Abhaya; ಮುಷ್ಕರ ನಿರತ ವೈದ್ಯರಿಗೆ ಕೇಂದ್ರ ಸರಕಾರ ಅಭಯ: ಸುರಕ್ಷೆಗೆ ಸಮಿತಿ

ಅಭಯಾಳಿಗೆ ನ್ಯಾಯಕ್ಕಾಗಿ ದೇಶಾದ್ಯಂತ ನಡೆದ ವೈದ್ಯರ ಮುಷ್ಕರ ಯಶಸ್ವಿ

Team Udayavani, Aug 18, 2024, 6:40 AM IST

1-doctors

ಹೊಸದಿಲ್ಲಿ: ಕೋಲ್ಕತದ ಆಸ್ಪತ್ರೆಯಲ್ಲಿ ತರಬೇತಿನಿರತ ವೈದ್ಯೆ (ಅಭಯಾ) ಮೇಲೆ ಅತ್ಯಾಚಾರ ನಡೆಸಿ ಹತ್ಯೆ ಮಾಡಿದ ಘಟನೆಯನ್ನು ಖಂಡಿಸಿ ದೇಶಾದ್ಯಂತ ವೈದ್ಯರು ಶನಿವಾರ ಮುಷ್ಕರ ನಡೆಸಿದ್ದಾರೆ. ಇದಕ್ಕೆ ಪೂರಕವಾಗಿ ವೈದ್ಯರು ಮತ್ತು ಆರೋಗ್ಯ ಕ್ಷೇತ್ರದಲ್ಲಿ ಕೆಲಸ ಮಾಡುವವರ ರಕ್ಷಣೆಗಾಗಿ ಸೂಕ್ತ ಕ್ರಮ ಕೈಗೊಳ್ಳುವ ಅಭಯವನ್ನು ಕೇಂದ್ರ ಸರಕಾರ ನೀಡಿದ್ದು, ಅದಕ್ಕಾಗಿ ಸಮಿತಿ ರಚಿಸುವುದಾಗಿ ವಾಗ್ಧಾನ ಮಾಡಿದೆ. ಅಲ್ಲದೆ ಘಟನೆಯನ್ನು ಖಂಡಿಸಿ ದೇಶದ ಹಲವೆಡೆ ವೈದ್ಯರು ನಡೆಸುತ್ತಿರುವ ಮುಷ್ಕರ ಕೈಬಿಟ್ಟು ವೈದ್ಯಕೀಯ ಸೇವೆಗೆ ವಾಪಸಾಗಬೇಕು ಎಂದು ಮನವಿ ಮಾಡಿದೆ.

ಭಾರತೀಯ ವೈದ್ಯಕೀಯ ಸಂಘ (ಐಎಂಎ), ಫೆಡರೇಶನ್‌ ಆಫ್ ರೆಸಿಡೆಂಟ್‌ ಡಾಕ್ಟರ್ಸ್‌ ಅಸೋಸಿಯೇಶನ್‌ (ಎಫ್ಒಆರ್‌ಡಿಎ), ದಿಲ್ಲಿ ಸರಕಾರಿ ವೈದ್ಯ ಕಾಲೇಜುಗಳ ರೆಸಿಡೆಂಟ್‌ ವೈದ್ಯರ ಸಂಘಟನೆಗಳು ಸದಸ್ಯರು ಶನಿವಾರ ಹೊಸದಿಲ್ಲಿಯಲ್ಲಿ ಕೇಂದ್ರ ಆರೋಗ್ಯ ಸಚಿವ ಜೆ.ಪಿ. ನಡ್ಡಾ ಜತೆ ಸಮಾಲೋಚನೆ ನಡೆಸಿದ್ದಾರೆ. ಕೆಲಸದ ವೇಳೆ ಆರೋಗ್ಯ ವೃತ್ತಿಪರರ ಸುರಕ್ಷೆ ಮತ್ತು ಭದ್ರತೆಯ ಬಗ್ಗೆ ತಮ್ಮ ಬೇಡಿಕೆಗಳನ್ನು ಸರಕಾರದ ಮುಂದಿಟ್ಟರು. ವೈದ್ಯರ ಬೇಡಿಕೆಗಳನ್ನು ಸಾವಧಾನವಾಗಿ ಆಲಿಸಿದ ಕೇಂದ್ರ ಆರೋಗ್ಯ ಸಚಿವರು, ಆರೋಗ್ಯ ಕ್ಷೇತ್ರದ ವೃತ್ತಿಪರರ ಸುರಕ್ಷೆಗಾಗಿ ಸಮಿತಿಯನ್ನು ರಚಿಸಲು ಸರಕಾರ ತೀರ್ಮಾನಿಸಿದೆ. ರಾಜ್ಯ ಸರಕಾರಗಳ ಸಹಿತ ಸಂಬಂಧಿಸಿದ ಎಲ್ಲರೂ ಈ ಸಮಿತಿಗೆ ತಮ್ಮ ಸಲಹೆಗಳನ್ನು ನೀಡಬಹುದು ಎಂದು ಪ್ರಸ್ತಾವನೆ ಮುಂದಿಟ್ಟರು ಎಂದು ಸಭೆಯ ಅನಂತರ ಬಿಡುಗಡೆ ಮಾಡಲಾದ ಹೇಳಿಕೆಯಲ್ಲಿ ಸರಕಾರ ತಿಳಿಸಿದೆ.

