Video; ತಂದೆಯಂತೆ ಮಗ…: ಮಹಾರಾಜ ಟ್ರೋಫಿಯಲ್ಲಿ ಸಿಕ್ಸರ್ ಸಿಡಿಸಿ ಮಿಂಚಿದ ದ್ರಾವಿಡ್ ಪುತ್ರ
Team Udayavani, Aug 17, 2024, 4:52 PM IST
ಬೆಂಗಳೂರು: ಕರ್ನಾಟಕದ ಟಿ20 ಕ್ರಿಕೆಟ್ ಟೂರ್ನಮೆಂಟ್ ಮಹಾರಾಜ ಟ್ರೋಫಿ ಕ್ರಿಕೆಟ್ (Maharaja T20 KSCA tournament) ಪಂದ್ಯಾವಳಿಯು ಆರಂಭವಾಗಿದೆ. ಇದೇ ಮೊದಲ ಬಾರಿಗೆ ಭಾರತ ತಂಡದ ಮಾಜಿ ನಾಯಕ, ಮಾಜಿ ಕೋಚ್ ರಾಹುಲ್ ದ್ರಾವಿಡ್ ಅವರ ಪುತ್ರ ಸಮಿತ್ ದ್ರಾವಿಡ್ (Samit Dravid) ಅವರು ಇದೇ ಮೊದಲ ಬಾರಿಗೆ ಮಹಾರಾಜ ಟ್ರೋಫಿಯಲ್ಲಿ ಕಾಣಿಸಿಕೊಂಡಿದ್ದಾರೆ.
ಮೈಸೂರು ವಾರಿಯರ್ಸ್ ತಂಡದ ಪರವಾಗಿ ಕಣಕ್ಕಿಳಿದಿರುವ ಸಮಿತ್, ಬೆಂಗಳೂರು ಬ್ಲಾಸ್ಟರ್ಸ್ ವಿರುದ್ಧದ ಪಂದ್ಯದಲ್ಲಿ ಭರ್ಜರಿ ಸಿಕ್ಸರ್ ಸಿಡಿಸಿ ಮಿಂಚಿದ್ದರು.
ಸಮಿತ್ ಅವರ ಶಾಟ್ ಮತ್ತು ದೇಹದ ಭಂಗಿಯು ಅಭಿಮಾನಿಗಳಿಗೆ ಅವರ ತಂದೆ ರಾಹುಲ್ ಅವರನ್ನು ನೆನಪಿಸಿತು. ಇದರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ದ್ರಾವಿಡ್ ಸರ್ ಮಗ ಗುರು ಇವ್ರು..🤯🔥
ಈ ಸಿಕ್ಸ್ ಗೆ ಒಂದು ಚಪ್ಪಾಳೆ ಬರ್ಲೇಬೇಕು..👏👌
📺 ನೋಡಿರಿ Maharaja Trophy KSCA T20 | ಬೆಂಗಳೂರು vs ಮೈಸೂರು | LIVE NOW #StarSportsKannada ದಲ್ಲಿ#MaharajaTrophyOnStar@maharaja_t20 pic.twitter.com/ROsXMQhtwO
— Star Sports Kannada (@StarSportsKan) August 16, 2024
ಆದರೆ ಸಮಿತ್ ದೊಡ್ಡ ಸ್ಕೋರ್ ಗಳಿಸಲು ವಿಫಲರಾದರು. ಒಂದು ಸಿಕ್ಸರ್ ಬಾರಿಸಿದರೂ ಅವರು ಒಟ್ಟು ಗಳಿಸಿದ್ದು ಏಳು ರನ್ ಮಾತ್ರ. ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಮಳೆ ಅಡ್ಡಿಪಡಿಸಿದ ಪಂದ್ಯದಲ್ಲಿ ಮೈಸೂರು ವಾರಿಯರ್ಸ್ ತಂಡವು ಬೆಂಗಳೂರು ಬ್ಲಾಸ್ಟರ್ಸ್ ವಿರುದ್ದ ನಾಲ್ಕು ವಿಕೆಟ್ ಗಳಿಂದ ಸೋಲು ಕಂಡಿತು.
ಮೊದಲು ಬ್ಯಾಟಿಂಗ್ ಮಾಡಿದ ಮೈಸೂರು ವಾರಿಯರ್ಸ್ 18 ಓವರ್ ಗಳಲ್ಲಿ 6 ವಿಕೆಟ್ ನಷ್ಟಕ್ಕೆ 182 ರನ್ ಗಳಿಸಿತು. ಮೈಸೂರು ಪರವಾಗಿ ಹರ್ಷಿಲ್ ಧರ್ಮಾನಿ 50 ರನ್ ಗಳಿಸಿದರೆ, ಮನೋಜ್ ಭಾಂಡಗೆ ಅಜೇಯ 58 ರನ್ ಗಳಿಸಿದರು. ಗುರಿ ಬೆನ್ನತ್ತಿದ್ದ ಬೆಂಗಳೂರು ತಂಡ ಪರವಾಗಿ ಭುವನ್ ರಾಜು 51 ರನ್, ಎಲ್ ಆರ್ ಚೇತನ್ 33 ರನ್, ಸೂರಜ್ ಅಹುಜಾ 39 ರನ್ ಗಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Test Cricket : ಮೆಂಡಿಸ್ದ್ವಯರಿಂದ ಚೇತರಿಸಿಕೊಂಡ ಶ್ರೀಲಂಕಾ
Duleep Trophy Cricket: ಇಂದಿನಿಂದ 3ನೇ ಸುತ್ತಿನ ಸ್ಪರ್ಧೆ
Athletics: ದ.ಕ. ಜಿಲ್ಲೆ ಸಮಗ್ರ ಚಾಂಪಿಯನ್
Cricket: ಒಂದೇ ಫ್ರೇಮ್ನಲ್ಲಿ ಗಂಭೀರ್- ಕೊಹ್ಲಿ; ಹಳೆ ದಿನಗಳನ್ನು ಸ್ಮರಿಸಿದ ಸ್ನೇಹಿತರು
T20 world cup 2024; ವನಿತೆಯರ ವಿಶ್ವಕಪ್ ನಿಧಿಯಲ್ಲಿ ಭಾರೀ ಏರಿಕೆ, ಸಮಾನ ಬಹುಮಾನ: ಐಸಿಸಿ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Test Cricket : ಮೆಂಡಿಸ್ದ್ವಯರಿಂದ ಚೇತರಿಸಿಕೊಂಡ ಶ್ರೀಲಂಕಾ
Udupi: ಭಿಕ್ಷುಕರ ಪರಿಹಾರ ಕೇಂದ್ರಕ್ಕೆ ಜಿಲ್ಲಾಡಳಿತದಲ್ಲಿ ಭಿಕ್ಷೆ ಬೇಡಬೇಕಾದ ಸ್ಥಿತಿ
Daily Horoscope: ಮನೋಬಲವನ್ನು ಹೆಚ್ಚಿಸಿ ಕೊಂಡಷ್ಟೂ ಹೆಚ್ಚು ಅನುಕೂಲ
Health Department: ಮಂಗನ ಕಾಯಿಲೆ ಆತಂಕ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿಶೇಷ ನಿಗಾ
Karnataka; ರಾಜ್ಯಪಾಲರ ಅಧಿಕಾರಕ್ಕೆ ರಾಜ್ಯ ಸರಕಾರ ಅಂಕುಶ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.