Mahalingpur; ಅವೈಜ್ಞಾನಿಕ ರಸ್ತೆ: ಪುರಸಭೆ ಸದಸ್ಯರು, ಅಧಿಕಾರಿಗಳಿಂದ ಕಾಮಗಾರಿಗೆ ತಡೆ

ಡಿಸಿ ಆದೇಶವನ್ನು ಕಡೆಗಣಿಸಿದ ಗುತ್ತಿಗೆದಾರರು ಮತ್ತು ಲೋಕೋಪಯೋಗಿ ಅಧಿಕಾರಿಗಳು!

Team Udayavani, Aug 16, 2024, 10:16 PM IST

1-ml

ಮಹಾಲಿಂಗಪುರ: ಪಟ್ಟಣದ ಬಸವ ವೃತ್ತದಿಂದ ಢವಳೇಶ್ವರ ರಸ್ತೆವರೆಗಿನ ಡಬಲ್ ರಸ್ತೆಯ ಕಾಮಗಾರಿಯು ಪ್ರಾರಂಭವಾಗಿ ಎರಡುವರೆ ವರ್ಷಗಳೇ ಕಳೆದಿದೆ. ಆದರೆ ಇಂದಿಗೂ ಕಾಮಗಾರಿಯು ಪೂರ್ತಿಯಾಗದೇ ಅರ್ಧಕ್ಕೆ ಉಳಿದು ಟ್ರಾಫಿಕ್ ಸಮಸ್ಯೆಯಿಂದ ಸಾರ್ವಜನಿಕರು, ಬೈಕ್ ಸವಾರರು ಪರದಾಡುವಂತಾಗಿದೆ.

ರಸ್ತೆಯ ಇಕ್ಕೆಲಗಳಲ್ಲಿ ಚರಂಡಿ ಪುಟ್‌ಪಾತ್ ನಿರ್ಮಿಸದೇ ಡಾಂಬರೀಕರಣ ಪ್ರಾರಂಭಿಸಿರುವದನ್ನು ಖಂಡಿಸಿ, ಪುರಸಭೆಯ ಸದಸ್ಯರು ಮತ್ತು ಅಧಿಕಾರಿಗಳು ಡಾಂಬರೀಕರಣ ಕಾಮಗಾರಿಯನ್ನು ಅರ್ಧಕ್ಕೆ ನಿಲ್ಲಿಸಿದ ಘಟನೆಯು ಶುಕ್ರವಾರ(ಆ16) ಮಧ್ಯಾಹ್ನ ನಡೆಯಿತು.

ಪುರಸಭೆ ಸದಸ್ಯರಾದ ಪ್ರಲ್ಹಾದ ಸಣ್ಣಕ್ಕಿ, ರವಿ ಜವಳಗಿ ಮಾತನಾಡಿ ರಬಕವಿ-ಜಾಂಬೋಟಿ ರಾಜ್ಯಹೆದ್ದಾರಿಯಲ್ಲಿ ಬವಸವೃತ್ತದಿಂದ ಢವಳೇಶ್ವರ ರಸ್ತೆಯ ದ್ವಾರ ಬಾಗಿಲುವರೆಗಿನ ಕೇವಲ 775 ಮೀಟರ್‌ನಷ್ಟಿರುವ ಕಾಮಗಾರಿಗೆ ಒರೊಬ್ಬರಿ 6 ಕೋಟಿ 25 ಲಕ್ಷ ಖರ್ಚು ಮಾಡಲಾಗಿದೆ. ಕಳೆದ ಎರಡು ವರ್ಷಗಳಿಂದ ಆಮೆಗತಿಯಯಲ್ಲಿದ್ದ ಕಾಮಗಾರಿಯನ್ನು ಗುತ್ತಿಗೆದಾರರು ಮನಬಂದಂತೆ ಅವೈಜ್ಞಾನಿಕವಾಗಿ ಮಾಡಿದ್ದಾರೆ. ಕಳೆದ ತಿಂಗಳು ಪುರಸಭೆಯಿಂದ ರಸ್ತೆಯ ಪೂರ್ವಭಾಗದಲ್ಲಿನ ಅತಿಕ್ರಮಣ ಅಂಗಡಿಗಳನ್ನು ತೆರವುಗೊಳಿಸಿ ಚರಂಡಿ ನಿರ್ಮಾಣಕ್ಕೆ ಅವಕಾಶ ನೀಡಲಾಗಿದೆ. ಅದರಂತೆ ಪಶ್ಚೀಮ ಭಾಗದಲ್ಲಿನ ಅಂಗಡಿಗಳನ್ನು ತೆರವುಗೊಳಿಸಿ, ಚರಂಡಿ ಪುಟಪಾತ್, ರಸ್ತೆಯ ಮಧ್ಯದಲ್ಲಿ ವಿಭಜಕ(ಡಿವೈಡರ್) ನಿರ್ಮಿಸಬೇಕು. ಅಲ್ಲಿಯವರೆಗೆ ಕಾಮಗಾರಿಯನ್ನು ನಿಲ್ಲಿಸಬೇಕು. ಇದು ಪಟ್ಟಣದ ಅಭಿವೃದ್ದಿ ಮತ್ತು ಭವಿಷ್ಯದ ಟ್ರಾಫೀಕ್ ಸಮಸ್ಯೆಯ ನಿವಾರಣೆಗಾಗಿ ಉಭಯ ಪಕ್ಷಗಳ ಸದಸ್ಯರ ಒಗ್ಗಟ್ಟಿನ ಆಗ್ರಹವಾಗಿದೆ ಎಂದು ಗುತ್ತಿಗೆದಾರರು ಮತ್ತು ಲೋಕೋಪಯೋಗಿ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.

