Kankanady ಕರಾವಳಿ ವೃತ್ತದಿಂದ ಲೋವರ್ ಬೆಂದೂರ್ವೆಲ್ ರಸ್ತೆ ತಾತ್ಕಾಲಿಕ ದುರಸ್ಥಿ
Team Udayavani, Aug 18, 2024, 3:06 PM IST
ಮಹಾನಗರ: ಕಂಕನಾಡಿ ಕರಾವಳಿ ವೃತ್ತ ದಿಂದ ಲೋವರ್ ಬೆಂದೂರ್ವೆಲ್ವರೆಗೆ ಹೊಂಡಗುಂಡಿಗಳಿಂದ ಕೂಡಿದ್ದ ರಸ್ತೆಯನ್ನು ತಾತ್ಕಾಲಿಕವಾಗಿ ದುರಸ್ತಿಗೊಳಿಸಲಾಗಿದೆ.
ಕೆಲವೇ ಮೀಟರ್ಗಳಷ್ಟು ಇರುವ ಈ ರಸ್ತೆಯಲ್ಲಿ ಬೃಹತ್ ಹೊಂಡ ಗುಂಡಿಗಳು ನಿರ್ಮಾಣವಾಗಿದ ಹಿನ್ನೆಲೆ ವಾಹನ ಸವಾರರು ಪರದಾಡುತ್ತಿದ್ದರು. ದಿನವಿಡೀ ಈ ರಸ್ತೆ ವಾಹನ ದಟ್ಟನೆಯಿಂದ ಕೂಡಿರುವ ಕಾರಣ ಸುಗಮ ಸಂಚಾರಕ್ಕೆ ಅಡ್ಡಿಯಾಗುತ್ತಿತ್ತು. ನಿತ್ಯ ಟ್ರಾಫಿಕ್ ಜಾಮ್ನಿಂದ ಸವಾರರು ಕಂಗೆಟ್ಟಿದ್ದರು. ಪ್ರತೀ ಮಳೆಗಾಲದಲ್ಲೂ ಇದೇ ಪರಿಸ್ಥಿತಿ ನಿಮಾರ್ಣವಾಗುವ ಹಿನ್ನೆಲೆ ಉದಯವಾಣಿ ಸುದಿನ ಆ. 9ರಂದು ಮೂಲ ಸೌಲಭ್ಯ ಸಮಾಚಾರದಲ್ಲಿ ವರದಿ ಪ್ರಕಟಿಸಿತ್ತು.
ಇದರ ಬೆನ್ನಲ್ಲೇ ಪಾಲಿಕೆ ರಸ್ತೆಯನ್ನು ತಾತ್ಕಾಲಿಕವಾಗಿ ದುರಸ್ತಿಗೊಳಿಸಿ ಸಾರ್ವಜನಿಕ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟಿದೆ. ತತ್ಕ್ಷಣ ಸ್ಪಂದಿಸಿದ ಇಲಾಖೆಯ ಕ್ರಮಕ್ಕೆ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಆದಷ್ಟು ಶೀಘ್ರದಲ್ಲೇ ರಸ್ತೆ ಡಾಮರು ಕಾಮಗಾರಿ ನಡೆಸಬೇಕು ಎಂದು ಸಾರ್ವ ಜನಿಕರು ಆಗ್ರಹಿಸಿದ್ದಾರೆ.
ಮಾನವೀಯತೆ ಮೆರೆದ ಆಟೋ ರಿಕ್ಷಾ ಚಾಲಕ
ಕರಾವಳಿ ವೃತ್ತದಿಂದ ಲೋವರ್ ಬೆಂದೂರ್ವೆಲ್ ರಸ್ತೆಯಲ್ಲಿ ಸೃಷ್ಟಿಯಾಗಿದ್ದ ಹೊಂಡಗಳಲ್ಲಿ ಸಂಚರಿಸಲು ಸಂಕಷ್ಟವಾಗುತ್ತಿರುವುದನ್ನು ಗಮನಿಸಿದ ಆಟೋ ರಿಕ್ಷಾ ಚಾಲಕರೊಬ್ಬರು ಗುಂಡಿ ಮುಚ್ಚುವ ಕಾರ್ಯಕ್ಕೆ ಮುಂದಾಗಿದ್ದರು. ತಮ್ಮ ರಿಕ್ಷಾದಲ್ಲಿ ಕಲ್ಲು ಮಣ್ಣು ತಂದು ಅವುಗಳನ್ನು ಹೊಂಡಗಳಿದ್ದ ಭಾಗಕ್ಕೆ ಹಾಕಿದ್ದಾರೆ. ಆ ಮೂಲಕ ಹೊಂಡ ಮುಚ್ಚುವ ಕಾರ್ಯಕ್ಕೆ ಚಾಲನೆ ನೀಡಿದ್ದರು. ಇದೀಗ ಪಾಲಿಕೆ ಮೂಲಕ ತಾತ್ಕಾಲಿಕವಾಗಿ ಹೊಂಡ ಮುಚ್ಚುವ ಕಾರ್ಯವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.