Udupi: ಕೃಷ್ಣನೂರಿನಲ್ಲಿ ಶ್ರೀಕೃಷ್ಣಜನ್ಮಾಷ್ಟಮಿಗೆ ಸಿದ್ಧತೆ


Team Udayavani, Aug 17, 2024, 8:30 PM IST

Udupi: ಕೃಷ್ಣನೂರಿನಲ್ಲಿ ಶ್ರೀಕೃಷ್ಣಜನ್ಮಾಷ್ಟಮಿಗೆ ಸಿದ್ಧತೆ

ಉಡುಪಿ: ಕೃಷ್ಣನೂರು ಉಡುಪಿಯಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಆ.26ರಂದು ನಡೆಯಲಿದ್ದು, ಆ.27 ರಂದು ಶ್ರೀಕೃಷ್ಣ ಲೀಲೋತ್ಸವ(ವಿಟ್ಲಪಿಂಡಿ)ನಡೆಯಲಿದೆ.

ಇದಕ್ಕಾಗಿ ರಥಬೀದಿಯಲ್ಲಿ ಸಿದ್ಧತೆ ಆರಂಭಗೊಂಡಿದ್ದು, ವಿಟ್ಲಪಿಂಡಿಯಂದು ಗೋವಳರು ಮೊಸರು ಕುಡಿಕೆಗಳನ್ನು ಒಡೆಯಲು ಗುರ್ಜಿಗಳ ಕಂಬವನ್ನು ನೆಡುವ ಕೆಲಸ ನಡೆಯುತ್ತಿದೆ.

15 ಗುರ್ಜಿಗಳನ್ನು ರಥಬೀದಿಯಲ್ಲಿ ನೆಡಲಾಗುತ್ತದೆ. ಇದರಲ್ಲಿ ಎರಡು ಮಂಟಪ ಮತ್ತು ಏಳು ಗುರ್ಜಿಗಳು ಕೃಷ್ಣಮಠಕ್ಕೆ ಸಂಬಂಧಿಸಿದವು.

ಏಳು ಗುರ್ಜಿಗಳು ಏಳು ಮಠಗಳಿಗೆ, ಎರಡು ಮಂಟಪಗಳು ಪರ್ಯಾಯ ಮಠ ಮತ್ತು ಶ್ರೀಕೃಷ್ಣಮಠಕ್ಕೆ ಸಂಬಂಧಿಸಿವೆ. ಚಂದ್ರಮೌಳೀಶ್ವರ ದೇವಸ್ಥಾನದ ಎದುರಿನ ಮೂರು, ರಥ ನಿಲ್ಲುವ ಮಂಟಪದ ಬಳಿಕದ ಮೂರು ಗುರ್ಜಿಗಳು ಹೀಗೆ ತಲಾ ಮೂರು ಗುರ್ಜಿಗಳು ಅನಂತೇಶ್ವರ ಮತ್ತು ಚಂದ್ರಮೌಳೀಶ್ವರ ದೇವಸ್ಥಾನಕ್ಕೆ ಸಂಬಂಧಿಸಿದವು.

ಉಳಿದಂತೆ ಸಾಂಸ್ಕೃತಿಕ ಕಾರ್ಯಕ್ರಮಗಳ ಆಯೋಜನೆ, ಮುದ್ದುಕೃಷ್ಣ, ರಂಗೋಲಿ, ಚಿತ್ರಕಲೆ ಸಹಿತ ಮೊದಲಾದ ಸ್ಪರ್ಧೆಗಳನ್ನು ಕೃಷ್ಣಮಠದಲ್ಲಿ ಆಯೋಜಿಸಲಾಗುತ್ತಿದೆ. ಇದೇ ಮೊದಲ ಬಾರಿಗೆ ಪರ್ಯಾಯ ಮಠದ ವತಿಯಿಂದ ನಗದು ಬಹುಮಾನವನ್ನು ಪೌರಾಣಿಕ, ಹುಲಿವೇಷ, ಜಾನಪದ ನೃತ್ಯಗಳಿಗೆ ಕೊಡಲಾಗುತ್ತಿದೆ. ಶ್ರೀ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ಮಾಸೋತ್ಸವದ ನಿಮಿತ್ತ ಆ.1ರಿಂದಲೇ ವಿವಿಧ ಕಾರ್ಯಕ್ರಮ, ಸ್ಪರ್ಧೆ ಇತ್ಯಾದಿ ಆರಂಭಗೊಂಡಿದೆ.