ಪುರಸಭೆ ಮುಖ್ಯಾಧಿಕಾರಿ ಈರಣ್ಣ ದಡ್ಡಿ ಮಾತನಾಡಿ ಪುರಸಭೆಯ ಎರಡು ಪಕ್ಷಗಳ ಸದಸ್ಯರು ಒಗ್ಗಟ್ಟಾಗಿ ರಸ್ತೆ ಅಗಲೀಕರಣವಾಗಲಿ ಎಂಬ ಉದ್ದೇಶದಿಂದ ಪೂರ್ವಭಾಗದಲ್ಲಿನ ಆಸ್ತಿಗಳನ್ನು ಅಳತೆ ಮಾಡಿ, ಅತಿಕ್ರಮಣ ಜಾಗೆಗಳನ್ನು ತೆರವುಗೊಳಿಸಲಾಗಿದೆ. ಅದರಂತೆ ಪಶ್ಚೀಮ ಭಾಗದಲ್ಲಿನ ಆಸ್ತಿಗಳನ್ನು ಸರ್ವೇ ಮಾಡಲು ನಗರ ಭೂಮಾಪನ ಅಧಿಕಾರಿಗಳಿಗೆ ತಿಳಿಸಲಾಗಿದೆ. ಎರಡು ಭಾಗದಲ್ಲಿ ಚರಂಡಿ ನಿರ್ಮಾಣ ಮತ್ತು ಪುಟ್‌ಪಾತ್ ನಿರ್ಮಿಸಿದ ನಂತರವೇ ಡಾಂಬರೀಕರಣ ಮಾಡಲು ಸದಸ್ಯರು ಹೇಳಿದ್ದರು ಸಹ, ಗುತ್ತಿಗೆದಾರರು ಕಾಮಗಾರಿಯನ್ನು ಪ್ರಾರಂಭಿಸಿದ ಕಾರಣ ಇಂದು ಸದಸ್ಯರೊಂದಿಗೆ ಬಂದು ಕಾಮಗಾರಿಯನ್ನು ನಿಲ್ಲಿಸಲು ತಿಳಿಸಿದ್ದೇವೆ ಎಂದರು.

ಪುರಸಭೆ ಸದಸ್ಯ ಬಸವರಾಜ ಚಮಕೇರಿ ಮಾತನಾಡಿ ಪಶ್ಚೀಮ ಭಾಗದಲ್ಲಿನ ಅತಿಕ್ರಮಣ ಅಂಗಡಿಗಳ ತೆರವು ನಂತರ ಚರಂಡಿ, ಪುಟ್‌ಪಾತ ನಿರ್ಮಿಸಿ, ಡಾಂಬರೀಕರಣ ಮಾಡಲು ಹೇಳಿ, ಗುರುವಾರವೇ ಲೋಕೋಪಯೋಗಿ ಅಧಿಕಾರಿಗಳಿಗೆ, ಡಿಸಿಯವರಿಗೆ ತಿಳಿಸಲಾಗಿದೆ. ಡಿಸಿ ಅವರು ಸಂಬಂಧಿಸಿದಂತೆ ಅಧಿಕಾರಿಗಳಿಗೆ ಸೂಚಿಸಿ ಕಾಮಗಾರಿಯನ್ನು ನಿಲ್ಲಿಸಲು ತಿಳಿಸಿದ್ದಾರೆ. ಆದರೆ ಡಿಸಿ ಆದೇಶವನ್ನೇ ಗಾಳಿಗೆ ತೂರಿದ ಗುತ್ತಿಗೆದಾರರು, ಲೋಕೋಪಯೋಗಿ ಅಧಿಕಾರಿಗಳು ಶುಕ್ರವಾರವು ಡಾಂಬರೀಕರಣ ಪ್ರಾರಂಭಿಸಿದ್ದರಿಂದ ಪುರಸಭೆಯ ಸದಸ್ಯರು ಮತ್ತು ಅಧಿಕಾರಿಗಳು ಸೇರಿ ಕಾಮಗಾರಿಯನ್ನು ನಿಲ್ಲಿಸಿದ್ದೇವೆ ಎಂದರು.

