Horoscope: ಸತ್ಯ ನುಡಿದು ನಿಷ್ಠುರಕ್ಕೆ ಗುರಿಯಾಗುವ ಭೀತಿ
Team Udayavani, Aug 19, 2024, 7:01 AM IST
ಮೇಷ: ಹೊಸ ಸಪ್ತಾಹದ ಮೊದಲ ದಿನ ಅದೃಷ್ಟವನ್ನು ತರಲಿದೆ. ಉದ್ಯೋಗ ಕ್ಷೇತ್ರದಲ್ಲಿ ಕಾರ್ಯಗಳು ಶೀಘ್ರ ಮುಕ್ತಾಯ. ಉದ್ಯಮದ ನೌಕರರಿಗೆ ವಿಶೇಷ ಅನುಕೂಲತೆಗಳು. ಮಹಿಳೆಯರ ಸ್ವಾವಲಂಬನೆ ಯೋಜನೆ ಮುನ್ನಡೆ.
ವೃಷಭ: ಉದ್ಯೋಗ ಸ್ಥಾನದಲ್ಲಿ ಸ್ವಲ್ಪ ಸುಧಾರಣೆ. ಕೃಷಿ ಕ್ಷೇತ್ರದ ಪ್ರಯೋಗಗಳು ಯಶಸ್ವಿ. ಸರಕಾರಿ ಯೋಜನೆಗಳ ಸೌಲಭ್ಯಗಳ ಬದಲು ಆತ್ಮನಿರ್ಭರತೆಗೆ ಪ್ರಾಶಸ್ತ್ಯ. ಸತ್ಯ ನುಡಿದು ನಿಷ್ಠುರಕ್ಕೆ ಗುರಿಯಾಗುವ ಭೀತಿ.
ಮಿಥುನ: ಧೈರ್ಯ, ಸಾಹಸ, ಪ್ರಾಮಾಣಿಕತೆಗೆ ಜಯ.ಉದ್ಯಮ ಅಭಿವೃದ್ಧಿಗೆ ಸಾಂಸ್ಥಿಕ ನೆರವು ಪ್ರಾಪ್ತಿ. ವಸ್ತ್ರ , ಸಿದ್ಧ ಉಡುಪು , ಆಭರಣ ವ್ಯಾಪಾರಿಗಳಿಗೆ ಲಾಭ. ವ್ಯಾಪಾರಿಗಳ ಮನೆಯಲ್ಲಿ ಸಂತೋಷದ ವಾತಾವರಣ. ವ್ಯವಹಾರ ಸಂಬಂಧ ಸಣ್ಣ ಪ್ರಯಾಣ.
ಕರ್ಕಾಟಕ: ಸಮಗ್ರ ಪ್ರಗತಿಯತ್ತ ದಾಪುಗಾಲು.ಉದ್ಯೋಗದಲ್ಲಿ ಕ್ರಮಶ: ಉನ್ನತಿ. ಅಕಸ್ಮಾತ್ ಧನಾಗಮ ಯೋಗ. ಕೃಷ್ಯುತ್ಪನ್ನ ಮಾರಾಟದಿಂದ ಉತ್ತಮ ಲಾಭ. ಆಸ್ತಿ ಪಾಲು ಮಾತುಕತೆಯಲ್ಲಿ ಭಾಗಿ.
ಸಿಂಹ: ಹಿಂದಡಿಯಿಡದೆ ಮುನ್ನಡೆಯುವ ಪ್ರವೃತ್ತಿಗೆ ಜಯ. ಉದ್ಯೋಗ ಕ್ಷೇತ್ರದಲ್ಲಿ ಗೌರವದ ಹುದ್ದೆ ಉದ್ಯಮಕ್ಕೆ ಸರ್ವತೋಮುಖ ಪ್ರಗತಿ. ವಸ್ತ್ರ, ಸಿದ್ಧ ಉಡುಪು ವ್ಯಾಪಾರಿಗಳಿಗೆ ಹೇರಳ ಲಾಭ. ಕೃಷಿ ಕಾರ್ಮಿಕರಿಗೆ ಅನುಕೂಲದ ವಾತಾವರಣ.
ಕನ್ಯಾ: ಸ್ಥಿರ ಉದ್ಯೋಗದ ಯೋಗ. ಸಹೋದ್ಯೋಗಿಗಳಿಂದ ಪ್ರತಿಭೆಗೆ ಗೌರವ. ಸಣ್ಣ ಉದ್ಯಮಿಗಳಿಗೆ ಅನುಕೂಲದ ದಿನ. ಕುಶಲಕರ್ಮಿಗಳಿಗೆ ಯೋಗ್ಯ ಸ್ಥಾನದಲ್ಲಿ ಉದ್ಯೋಗಾವಕಾಶ. ಸಣ್ಣ ಪ್ರಯಾಣ ಸಂಭವ.
