Goravanahalli ಮಹಾಲಕ್ಷ್ಮೀ ದೇವಾಲಯದಲ್ಲಿ ಸಹಸ್ರಾರು ಭಕ್ತರಿಂದ ವಿಶೇಷ ಪೂಜೆ
Team Udayavani, Aug 16, 2024, 8:47 PM IST
ಕೊರಟಗೆರೆ: ನಾಡಿನೆಲ್ಲೆಡೆ ಶುಕ್ರವಾರ (ಆ16) ಶ್ರೀ ವರಮಹಾಲಕ್ಷ್ಮೀ ಹಬ್ಬ ಸಡಗರ ಸಂಭ್ರಮದಿಂದ ಆಚರಿಸಲಾಗುತ್ತಿದ್ದು, ಪ್ರತಿ ವರ್ಷದಂತೆ ಈ ವರ್ಷವೂ ರಾಜ್ಯದ ನಾನಾ ಭಾಗಗಳಿಂದ ಗೊರವನಹಳ್ಳಿ ಶ್ರೀಮಹಾಲಕ್ಷ್ಮೀ ದೇವಾಲಯಕ್ಕೆ ಸಹಸ್ರಾರು ಭಕ್ತರು ಭೇಟಿ ನೀಡಿ ವಿಶೇಷ ಪೂಜೆ, ಪ್ರಾರ್ಥನೆ ಸಲ್ಲಿಸಿದರು.
ಬೆಳಗ್ಗೆ 6 ರಿಂದ 7.30 ರವೆರೆಗೆ ಪಂಚಾಮೃತ ಅಭಿಷೇಕ, ನಂತರ ಗಣ ಹೋಮ ಸೇರಿದಂತೆ ವಿಶೇಷ ಪೂಜೆ ಹಾಗೂ ತಾಯಿಗೆ ವಿಶೇಷ ಅಲಂಕಾರ ಮಾಡಲಾಗಿತ್ತು. ಪದ್ಮಶ್ರೀ ಪುರಸ್ಕೃತೆ ಸಾಲುಮರದ ತಿಮ್ಮಕ್ಕ, ಎಲೆರಾಂಪುರ ಶ್ರೀಮಠದ ಡಾ.ಹನುಮಂತನಾಥ ಸ್ವಾಮೀಜಿ, ತಗ್ಗೀಹಳ್ಳಿ ಶ್ರೀಮಠದ ಸ್ವಾಮೀ ರಮಾನಂದಜೀ ಸೇರಿದಂತೆ ಇತರೆ ಗಣ್ಯರು ದೇವಸ್ಥಾನಕ್ಕೆ ಭೇಟಿ ನೀಡಿ ತಾಯಿಯ ದರ್ಶನ ಪಡೆದರು.
ಶ್ರೀಗೊರವನಹಳ್ಳಿ ಮಹಾಲಕ್ಷ್ಮೀ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಭಕ್ತರ ದರ್ಶನಕ್ಕೆ ವಿಶೇಷ ವ್ಯವಸ್ಥೆ ಸಹ ಕಲ್ಪಿಸಲಾಗಿತ್ತು. ಬಂದಂತಹ ಭಕ್ತರಿಗೆ ನೂತನ ದಾಸೋಹ ಕಟ್ಟಡದಲ್ಲಿ ದಾಸೋಹದ ವ್ಯವಸ್ಥೆ ಕೂಡ ಮಾಡಲಾಗಿದ್ದು, ಫ್ರೆಂಡ್ಸ್ ಗ್ರೂಪ್ನವರು ದಾಸೋಹ ಕಾರ್ಯದಲ್ಲಿ ಕೈ ಜೋಡಿಸಿದರು. ಪೋಲಿಸ್ ಇಲಾಖೆ ಅಧಿಕಾರಿಗಳು ಸೂಕ್ತ ಭದ್ರತೆ ನೀಡಿ ಭಕ್ತರ ದರ್ಶನಕ್ಕೆ ಅನುಕೂಲ ಮಾಡಿಕೊಟ್ಟರು.
ಎಲೆರಾಂಪುರ ಶ್ರೀಮಠದ ಡಾ.ಹನುಮಂತನಾಥ ಸ್ವಾಮೀಜಿ ಮಾತನಾಡಿ, ಪ್ರತಿವರ್ಷದಂತೆ ಈ ವರ್ಷವು ಸಹ ಗೊರವನಹಳ್ಳಿ ಶ್ರೀಮಹಾಲಕ್ಷ್ಮೀ ದೇವಾಲಯದಲ್ಲಿ ಹಬ್ಬವನ್ನು ಅರ್ಥಪೂರ್ಣವಾಗಿ ಆಚರಣೆ ಮಾಡಲಾಗಿದೆ. ರಾಜ್ಯದ ನಾನಾ ಭಾಗಗಳಿಂದ ಬರುವ ಭಕ್ತರಿಗೆ ವಿಶೇಷ ದರ್ಶನಕ್ಕೆ ಮತ್ತು ದಾಸೋಹ ವ್ಯವಸ್ಥೆ ಕಲ್ಪಿಸಿದ್ದಾರೆ. ಈ ವರ್ಷ ನಿರೀಕ್ಷೆಗೂ ಮೀರಿದ ಜನರು ತಾಯಿಯ ದರ್ಶನ ಪಡೆದಿದ್ದು, ಗೊರವನಹಳ್ಳಿ ಮಹಾಲಕ್ಷ್ಮೀ ಚಾರಿಟೇಬಲ್ ಟ್ರಸ್ಟ್ ಉತ್ತಮ ಕಾರ್ಯನಿರ್ವಹಿಸಿದೆ ಎಂದು ಹೇಳಿದರು.ತಗ್ಗಿಹಳ್ಳಿ ಶ್ರೀಮಠದ ಸ್ವಾಮೀ ರಮಾನಂದಜೀ ಮಾತನಾಡಿದರು.
