬದ್ಧ ಜಾಮೀನು; ಆದರೂ ತಪ್ಪಿಲ್ಲ ಸಂಕಷ್ಟ!

HP ಯಿಂದ ಹೊಸ ಪ್ರಿಂಟರ್‌ಗಳ ಬಿಡುಗಡೆ

HP ಯಿಂದ ಹೊಸ ಪ್ರಿಂಟರ್‌ಗಳ ಬಿಡುಗಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Modi (2)

PM ಮೋದಿ ಅಮೆರಿಕ ಪ್ರವಾಸ; ಮಣಿಪುರಕ್ಕೆ ಹೋಗುವುದಿಲ್ಲವೇಕೆ?:ಕಾಂಗ್ರೆಸ್ ಪ್ರಶ್ನೆ

1-tirupati-laddu

Tirupati ತಿರುಪತಿ ಲಡ್ದು ಪ್ರಸಾದದಲ್ಲಿ ಬೀಫ್ ಫ್ಯಾಟ್!:ಲ್ಯಾಬ್ ವರದಿಯಲ್ಲಿ ದೃಢ

Chennai: ಗ್ರಾಹಕ ನಿಂದಿಸಿದ್ದಕ್ಕೆ ಖಿನ್ನತೆಗೆ ಒಳಗಾಗಿ ಫುಡ್‌ ಡೆಲಿವರಿ ಯುವಕ ಆತ್ಮಹತ್ಯೆ

Chennai: ಗ್ರಾಹಕ ನಿಂದಿಸಿದ್ದಕ್ಕೆ ಖಿನ್ನತೆಗೆ ಒಳಗಾಗಿ ಫುಡ್‌ ಡೆಲಿವರಿ ಯುವಕ ಆತ್ಮಹತ್ಯೆ

Haryana: Financial assistance to women, MSP promised; BJP manifesto released

Haryana: ಮಹಿಳೆಯರಿಗೆ ವಿತ್ತ ನೆರವು, ಎಂಎಸ್‌ ಪಿ ಭರವಸೆ; ಬಿಜೆಪಿ ಪ್ರಣಾಳಿಕೆ ಬಿಡುಗಡೆ

Chennai: ರಸ್ತೆ ಬದಿ ಪತ್ತೆಯಾದ ಸೂಟ್‌ಕೇಸ್‌ನಲ್ಲಿತ್ತು ಮಹಿಳೆಯ ಕತ್ತರಿಸಿದ ದೇಹದ ಭಾಗಗಳು…

Chennai: ರಸ್ತೆ ಬದಿ ಪತ್ತೆಯಾದ ಸೂಟ್‌ಕೇಸ್‌ನಲ್ಲಿತ್ತು ಮಹಿಳೆಯ ಕತ್ತರಿಸಿದ ದೇಹದ ಭಾಗಗಳು…

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Kundapura: ಪ್ರಾಣಿ ತ್ಯಾಜ್ಯ ಚೀಲದಲ್ಲಿ ಪತ್ತೆ… ಕೇಸು ದಾಖಲು

Kundapura: ಪ್ರಾಣಿ ತ್ಯಾಜ್ಯ ಚೀಲದಲ್ಲಿ ಪತ್ತೆ… ಕೇಸು ದಾಖಲು

1-baa

Mangalore Port ಇಬ್ಬರು ಬಾಲಕಾರ್ಮಿಕರ ರಕ್ಷಣೆ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

12

High Court: ಬಿಎಸ್‌ವೈ ಪೋಕ್ಸೋ ಕೇಸ್‌: ಸೆ.27ಕ್ಕೆ ವಿಚಾರಣೆ ಮುಂದಕ್ಕೆ

Modi (2)

PM ಮೋದಿ ಅಮೆರಿಕ ಪ್ರವಾಸ; ಮಣಿಪುರಕ್ಕೆ ಹೋಗುವುದಿಲ್ಲವೇಕೆ?:ಕಾಂಗ್ರೆಸ್ ಪ್ರಶ್ನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.