Siddaramaiah; ಇಂದು ಹೈಕೋರ್ಟ್ಗೆ ಅರ್ಜಿ ಸಲ್ಲಿಕೆ?: ಅಭಿಷೇಕ್ ಮನು ಸಿಂಘ್ವಿ ಆಗಮನ
ಕಾದು ನೋಡುವೆ: ಟಿ.ಜೆ. ಅಬ್ರಹಾಂ
Team Udayavani, Aug 19, 2024, 6:15 AM IST
ಬೆಂಗಳೂರು : ಸಿಎಂ ವಿರುದ್ಧ ಪ್ರಾಸಿಕ್ಯೂಷನ್ಗೆ ರಾಜ್ಯ ಪಾಲರು ಅನುಮತಿ ನೀಡಿರುವ ಕ್ರಮದ ವಿರುದ್ಧ ಕಾನೂನು ಸಮರಕ್ಕೆ ಸಕಲ ಸಿದ್ಧತೆ ಮಾಡಿಕೊಂಡಿರುವ ಕಾಂಗ್ರೆಸ್, ಈ ಸಂಬಂಧ ರಾಜಧಾನಿ ಬೆಂಗಳೂರಿಗೆ ಸುಪ್ರೀಂ ಕೋರ್ಟ್ ಹಿರಿಯ ವಕೀಲ ಹಾಗೂ ಎಐಸಿಸಿ ಕಾನೂನು ವಿಭಾಗದ ಅಧ್ಯಕ್ಷ ಅಭಿಷೇಕ್ ಮನು ಸಿಂಘ್ವಿ ಆಗಮಿಸಲಿದ್ದಾರೆ.
ಸೋಮವಾರ ಬೆಂಗಳೂರಿಗೆ ಬಂದಿಳಿಯುವ ಸಿಂಘ್ವಿ, ರಾಜ್ಯ ಪಾಲರು ಪ್ರಾಸಿಕ್ಯೂಷನ್ಗೆ ಅನು ಮತಿ ನೀಡಿರುವ ಕ್ರಮವನ್ನು ಪ್ರಶ್ನಿಸಿ ಹೈಕೋರ್ಟ್ ಅರ್ಜಿ ಸಲ್ಲಿಸುವ ಸಾಧ್ಯತೆ ಇದೆ. ಇದರೊಂದಿಗೆ ಕಾನೂನು ಹೋರಾಟಕ್ಕೆ ಚಾಲನೆ ದೊರೆಯಲಿದೆ. ಇದಕ್ಕಾಗಿ ಅಗತ್ಯ ದಾಖಲೆಗಳನ್ನು ಈಗಾಗಲೇ ಸಿದ್ಧಪಡಿಸಿಕೊಳ್ಳಲಾಗಿದೆ. ಹೀಗಾಗಿ ಪ್ರಬಲವಾಗಿ ವಾದ ಮಂಡಿಸಲು ಎಲ್ಲ ರೀತಿಯಲ್ಲೂ ಸಜ್ಜಾಗಲಾಗಿದೆ ಎಂದು ಮೂಲಗಳು ತಿಳಿಸಿವೆ.
ಹೈಕಮಾಂಡ್ ಸೂಚನೆಯಂತೆ ಸಿಂಘ್ವಿ ಆಗಮನ ರಾಜ್ಯಪಾಲರು ಶೋಕಾಸ್ ನೋಡಿದ ಅನಂತರ ಸಿಎಂ-ಡಿಸಿಎಂ ದಿಲ್ಲಿಗೆ ತೆರಳಿದ್ದರು. ಈ ವೇಳೆ ಹಿರಿಯ ವಕೀಲರು, ಕಾನೂನು ತಜ್ಞರಾದ ಕಪಿಲ್ ಸಿಬಲ್, ಸಿಂಘ್ವಿ ಹಾಗೂ ಇತರರನ್ನು ಭೇಟಿಯಾಗಿ ಪ್ರಕರಣ ಕುರಿತು ವಿವರಣೆ ನೀಡಿ ಸಲಹೆ ಪಡೆದಿದ್ದರು. ಇದಲ್ಲದೆ ಹೈಕಮಾಂಡ್ಗೂ ಮಾಹಿತಿ ನೀಡಿದ್ದರು. ಪಕ್ಷದ ಸೂಚನೆಯಂತೆ ಅಭಿಷೇಕ್ ಮನು ಸಿಂಘ್ವಿ ರಾಜ್ಯಕ್ಕೆ ಆಗಮಿಸುತ್ತಿದ್ದಾರೆ.
ಕಾದು ನೋಡುವೆ: ಟಿ.ಜೆ. ಅಬ್ರಹಾಂ
ಗೌರ್ನರ್ ಪ್ರಾಸಿಕ್ಯೂಷನ್ಗೆ ಅನುಮತಿ ಕೊಟ್ಟಿದ್ದಾರೆ. ನಮ್ಮದೇನಿದ್ದರೂ ಸದ್ಯ ಕಾದು ನೋಡುವುದಷ್ಟೇ, ಸೋಮವಾರ ಆಗುವ ಬೆಳವಣಿಗೆ ಆಧರಿಸಿ ಮುಂದೇನು ಮಾಡಬೇಕು ಎಂಬ ಬಗ್ಗೆ ತೀರ್ಮಾನ ಕೈಗೊಳ್ಳಲಾಗುವುದು ಎಂದು ದೂರುದಾರ ಟಿ.ಜೆ. ಅಬ್ರಹಾಂ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.