West Bengal: ರಾತ್ರಿ ಪಾಳಿ ವೈದ್ಯರಿಗೆ ಭದ್ರತೆ; ದೀದಿ ಸರಕಾರದಿಂದ ಹೊಸ ಕ್ರಮ
Team Udayavani, Aug 19, 2024, 6:40 AM IST
ಕೋಲ್ಕತಾ: ದೇಶಾದ್ಯಂತ ಕೋಲ್ಕತದ ಆರ್.ಜಿ. ಕಾರ್ ಆಸ್ಪತ್ರೆಯಲ್ಲಿ ನಡೆದ ತರಬೇತಿ ನಿರತ ವೈದ್ಯೆಯ ಮೇಲೆ ಅತ್ಯಾಚಾರ ಮತ್ತು ಹತ್ಯೆ ಪ್ರಕರಣ ಖಂಡಿಸಿ ದೇಶಾದ್ಯಂತ ಪ್ರತಿಭಟನೆಗಳು ತೀವ್ರಗೊಳ್ಳುತ್ತಿರುವಂತೆಯೇ ಎಚ್ಚೆತ್ತು ಕೊಂಡಿ ರುವ ಪಶ್ಚಿಮ ಬಂಗಾಲ ಸರಕಾರವು ಮಹಿಳಾ ವೈದ್ಯರ ಸುರಕ್ಷೆಯ ನಿಟ್ಟಿನಲ್ಲಿ ಹೊಸ ಯೋಜನೆ ಘೋಷಿಸಿದೆ. ಅದಕ್ಕೆ “ರಟೈರರ್ ಸಾಥಿ-ಹೆಲ್ಪರ್ಸ್ ಆಫ್ ನೈಟ್’ ಎಂದು ಹೆಸರಿಸಲಾಗಿದೆ.
ಅದರ ಅನ್ವಯ ರಾತ್ರಿ ವೇಳೆ ಕಾರ್ಯನಿರ್ವಹಿಸುವ ಮಹಿಳಾ ವೈದ್ಯರಿಗೆ ಭದ್ರತಾ ಸಿಬಂದಿಯನ್ನು ನಿಯೋಜಿಸಲಾಗುವುದು. ಪೊಲೀಸ್ ಠಾಣೆ ಗಳೊಂದಿಗೆ ಸಂಪರ್ಕ ಹೊಂದಿರುವ ಮೊಬೈಲ್ ಆ್ಯಪ್ ಅಭಿವೃದ್ಧಿ ಪಡಿಸಲಾಗುವುದು. ಅವುಗಳ ಡೌನ್ ಲೋಡ್ ಕಡ್ಡಾಯಗೊಳಿಸುವ ಮೂಲಕ ವಿಪತ್ತಿನ ಸಂದರ್ಭದಲ್ಲಿ ನೇರವಾಗಿ ಠಾಣೆಗೆ ಮಾಹಿತಿ ಸಿಗುವಂತೆ ಮಾಡಲಾಗುವುದು ಎಂದು ಸರಕಾರ ಹೇಳಿದೆ. ಆಸ್ಪತ್ರೆಗಳಲ್ಲಿ ವಿಶೇಷ ವಿಶ್ರಾಂತಿ ಕೊಠಡಿಗಳ ನಿರ್ಮಾಣ, ಸಿಸಿಟಿವಿ ಕಣ್ಗಾವಲು ಸಹಿತ ಹಲವು ಕ್ರಮಗಳನ್ನು ಕೈಗೊಳ್ಳುವುದಾಗಿ ಸರಕಾರ ತಿಳಿಸಿದೆ. ಖಾಸಗಿ ಆಸ್ಪತ್ರೆಗಳಿಗೂ ಈ ನಿಯಮ ಅನುಸರಿಸಲು ಸೂಚಿಸಲಾಗಿದೆ ಎಂದು ಸರಕಾರ ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.