ಈ ಸಂದರ್ಭದಲ್ಲಿ ಗೊರವನಹಳ್ಳಿ ಶ್ರೀಮಹಾಲಕ್ಷ್ಮೀ ಚಾರಿಟೇಬಲ್ ಟ್ರಸ್ಟ್ ನ ಅಧ್ಯಕ್ಷ ವಾಸುದೇವ ಮಾತನಾಡಿ ರಾಜ್ಯದ ಮೂಲೆ ಮೂಲೆಯಿಂದ ಸಾವಿರಾರು ಭಕ್ತರು ಆಗಮಿಸಿ ಪ್ರತಿವರ್ಷದಂತೆ ಈ ವರ್ಷವು ಸಹ ಶ್ರೀಮಹಾಲಕ್ಷ್ಮೀ ತಾಯಿಯ ದರ್ಶನ ಪಡೆದಿದ್ದಾರೆ. ಟ್ರಸ್ಟ್ ವತಿಯಿಂದ ಭಕ್ತರ ದರ್ಶನಕ್ಕೆ ವಿಶೇಷ ವ್ಯವಸ್ಥೆ ಮತ್ತು ದಾಸೋಹ ವ್ಯವಸ್ಥೆ ಕೂಡ ಕಲ್ಪಿಸಲಾಗಿತ್ತು 35 ಸಾವಿರಕ್ಕೂ ಅಧಿಕ ಭಕ್ತರು ತಾಯಿಯ ದರ್ಶನ ಪಡೆದಿದ್ದು, ಪ್ರತಿವರ್ಷ ತಾಯಿಯ ಆಶೀರ್ವಾದದಿಂದ ಭಕ್ತರ ಸಂಖೈ ಏರಿಕೆಯಾಗುತ್ತಿದೆ ಎಂದರು.
ವಿಶೇಷ ಅಧಿಕಾರಿ ಕೇಶವಮೂರ್ತಿ ಮಾತನಾಡಿ ‘ ಹಬ್ಬದ ಪ್ರಯುಕ್ತ ಬೆಳಗ್ಗಿನಿಂದಲೇ ಪೂಜಾ ಕೈಂಕರ್ಯಗಳು ಪ್ರಾರಂಭವಾಗಿತ್ತು.ರಾಜ್ಯದ ಹಲವು ಮಠದ ಶ್ರೀಗಳು, ಗಣ್ಯರು ಸೇರಿದಂತೆ ಸಾವಿರಾರು ಭಕ್ತರು ತಾಯಿಯ ದರ್ಶನ ಪಡೆದಿದ್ದಾರೆ. ನಿರೀಕ್ಷೆಗೂ ಮೀರಿದ ಭಕ್ತರು ದೇವಸ್ಥಾನಕ್ಕೆ ಭೇಟಿ ನೀಡಿ ತಾಯಿಯ ದರ್ಶನ ಪಡೆದಿದ್ದಾರೆ’ ಎಂದರು.
ಕಾರ್ಯದರ್ಶಿ ಮುರುಳಿಕೃಷ್ಣ, ಖಚಾಂಚಿ ಜಗದೀಶ್, ಧರ್ಮದರ್ಶಿಗಳಾದ ಡಾ.ಲಕ್ಷ್ಮೀಕಾಂತ, ನಟರಾಜು, ಶ್ರೀಪ್ರಸಾದ್, ರವಿರಾಜೇಅರಸ್, ಮಂಜುನಾಥ್, ಓಂಕಾರೇಶ್, ಚಿಕ್ಕನರಸಯ್ಯ, ಬಾಲಕೃಷ್ಣ, ನರಸರಾಜು, ಲಕ್ಷ್ಮೀನರಸಯ್ಯ, ನಾಗರಾಜು, ಕಾರ್ಯನಿರ್ವಾಹಕ ಅಧಿಕಾರಿ ಜಿ.ಸಿ ಲಕ್ಷ್ಮಯ್ಯ, ಫ್ರೆಂಡ್ಸ್ ಗ್ರೂಪ್ನ ರವಿಕುಮಾರ್, ಮಲ್ಲಣ್ಣ ಸೇರಿದಂತೆ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pavagada: ಆಂಬ್ಯುಲೆನ್ಸ್ ಸಿಗದೆ ವೃದ್ದ ಮೃತದೇಹವನ್ನು ಬೈಕ್ ನಲ್ಲಿಯೇ ಕೊಂಡೊಯ್ದ ಮಕ್ಕಳು
Minister V. Somanna ಹಾಲಿನ ದರ ಏರಿಕೆ ಗ್ಯಾರಂಟಿಗೆ ಬಳಸಿದ್ರೆ ವಿರೋಧ
Tumkur ಕೊಟ್ಟಿಗೆಗೆ ನುಗ್ಗಿದ 5 ಚಿರತೆಗಳು: 32 ಕುರಿಗಳ ಸಾವು
BJP MLA Munirathna ಧ್ವನಿ ಖಚಿತವಾದರೆ ಕಾನೂನು ಕ್ರಮ: ಪರಂ
Kunigal: ಹಿಂದೂ ಮುಸ್ಲಿಂ ಭಾವೈಕ್ಯತೆ, ಸಂಗಮಕ್ಕೆ ಸಾಕ್ಷಿಯಾದ ಈದ್ ಮಿಲಾದ್ ಮೆರವಣಿಗೆ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.