Re-Examination Results: ವಿಳಂಬದಿಂದ ಅನ್ಯಾಯ: ಮೂವರು ವಿದ್ಯಾರ್ಥಿಗಳಿಂದ ಶಾಸಕರಿಗೆ ಮನವಿ


Team Udayavani, Aug 19, 2024, 6:29 AM IST

Re-Examination Results: ವಿಳಂಬದಿಂದ ಅನ್ಯಾಯ: ಮೂವರು ವಿದ್ಯಾರ್ಥಿಗಳಿಂದ ಶಾಸಕರಿಗೆ ಮನವಿ

ಪುತ್ತೂರು: ಪದವಿ ತರಗತಿಯ ಪ್ರಥಮ ಸೆಮಿಸ್ಟರ್‌ನಲ್ಲಿ ಇಂಗ್ಲಿಷ್‌ ಭಾಷೆಯಲ್ಲಿ ಅನುತೀರ್ಣಗೊಂಡಿದ್ದ ಮೂವರು ವಿದ್ಯಾರ್ಥಿಗಳು ತೃತೀಯ ಸೆಮಿಸ್ಟರ್‌ನಲ್ಲಿ ಮರು ಪರೀಕ್ಷೆ ಬರೆದಿದ್ದು, ಆದರೆ ಅದರ ಫಲಿತಾಂಶ ಮೂರು ವರ್ಷಗಳ ಪದವಿಯ ಕೊನೆಯ ಸೆಮಿಸ್ಟರ್‌ ಪರೀಕ್ಷೆ ಮುಗಿದ ಬಳಿಕ ಬಂದ ಕಾರಣ ಅವರಿಗೆ ಶೈಕ್ಷಣಿಕ ಭವಿಷ್ಯಕ್ಕೆ ದೊಡ್ಡ ಹಿನ್ನಡೆ ಆಗಿದೆ.

ಮಂಗಳೂರು ವಿಶ್ವವಿದ್ಯಾನಿಲಯ ವ್ಯಾಪ್ತಿಯ ಉಪ್ಪಿನಂಗಡಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಮೂವರು ವಿದ್ಯಾರ್ಥಿಗಳು ತಮಗೆ ಅನ್ಯಾಯವಾಗಿದೆ ಎಂದು ಪುತ್ತೂರು ಶಾಸಕ ಅಶೋಕ್‌ ಕುಮಾರ್‌ ರೈ ಅವರಲ್ಲಿ ಅಳಲು ತೋಡಿಕೊಂಡಿದ್ದಾರೆ. ನಾವು ಮುಂದಿನ ಶಿಕ್ಷಣ ಪಡೆಯಲು ಸಾಧ್ಯವಿಲ್ಲದ ಸ್ಥಿತಿ ಉಂಟಾಗಿದ್ದು, ನಮಗೆ ನ್ಯಾಯ ಕೊಡಿಸಿ ಎಂದು ಮನವಿ ಮಾಡಿದ್ದಾರೆ.

