Kidnap Case: ತಾಯಿ, ಮಗನ ಅಪಹರಣ; ಇಬ್ಬರು ರೌಡಿ ಸೇರಿ 9 ಮಂದಿ ಸೆರೆ
Team Udayavani, Aug 19, 2024, 10:37 AM IST
ಬೆಂಗಳೂರು: ಕಳ್ಳ ಮಾಲು ವಿಲೇವಾರಿಗೆ ಸಂಬಂಧಿಸಿದ ಹಣಕಾಸು ವ್ಯವಹಾರದಲ್ಲಿ 40 ವರ್ಷದ ಮಹಿಳೆ ಹಾಗೂ ಆಕೆಯ ಪುತ್ರನನ್ನು ಅಪಹರಿಸಿದ ಆರೋಪದಡಿ ಇಬ್ಬರು ಮಹಿಳೆಯರು ಮತ್ತು ಇಬ್ಬರು ರೌಡಿ ಶೀಟರ್ಗಳು ಸೇರಿ 9 ಮಂದಿ ಆರೋಪಿಗಳನ್ನು ಚಂದ್ರಾಲೇಔಟ್ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಚಂದ್ರಾಲೇಔಟ್ ಠಾಣೆ ರೌಡಿ ಶೀಟರ್ಗಳಾದ ಜೋಸೆಫ್ (35), ಶ್ರೀನಿವಾಸ್ ಅಲಿಯಾಸ್ ಪಾಗಲ್ ಸೀನಾ (30) ಮತ್ತು ಸೌಮ್ಯಾ (34), ಪ್ರತಾಪ್ (30), ಜತಿನ್(28), ವಿಘ್ನೇಶ್, ಆಟೋ ಚಾಲಕ ಸೈಯದ್ ಶಹಬುದ್ದೀನ್ (32), ಸ್ವಾತಿ (28) ಹಾಗೂ ಮಾದೇಶ್ (28) ಬಂಧಿತರು.
ಆರೋಪಿಗಳು ಆ.13ರಂದು ಚಂದ್ರಾ ಲೇಔಟ್ ಠಾಣಾ ವ್ಯಾಪ್ತಿಯಿಂದ 40 ವರ್ಷದ ಮಹಿಳೆ ಹಾಗೂ ಆತನ ಪುತ್ರ ವರುಣ್ (20) ಎಂಬವ ರನ್ನು ಅಪಹರಿಸಿ 3 ದಿನ ಅಕ್ರಮವಾಗಿ ಗೃಹ ಬಂಧನದಲ್ಲಿರಿಸಿಕೊಂಡು ದೈಹಿಕ ಹಾಗೂ ಲೈಂಗಿಕ ದೌರ್ಜನ್ಯ ನಡೆಸಿದ್ದರು ಎಂದು ಪೊಲೀಸರು ಹೇಳಿದರು.
ಏನಿದು ಪ್ರಕರಣ?: ದೂರುದಾರ ಮಹಿಳೆ ಮತ್ತು ಆಕೆಯ ಪುತ್ರ ವರುಣ್, ಕಳವು ಮೊಬೈಲ್ ಹಾಗೂ ಚಿನ್ನಾಭರಣಗಳನ್ನು ವಿಲೇವಾರಿ ಮಾಡುವ ಕೆಲಸ ಮಾಡಿಕೊಂಡಿದ್ದಾರೆ. ಶಕ್ತಿ ಮತ್ತು ಬಸವರಾಜು ಎಂಬುವರು ಕದ್ದ ವಸ್ತುಗಳನ್ನು ವಿಲೇವಾರಿ ಮಾಡಲು ವರುಣ್ಗೆ ನೀಡುತ್ತಿದ್ದರು. ವರುಣ್ ತನ್ನ ತಾಯಿಯ ಮೂಲಕ ಈ ವಸ್ತುಗಳನ್ನು ವಿಲೇವಾರಿ ಮಾಡಿಸುತ್ತಿದ್ದ.
