Viral Video: ಕಬ್ಬನ್ ಪಾರ್ಕ್ನಲ್ಲಿ ಮಹಿಳೆಯರ ಮುಂದೆ ವೃದ್ಧನಿಂದ ಹಸ್ತಮೈಥುನ!
Team Udayavani, Aug 18, 2024, 11:39 AM IST
ಬೆಂಗಳೂರು: ಕಬ್ಬನ್ ಪಾರ್ಕ್ ಆವರಣದಲ್ಲಿ ಇತ್ತೀಚೆಗೆ ವೃದ್ಧನೊಬ್ಬ ಮಹಿಳೆಯರ ಮುಂದೆ ಹಸ್ತಮೈಥುನ ಮಾಡಿಕೊಂಡಿರುವ ಘಟನೆ ಬೆಳಕಿಗೆ ಬಂದಿದ್ದು, ಈ ಸಂಬಂಧ ವಿಡಿಯೋವೊಂದು ವೈರಲ್ ಆಗಿದೆ. ಅಲ್ಲದೆ, ಸಾರ್ವಜನಿಕರೊಬ್ಬರು ತಮ್ಮ ಎಕ್ಸ್ ಖಾತೆಯಲ್ಲಿ ವಿಡಿಯೋ ಪೋಸ್ಟ್ ಮಾಡಿ, ನ್ಯಾಯ ಒದಗಿಸುವಂತೆ ನಗರ ಪೊಲೀಸರ ಮೊರೆ ಹೋಗಿದ್ದಾರೆ. ಅದಕ್ಕೆ ಪ್ರತಿಕ್ರಿಯೆ ನೀಡಿರುವ ಪೊಲೀಸರು, ಕಬ್ಬನ್ ಪಾರ್ಕ್ ಠಾಣೆಗೆ ದೂರು ನೀಡುವಂತೆ ಸಲಹೆ ನೀಡಿದ್ದಾರೆ.
ಕೆಲ ದಿನಗಳ ಹಿಂದೆ ಕಬ್ಬನ್ ಪಾರ್ಕ್ನಲ್ಲಿ ಮಹಿಳೆಯರು ಕುಳಿತುಕೊಂಡಿರುವ ಜಾಗದಲ್ಲಿ ಸುತ್ತಾಡಿರುವ ವೃದ್ಧ, ಅವರ ಮುಂಭಾಗದ ಮರದ ಕೆಳಗೆ ಕುಳಿತು ಹಸ್ತಮೈಥುನ ಮಾಡಿಕೊಂಡಿದ್ದಾನೆ. ಅದನ್ನು ಗಮನಿಸಿದ ಮಹಿಳೆಯರು, ವೃದ್ಧನಿಗೆ ಎಚ್ಚರಿಕೆ ನೀಡಿದ್ದಾರೆ. ಆಗ ಆತ ಸ್ಥಳದಿಂದ ಓಡಿದ್ದು, ಮಹಿಳೆ ಆತನನ್ನು ಹಿಂಬಾಲಿಸಿದ್ದಾರೆ. ಆದರೆ, ಆತ ಪರಾರಿಯಾಗಿದ್ದಾನೆ.
ವಿಡಿಯೋ ವೈರಲ್: ವೈರಲ್ ಆಗಿರುವ ಈ ವಿಡಿಯೋದಲ್ಲಿ ವೃದ್ಧ ಮರದಡಿ ಕುಳಿತಿದ್ದು, ಯಾರೂ ತನ್ನನ್ನು ನೋಡುತ್ತಿಲ್ಲ ಎಂದು ತಿಳಿದು ಹಸ್ತಮೈಥುನ ಮಾಡಿಕೊಳ್ಳುತ್ತಾನೆ. ನಂತರ ಆತನನ್ನು ಮಹಿಳೆಯೊಬ್ಬರು ಪ್ರಶ್ನಿಸಿದ್ದು, ವೃದ್ಧ ಅದರಿಂದ ಗಾಬರಿಯಾಗಿ ಎದ್ದು ಅಲ್ಲಿಂದ ಓಡಿಹೋಗುತ್ತಿದ್ದಾನೆ. ಆರಂಭದಲ್ಲಿ ಆತನ ಮುಖವನ್ನು ವಿಡಿಯೋದಲ್ಲಿ ತೋರಿಸಲಾಗಿದೆ. ಅಲ್ಲದೆ, ಏನು ಮಾಡ್ತಿದ್ದೀ ಎಂದು ಮಹಿಳೆ ಆತನನ್ನು ಪ್ರಶ್ನೆ ಮಾಡಿದ್ದಾರೆ. ಅದಕ್ಕೆ ಆತ ಏನು ಎನ್ನುತ್ತಾನೆ. ಸೆಕ್ಯೂರಿಟಿಯನ್ನು ಕರೆಯಬೇಕಾ ಎಂದು ಮಹಿಳೆ ಕೇಳುತ್ತಿರುವುದನ್ನು ಈ ವಿಡಿಯೋದಲ್ಲಿ ಸೆರೆಯಾಗಿದೆ.
