Udupi: ಕೃಷ್ಣನೂರಿನಲ್ಲಿ ಜನ್ಮಾಷ್ಟಮಿಗೆ ಸಕಲ ಸಿದ್ಧತೆ

ಕಂಬ ನೆಡುವ ಕಾರ್ಯ | ಹುಲಿವೇಷ, ಜಾನಪದ ನೃತ್ಯಗಳಿಗೆ ಈ ಬಾರಿ ಪರ್ಯಾಯ ಮಠದಿಂದ ನಗದು ಬಹುಮಾನ

Team Udayavani, Aug 18, 2024, 2:55 PM IST

14

ಉಡುಪಿ: ಕೃಷ್ಣನೂರು ಉಡುಪಿಯಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಆ. 26ರಂದು ನಡೆಯಲಿದ್ದು, ಆ. 27ರಂದು ಶ್ರೀಕೃಷ್ಣ ಲೀಲೋತ್ಸವ (ವಿಟ್ಲಪಿಂಡಿ) ನಡೆಯಲಿದೆ. ಇದಕ್ಕಾಗಿ ರಥಬೀದಿಯಲ್ಲಿ ಸಿದ್ಧತೆ ಆರಂಭಗೊಂಡಿದ್ದು, ವಿಟ್ಲಪಿಂಡಿಯಂದು ಗೋವಳರು ಮೊಸರು ಕುಡಿಕೆಗಳನ್ನು ಒಡೆಯುವ ಗುರ್ಜಿಗಳನ್ನು ನೆಡುವ ಕೆಲಸ ನಡೆಯುತ್ತಿದೆ.

15 ಗುರ್ಜಿಗಳನ್ನು ರಥಬೀದಿಯಲ್ಲಿ ನೆಡಲಾಗುತ್ತದೆ. ಇದರಲ್ಲಿ ಎರಡು ಮಂಟಪ ಮತ್ತು ಏಳು ಗುರ್ಜಿಗಳು ಕೃಷ್ಣಮಠಕ್ಕೆ ಸಂಬಂಧಿಸಿದವು.

ಏಳು ಗುರ್ಜಿಗಳು ಏಳು ಮಠಗಳಿಗೆ, ಎರಡು ಮಂಟಪಗಳು ಪರ್ಯಾಯ ಮಠ ಮತ್ತು ಶ್ರೀಕೃಷ್ಣಮಠಕ್ಕೆ ಸಂಬಂಧಿಸಿವೆ. ಚಂದ್ರಮೌಳೀಶ್ವರ ದೇವಸ್ಥಾನದ ಎದುರಿನ ಮೂರು, ರಥ ನಿಲ್ಲುವ ಮಂಟಪದ ಬಳಿಕದ ಮೂರು ಗುರ್ಜಿಗಳು ಹೀಗೆ ತಲಾ ಮೂರು ಗುರ್ಜಿಗಳು ಅನಂತೇಶ್ವರ ಮತ್ತು ಚಂದ್ರಮೌಳೀಶ್ವರ ದೇವಸ್ಥಾನಕ್ಕೆ ಸಂಬಂಧಿಸಿದವು.

ಕೃಷ್ಣಾಷ್ಟಮಿ ಸಂಭ್ರಮಕ್ಕೆ ಪ್ರತ್ಯೇಕ ಸಮಿತಿಗಳನ್ನು ರಚಿಸಿ ಪ್ರಮುಖರಿಗೆ ಜವಾಬ್ದಾರಿ ವಹಿಸಲಾಗಿದೆ. ಪರ್ಯಾಯ ಪುತ್ತಿಗೆ ಮಠಾಧೀಶರಾದ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರ ಸಲಹೆ, ಮಾರ್ಗದರ್ಶನದಂತೆ ತಯಾರಿ ಕಾರ್ಯ ಆರಂಭಗೊಂಡು, ಈಗಾಗಲೇ ಹಲವು ಪೂರ್ವಭಾವಿ ಸಭೆಗಳು ನಡೆದಿದೆ.

ಹುಲಿವೇಷಕ್ಕೆ ತಂಡಗಳ ಸಜ್ಜು

ನಗರದಲ್ಲಿ ಹುಲಿ ವೇಷ ತಂಡಗಳು ಅಷ್ಟಮಿಗೆ ಹುಲಿ ಕುಣಿತ ಪ್ರದರ್ಶಿಸಲು ಸಜ್ಜುಗೊಳ್ಳುತ್ತಿವೆ. ನಗರ, ಗ್ರಾಮಾಂತರ ಭಾಗದ ಖ್ಯಾತ ಹುಲಿವೇಷಧಾರಿಗಳ ತಂಡದ ಪೋಸ್ಟರ್‌ಗಳು ರಾರಾಜಿಸುತ್ತಿವೆ. ವಿವಿಧ ಸಂಘ, ಸಂಸ್ಥೆಗಳು ಕೃಷ್ಣ ವೇಷ ಸ್ಪರ್ಧೆ ಮತ್ತು ಹುಲಿ ಕುಣಿತ ಸ್ಪರ್ಧೆ ಆಯೋಜಿಸಲು ತಯಾರಿ ನಡೆಸಿವೆ.