ಈಗಾಗಲೇ 26 ರಾಜ್ಯಗಳು ಈ ಸಂಬಂಧ ಕಾಯ್ದೆ ಗಳನ್ನು ಜಾರಿಗೆ ತಂದಿವೆ ಎಂಬ ಅಂಶವನ್ನೂ ಸಭೆಯಲ್ಲಿ ಮಂಡಿಸಿ, ಚರ್ಚೆ ನಡೆಸಲಾಗಿದೆ. ವೈದ್ಯರ ಪ್ರತಿನಿಧಿಗಳು ವ್ಯಕ್ತಪಡಿಸಿದ ಕಳವಳಗಳನ್ನು ಗಮನದಲ್ಲಿ ಇರಿಸಿಕೊಂಡು, ಆರೋಗ್ಯ ವೃತ್ತಿಪರರ ಸುರಕ್ಷೆಯನ್ನು ಖಾತ್ರಿಪಡಿಸಿಕೊಳ್ಳಲು ಎಲ್ಲ ಕ್ರಮಗಳನ್ನು ಕೈಗೊಳ್ಳಲಾಗುತ್ತದೆ ಎಂದೂ ಸರಕಾರ ವೈದ್ಯರಿಗೆ ಭರವಸೆ ನೀಡಿದೆ.

ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಭಾರತೀಯ ವೈದ್ಯಕೀಯ ಸಂಘವು, ವೈದ್ಯರಿಗೆ ಮತ್ತು ಆರೋಗ್ಯ ಕಾರ್ಯಕರ್ತರಿಗೆ ನೀಡಿದ ಅಭಯದ ಮಾತುಗಳನ್ನು ನಾವು ಪರಿಶೀಲಿಸುತ್ತಿದ್ದೇವೆ ಎಂದು ಹೇಳಿದೆ. ಎಲ್ಲ ಅಂಶಗಳನ್ನು ಪರಿಶೀಲಿಸಿದ ಬಳಿಕ ಅದಕ್ಕೆ ಪ್ರತಿಕ್ರಿಯೆ ನೀಡುವುದಾಗಿ ತಿಳಿಸಿದೆ.

ಸರಕಾರದ ಭರವಸೆ
ಆರೋಗ್ಯ ಕ್ಷೇತ್ರದ ವೃತ್ತಿಪರರ ಸುರಕ್ಷೆಗೆ ಸಂಬಂಧಿಸಿ ಸಮಿತಿ ರಚನೆ
ರಾಜ್ಯ ಸರಕಾರಗಳ ಸಹಿತ ಎಲ್ಲರೂ ಈ ಸಮಿತಿಗೆ ತಮ್ಮ ಸಲಹೆಗಳನ್ನು ನೀಡಬಹುದು
ವೈದ್ಯರ ಸುರಕ್ಷೆಗೆ ಸೂಕ್ತ ಕ್ರಮಗಳನ್ನು ಕೈಗೊಳ್ಳಲಾಗುವುದು

ಟಾಪ್ ನ್ಯೂಸ್

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Modi (2)

PM ಮೋದಿ ಅಮೆರಿಕ ಪ್ರವಾಸ; ಮಣಿಪುರಕ್ಕೆ ಹೋಗುವುದಿಲ್ಲವೇಕೆ?:ಕಾಂಗ್ರೆಸ್ ಪ್ರಶ್ನೆ

High Court: ಮಹಿಳೆ ಅಪಹರಣ ಕೇಸ್‌; ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

High Court: ಮಹಿಳೆ ಅಪಹರಣ ಕೇಸ್‌; ಎಚ್‌.ಡಿ.ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

