Train ಮಂಗಳೂರು – ಬೆಂಗಳೂರು ರೈಲು ಮಾರ್ಗ: ಭರದಿಂದ ಸಾಗುತ್ತಿದೆ ಮಣ್ಣು ತೆರವು
Team Udayavani, Aug 19, 2024, 1:07 AM IST
ಸುಬ್ರಹ್ಮಣ್ಯ: ಮಂಗಳೂರು – ಬೆಂಗಳೂರು ರೈಲು ಮಾರ್ಗದ ಸಕಲೇಶಪುರ – ಬಳ್ಳುಪೇಟೆ ರೈಲು ನಿಲ್ದಾಣದ ನಡುವಿನ ಸಕಲೇಶಪುರ ಸಮೀಪ ರೈಲು ಮಾರ್ಗಕ್ಕೆ ಮತ್ತೆ ಗುಡ್ಡ ಕುಸಿತಗೊಂಡಿರುವ ಮಣ್ಣನ್ನು ತೆರವು ಮಾಡುವ ಕಾರ್ಯಾಚರಣೆ ಭರದಿಂದ ಸಾಗುತ್ತಿದೆ.
ವಾರದ ಹಿಂದೆ ಗುಡ್ಡ ಕುಸಿದ ಪ್ರದೇಶದಲ್ಲೇ ಶುಕ್ರವಾರ ಮತ್ತೆ ಮಣ್ಣು ಕುಸಿದಿರುವ ಮತ್ತೆ ರೈಲು ಸಂಚಾರ ಸ್ಥಗಿತ ಮಾಡಲಾಗಿದೆ. ಕಳೆದ 3 ದಿನಗಳಿಂದ ಮಣ್ಣು ತೆರವು ಕಾರ್ಯಾಚರಣೆ ಭರದಿಂದ ಸಾಗುತ್ತಿದ್ದು, 4-5 ಹಿಟಾಚಿ ಸಹಾಯದಿಂದ ಮಣ್ಣು ತೆರವು ನಡೆಯುತ್ತಿದೆ. ಗುಡ್ಡ ಮೇಲ್ಭಾಗದಿಂದ ಕುಸಿಯುವ ಭೀತಿಯ ಮಣ್ಣನ್ನು ತೆರವು ಮಾಡಲಾಗುತ್ತಿದೆ. ಆದರೂ ಮಣ್ಣು ಕುಸಿಯುತ್ತಿದ್ದು ರೈಲು ಮಾರ್ಗದಲ್ಲಿ ಕೆಸರು ಮಿಶ್ರಿತ ಮಣ್ಣು ತುಂಬಿದೆ. ಅದನ್ನು ತೆರವು ಮಾಡಲಾಗುತ್ತಿದೆ. ಜತೆಗೆ ಮಣ್ಣು ಕುಸಿಯದಂತೆ ತಡೆ ಗೋಡೆ ನಿರ್ಮಾಣಕ್ಕೂ ಸಿದ್ಧತೆ ನಡೆಯುತ್ತಿದೆ.
ಆ ಭಾಗದಲ್ಲಿ ಮಣ್ಣು ಸಡಿಲವಾಗಿರು ವುದರಿಂದ ಸವಾಲಿನ ಸ್ಥಿತಿ ಇದೆ. ಭಾರೀ ಪ್ರಮಾಣದಲ್ಲಿ ಮಣ್ಣು ಕುಸಿದಿದ್ದು ಹಾಗೂ ಇನ್ನೂ ಅಲ್ಲಿ ಕುಸಿಯುವ ಭೀತಿ ಇರುವುದರಿಂದ ರೈಲು ಮಾರ್ಗದ ದುರಸ್ತಿ ಹಾಗೂ ಮಣ್ಣು ತೆರವಿಗೆ ಇನ್ನೂ ಕೆಲ ದಿನ ಹಿಡಿಯಲಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.