GOAT Trailer: ‘ಗೋಟ್ʼ ಟ್ರೇಲರ್ನಲ್ಲಿ ʼಗಾಂಧಿʼಯಾಗಿ ಸಖತ್ ಸ್ಟಂಟ್ ಮಾಡಿದ ದಳಪತಿ ವಿಜಯ್
Team Udayavani, Aug 17, 2024, 5:54 PM IST
ಚೆನ್ನೈ: ಚೆನ್ನೈ: ಕಾಲಿವುಡ್ ಸ್ಟಾರ್ ದಳಪತಿ ವಿಜಯ್ (Thalapathy Vijay) ಅವರ ಬಹುನಿರೀಕ್ಷಿತ ಸಿನಿಮಾ ʼದಿ ಗ್ರೇಟೆಸ್ಟ್ ಆಫ್ ಆಲ್ ಟೈಮ್ʼ (The Greatest of All Time) ಸಿನಿಮಾದ ಟ್ರೇಲರ್ ಶನಿವಾರ(ಆ.17ರಂದು) ರಿಲೀಸ್ ಆಗಿದೆ.
ದಳಪತಿ ಸಿನಿಮಾ ವೃತ್ತಿ ಬದುಕಿಗೆ ಇನ್ನೇನು ಕೆಲವೇ ವರ್ಷಗಳಲ್ಲಿ ವಿದಾಯ ಹೇಳುತ್ತಾರೆ ಎನ್ನುವ ಮಾತಿನ ನಡುವೆ ಅನೌನ್ಸ್ ಆದ ʼಗೋಟ್ʼ ಸಿನಿಮಾ ಅವರ ಅಭಿಮಾನಿಗಳಲ್ಲಿ ಸಾಕಷ್ಟು ಕುತೂಹಲವನ್ನು ಹೆಚ್ಚಿಸಿದೆ.
ಸಿನಿಮಾದಲ್ಲಿ ವಿಜಯ್ ಎರಡು ಪಾತ್ರಗಳಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಈಗಾಗಲೇ ವಿಭಿನ್ನ ಪೋಸ್ಟರ್ಗಳಿಂದ ಸದ್ದು ಮಾಡಿರುವ ʼಗೋಟ್ʼ ಟ್ರೇಲರ್ ರಿಲೀಸ್ ಮಾಡಿ ಪ್ರೇಕ್ಷಕರ ಗಮನ ಸೆಳೆದಿದೆ.
ಇದನ್ನೂ ಓದಿ: Fauji Movie: ಪ್ರಭಾಸ್ ʼಫೌಜಿʼ ಮುಹೂರ್ತಕ್ಕೆ ಸಾಥ್ ಕೊಟ್ಟ ನೀಲ್; ಫಸ್ಟ್ ಲುಕ್ ಔಟ್
ಟ್ರೇಲರ್ ನಲ್ಲಿ ಏನಿದೆ?: ʼಗಾಂಧಿʼ ಎನ್ನುವಾತ (ದಳಪತಿ ವಿಜಯ್) ವಿಧ್ವಂಸಕ ಕೃತ್ಯಗಳನ್ನು ತಡೆಯುವ ಸ್ಪೈ ಏಜೆಂಟ್ ಆಗಿ ಕಾಣಿಸಿಕೊಂಡಿದ್ದಾನೆ. ನಿವೃತ್ತಿಯಾದ ತನ್ನ ತಂದೆಯ ಜತೆ ಸೇರಿಕೊಂಡು, ಕುಟುಂಬಕ್ಕೆ ಬರುವ ಅಪಾಯವನ್ನು ತಪ್ಪಿಸಿ, ಕೊಟ್ಟ ಟಾಸ್ಕ್ ಪೂರ್ತಿ ಮಾಡುವ ಸಾಹಸಕ್ಕೆ ಮುಂದಾಗುವುದನ್ನು ತೋರಿಸಲಾಗಿದೆ.
ʼಗಾಂಧಿʼ ಇಲ್ಲಿ ಅಪಾಯವನ್ನು ತಡೆಯುವ ಹೀರೋ ಆಗುವುದರ ಜತೆಗೆ ಕುಟುಂಬವನ್ನು ರಕ್ಷಿಸುವ ಧೀರನಾಗಿಯೂ ಕಾಣಿಸಿಕೊಂಡಿದ್ದಾರೆ. ವಿದೇಶದಲ್ಲಿ ಸಿನಿಮಾ ಶೂಟ್ ಆಗಿದ್ದು, ಆ್ಯಕ್ಷನ್ ದೃಶ್ಯಾವಳಿಗಳು ಅದ್ಧೂರಿಯಾಗಿ ಮೂಡಿಬಂದಿದೆ.