ಭಕ್ತರು, ಪ್ರವಾಸಿಗರು

ಶ್ರೀಕೃಷ್ಣ ಜನ್ಮಾಷ್ಟಮಿ, ವಿಟ್ಲಪಿಂಡಿ ಉತ್ಸವ ಕಣ್ತುಂಬಿಕೊಳ್ಳಲು ಈ ಬಾರಿ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು, ಪ್ರವಾಸಿಗರು ಆಗಮಿಸುವ ಸಾಧ್ಯತೆ ಇದೆ. 4ನೇ ಶನಿವಾರ, ರವಿವಾರ ರಜೆ ಇರುವುದರಿಂದ ಮತ್ತು ಆ. 26, 27 ಹೆಚ್ಚುವರಿ ರಜೆ ಇದ್ದಲ್ಲಿ ಸ್ಥಳೀಯರು ಸಹಿತ, ಹೊರ ಜಿಲ್ಲೆ, ರಾಜ್ಯಗಳಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಆಗಮಿಸುವ ಸಾಧ್ಯತೆ ಇದೆ. ಈಗಾಗಲೇ ಬಹುತೇಕ ಹೊಟೇಲ್‌, ಛತ್ರ, ಲಾಡ್ಜ್ಗಳಲ್ಲಿ ದೂರದ ಊರಿನ ಭಕ್ತರು ಕೊಠಡಿಗಳನ್ನು ಕಾದಿರಿಸಿದ್ದಾರೆ.

ನಗದು ಬಹುಮಾನ

ಸಾಂಸ್ಕೃತಿಕ ಕಾರ್ಯಕ್ರಮಗಳ ಆಯೋಜನೆ, ಮುದ್ದುಕೃಷ್ಣ, ರಂಗೋಲಿ, ಚಿತ್ರಕಲೆ ಸಹಿತ ಮೊದಲಾದ ಸ್ಪರ್ಧೆಗಳನ್ನು ಕೃಷ್ಣಮಠದಲ್ಲಿ ಆಯೋಜಿಸಲಾಗುತ್ತಿದೆ. ಇದೇ ಮೊದಲ ಬಾರಿಗೆ ಪರ್ಯಾಯ ಮಠದ ವತಿಯಿಂದ ನಗದು ಬಹುಮಾನವನ್ನು ಪೌರಾಣಿಕ, ಹುಲಿವೇಷ, ಜಾನಪದ ನೃತ್ಯಗಳಿಗೆ ಕೊಡಲಾಗುತ್ತಿದೆ. ಶ್ರೀ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ಮಾಸೋತ್ಸವದ ನಿಮಿತ್ತ ಆ. 1ರಿಂದಲೇ ವಿವಿಧ ಕಾರ್ಯಕ್ರಮ, ಸ್ಪರ್ಧೆ ಇತ್ಯಾದಿ ಆರಂಭಗೊಂಡಿದೆ.

ಟಾಪ್ ನ್ಯೂಸ್

PM Modi: ವಿದೇಶದಲ್ಲಿ ನಮ್ಮ ದೇವತೆಗಳಿಗೆ ರಾಹುಲ್‌ ಅವಮಾನ

PM Modi: ವಿದೇಶದಲ್ಲಿ ನಮ್ಮ ದೇವತೆಗಳಿಗೆ ರಾಹುಲ್‌ ಅವಮಾನ

ನೌಕಾನೆಲೆ ಸಿಬಂದಿಯಿಂದ ಮೀನುಗಾರರ ಬಲೆಗೆ ಕತ್ತರಿ

Karwar: ನೌಕಾನೆಲೆ ಸಿಬಂದಿಯಿಂದ ಮೀನುಗಾರರ ಬಲೆಗೆ ಕತ್ತರಿ

“ಹಾಲಿನ ದರ ಹೆಚ್ಚಳ ಬಗ್ಗೆ ಸಿಎಂ ಸಿದ್ದರಾಮಯ್ಯ ನಿರ್ಧಾರ’: ಕೆಎಂಎಫ್ ಅಧ್ಯಕ್ಷ

KMF; “ಹಾಲಿನ ದರ ಹೆಚ್ಚಳ ಬಗ್ಗೆ ಸಿಎಂ ಸಿದ್ದರಾಮಯ್ಯ ನಿರ್ಧಾರ’: ಭೀಮಾ ನಾಯ್ಕ

Karnataka ಸುವರ್ಣ ಸಂಭ್ರಮದಲ್ಲಿ ಕನ್ನಡ ಜನೋತ್ಸವ

Karnataka ಸುವರ್ಣ ಸಂಭ್ರಮದಲ್ಲಿ ಕನ್ನಡ ಜನೋತ್ಸವ

Tungabhadra ಡ್ಯಾಂನ ಎಲ್ಲ 33 ಗೇಟ್‌ ಬದಲಿಸಲು ತಜ್ಞರ ಸಲಹೆ

Tungabhadra ಡ್ಯಾಂನ ಎಲ್ಲ 33 ಗೇಟ್‌ ಬದಲಿಸಲು ತಜ್ಞರ ಸಲಹೆ

modi (4)

