Udupi; ಎಪಿಎಂಸಿ ನಿವೇಶನ ಮಾರಾಟ ವಿರೋಧಿಸಿ ವರ್ತಕರಿಂದ ಪ್ರತಿಭಟನೆ, ಉರುಳುಸೇವೆ
Team Udayavani, Aug 17, 2024, 1:26 PM IST
ಉಡುಪಿ: ಆದಿಉಡುಪಿ (ಎಪಿಎಂಸಿ) ಕೃಷಿ ಉತ್ಪನ್ನ ಮಾರುಕಟ್ಟೆಯ ನಿವೇಶನ ಮಾರಾಟ ವಿರೋಧಿಸಿ ವರ್ತಕರು ಶನಿವಾರ (ಆ.17) ಉರುಳು ಸೇವೆ ಮಾಡುವ ಮೂಲಕ ಪ್ರತಿಭಟನೆ ನಡೆಸಿದರು.
ಉಡುಪಿಯ ಮಲ್ಪೆ ರಸ್ತೆಯಲ್ಲಿರುವ ಹಾದಿ ಉಡುಪಿ ಕೃಷಿ ಉತ್ಪನ್ನಗಳ ಮಾರುಕಟ್ಟೆಯ ನಿವೇಶನ ಮಾರಾಟ ವಿರೋಧಿಸಿ ವರ್ತಕರ ಪ್ರತಿಭಟನೆ ನಡೆಸಿದರು.
ಮಾರುಕಟ್ಟೆಯ ಪ್ರವೇಶ ದ್ವಾರದಲ್ಲಿ ಜಮಾಯಿಸಿದ್ದ ವರ್ತಕರು ಎಪಿಎಂಸಿ ಅಧಿಕಾರಿಗಳ ವಿರುದ್ಧ ಘೋಷಣೆ ಕೂಗಿದರು. ಎಪಿಎಂಸಿ ಅಧಿಕಾರಿಗಳ ನಡೆಯನ್ನು ಖಂಡಿಸಿ ಕಪ್ಪು ಬಾವುಟ ಪ್ರದರ್ಶನ ಮಾಡಿದರು.
ಎಪಿಎಂಸಿಯ 11 ನಿವೇಶನದ ಸರ್ವೇಗೆ ಆಗಮಿಸಿದ್ದ ಅಧಿಕಾರಿಗಳನ್ನು ವರ್ತಕರು ತರಾಟೆಗೆ ತೆಗೆದುಕೊಂಡರು. ನೋಟಿಸ್ ನೀಡದೆ ಸರ್ವೇ, ಸರಕಾರಿ ಜಾಗವನ್ನು ಯಾವುದೇ ಕಾರಣಕ್ಕೂ ಮಾರಾಟ ಮಾಡಲು ಅವಕಾಶ ನೀಡುವುದಿಲ್ಲ. ಇದು ಕಾನೂನು ಬಾಹಿರ, ರೈತರ ನೋವನ್ನು ಕೇಳುವವರಿಲ್ಲ, ಈ ಕೂಡಲೇ ಅಧಿಕಾರಿಗಳು ಸೂಕ್ತ ಕ್ರಮ ತೆಗೆದುಕೊಳ್ಳುವಂತೆ ವರ್ತಕರು ಆಗ್ರಹಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.