ತುಲಾ: ಉದ್ಯೋಗ ಸ್ಥಾನದಲ್ಲಿ ಯೋಗ್ಯತೆಗೆ ಸರಿಯಾದ ಗೌರವ ಪ್ರಾಪ್ತಿ. ಗುರುಸ್ಥಾನದಲ್ಲಿರುವ ಹಿರಿಯರ ಭೇಟಿಯಿಂದ ಸಮಾಧಾನ. ಹಿತಶತ್ರುಗಳ ಪರಾಭವ. ದೇವತಾ ಸಾನ್ನಿಧ್ಯ ದರ್ಶನ. ಸಂಸಾರದಲ್ಲಿ ಎಲ್ಲರಿಗೂ ಉತ್ತಮ ಆರೋಗ್ಯ
ವೃಶ್ಚಿಕ: ಉದ್ಯೋಗ ಸ್ಥಾನದಲ್ಲಿ ಸ್ವಲ್ಪ ಸುಧಾರಣೆ. ಸರಕಾರಿ ನೌಕರರಿಗೆ ವರ್ಗಾವಣೆ ಸಂಭವ. ಸಹಕಾರಿ ಸಂಸ್ಥೆಗಳ ಸ್ಥಿತಿ ಸುಧಾರಣೆ. ಗೃಹಿಣಿಯರ ಸ್ವಾವಲಂಬನೆ ಯೋಜನೆಗಳಿಗೆ ಯಶಸ್ಸು. ಮಕ್ಕಳ ಹೊಸ ಉದ್ಯಮ ಯೋಜನೆ ಸಾಕಾರ.
ಧನು: ಕಠಿನ ಮಾರ್ಗದಲ್ಲಿ ಸಂಪಾದನೆ ವೃದ್ಧಿ. ಸಹೋದ್ಯೋಗಿಗಳಿಂದ ಸಂಪೂರ್ಣ ಸಹಕಾರ. ಸಣ್ಣ ಉದ್ಯಮ ಘಟಕಕ್ಕೆ ಸಮರ್ಥರ ನೇಮಕ. ಖಾದಿ ಉಡುಪು ಉತ್ಪಾದಕರಿಗೆ ಆದಾಯ ವೃದ್ಧಿ. ಖಾದ್ಯ ಪದಾರ್ಥ ಉದ್ಯಮಕ್ಕೆ ದೊಡ್ಡ ಪ್ರಮಾಣದಲ್ಲಿ ಲಾಭ.
ಮಕರ: ಉದ್ಯೋಗ ಸ್ಥಾನದಲ್ಲಿ ಕೆಲಸಕ್ಕೆ ಉತ್ತೇಜನ. ಉದ್ಯಮ ಉತ್ಪನ್ನಗಳ ಮಾರಾಟ ವೃದ್ಧಿ. ಆಭರಣ ವ್ಯಾಪಾರಿಗಳಿಗೆ ನಿರೀಕ್ಷೆ ಮೀರಿದ ಪ್ರಮಾಣದಲ್ಲಿ ವರಮಾನ ವೃದ್ಧಿ. ಪ್ರಾಪ್ತ ವಯಸ್ಕ ಕನ್ಯೆಯರಿಗೆ ವಿವಾಹ ಯೋಗ.
ಕುಂಭ: ಕುಗ್ಗದ ಹುರುಪಿನೊಂದಿಗೆ ಹೊಸ ಸಪ್ತಾಹದ ಕಾರ್ಯಾರಂಭ. ಉದ್ಯೋಗ ಸ್ಥಾನದಲ್ಲಿ ನಿಗದಿತ ಕಾರ್ಯಗಳು ಮುಕ್ತಾಯ. ಉದ್ಯಮದ ಗ್ರಾಹಕರಿಂದ ನಿರೀಕ್ಷೆ ಮೀರಿದ ಬೇಡಿಕೆಗಳು. ಮುದ್ರಣಸಾಮಗ್ರಿ, ಸ್ಟೇಶನರಿ ವಿತರಕರಿಗೆ ಹೊಸಬರ ಸಂಪರ್ಕ.
ಮೀನ: ದಿನಗಳು ಉರುಳಿದಂತೆ ಇನ್ನಷ್ಟು ಕಾರ್ಯಗಳ ಒತ್ತಡ. ಏಕಕಾಲಕ್ಕೆ ಹಲವು ವಿಭಾಗಗಳಿಂದ ಕೆಲಸಕ್ಕೆ ಆಹ್ವಾನ. ಸರಕಾರಿ ಇಲಾಖೆಗಳವರಿಂದ ಸಹಕಾರ. ಉಪಕೃತ ಸಾರ್ವಜನಿಕರಿಂದ ಪ್ರಶಂಸೆ. ಕೃಷಿಕರ ಅನುಕೂಲಕ್ಕೆ ಹೊಸ ಕ್ರಮಗಳು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.