ಈ ವಿಡಿಯೋವನ್ನು ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ವಾಸೀಂ ಎಂಬವರು, “ಈತ ಕಬ್ಬನ್ ಪಾರ್ಕ್ನಲ್ಲಿ ಮಹಿಳೆಯರು ಕುಳಿತುಕೊಳ್ಳುವ ಜಾಗಕ್ಕೆ ಬಂದು ಹಸ್ತಮೈಥುನ ಮಾಡಿಕೊಳ್ಳುತ್ತಾನೆ ಎಂದು ಅನೇಕ ಮಹಿಳೆಯರು ಆರೋಪ ಮಾಡಿದ್ದಾರೆ’ ಎಂದು ವಿಡಿಯೋಗೆ ಶೀರ್ಷಿಕೆ ಕೊಟ್ಟಿದ್ದಾರೆ.
Hello @BlrCityPolice
Multiple people have said that this guy in Cubbon Park always comes where women sit, and allegedly flashes & masturbates.
Hiding his face for legal reasons. And girls’ faces for their privacy. pic.twitter.com/bS44WYMur6
— Waseem ವಸೀಮ್ وسیم (@WazBLR) August 14, 2024
ವಾಸೀಂ ಟ್ವೀಟ್ಗೆ ಪ್ರತಿಕ್ರಿಯೆ ನೀಡಿರುವ ನಗರ ಪೊಲೀಸರು, ಕಬ್ಬನ್ ಪಾರ್ಕ್ ಪೊಲೀಸರಿಗೆ ದೂರು ನೀಡುವಂತೆ ಸಲಹೆ ನೀಡಿದ್ದಾರೆ. ಈ ಸಂಬಂಧ ಕಬ್ಬನ್ ಪಾರ್ಕ್ ಪೊಲೀಸರು ದೂರು ದಾಖಲಿಸಿಕೊಂಡುಡಿದ್ದು, ವಿಡಿಯೋ ವೈರಲ್ ಮಾಡಿರುವ ವಾಸೀಂ ಅವರಿಗೆ ಇನ್ನಷ್ಟು ಮಾಹಿತಿ ನೀಡುವಂತೆ ನೋಟಿಸ್ ನೀಡಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಪ್ರೇಯಸಿಯ ಪೀಡಿಸುತ್ತಿದ್ದವನಿಗೆ ಪ್ರಿಯಕರನಿಂದ ಚಾಕು ಇರಿತ!
Bengaluru: ಮೆಜೆಸ್ಟಿಕ್ ಬಳಿ ಬಿಎಂಟಿಸಿ ಬಸ್ ಡಿಕ್ಕಿ; ಅಂಗವಿಕಲ ಸ್ಥಳದಲ್ಲೇ ಸಾವು
Bengaluru: ಪರಪ್ಪನ ಅಗ್ರಹಾರ ಕಾರಾಗೃಹದಲ್ಲಿ ಮತ್ತೆ 9 ಮೊಬೈಲ್ ಫೋನ್ಗಳು ಪತ್ತೆ!
Leopard: ಎಲೆಕ್ಟ್ರಾನಿಕ್ ಸಿಟಿ ಎನ್ಟಿಟಿಎಫ್ ಆವರಣ ಬಳಿ ತಡರಾತ್ರಿ ಚಿರತೆ ಪ್ರತ್ಯಕ್ಷ
Anekal: ಶಾಲಾ ಬಸ್ ಅಡ್ಡಗಟ್ಟಿ ಚಾಲಕನಿಗೆ ತೀವ್ರ ಹಲ್ಲೆ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.