![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Aug 19, 2024, 12:17 AM IST
ಚಿಕ್ಕಮಗಳೂರು: ಚಿಕ್ಕಮಗಳೂರು ನಗರದಾದ್ಯಂತ ರವಿವಾರ ಧಾರಾಕಾರ ಮಳೆಯಾಗಿದೆ. ಮಳೆಯ ಆರ್ಭಟಕ್ಕೆ ರಸ್ತೆ ಮೇಲೆ ನೀರು ಹರಿದು ವಾಹನ ಸವಾರರು ಪರದಾಡುವಂತಾಯಿತು. ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದೆ. ಧಾರಾಕಾರ ಮಳೆಯಿಂದ ಕೆಲವುಕಾಲ ಜನಜೀವನ ಅಸ್ತವ್ಯಸ್ತಗೊಂಡಿತ್ತು.
ಬೆಳಗ್ಗೆಯಿಂದ ಉರಿಬಿಸಿಲು ಸುಡುತ್ತಿದ್ದು ಮಧ್ಯಾಹ್ನದ ವೇಳೆ ಏಕಾಏಕಿ ಧಾರಾಕಾರ ಮಳೆಯಾಗಿದೆ. ಏಕಾಏಕಿ ಮಳೆಯಾದ ಪರಿಣಾಮ ವಾಹನ ಸವಾರರು ಪರದಾಡಬೇಕಾಯಿತು. ಚರಂಡಿ ನೀರು ರಸ್ತೆ ಮೇಲೆ ಹರಿದ ಪರಿಣಾಮ ರಸ್ತೆ ಕಾಣದಂತಾಗಿತ್ತು. ಮಳೆಯ ಆರ್ಭಟಕ್ಕೆ ತಗ್ಗು ಪ್ರದೇಶಗಳಿಗೂ ನೀರು ನುಗ್ಗಿದ್ದು ಜನರು ಪರದಾಡುವಂತಾಯಿತು.
ಗುಡುಗು- ಮಿಂಚು ಸಹಿತ ಒಂದು ಗಂಟೆಗೂ ಹೆಚ್ಚು ಕಾಲ ಮಳೆ ಸುರಿದಿದ್ದು, ದಂಟರಮಕ್ಕಿವೃತ್ತದಲ್ಲಿ ಮಳೆಯ ನೀರು ರಾಷ್ಟ್ರೀಯ ಹೆದ್ದಾರಿ ಮೇಲೆ ಹರಿದ ಪರಿಣಾಮ ವಾಹನ ಸವಾರರಿಗೆ ರಸ್ತೆ ಕಾಣದಂತಾಗಿತ್ತು. ಏಕಾಏಕಿ ಸುರಿದ ಧಾರಾಕಾರ ಮಳೆ ನಗರದ ಜನತೆಯಲ್ಲಿ ಆತಂಕ ಮೂಡಿಸಿತು.
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.