ಪುರಸಭೆಯ ಸದಸ್ಯರಾದ ಶೇಖರ ಅಂಗಡಿ, ಬಸವರಾಜ ಹಿಟ್ಟಿನಮಠ, ಬಿಜೆಪಿ ಮುಖಂಡರಾದ ಶಿವಾನಂದ ಅಂಗಡಿ, ಪುಂಡಲೀಕ ಗಡೇಕಾರ, ಮಾಂತು ಮೇಟಿ, ಶಿವಾನಂದ ಹುಣಶ್ಯಾಳ, ಜೆಡಿಎಸ್ ಮುಖಂಡ ನಿಂಗಪ್ಪ ಬಾಳಿಕಾಯಿ, ಕಾಂಗ್ರೆಸ್ ಮುಖಂಡರಾದ ನಾನಾ ಜೋಷಿ, ವಿನೋದ ಸಿಂಪಿ, ಶ್ರೀಮಂತ ಹುಣಶ್ಯಾಳ, ಪುರಸಭೆಯ ಕಿರಿಯ ಅಭಿಯಂತರ ಎಸ್.ಎಂ.ಕಲಬುರ್ಗಿ ಸೇರಿದಂತೆ ಹಲವರು ಇದ್ದರು.

ಟಾಪ್ ನ್ಯೂಸ್

Karnataka ಸುವರ್ಣ ಸಂಭ್ರಮದಲ್ಲಿ ಕನ್ನಡ ಜನೋತ್ಸವ

Karnataka ಸುವರ್ಣ ಸಂಭ್ರಮದಲ್ಲಿ ಕನ್ನಡ ಜನೋತ್ಸವ

Tungabhadra ಡ್ಯಾಂನ ಎಲ್ಲ 33 ಗೇಟ್‌ ಬದಲಿಸಲು ತಜ್ಞರ ಸಲಹೆ

Tungabhadra ಡ್ಯಾಂನ ಎಲ್ಲ 33 ಗೇಟ್‌ ಬದಲಿಸಲು ತಜ್ಞರ ಸಲಹೆ

modi (4)

Congress-NC ಮೈತ್ರಿಗೆ ಪಾಕ್‌ ಬೆಂಬಲ, 370ನೇ ವಿಧಿ ಮರುಸ್ಥಾಪನೆ ಅಸಾಧ್ಯ: ಪ್ರಧಾನಿ: ಮೋದಿ

High Court: ಬಾಂಬ್‌ ಸ್ಫೋಟ ಹೇಳಿಕೆ; ಶೋಭಾ ಕರಂದ್ಲಾಜೆ ಮೇಲಿನ ಕೇಸ್‌ ರದ್ದು

High Court: ಬಾಂಬ್‌ ಸ್ಫೋಟ ಹೇಳಿಕೆ; ಶೋಭಾ ಕರಂದ್ಲಾಜೆ ಮೇಲಿನ ಕೇಸ್‌ ರದ್ದು

High Court; “ಅರ್ಧ ಪಾಕಿಸ್ಥಾನ’: ಯತ್ನಾಳ್‌ ಹೇಳಿಕೆಗೆ ಹೈಕೋರ್ಟ್‌ ಸಿಟ್ಟು

High Court; “ಅರ್ಧ ಪಾಕಿಸ್ಥಾನ’: ಯತ್ನಾಳ್‌ ಹೇಳಿಕೆಗೆ ಹೈಕೋರ್ಟ್‌ ಸಿಟ್ಟು

Kasturi Rangan ವರದಿ ಹಿನ್ನೆಲೆ: ನಯನಾ ಮೋಟಮ್ಮ ರಾಜೀನಾಮೆ ಬೆದರಿಕೆ

Kasturi Rangan ವರದಿ ಹಿನ್ನೆಲೆ: ನಯನಾ ಮೋಟಮ್ಮ ರಾಜೀನಾಮೆ ಬೆದರಿಕೆ

100 ಎಫ್ಐಆರ್‌ ದಾಖಲಿಸಿದರೂ ಹೆದರಲ್ಲ: ಅಶೋಕ್‌

100 ಎಫ್ಐಆರ್‌ ದಾಖಲಿಸಿದರೂ ಹೆದರಲ್ಲ: ಅಶೋಕ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-rabakavi

