Rajasthan;10ನೇ ತರಗತಿಯ ವಿದ್ಯಾರ್ಥಿಯಿಂದ ಇನೊಬ್ಬನಿಗೆ ಇರಿತ: ಕೋಮುಗಲಭೆ

ಹಲವು ಪ್ರದೇಶಗಳಲ್ಲಿ ಮೊಬೈಲ್ ಇಂಟರ್ನೆಟ್ ಸ್ಥಗಿತ.. ಆರೋಪಿ ಬಾಲಕನ ಮನೆ ಜೆಸಿಬಿ ಬಳಸಿ ನೆಲಸಮ!

Team Udayavani, Aug 17, 2024, 9:17 PM IST

police crime

ಜೈಪುರ: ರಾಜಸ್ಥಾನದ ಉದಯಪುರದ ಸರಕಾರಿ ಶಾಲೆಯಲ್ಲಿ 10ನೇ ತರಗತಿಯ ವಿದ್ಯಾರ್ಥಿಯೊಬ್ಬ ಮತ್ತೊಬ್ಬ ಬಾಲಕನಿಗೆ ಚಾಕುವಿನಿಂದ ಇರಿದ ಘಟನೆ ಕೋಮುಗಲಭೆಗೆ ಕಾರಣವಾದ ಹಿನ್ನೆಲೆಯಲ್ಲ ಹಲವು ಪ್ರದೇಶಗಳಲ್ಲಿ ಮೊಬೈಲ್ ಇಂಟರ್ನೆಟ್ ಅನ್ನು 24 ಗಂಟೆಗಳ ಕಾಲ ಸ್ಥಗಿತಗೊಳಿಸಲಾಗಿದೆ ಮತ್ತು ಎಲ್ಲಾ ಶಾಲೆಗಳನ್ನು ಮುಚ್ಚುವಂತೆ ಆದೇಶಿಸಲಾಗಿದೆ.

ಶುಕ್ರವಾರ ಘಟನೆ ನಡೆದಿದ್ದು, ಹಲ್ಲೆಯಿಂದ ಗಾಯಗೊಂಡ ವಿದ್ಯಾರ್ಥಿ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಆರೋಪಿ ಬಂಧನದಲ್ಲಿದ್ದಾನೆ. ಆರೋಪಿ ಬಾಲಕನ ಮನೆಯನ್ನು ಜಿಲ್ಲಾಡಳಿತ ಜೆಸಿಬಿ ಯಂತ್ರಗಳನ್ನು ಬಳಸಿ ನೆಲಸಮಗೊಳಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪೊಲೀಸ್ ಸಿಬಂದಿ ಸಮ್ಮುಖದಲ್ಲಿ ಧ್ವಂಸಗೊಳಿಸಲಾಗಿದೆ.

ಕಾನೂನು ಮತ್ತು ಸುವ್ಯವಸ್ಥೆಯ ದೃಷ್ಟಿಯಿಂದ ಉದಯಪುರದ ಎಲ್ಲಾ ಸರ್ಕಾರಿ ಮತ್ತು ಖಾಸಗಿ ಶಾಲೆಗಳನ್ನು ಮುಂದಿನ ಆದೇಶದವರೆಗೆ ಮುಚ್ಚಲು ಆದೇಶಿಸಲಾಗಿದೆ ಎಂದು ಜಿಲ್ಲಾಧಿಕಾರಿ ಅರವಿಂದ್ ಪೋಸ್ವಾಲ್ ತಿಳಿಸಿದ್ದಾರೆ.

ಗಾಯಗೊಂಡ ಬಾಲಕನ ಚಿಕಿತ್ಸೆಗಾಗಿ ವಿಶೇಷ ವಿಮಾನದ ಮೂಲಕ ಜೈಪುರದಿಂದ ಉದಯಪುರಕ್ಕೆ ಮೂವರು ವೈದ್ಯರ ತಂಡವನ್ನು ಕಳುಹಿಸಲಾಗಿದ್ದು, ಸ್ಥಿತಿ ಸ್ಥಿರವಾಗಿದೆ.

