Bengaluru: ತವರಿಗೆ ಹಣ ಕಳುಹಿಸಿ ದರೋಡೆ ಕಥೆ ಕಟ್ಟಿದ್ದ ಪಿಎಸ್ಐ ಪತ್ನಿ !
ಅಶೋಕನಗರ ಠಾಣೆಯ ಪಿಎಸ್ಐ ಪತ್ನಿಯಿಂದ ನಾಟಕ
Team Udayavani, Aug 17, 2024, 3:09 PM IST
ಬೆಂಗಳೂರು: ತವರು ಮನೆಗೆ ಹಣ ಕಳುಹಿಸಿ ದರೋಡೆಯಾಗಿದೆ ಎಂದು ನಾಟಕವಾಡಿದ್ದ ಪಿಎಸ್ಐ ಪತ್ನಿಯೊಬ್ಬರ ಅಸಲಿ ಸಂಗತಿ ಪೊಲೀಸರ ತನಿಖೆ ವೇಳೆ ಬೆಳಕಿಗೆ ಬಂದಿದೆ. ಇದರ ಬೆನ್ನಲ್ಲೇ ಸುಳ್ಳು ದೂರು ನೀಡಿದ ಪಿಎಸ್ಐ ಪತ್ನಿ ಮೇಲೆ ಕಾನೂನು ಕ್ರಮ ಕೈಗೊಳ್ಳಲು ಪೊಲೀಸರು ಮುಂದಾಗಿದ್ದಾರೆ.
ಹಲವು ದಿನಗಳ ಹಿಂದೆ ಅಶೋಕನಗರ ಪೊಲೀಸ್ ಠಾಣೆಯ ಪಿಎಸ್ಐಯೊಬ್ಬರು ಕೋರಮಂಗಲದಲ್ಲಿರುವ ತಮ್ಮ ಮನೆಯಲ್ಲಿ ಕಳ್ಳತನ ಆಗಿದೆ ಎಂದು ಕೋರಮಂಗಲ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಮನೆಗೆ ನುಗ್ಗಿದ್ದ ಕಳ್ಳರು ಪಿಎಸ್ಐ ಪತ್ನಿ ಕೈ ಕಾಲು ಕಟ್ಟಿ ಹಾಕಿ 12 ಲಕ್ಷ ರೂ.ನಗದು ಹಾಗೂ ಚಿನ್ನಾಭರಣ ದೋಚಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖವಾಗಿತ್ತು. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ತನಿಖೆ ನಡೆಸಿದ್ದರು. ಆಗ ಕಳ್ಳತನವಾಗಿರುವ ಬಗ್ಗೆ ಹಲವು ಅನುಮಾನಗಳು ಹುಟ್ಟಿಕೊಂಡಿದ್ದವು.
ತನಿಖೆ ವೇಳೆ ಸಿಸಿ ಕ್ಯಾಮೆರಾ ಪರಿಶೀಲಿಸಿದಾಗ ದೂರಿನಲ್ಲಿ ಉಲ್ಲೇಖೀಸಿರುವ ಸಮಯದಲ್ಲಿ ಮನೆಯ ಅಕ್ಕ ಪಕ್ಕ ಯಾವುದೇ ಕಳ್ಳರ ಓಡಾಟದ ಕಂಡು ಬಂದಿರಲಿಲ್ಲ. ನಂತರ ಪೊಲೀಸರು ಪಿಎಸ್ಐ ಕುಟುಂಬಸ್ಥರು ಮತ್ತು ಸಂಬಂಧಿಕರನ್ನು ವಿಚಾರಣೆ ನಡೆಸಿದಾಗ ಕಳ್ಳತನವೇ ನಡೆದಿರಲಿಲ್ಲ. ಪಿಎಸ್ಐ ಪತ್ನಿ ತನ್ನ ತವರು ಮನೆಯವರಿಗೆ ಆರ್ಥಿಕ ಸಹಾಯ ಮಾಡಲು ಮನೆಯಲ್ಲಿದ್ದ 10 ಲಕ್ಷ ರೂ. ಹಾಗೂ ಚಿನ್ನ ಕೊಟ್ಟಿದ್ದರು. ಪತಿಯಿಂದ ವಿಷಯ ಮರೆಮಾಚಲು ಈ ರೀತಿ ದರೋಡೆ ಕಥೆ ಕಟ್ಟಿದ್ದರು ಎಂದು ತಿಳಿದು ಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಪ್ರೇಯಸಿಯ ಪೀಡಿಸುತ್ತಿದ್ದವನಿಗೆ ಪ್ರಿಯಕರನಿಂದ ಚಾಕು ಇರಿತ!
Bengaluru: ಮೆಜೆಸ್ಟಿಕ್ ಬಳಿ ಬಿಎಂಟಿಸಿ ಬಸ್ ಡಿಕ್ಕಿ; ಅಂಗವಿಕಲ ಸ್ಥಳದಲ್ಲೇ ಸಾವು
Bengaluru: ಪರಪ್ಪನ ಅಗ್ರಹಾರ ಕಾರಾಗೃಹದಲ್ಲಿ ಮತ್ತೆ 9 ಮೊಬೈಲ್ ಫೋನ್ಗಳು ಪತ್ತೆ!
Leopard: ಎಲೆಕ್ಟ್ರಾನಿಕ್ ಸಿಟಿ ಎನ್ಟಿಟಿಎಫ್ ಆವರಣ ಬಳಿ ತಡರಾತ್ರಿ ಚಿರತೆ ಪ್ರತ್ಯಕ್ಷ
Anekal: ಶಾಲಾ ಬಸ್ ಅಡ್ಡಗಟ್ಟಿ ಚಾಲಕನಿಗೆ ತೀವ್ರ ಹಲ್ಲೆ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.