ಕೃಷ್ಣಾಷ್ಟಮಿ ಸಂಭ್ರಮಕ್ಕೆ ಪ್ರತ್ಯೇಕ ಸಮಿತಿಗಳನ್ನು ರಚಿಸಿ ಪ್ರಮುಖರಿಗೆ ಜವಾಬ್ದಾರಿ ವಹಿಸಲಾಗಿದೆ. ಪರ್ಯಾಯ ಪುತ್ತಿಗೆ ಮಠಾಧೀಶರಾದ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರ ಸಲಹೆ, ಮಾರ್ಗದರ್ಶನದಂತೆ ತಯಾರಿ ಕಾರ್ಯ ಆರಂಭಗೊಂಡು, ಈಗಾಗಲೆ ಹಲವು ಪೂರ್ವಭಾವಿ ಸಭೆಗಳು ನಡೆದಿದೆ.

ಹುಲಿವೇಷಕ್ಕೆ ತಂಡಗಳ ಸಜ್ಜು
ನಗರದಲ್ಲಿ ಹುಲಿ ವೇಷ ತಂಡಗಳು ಅಷ್ಟಮಿಗೆ ಹುಲಿ ಕುಣಿತ ಪ್ರದರ್ಶಿಸಲು ಸಜ್ಜುಗೊಳ್ಳುತ್ತಿವೆ. ನಗರ, ಗ್ರಾಮಾಂತರ ಭಾಗದ ಖ್ಯಾತ ಹುಲಿವೇಷಧಾರಿಗಳ ತಂಡದ ಪೋಸ್ಟರ್‌ಗಳು ರಾರಾಜಿಸುತ್ತಿದೆ. ವಿವಿಧ ಸಂಘ, ಸಂಸ್ಥೆಗಳು ಕೃಷ್ಣ ವೇಷ ಸ್ಪರ್ಧೆ ಮತ್ತು ಹುಲಿ ಕುಣಿತ ಸ್ಪರ್ಧೆ ಆಯೋಜಿಸಲು ತಯಾರಿ ನಡೆಸಿವೆ.

ಭಕ್ತರು, ಪ್ರವಾಸಿಗರು
ಶ್ರೀಕೃಷ್ಣ ಜನ್ಮಾಷ್ಟಮಿ, ವಿಟ್ಲಪಿಂಡಿ ಉತ್ಸವ ಕಣ್ತುಂಬಿಕೊಳ್ಳಲು ಈ ಬಾರಿ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು, ಪ್ರವಾಸಿಗರು ಆಗಮಿಸುವ ಸಾಧ್ಯತೆ ಇದೆ. 4ನೇ ಶನಿವಾರ, ರವಿವಾರ ರಜೆ ಇರುವುದರಿಂದ ಮತ್ತು ಆ.26-27 ಹೆಚ್ಚುವರಿ ರಜೆ ಇದ್ದಲ್ಲಿ ಸ್ಥಳೀಯರು ಸಹಿತ, ಹೊರ ಜಿಲ್ಲೆ, ರಾಜ್ಯಗಳಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಆಗಮಿಸುವ ಸಾಧ್ಯತೆ ಇದೆ. ಈಗಾಗಲೆ ಬಹುತೇಕ ಹೊಟೇಲ್‌, ಛತ್ರ, ಲಾಡ್ಜ್ಗಳಲ್ಲಿ ದೂರದ ಊರಿನ ಭಕ್ತರು ಕೊಠಡಿಗಳನ್ನು ಕಾಯ್ದಿರಿಸಿದ್ದಾರೆ.

ಟಾಪ್ ನ್ಯೂಸ್

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Modi (2)

PM ಮೋದಿ ಅಮೆರಿಕ ಪ್ರವಾಸ; ಮಣಿಪುರಕ್ಕೆ ಹೋಗುವುದಿಲ್ಲವೇಕೆ?:ಕಾಂಗ್ರೆಸ್ ಪ್ರಶ್ನೆ

High Court: ಮಹಿಳೆ ಅಪಹರಣ ಕೇಸ್‌; ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

High Court: ಮಹಿಳೆ ಅಪಹರಣ ಕೇಸ್‌; ಎಚ್‌.ಡಿ.ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

11

Eshwara Khandre: ಮಹದಾಯಿಗೆ ಅನುಮತಿ ಸಿಗೋವರೆಗೂ ಮರ ಕಡಿಯಲು ಬಿಡಲ್ಲ

H.D.Kumaraswamy

H. D. Kumaraswamy: ರಾಜಕೀಯ ಮಾಡಲು, ಬೆಂಕಿ ಹಚ್ಚಲು ಬಂದಿಲ್ಲ

1-frr

BJP ಶಾಸಕ ಮುನಿರತ್ನಗೆ ಷರತ್ತುಬದ್ಧ ಜಾಮೀನು; ಆದರೂ ತಪ್ಪಿಲ್ಲ ಸಂಕಷ್ಟ!