ಆರೋಪ ಏನು? ಉಪ್ಪಿನಂಗಡಿ ಪದವಿ ಕಾಲೇಜಿನ ಸಮಾಜ ಕಾರ್ಯ ವಿಭಾಗದ ವಿದ್ಯಾರ್ಥಿಗಳಾದ ಜನಾರ್ದನ ಎಂ., ದೀಕ್ಷಿತಾ ಮತ್ತು ಸ್ವಾತಿ ಪಿ. ಅವರು ಎರಡು ವರ್ಷಗಳ ಹಿಂದಿನ ಪ್ರಥಮ ಸೆಮಿಸ್ಟರ್‌ ಪರೀಕ್ಷೆಯಲ್ಲಿ ಇಂಗ್ಲಿಷ್‌ ಭಾಷೆ ಪರೀಕ್ಷೆಯಲ್ಲಿ ಅನುತೀರ್ಣಗೊಂಡಿದ್ದರು. ನಿಯಮ ಪ್ರಕಾರ ಅವರು ತೃತೀಯ ಸೆಮಿಸ್ಟರ್‌ನ ಪರೀಕ್ಷೆ ಜತೆಗೆ ಪ್ರಥಮ ಸೆಮಿಸ್ಟರ್‌ನಲ್ಲಿ ಅನುತ್ತೀರ್ಣಗೊಂಡಿದ್ದ ವಿಷಯಕ್ಕೆ ಮರು ಪರೀಕ್ಷೆ ಬರೆದಿದ್ದರು. ಆದರೆ ನಾಲ್ಕನೇ ಸೆಮಿಸ್ಟರ್‌ ಫ‌ಲಿತಾಂಶದ ಜತೆಗೆ ಮರು ಪರೀಕ್ಷೆಯ ಫಲಿತಾಂಶ ಬಂದಿರಲಿಲ್ಲ. ಐದನೇ ಸೆಮಿಸ್ಟರ್‌ನ ವೇಳೆಯಲ್ಲೂ ಫಲಿತಾಂಶ ಸಿಗಲಿಲ್ಲ. ಪದವಿ ತರಗತಿಯ ಅಂತಿಮ ಹಂತದ ಆರನೇ ಸೆಮಿಸ್ಟರ್‌ನ ಪರೀಕ್ಷೆ ಬರೆದು ಎರಡು ವಾರ ಕಳೆದಿರುವ ಈ ಹೊತ್ತಿನಲ್ಲಿ ಮೂರನೇ ಸೆಮಿಸ್ಟರ್‌ನಲ್ಲಿ ಬರೆದ ಮರು ಪರೀಕ್ಷೆಯ ಫಲಿತಾಂಶ ಪ್ರಕಟಗೊಂಡಿದೆ. ಅದರಲ್ಲೂ ಅವರು ಅನುತ್ತೀರ್ಣರಾಗಿರುವುದು ಸಮಸ್ಯೆಯ ತೀವ್ರತೆಯನ್ನು ಹೆಚ್ಚಿಸಿದೆ.

ಅವಕಾಶ ಕಳೆದುಕೊಂಡರು! ಮರು ಪರೀಕ್ಷೆಯ ಫಲಿತಾಂಶವೂ ಅನುತ್ತೀರ್ಣ ಎಂದು ಬಂದಿರುವುದರಿಂದ ಅವರ ಭವಿಷ್ಯದ ಓದಿಗೆ ತಡೆಯಾಗಿದೆ. ನಾಲ್ಕನೇ ಸೆಮಿಸ್ಟರ್‌ ಸಂದರ್ಭದಲ್ಲಿ ಫ‌ಲಿತಾಂಶ ಪ್ರಕಟವಾಗುತ್ತಿದ್ದರೆ ಆಗ ಅನುತೀರ್ಣ ಎಂದಿದ್ದರೂ ಐದನೇ ಸೆಮಿಸ್ಟರ್‌ನಲ್ಲಿ ಪರೀಕ್ಷೆ ಬರೆಯಲು ಅವಕಾಶ ಇತ್ತು. ಆದರೆ ಪಲಿತಾಂಶ ವಿಳಂಬದಿಂದ ಆ ಅವಕಾಶ ಕೈ ತಪ್ಪಿದೆ.

ಟಾಪ್ ನ್ಯೂಸ್

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ

POCSO ಪ್ರಕರಣ : ಜ್ಯೋತಿಷಿ ನರಸಿಂಹ ಪ್ರಸಾದ್‌ ಪಾಂಗಣ್ಣಾಯ ಬಂಧನ

POCSO ಪ್ರಕರಣ : ಜ್ಯೋತಿಷಿ ನರಸಿಂಹ ಪ್ರಸಾದ್‌ ಪಾಂಗಣ್ಣಾಯ ಬಂಧನ

10

Puttur: ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿದ ಕಾರು

1

Puttur: ವಿದ್ಯುತ್‌ ಉಪಕರಣದಲ್ಲಿ ಬೆಂಕಿ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.