Hospital D Group ನೌಕರ ನಿವೃತ್ತಿ ಬಳಿಕ ವೈದ್ಯನಾಗಿ ಚಿಕಿತ್ಸೆ ನೀಡುತ್ತಿದ್ದ!
ದಿಬ್ಬೂರಹಳ್ಳಿಯಲ್ಲಿ ಆರೋಗ್ಯಾಧಿಕಾರಿಗಳ ಕಾರ್ಯಚರಣೆ ವೇಳೆ ಸಿಕ್ಕಿಬಿದ್ದ ಭೂಪ
Team Udayavani, Aug 17, 2024, 11:01 PM IST
ಚಿಕ್ಕಬಳ್ಳಾಪುರ: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಡಿ ಗ್ರೂಪ್ ನೌಕರರಾಗಿ ಸೇವೆ ಸಲ್ಲಿಸಿದ ವ್ಯಕ್ತಿಯೊಬ್ಬ ನಿವೃತ್ತಿ ಬಳಿಕ ತಾನು ವೈದ್ಯನೆಂದು ಹೇಳಿಕೊಂಡು ಕ್ಲಿನಿಕ್ ತೆರೆದು ಸಾರ್ವಜನಿಕರಿಗೆ ಚಿಕಿತ್ಸೆ ನೀಡುತ್ತಿದ್ದ ಪ್ರಕರಣವನ್ನು ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ಆರೋಗ್ಯ ಇಲಾಖೆ ತಂಡ ಭೇದಿಸಿದೆ.
ಆರೋಗ್ಯ ಇಲಾಖೆ ಅಧಿಕಾರಿಗಳ ಕೈಗೆ ಸಿಕ್ಕಿ ಬಿದ್ದ ನಕಲಿ ವೈದ್ಯ ಹಾಗೂ ನಿವೃತ್ತ ಡಿ ಗ್ರೂಪ್ ನೌಕರನನ್ನು ವೆಂಕಟಪ್ಪ ಎಂದು ಗುರುತಿಸಲಾಗಿದೆ. ತಾಲೂಕಿನಲ್ಲಿ ನಕಲಿ ವೈದ್ಯರ ಹಾವಳಿ ಹೆಚ್ಚಾಗಿರುವ ಹಿನ್ನಲೆಯಲ್ಲಿ ಶನಿವಾರ ತಾಲೂಕು ಆರೋಗ್ಯಾಧಿಕಾರಿ ಡಾ.ವೆಂಕಟೇಶಮೂರ್ತಿ ನೇತೃತ್ವದ ತಂಡ ಕಾರ್ಯಾಚರಣೆ ನಡೆಸಿದಾಗ ತಾಲೂಕಿನ ದಿಬ್ಬೂರಹಳ್ಳಿಯಲ್ಲಿ ಬಾಡಿಗೆ ಕಟ್ಟಡವನ್ನು ಪಡೆದು ಚಿಕಿತ್ಸೆ ನೀಡುತ್ತಿರುವುದು ಕಂಡು ಬಂದಿದೆ.
ಕ್ಲಿನಿಕ್ಗೆ ಬೀಗ ಜಡಿದ ಅಧಿಕಾರಿಗಳು
ಶಿಡ್ಲಘಟ್ಟ ತಾಲೂಕಿನ ಸಾದಲಿ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಡಿ ಗ್ರೂ ನೌಕರರಾಗಿ ಕೆಲಸ ಮಾಡುತ್ತಿದ್ದ ವೆಂಕಟಪ್ಪ, ನಿವೃತ್ತಿ ಹೊಂದಿದ ನಂತರ ಸಾದಲಿಯಲ್ಲಿ ನಕಲಿ ಕ್ಲಿನಿಕ್ ತೆರೆದಿದ್ದ. ಬಳಿಕ ಅಲ್ಲಿಂದ ದಿಬ್ಬೂರಹಳ್ಳಿಗೆ ಸ್ಥಳಾಂತರ ಮಾಡಿ ನಕಲಿ ಕ್ಲಿನಿಕ್ ತೆರೆದು ಸುತ್ತಮುತ್ತಲಿನ ಗ್ರಾಮಸ್ಥರಿಗೆ ತಾನು ವೈದ್ಯನೆಂದು ಹೇಳಿಕೊಂಡು ಕ್ಲಿನಿಕ್ಗೆ ಬರುವ ಸಾರ್ವಜನಿಕರಿಗೆ ಅದರಲ್ಲೂ ಮಕ್ಕಳಿಗೆ, ಮಹಿಳೆಯರಿಗೆ, ಹಿರಿಯ ನಾಗರಿಕರಿಗೆ ವೆಂಕಟಪ್ಪ ಚಿಕಿತ್ಸೆ ನೀಡಿ ಮಾತ್ರೆ, ಚುಚ್ಚುಮದ್ದು ನೀಡುತ್ತಿದ್ದನೆಂದು ಆರೋಗ್ಯಾಧಿಕಾರಿಗಳ ದಾಳಿ ವೇಳೆ ಕಂಡು ಬಂದಿದೆ.
ಕಾರ್ಯಾಚರಣೆ ವೇಳೆ ಸ್ಥಳೀಯ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯರಾದ ಡಾ.ಯಶ್ವಂತ ಪ್ರಸಾದ್, ಆರೋಗ್ಯ ನಿರೀಕ್ಷಕ ದೇವರಾಜ್ ಸೇರಿದಂತೆ ಮತ್ತಿತರರು ಇದ್ದರು. ಈ ವೇಳೆ 20 ಕ್ಕೂ ಹೆಚ್ಚು ಸಾರ್ವಜನಿಕರು ಚಿಕಿತ್ಸೆ ಪಡೆಯಲು ನಕಲಿ ಕ್ಲಿನಿಕ್ನಲ್ಲಿ ಇದ್ದರೆಂದು ಆರೋಗ್ಯಾಧಿಕಾರಿಗಳು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkaballapura; ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ದಲಿತ ಸಂಘಟನೆಗಳ ಪ್ರತಿಭಟನೆ
Karnataka ರಾಜ್ಯದಲ್ಲಿ ಆರ್ಟಿಇ ಸೀಟಿಗಿಲ್ಲ ಕಿಮ್ಮತ್ತು!
Surathkal: ಚಿಕ್ಕಬಳ್ಳಾಪುರ ಮೂಲದ ವೈದ್ಯಕೀಯ ವಿದ್ಯಾರ್ಥಿ ಆತ್ಮಹತ್ಯೆ
Chikkaballapur: ಜಿಲ್ಲೆಯ ಸರ್ಕಾರಿ ಆಸ್ಪತ್ರೆಗಳಲ್ಲಿ ತಜ್ಞ ವೈದ್ಯರ ಕೊರತೆ!
Chikkaballapur: ಪೋಕ್ಸೋ ಆರೋಪಿ ಜತೆಗೆ 16 ವರ್ಷದ ಬಾಲಕಿ ಆತ್ಮಹತ್ಯೆ!
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.