HP ಯಿಂದ ಹೊಸ ಪ್ರಿಂಟರ್‌ಗಳ ಬಿಡುಗಡೆ

HP ಯಿಂದ ಹೊಸ ಪ್ರಿಂಟರ್‌ಗಳ ಬಿಡುಗಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udayavani.com “ನಮ್ಮನೆ ಕೃಷ್ಣ”: ಮೆಚ್ಚುಗೆ ಗಳಿಸಿದ 3ನೇ ರೀಲ್ಸ್ ಪ್ರಸಾರ

Udayavani.com “ನಮ್ಮನೆ ಕೃಷ್ಣ”: ತೃತೀಯ ಬಹುಮಾನ ಗಳಿಸಿದ ರೀಲ್ಸ್

ಮುನಿಯಾಲ್‌ ಇನ್ಸ್ಟಿಟ್ಯೂಟ್‌ ಆಫ್ ಆಯುರ್ವೇದ ಮೆಡಿಕಲ್‌ ಕಾಲೇಜು

Sep.20: ಮುನಿಯಾಲ್‌ ಇನ್ಸ್ಟಿಟ್ಯೂಟ್‌ ಆಫ್ ಆಯುರ್ವೇದ ಮೆಡಿಕಲ್‌ ಕಾಲೇಜು ಘಟಿಕೋತ್ಸವ

Udupi: ಯುಜಿಡಿ ಚೇಂಬರ್‌ ಅವ್ಯವಸ್ಥೆಗಿಲ್ಲ ಪರಿಹಾರ

Udupi: ಯುಜಿಡಿ ಚೇಂಬರ್‌ ಅವ್ಯವಸ್ಥೆಗಿಲ್ಲ ಪರಿಹಾರ

ಮಲ್ಪೆ ಸೈಂಟ್‌ಮೇರೀಸ್‌ ದ್ವೀಪದಲ್ಲಿ ಸ್ವತ್ಛತೆ

Malpe ಸೈಂಟ್‌ಮೇರೀಸ್‌ ದ್ವೀಪದಲ್ಲಿ ಸ್ವಚ್ಛತೆ

Udupi: ಜಿಲ್ಲಾ ಕ್ರೀಡಾಂಗಣದ ಸಿಂಥೆಟಿಕ್‌ ಟ್ರ್ಯಾಕ್‌ಗೆ ಹಾನಿ

Udupi: ಜಿಲ್ಲಾ ಕ್ರೀಡಾಂಗಣದ ಸಿಂಥೆಟಿಕ್‌ ಟ್ರ್ಯಾಕ್‌ಗೆ ಹಾನಿ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Kundapura: ಪ್ರಾಣಿ ತ್ಯಾಜ್ಯ ಚೀಲದಲ್ಲಿ ಪತ್ತೆ… ಕೇಸು ದಾಖಲು

Kundapura: ಪ್ರಾಣಿ ತ್ಯಾಜ್ಯ ಚೀಲದಲ್ಲಿ ಪತ್ತೆ… ಕೇಸು ದಾಖಲು

1-baa

Mangalore Port ಇಬ್ಬರು ಬಾಲಕಾರ್ಮಿಕರ ರಕ್ಷಣೆ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

12

High Court: ಬಿಎಸ್‌ವೈ ಪೋಕ್ಸೋ ಕೇಸ್‌: ಸೆ.27ಕ್ಕೆ ವಿಚಾರಣೆ ಮುಂದಕ್ಕೆ

Modi (2)

PM ಮೋದಿ ಅಮೆರಿಕ ಪ್ರವಾಸ; ಮಣಿಪುರಕ್ಕೆ ಹೋಗುವುದಿಲ್ಲವೇಕೆ?:ಕಾಂಗ್ರೆಸ್ ಪ್ರಶ್ನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.