ಈ ವಿಚಾರ ತಿಳಿದುಕೊಂಡ ರೌಡಿ ಶೀಟರ್ಗಳಾದ ಜೋಸೆಫ್ ಮತ್ತು ಪಾಗಲ್ ಸೀನ, ವರುಣ್ ಮತ್ತು ಆಕೆಯ ತಾಯಿಗೆ 2 ಲಕ್ಷ ರೂ.ಗೆ ಬೇಡಿಕೆ ಇಟ್ಟಿದ್ದ. ಅವರು ಕೊಡಲು ನಿರಾಕರಿಸಿದಾಗ ತಮ್ಮ ಸಹಚರ ರೊಂದಿಗೆ ಆ.13ರಂದು ಚಂದ್ರಾಲೇ ಔಟ್ನಿಂದ ತಾಯಿ-ಮಗನನ್ನು ಅಪಹರಣ ಮಾಡಿದ್ದರು. ಬಳಿಕ ಕೆಂಗೇರಿಯ ಪ್ರತಾಪ್ ಮತ್ತು ಸೌಮ್ಯಾ ಮನೆಯಲ್ಲಿ ಅಕ್ರಮವಾಗಿ ಗೃಹ ಬಂಧನದಲ್ಲಿರಿಸಿದ್ದರು ಎಂದು ಪೊಲೀಸರು ಮಾಹಿತಿ ನೀಡಿದರು.
ತಾಯಿ-ಮಗನ ಅಕ್ರಮ ಗೃಹ ಬಂಧನದ ವೇಳೆ ಆರೋಪಿಗಳು ಇಬ್ಬರ ಮೇಲೆ ದೈಹಿಕ ಹಲ್ಲೆ ನಡೆಸಿ ದ್ದರು. ಈ ವೇಳೆ ವರುಣ್ ತಾಯಿ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿ, 2 ಲಕ್ಷ ರೂ. ಬೇಡಿಕೆ ಇರಿಸಿದ್ದರು. ಬಳಿಕ ಇವರ ಬಳಿ ಹಣ ಇಲ್ಲ ಎಂಬುದನ್ನು ತಿಳಿದುಕೊಂಡು ಆ.16ರಂದು ಬಿಟ್ಟು ಕಳುಹಿಸಿದ್ದರು. ಬಳಿಕ ಮಹಿಳೆ ಚಂದ್ರಾಲೇಔಟ್ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಈ ದೂರಿನ ಮೇರೆಗೆ ತನಿಖೆ ನಡೆಸಿ 9 ಮಂದಿ ಆರೋಪಿಗಳನ್ನು ಬಂಧಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಪ್ರೇಯಸಿಯ ಪೀಡಿಸುತ್ತಿದ್ದವನಿಗೆ ಪ್ರಿಯಕರನಿಂದ ಚಾಕು ಇರಿತ!
Bengaluru: ಮೆಜೆಸ್ಟಿಕ್ ಬಳಿ ಬಿಎಂಟಿಸಿ ಬಸ್ ಡಿಕ್ಕಿ; ಅಂಗವಿಕಲ ಸ್ಥಳದಲ್ಲೇ ಸಾವು
Bengaluru: ಪರಪ್ಪನ ಅಗ್ರಹಾರ ಕಾರಾಗೃಹದಲ್ಲಿ ಮತ್ತೆ 9 ಮೊಬೈಲ್ ಫೋನ್ಗಳು ಪತ್ತೆ!
Leopard: ಎಲೆಕ್ಟ್ರಾನಿಕ್ ಸಿಟಿ ಎನ್ಟಿಟಿಎಫ್ ಆವರಣ ಬಳಿ ತಡರಾತ್ರಿ ಚಿರತೆ ಪ್ರತ್ಯಕ್ಷ
Anekal: ಶಾಲಾ ಬಸ್ ಅಡ್ಡಗಟ್ಟಿ ಚಾಲಕನಿಗೆ ತೀವ್ರ ಹಲ್ಲೆ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Chess Olympiad: ಚೀನ, ಜಾರ್ಜಿಯ ವಿರುದ್ಧ ಭಾರತಕ್ಕೆ ಜಯ
High Court: ಬಾಂಬ್ ಸ್ಫೋಟ ಹೇಳಿಕೆ; ಶೋಭಾ ಕರಂದ್ಲಾಜೆ ಮೇಲಿನ ಕೇಸ್ ರದ್ದು
15ನೇ ವಿಶ್ವ ಅಗ್ನಿಶಾಮಕ ಕ್ರೀಡಾಕೂಟ: 2 ಚಿನ್ನ ಗೆದ್ದ ಅಶ್ವಿನ್ ಸನಿಲ್ ಕುರ್ಕಾಲು
Commonwealth ಚಾಂಪಿಯನ್ಶಿಪ್ : ಅಲ್ಲುರಿ ಅಜಯ್ಗೆ ಬಂಗಾರ
High Court; “ಅರ್ಧ ಪಾಕಿಸ್ಥಾನ’: ಯತ್ನಾಳ್ ಹೇಳಿಕೆಗೆ ಹೈಕೋರ್ಟ್ ಸಿಟ್ಟು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.