Congress-NC ಮೈತ್ರಿಗೆ ಪಾಕ್‌ ಬೆಂಬಲ, 370ನೇ ವಿಧಿ ಮರುಸ್ಥಾಪನೆ ಅಸಾಧ್ಯ: ಪ್ರಧಾನಿ: ಮೋದಿ

High Court: ಬಾಂಬ್‌ ಸ್ಫೋಟ ಹೇಳಿಕೆ; ಶೋಭಾ ಕರಂದ್ಲಾಜೆ ಮೇಲಿನ ಕೇಸ್‌ ರದ್ದು

High Court: ಬಾಂಬ್‌ ಸ್ಫೋಟ ಹೇಳಿಕೆ; ಶೋಭಾ ಕರಂದ್ಲಾಜೆ ಮೇಲಿನ ಕೇಸ್‌ ರದ್ದು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udayavani.com “ನಮ್ಮನೆ ಕೃಷ್ಣ”: ಮೆಚ್ಚುಗೆ ಗಳಿಸಿದ 3ನೇ ರೀಲ್ಸ್ ಪ್ರಸಾರ

Udayavani.com “ನಮ್ಮನೆ ಕೃಷ್ಣ”: ತೃತೀಯ ಬಹುಮಾನ ಗಳಿಸಿದ ರೀಲ್ಸ್

ಮುನಿಯಾಲ್‌ ಇನ್ಸ್ಟಿಟ್ಯೂಟ್‌ ಆಫ್ ಆಯುರ್ವೇದ ಮೆಡಿಕಲ್‌ ಕಾಲೇಜು

Sep.20: ಮುನಿಯಾಲ್‌ ಇನ್ಸ್ಟಿಟ್ಯೂಟ್‌ ಆಫ್ ಆಯುರ್ವೇದ ಮೆಡಿಕಲ್‌ ಕಾಲೇಜು ಘಟಿಕೋತ್ಸವ

Udupi: ಯುಜಿಡಿ ಚೇಂಬರ್‌ ಅವ್ಯವಸ್ಥೆಗಿಲ್ಲ ಪರಿಹಾರ

Udupi: ಯುಜಿಡಿ ಚೇಂಬರ್‌ ಅವ್ಯವಸ್ಥೆಗಿಲ್ಲ ಪರಿಹಾರ

ಮಲ್ಪೆ ಸೈಂಟ್‌ಮೇರೀಸ್‌ ದ್ವೀಪದಲ್ಲಿ ಸ್ವತ್ಛತೆ

Malpe ಸೈಂಟ್‌ಮೇರೀಸ್‌ ದ್ವೀಪದಲ್ಲಿ ಸ್ವಚ್ಛತೆ

Udupi: ಜಿಲ್ಲಾ ಕ್ರೀಡಾಂಗಣದ ಸಿಂಥೆಟಿಕ್‌ ಟ್ರ್ಯಾಕ್‌ಗೆ ಹಾನಿ

Udupi: ಜಿಲ್ಲಾ ಕ್ರೀಡಾಂಗಣದ ಸಿಂಥೆಟಿಕ್‌ ಟ್ರ್ಯಾಕ್‌ಗೆ ಹಾನಿ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

1-kashmir-msulim-IAS

Kashmir; ಮೊದಲ ಮುಸ್ಲಿಂ ಐಎಎಸ್‌ ಅಧಿಕಾರಿ ನಿಧನ

PM Modi: ವಿದೇಶದಲ್ಲಿ ನಮ್ಮ ದೇವತೆಗಳಿಗೆ ರಾಹುಲ್‌ ಅವಮಾನ

PM Modi: ವಿದೇಶದಲ್ಲಿ ನಮ್ಮ ದೇವತೆಗಳಿಗೆ ರಾಹುಲ್‌ ಅವಮಾನ

1-tWWW

Tupperware ಲಂಚ್‌ ಬಾಕ್ಸ್‌ ದಿವಾಳಿ: ಅಮೆರಿಕದ ಕಂಪೆನಿ ಘೋಷಣೆ

1-JSSS

TMC ರಾಜ್ಯಸಭಾ ಸದಸ್ಯತ್ವಕ್ಕೆ ಜವಾಹರ್‌ ಸರ್ಕಾರ್‌ ರಾಜೀನಾಮೆ

ನೌಕಾನೆಲೆ ಸಿಬಂದಿಯಿಂದ ಮೀನುಗಾರರ ಬಲೆಗೆ ಕತ್ತರಿ

Karwar: ನೌಕಾನೆಲೆ ಸಿಬಂದಿಯಿಂದ ಮೀನುಗಾರರ ಬಲೆಗೆ ಕತ್ತರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.