Rabkavi Banhatti: ತೇರಿನ ಮೇಲಿನಿಂದ ಬಿದ್ದ ವ್ಯಕ್ತಿ ಸ್ಥಳದಲ್ಲೇ ಸಾವು

ಮಹಾಲಿಂಗಪುರದ ಮಹಾಜಾತ್ರೆ…: ಲಕ್ಷಾಂತರ ಭಕ್ತರು ಭಾಗಿ..ರಾತ್ರಿಯಿಡಿ ಸಾಗುವ ರಥೋತ್ಸವ

ಮಹಾಲಿಂಗಪುರದ ಮಹಾಜಾತ್ರೆ…: ಲಕ್ಷಾಂತರ ಭಕ್ತರು ಭಾಗಿ… ರಾತ್ರಿಯಿಡಿ ಸಾಗುವ ರಥೋತ್ಸವ

Pak flag ಹಾರಾಡುವ ರೀಲ್ಸ್ ವಾಟ್ಸಪ್ ಸ್ಟೇಟಸ್: ಯುವಕ ಪೊಲೀಸರ ವಶಕ್ಕೆ; ಪ್ರಕರಣ ದಾಖಲು

Pak flag ಹಾರಾಡುವ ವಾಟ್ಸಪ್ ಸ್ಟೇಟಸ್: ಯುವಕ ಪೊಲೀಸರ ವಶಕ್ಕೆ

Mudhol: ಆರ್‌ಎಸ್‌ಎಸ್‌ನಿಂದ ದೇಶಕ್ಕೆ ಕಂಟಕ: ಆರ್‌.ಬಿ.ತಿಮ್ಮಾಪುರ

Mudhol: ಆರ್‌ಎಸ್‌ಎಸ್‌ನಿಂದ ದೇಶಕ್ಕೆ ಕಂಟಕ: ಆರ್‌.ಬಿ.ತಿಮ್ಮಾಪುರ

Farmers

Farmers; ರೈತನ ಬೆಳೆ ಕಾಯುಲು ಸಿನಿ ತಾರೆಯರು; ಉತ್ತಮ ಬೆಳೆಗೆ ರೈತನ ಹೊಸ ಪ್ರಯೋಗ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

firee

Bihar;ಜಮೀನು ವಿವಾದ: 21 ದಲಿತರ ಮನೆಗಳಿಗೆ ಬೆಂಕಿ

Karnataka ಸುವರ್ಣ ಸಂಭ್ರಮದಲ್ಲಿ ಕನ್ನಡ ಜನೋತ್ಸವ

Karnataka ಸುವರ್ಣ ಸಂಭ್ರಮದಲ್ಲಿ ಕನ್ನಡ ಜನೋತ್ಸವ

J-P-Nadda

PM ಮೋದಿಗೆ ಕಾಂಗ್ರೆಸಿಗರಿಂದ ಬೈಗುಳ: ಖರ್ಗೆ ಪತ್ರಕ್ಕೆ ನಡ್ಡಾ ತೀಕ್ಷ್ಣ ಪ್ರತ್ಯುತ್ತರ

Tungabhadra ಡ್ಯಾಂನ ಎಲ್ಲ 33 ಗೇಟ್‌ ಬದಲಿಸಲು ತಜ್ಞರ ಸಲಹೆ

Tungabhadra ಡ್ಯಾಂನ ಎಲ್ಲ 33 ಗೇಟ್‌ ಬದಲಿಸಲು ತಜ್ಞರ ಸಲಹೆ

modi (4)

Congress-NC ಮೈತ್ರಿಗೆ ಪಾಕ್‌ ಬೆಂಬಲ, 370ನೇ ವಿಧಿ ಮರುಸ್ಥಾಪನೆ ಅಸಾಧ್ಯ: ಪ್ರಧಾನಿ: ಮೋದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.