ಉದಯಪುರ ನಗರ, ಬೆಡ್ಲಾ, ಬಡಗಾಂವ್, ಬ್ಲೀಚಾ, ದೇಬರಿ, ಎಕ್ಲಿಂಗ್‌ಪುರ, ಕಾನ್ಪುರ, ಧೀಕ್ಲಿ ಮತ್ತು ಭುವನಾ ಪ್ರದೇಶದಲ್ಲಿ ಶುಕ್ರವಾರ ರಾತ್ರಿ 10 ಗಂಟೆಯಿಂದ 24 ಗಂಟೆಗಳ ಕಾಲ ಮೊಬೈಲ್ ಇಂಟರ್‌ನೆಟ್ ಸೇವೆಯನ್ನು ಸ್ಥಗಿತಗೊಳಿಸಿ ವಿಭಾಗೀಯ ಆಯುಕ್ತ ರಾಜೇಂದ್ರ ಭಟ್ ಆದೇಶ ಹೊರಡಿಸಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಹರಡುತ್ತಿರುವ ವದಂತಿಗಳನ್ನು ನಿರ್ಲಕ್ಷಿಸುವಂತೆ ಜಿಲ್ಲಾಧಿಕಾರಿ ಮನವಿ ಮಾಡಿದ್ದಾರೆ.

ಶುಕ್ರವಾರ, ಭಟ್ಟಿಯಾನಿ ಚೋಹಟ್ಟಾದಲ್ಲಿನ ಸರ್ಕಾರಿ ಶಾಲೆಯ ಹೊರಗೆ ಇರಿದ ಘಟನೆಯ ನಂತರ ಕೋಮು ಉದ್ವಿಗ್ನತೆಯ ಮಧ್ಯೆ ಗುಂಪೊಂದು ಕಾರುಗಳಿಗೆ ಬೆಂಕಿ ಹಚ್ಚಿ ಕಲ್ಲು ತೂರಾಟ ನಡೆಸಿದೆ. ನಗರದಲ್ಲಿ ಜನ ಸೇರುವುದನ್ನು ನಿಷೇಧಿಸಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.

ಪೊಲೀಸರ ಪ್ರಕಾರ, ಘಟನೆಯನ್ನು ವಿರೋಧಿಸಿ ಕೆಲವು ಹಿಂದೂ ಸಂಘಟನೆಗಳ ಸದಸ್ಯರು ನಗರದ ಮಧುಬನ್‌ನಲ್ಲಿ ಜಮಾಯಿಸಿದ್ದು, ಈ ವೇಳೆ ಕಲ್ಲು ತೂರಾಟ ನಡೆದು ಮೂರ್ನಾಲ್ಕು ಕಾರುಗಳಿಗೆ ಬೆಂಕಿ ಹಚ್ಚಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಸಂಜೆ ಉದ್ವಿಗ್ನತೆ ಹೆಚ್ಚಾದ ಕಾರಣ ಹತ್ತಿರದ ಪ್ರದೇಶಗಳಲ್ಲಿ ಮಾರುಕಟ್ಟೆಗಳನ್ನು ಮುಚ್ಚಲಾಯಿತು. ಶಾಪಿಂಗ್ ಮಾಲ್‌ನ ಮೇಲೆ ಕಲ್ಲು ತೂರಾಟ ನಡೆಸಲಾಗಿದೆ. ನಗರದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು ಹೆಚ್ಚುವರಿ ಪೊಲೀಸರನ್ನು ನಿಯೋಜಿಸಲಾಗಿದೆ.

ಟಾಪ್ ನ್ಯೂಸ್

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-kashmir-msulim-IAS

Kashmir; ಮೊದಲ ಮುಸ್ಲಿಂ ಐಎಎಸ್‌ ಅಧಿಕಾರಿ ನಿಧನ

PM Modi: ವಿದೇಶದಲ್ಲಿ ನಮ್ಮ ದೇವತೆಗಳಿಗೆ ರಾಹುಲ್‌ ಅವಮಾನ

PM Modi: ವಿದೇಶದಲ್ಲಿ ನಮ್ಮ ದೇವತೆಗಳಿಗೆ ರಾಹುಲ್‌ ಅವಮಾನ

1-JSSS

TMC ರಾಜ್ಯಸಭಾ ಸದಸ್ಯತ್ವಕ್ಕೆ ಜವಾಹರ್‌ ಸರ್ಕಾರ್‌ ರಾಜೀನಾಮೆ

1-eeeeee

Train ಹಳಿಯ ಮೇಲೆ ರಾಡ್‌: ಹಳಿ ತಪ್ಪಿಸಲು ಮತ್ತೆ ಯತ್ನ, ತಪ್ಪಿದ ಅನಾಹುತ

firee

Bihar;ಜಮೀನು ವಿವಾದ: 21 ದಲಿತರ ಮನೆಗಳಿಗೆ ಬೆಂಕಿ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.