Kushtagi; ನಿಡಶೇಸಿ ಕೆರೆ ಕಾಲುವೆ ಗೇಟ್ ಕಟ್ ಆತಂಕ: ರೈತರಿಗೆ ಆತಂಕ ತಂದ ನೀರು ಸೋರಿಕೆ
Team Udayavani, Aug 18, 2024, 8:41 AM IST
ಕುಷ್ಟಗಿ: ತಾಲೂಕಿನ ನಿಡಶೇಸಿಯ ಕೆರೆಯ ಬಂಡ್ ಕಾಲುವೆ ಗೇಟ್ ಕೆಳ ಭಾಗದಲ್ಲಿ ನೀರು ಸೋರಿಕೆಯಾಗುತ್ತಿದ್ದು, ಕೆರೆಯ ಕೆಳ ಭಾಗದ ರೈತರಲ್ಲಿ ಅತಂಕ ವ್ಯಕ್ತವಾಗಿದೆ.
ಶನಿವಾರದ ಮಳೆಯಿಂದ ಕೆರೆಗೆ ನೀರು ಹರಿದು ಬರುತ್ತಿದ್ದು ಸದ್ಯ ಕೆರೆ ಶೇ.80 ರಷ್ಟು ಭರ್ತಿಯಾಗಿದ್ದು ರೈತರು ಸಂತಸದಲ್ಲಿದ್ದಾರೆ. ಈ ಸಂದರ್ಭದಲ್ಲಿ ಕೆರೆಯ ಕಾಲುವೆಯ ಭಾಗದಲ್ಲಿ ನೀರು ಸೋರಿಕೆಯಾಗುತ್ತಿದ್ದು, ಸಂಬಂಧಿಸಿದ ಸಣ್ಣ ನೀರಾವರಿ ಇಲಾಖೆ ಎಇಇ ಶ್ರೀನಿವಾಸಗೆ ವಿಷಯ ತಿಳಿಸಿದ್ದಾರೆ. ಸದರಿ ಜೆಇ ಕಾಯುತ್ತಾ ಕುಳಿತಿರಲು ಆಗುತ್ತಾ ಎಂದು ಉಡಾಫೆ ಉತ್ತರ ನೀಡಿರುವುದು ರೈತರ ಆಕ್ರೊಶಕ್ಕೆ ಕಾರಣವಾಗಿದೆ.
ನಿಡಶೇಸಿ ಕೆರೆ ಕಟ್ಟೆಯಲ್ಲಿ ನೀರು ಜಮಾಯಿಸುತ್ತಿರುವ ಸಂದರ್ಭದಲ್ಲಿ ಕೆರೆ ಪಾತ್ರದ ಜನರಿಗೆ ಈ ಬೆಳವಣಿಗೆ ರೈತರಿಗೆ ಬೆಳ್ಳಂಬೆಳಗ್ಗೆ ಶಾಕ್ ನೀಡಿದೆ. ಕೆರೆಯ ತೂಬಿನ ಗೇಟ್ ಕಿತ್ತಿರುವುದರಿಂದ ಅಪಾರ ಪ್ರಮಾಣದಲ್ಲಿ ನೀರು ಕಾಲುವೆ ಮೂಲಕ ಹಳ್ಳಕ್ಕೆ ಹರಿಯುತ್ತಿರುದು ಕೆಳ ಭಾಗದ ರೈತ ಶರಣಪ್ಪ ಅವರ ಗಮನಕ್ಕೆ ಬಂದಿದ್ದು, ಕೂಡಲೇ ಆತಂಕದಿಂದ ಓಡಿ ಬಂದು ಇತರೇ ರೈತರಿಗೆ ಮಾಹಿತಿ ನೀಡಿದ್ದಾರೆ. ನಿಡಶೇಸಿ ಕೆರೆ ಅಭದ್ರತೆ ಆತಂಕ ವ್ಯಕ್ತವಾಗಿದೆ.
ಕೂಡಲೇ ಕೆರೆಯ ಕಾಲುವೆ ಗೇಟ್ ಬಂದ್ ಮಾಡಬೇಕೆಂದು ರೈತರು ಆಗ್ರಹಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಗಂಗಾವತಿ: ನಗರಸಭೆಯ ಸಾಮಾನ್ಯ ಸಭೆಯಲ್ಲಿ ನಿಯಮಮೀರಿ ಮಹಿಳಾ ಸದಸ್ಯರ ಪತಿರಾಯರು,ಸಂಬಂಧಿಗಳು ಭಾಗಿ
Koppal; ಪ್ರಚೋದನಕಾರಿ ಹೇಳಿಕೆ ಕೊಟ್ಟರೆ ಸಹಿಸಲ್ಲ: ಸಚಿವ ಶಿವರಾಜ ತಂಗಡಗಿ
ಕೊಪ್ಪಳ: ಅದಾಲತ್ನಲ್ಲಿ ಒಂದಾದ 14 ಜೋಡಿ ಇತ್ಯರ್ಥವಾದ 35,721 ಪ್ರಕರಣಗಳು
Koppala: ಮುನಿರತ್ನ ವಿಚಾರದಲ್ಲಿ ಯಾವುದೇ ರಾಜಕೀಯ ಇಲ್ಲ: ಸಚಿವ ಶಿವರಾಜ ತಂಗಡಗಿ
ಗಂಗಾವತಿ: ಮೀಸಲು ಅರಣ್ಯದಲ್ಲಿ ಅವ್ಯಾಹತ ಮರಳು ದಂಧೆ – ಹದಗೆಟ್ಟ ರಸ್ತೆ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.