11

Eshwara Khandre: ಮಹದಾಯಿಗೆ ಅನುಮತಿ ಸಿಗೋವರೆಗೂ ಮರ ಕಡಿಯಲು ಬಿಡಲ್ಲ

H.D.Kumaraswamy

H. D. Kumaraswamy: ರಾಜಕೀಯ ಮಾಡಲು, ಬೆಂಕಿ ಹಚ್ಚಲು ಬಂದಿಲ್ಲ

1-frr

BJP ಶಾಸಕ ಮುನಿರತ್ನಗೆ ಷರತ್ತುಬದ್ಧ ಜಾಮೀನು; ಆದರೂ ತಪ್ಪಿಲ್ಲ ಸಂಕಷ್ಟ!

HP ಯಿಂದ ಹೊಸ ಪ್ರಿಂಟರ್‌ಗಳ ಬಿಡುಗಡೆ

HP ಯಿಂದ ಹೊಸ ಪ್ರಿಂಟರ್‌ಗಳ ಬಿಡುಗಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Modi (2)

PM ಮೋದಿ ಅಮೆರಿಕ ಪ್ರವಾಸ; ಮಣಿಪುರಕ್ಕೆ ಹೋಗುವುದಿಲ್ಲವೇಕೆ?:ಕಾಂಗ್ರೆಸ್ ಪ್ರಶ್ನೆ

1-tirupati-laddu

Tirupati ತಿರುಪತಿ ಲಡ್ದು ಪ್ರಸಾದದಲ್ಲಿ ಬೀಫ್ ಫ್ಯಾಟ್!:ಲ್ಯಾಬ್ ವರದಿಯಲ್ಲಿ ದೃಢ

Chennai: ಗ್ರಾಹಕ ನಿಂದಿಸಿದ್ದಕ್ಕೆ ಖಿನ್ನತೆಗೆ ಒಳಗಾಗಿ ಫುಡ್‌ ಡೆಲಿವರಿ ಯುವಕ ಆತ್ಮಹತ್ಯೆ

Chennai: ಗ್ರಾಹಕ ನಿಂದಿಸಿದ್ದಕ್ಕೆ ಖಿನ್ನತೆಗೆ ಒಳಗಾಗಿ ಫುಡ್‌ ಡೆಲಿವರಿ ಯುವಕ ಆತ್ಮಹತ್ಯೆ

Haryana: Financial assistance to women, MSP promised; BJP manifesto released

Haryana: ಮಹಿಳೆಯರಿಗೆ ವಿತ್ತ ನೆರವು, ಎಂಎಸ್‌ ಪಿ ಭರವಸೆ; ಬಿಜೆಪಿ ಪ್ರಣಾಳಿಕೆ ಬಿಡುಗಡೆ

Chennai: ರಸ್ತೆ ಬದಿ ಪತ್ತೆಯಾದ ಸೂಟ್‌ಕೇಸ್‌ನಲ್ಲಿತ್ತು ಮಹಿಳೆಯ ಕತ್ತರಿಸಿದ ದೇಹದ ಭಾಗಗಳು…

Chennai: ರಸ್ತೆ ಬದಿ ಪತ್ತೆಯಾದ ಸೂಟ್‌ಕೇಸ್‌ನಲ್ಲಿತ್ತು ಮಹಿಳೆಯ ಕತ್ತರಿಸಿದ ದೇಹದ ಭಾಗಗಳು…

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Kundapura: ಪ್ರಾಣಿ ತ್ಯಾಜ್ಯ ಚೀಲದಲ್ಲಿ ಪತ್ತೆ… ಕೇಸು ದಾಖಲು

Kundapura: ಪ್ರಾಣಿ ತ್ಯಾಜ್ಯ ಚೀಲದಲ್ಲಿ ಪತ್ತೆ… ಕೇಸು ದಾಖಲು

1-baa

Mangalore Port ಇಬ್ಬರು ಬಾಲಕಾರ್ಮಿಕರ ರಕ್ಷಣೆ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

12

High Court: ಬಿಎಸ್‌ವೈ ಪೋಕ್ಸೋ ಕೇಸ್‌: ಸೆ.27ಕ್ಕೆ ವಿಚಾರಣೆ ಮುಂದಕ್ಕೆ

Modi (2)

PM ಮೋದಿ ಅಮೆರಿಕ ಪ್ರವಾಸ; ಮಣಿಪುರಕ್ಕೆ ಹೋಗುವುದಿಲ್ಲವೇಕೆ?:ಕಾಂಗ್ರೆಸ್ ಪ್ರಶ್ನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.