ಮೇಲ್ನೋಟಕ್ಕೆ ಇದೊಂದು ಸ್ಪೈ ಏಜೆಂಟ್ ಸಾಹಸದ ಕಥೆಯ ಸಿನಿಮಾವಾಗಿ ಕಾಣುತ್ತದೆ. ವಿಜಯ್ ಹೊರತುಪಡಿಸಿದರೆ ಜಯರಾಮ್ ಅವರು ಟ್ರೇಲರ್ನಲ್ಲಿ ಮಿಂಚಿದ್ದಾರೆ.
ವೆಂಕಟ್ ಪ್ರಭು ನಿರ್ದೇಶನದ ಈ ಸಿನಿಮಾದಲ್ಲಿ ವಿಜಯ್ ಜೊತೆ ಮೀನಾಕ್ಷಿ ಚೌಧರಿ, ಯೋಗಿ ಬಾಬು, ಜಯರಾಮ್, ಪ್ರಭುದೇವ, ಲೈಲಾ ಮುಂತಾದವರು ಕಾಣಿಸಿಕೊಳ್ಳಲಿದ್ದಾರೆ. ಬಹುನಿರೀಕ್ಷಿತ ʼಗ್ರೇಟೆಸ್ಟ್ ಆಫ್ ಆಲ್ ಟೈಮ್ʼ ಚಿತ್ರ ಸೆ.5 ರಂದು ವರ್ಲ್ಡ್ ವೈಡ್ ತೆರೆ ಕಾಣಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jani Master: ಲೈಂಗಿಕ ಕಿರುಕುಳ ಪ್ರಕರಣ; ನೃತ್ಯ ಸಂಯೋಜಕ ಜಾನಿ ಮಾಸ್ಟರ್ ಬಂಧನ
Kanguva Movie: ಸೂರ್ಯ ಪ್ಯಾನ್ ಇಂಡಿಯಾ ʼಕಂಗುವʼ ಹೊಸ ರಿಲೀಸ್ ಡೇಟ್ ಔಟ್
Viral Video: ಮೆದುಳಿನ ಸರ್ಜರಿ ನಡೆಸುವ ವೇಳೆ ಜೂ.ಎನ್ ಟಿಆರ್ ಸಿನಿಮಾ ವೀಕ್ಷಿಸಿದ ರೋಗಿ.!
Actress Sakunthala: ಹೃದಯಾಘಾತದಿಂದ ಬಹುಭಾಷಾ ನಟಿ ʼಸಿ.ಐ.ಡಿ. ಶಕುಂತಲಾʼ ನಿಧನ
Poonam Kaur: ಖ್ಯಾತ ನಿರ್ದೇಶಕ ತ್ರಿವಿಕ್ರಮ್ ಶ್ರೀನಿವಾಸ್ ವಿರುದ್ಧ ನಟಿ ಪೂನಂ ಗಂಭೀರ ಆರೋಪ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Kundapura: ಗಾಂಧಿ ಮೈದಾನದಲ್ಲಿ ಸಮಸ್ಯೆಗಳದ್ದೇ ಆಟ!
ರಸ್ತೆ ಪಕ್ಕ ನಡೆದುಕೊಂಡು ಹೋಗುತ್ತಿದ್ದವರ ಮೇಲೆ ಲಾರಿ ಹರಿದು ಇಬ್ಬರು ಸಾವು
Chikkaballapura; ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ದಲಿತ ಸಂಘಟನೆಗಳ ಪ್ರತಿಭಟನೆ
Bajpe ಬಸ್ ನಿಲ್ದಾಣ ಕಟ್ಟಡ ಪೂರ್ಣ; 90 ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣ
Jammu and Kashmir:ಕಲಂ 370 ಪುನರ್ ಜಾರಿ-ಕಾಂಗ್ರೆಸ್, ಎನ್ ಸಿ ನಿಲುವಿಗೆ ಪಾಕ್ ಬೆಂಬಲ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.