CM: ಮುಡಾ ಅಕ್ರಮ ಪ್ರಕರಣ-ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಗೆ ಗವರ್ವರ್ ಅನುಮತಿ
ಸಿಎಂ ವಿರುದ್ಧ ಪ್ರಾಸಿಕ್ಯೂಷನ್...ಮುಂದೇನು?
Team Udayavani, Aug 17, 2024, 10:07 AM IST
ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ನಡೆದ ಅಕ್ರಮಕ್ಕೆ ಸಂಬಂಧಿಸಿದಂತೆ ರಾಜ್ಯಪಾಲ ಗೆಹ್ಲೋಟ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಗೆ ಶನಿವಾರ (ಆ.17) ಬೆಳಗ್ಗೆ ಅನುಮತಿ ನೀಡಿರುವುದಾಗಿ ಟಿವಿ ಮಾಧ್ಯಮಗಳ ವರದಿ ತಿಳಿಸಿದೆ.
ದೂರುದಾರ, ಸಾಮಾಜಿಕ ಹೋರಾಟಗಾರ ಟಿಜೆ ಅಬ್ರಹಾಂ ಟಿವಿ9 ಜತೆ ಮಾತನಾಡುತ್ತ, ಸಿಎಂ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವುದು ಒಳ್ಳೆಯ ಸಂಗತಿಯಾಗಿದೆ ಎಂದು ತಿಳಿಸಿದ್ದಾರೆ.
ಸಿಎಂ ವಿರುದ್ಧ ಪ್ರಾಸಿಕ್ಯೂಷನ್…ಮುಂದೇನು?
ಪ್ಯಾಸಿಕ್ಯೂಷನ್ ಎಂದರೆ ತನಿಖೆ ನಡೆಸಲು ಕಾನೂನು ಬದ್ಧ ಅನುಮತಿ ನೀಡುವುದಾಗಿದೆ. ಅದರಲ್ಲೂ ಮುಖ್ಯಮಂತ್ರಿಯ ವಿರುದ್ಧ ಕಾನೂನು ಕ್ರಮ ಎನ್ನುವುದು ಭಾರತೀಯ ರಾಜ್ಯದಲ್ಲಿ ಸರ್ಕಾರದ ಮುಖ್ಯಸ್ಥರಾಗಿರುವ ಹಾಲಿ ಮುಖ್ಯಮಂತ್ರಿಯ ವಿರುದ್ಧ ಅಪರಾಧ ಚಟುವಟಿಕೆಗಳು ಅಥವಾ ಕಾನೂನಿನ ಉಲ್ಲಂಘನೆಗಾಗಿ ಕಾನೂನು ಪ್ರಕ್ರಿಯೆಗಳನ್ನು ಒಳಗೊಂಡಿರುತ್ತದೆ. ಸಿಎಂ ಸರ್ಕಾರದ ಮುಖ್ಯಸ್ಥರಾಗಿದ್ದು, ಸಂವಿಧಾನಾತ್ಮಕವಾಗಿ, ಆಡಳಿತಾತ್ಮಕವಾಗಿ ಉನ್ನತ ಶ್ರೇಣಿಯ ಸ್ಥಾನ ಹೊಂದಿರುವುದರಿಂದ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡುವುದು ಸಾಂವಿಧಾನಿಕ ಕ್ರಮವಾಗಿದೆ.
ತನಿಖೆ ಹೇಗೆ ನಡೆಯಲಿದೆ?
ಪ್ರಾಸಿಕ್ಯೂಷನ್ಗೆ ಮುನ್ನ, ಕೇಂದ್ರೀಯ ತನಿಖಾ ದಳ (ಸಿಬಿಐ) ಅಥವಾ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ದಂತಹ ಏಜೆನ್ಸಿಗಳು ಸಾಮಾನ್ಯವಾಗಿ ಸಂಪೂರ್ಣ ತನಿಖೆಯನ್ನು ನಡೆಸುತ್ತವೆ. ತನಿಖೆಯು ಆರೋಪಗಳನ್ನು ಬೆಂಬಲಿಸಲು ಸಾಕಷ್ಟು ಸಾಕ್ಷ್ಯಗಳನ್ನು ಸಂಗ್ರಹಿಸಬೇಕು.
ರಾಜ್ಯಪಾಲರು ಸಿಎಂ ವಿರುದ್ಧ ಪ್ರಾಸಿಕ್ಯೂಷನ್ಗೆ ಅನುಮೋದಿಸಿದರೆ, ಪ್ರಕರಣವು ನ್ಯಾಯಾಲಯಕ್ಕೆ ಹೋಗುತ್ತದೆ. ಅಲ್ಲಿ ಮುಖ್ಯಮಂತ್ರಿಯನ್ನು ಇತರ ಆರೋಪಿಗಳಂತೆ ಪರಿಗಣಿಸಲಾಗುತ್ತದೆ. ನ್ಯಾಯಾಲಯದ ಪ್ರಕ್ರಿಯೆಯು ಆರೋಪ ಸಾಬೀತುಪಡಿಸುವುದು ಸಾಕ್ಷ್ಯವನ್ನು ಕಲೆಹಾಕುವುದು ಮತ್ತು ವಿಚಾರಣೆಯನ್ನು ನಡೆಸುವುದು ಒಳಗೊಂಡಿರುತ್ತದೆ.
ರಾಜೀನಾಮೆ ನೀಡಬೇಕಾಗುತ್ತದೆಯೇ?
ಮುಖ್ಯಮಂತ್ರಿಯ ವಿರುದ್ಧದ ಕಾನೂನು ಕ್ರಮವು ಸಾಮಾನ್ಯವಾಗಿ ಗಮನಾರ್ಹ ರಾಜಕೀಯ ಪರಿಣಾಮಗಳನ್ನು ಹೊಂದಿರುತ್ತದೆ, ಏಕೆಂದರೆ ಇದು ರಾಜೀನಾಮೆ ಬೇಡಿಕೆಗಳಿಗೆ ಕಾರಣವಾಗಬಹುದು, ರಾಜಕೀಯ ಅಸ್ಥಿರತೆ ಮತ್ತು ರಾಜ್ಯದ ಆಡಳಿತದ ಮೇಲೆ ಪರಿಣಾಮ ಬೀರುವ ಸಾಧ್ಯತೆಗೆ ಎಡೆಮಾಡಿಕೊಡಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.