Hosanagar: ನಗರ ಭಾಗದಲ್ಲಿ ಸರಣಿ ಕಳ್ಳತನ ಪ್ರಕರಣ;ಆತಂಕದಲ್ಲಿ ಜನರು;ಪೊಲೀಸರಿಂದ ಜಾಗೃತಿ


Team Udayavani, Aug 19, 2024, 2:49 PM IST

Hosanagar: ನಗರ ಭಾಗದಲ್ಲಿ ಸರಣಿ ಕಳ್ಳತನ ಪ್ರಕರಣ;ಆತಂಕದಲ್ಲಿ ಜನರು;ಪೊಲೀಸರಿಂದ ಜಾಗೃತಿ

ಹೊಸನಗರ: ತಾಲೂಕಿನ ನಗರ ಭಾಗದಲ್ಲಿ ಸರಣಿ ಕಳ್ಳತನ ಯತ್ನ ಮತ್ತು ಕಳ್ಳತನ ಪ್ರಕರಣಗಳು ನಡೆಯುತ್ತಿದ್ದು ಜನರಿಗೆ ಆತಂಕ ತರಿಸಿದರೆ ಪೊಲೀಸರಿಗೆ ತಲೆನೋವು ತರಿಸಿದೆ.

ಕಳೆದ ಆ.14 ರಂದು ಕಾನುಗೋಡು ರಾಮಕೃಷ್ಣ ಎಂಬುವವರ ಮನೆಯಲ್ಲಿ ಕಳ್ಳತನ ನಡೆದಿದ್ದು ರೂ.1,36,500-00 ಮೌಲ್ಯದ ಚಿನ್ನಾಭರಣ, ರೂ.4000 ಮೌಲ್ಯದ ಬೆಳ್ಳಿಯ ವಸ್ತುಗಳು ಕಳ್ಳತನವಾಗಿದೆ.

ಇದೇ ದಿನ ಮಾಸ್ತಿಕಟ್ಟೆ ಸಮೀಪದ ಕಿಲಗಾರು ವಾಸಿ ಸುಜಯ ಗೋಪಾಲ, ಸುಜಯ ಚಂದ್ರಪ್ಪಗೌಡ ಎಂಬುವವರ ಮನೆಯಲ್ಲೂ ಕೂಡ ಕಳ್ಳತನಕ್ಕೆ ಯತ್ನಿಸಿದ ಘಟನೆಗಳು‌ ನಡೆದಿವೆ.

ಪುಟ್ಟಕ್ಕನ ಮನೆ:

ನಗರ ಮಾಸ್ತಿಕಟ್ಟೆ ಮಾರ್ಗದ ಮುಂಡಳ್ಳಿ ಸಮೀಪದ ಪುಟ್ಟಕ್ಕನ ಮನೆಯಲ್ಲೂ ಕಳ್ಳತನ ಮಾಡಿದ ಘಟನೆ ಭಾನುವಾರ ನಡೆದಿದೆ. ಬಂಗಾರದ ಓಲೆ, ಮತ್ತು ಉಂಗುರ ಮತ್ತು‌ ನಗದು ಕಳ್ಳತನ ಮಾಡಲಾಗಿದೆ. ಇದು ಸಾರ್ವಜನಿಕವಾಗಿ ಚರ್ಚೆಯಾಗುತ್ತಿದ್ದಂತೆ ಸೋಮವಾರ ಬೆಳಿಗ್ಗೆ ಪುಟ್ಟಕ್ಕನ ಮನೆ ಗೇಟ್ ಮುಂಭಾಗ ಕದ್ದ ಮಾಲನ್ನು ವಾಪಾಸು ಇಟ್ಟು ಹೋಗಿರುವುದು ಕುತೂಹಲಕ್ಕೆ ಕಾರಣವಾಗಿದೆ.

ಹಾಡು ಹಗಲೇ ಘಟನೆ:

ಕಿಲಗಾರು, ಕಾನುಗೋಡು, ಮುಂಡಳ್ಳಿ ಸೇರಿದಂತೆ ಎಲ್ಲಾ ಪ್ರಕರಣಗಳು ಹಾಡುಹಗಲೇ‌ ನಡೆದಿದ್ದು ಆತಂಕಕ್ಕೆ ಕಾರಣವಾಗಿದೆ. ಕೂಲಿಕಾರ್ಮಿಕರ ಮನೆಯನ್ನೇ ಕಳ್ಳತನಕ್ಕೆ ಕೇಂದ್ರೀಕರಿಸಿ ಮನೆಯಲ್ಲಿ ಯಾರು ಇಲ್ಲದ ಸಮಯ ನೋಡಿ ಕಳ್ಳತನದ ಯತ್ನ ಮಾಡಲಾಗುತ್ತಿದ್ದು ಪೊಲೀಸರಿಗೆ ತಲೆನೋವು ತರಿಸಿದೆ.

ಸಿಸಿ ಟಿವಿಗಳು ಇಲ್ಲ:

ಕಳ್ಳತನ ಪ್ರಕರಣ ತಡೆಗಟ್ಟಲು ಇನ್ನಿಲ್ಲದ ಪ್ರಯತ್ನ ಪೊಲೀಸರಿಂದ ನಡೆದರು ಕೂಡ ಆಯ್ದ ಜಾಗಗಗಳಲ್ಲಿ‌ ಸಿಸಿಟಿವಿ ಕ್ಯಾಮೆರಾ ಅಳವಡಿಸದಿರುವುದು ಹಿನ್ನಡೆಯಾಗಿದೆ. ಪೊಲೀಸರು ಕರಪತ್ರ ಹಂಚಿ ಜಾಗೃತಿ ಮೂಡಿಸಿದರು ಕೂಡ ಯಾವುದೇ ಪ್ರಯೋಜನವಾಗಿಲ್ಲ.

ನಗರ ಭಾಗದಲ್ಲಿ ಒಂಟಿಮನೆಗಳು ಹೆಚ್ಚು. ಅಲ್ಲದೇ ಕೂಲಿಕಾರ್ಮಿಕರು ಕೂಡ ಹೆಚ್ಚು, ಬೆಳಿಗ್ಗೆ ಮನೆಗೆ ಬಾಗಿಲು ಹಾಕಿ ಕೆಲಸಕ್ಕೆ ಹೋದರೆ ಬರುವುದು ಸಂಜೆಯೇ. ಹೀಗಾಗಿ ಈ ಸಂದರ್ಭ ನೋಡಿಕೊಂಡು ಕಳ್ಳತನ ಯತ್ನ ನಡೆಯುತ್ತಿದೆ.

ಕಳ್ಳತನದ ಯತ್ನಗಳಿಂದ ಬಚಾವಾಗಲು, ಪೊಲೀಸರೊಂದಿಗೆ ಸಾರ್ವಜನಿಕರ ಸಹಕಾರ ಕೂಡ ಮುಖ್ಯ. ಭದ್ರತೆ ಇಲ್ಲದ ಮನೆಗಳಲ್ಲಿ ಚಿನ್ನಾಭರಣ, ನಗದು ಇಟ್ಟು ಹೋಗುವ ಬಗ್ಗೆ ನಿಗಾ ವಹಿಸಬೇಕು. ಎರಡು ಮೂರು ದಿನಗಳ ಕಾಲ ಮನೆ ಬಿಟ್ಟು ಇರುವ ಸಂದರ್ಭದಲ್ಲಿ ಅಗತ್ಯ ಮಾಹಿತಿಯನ್ನು ಪೊಲೀಸರಿಗೆ ನೀಡುವುದು ಉತ್ತಮ ಎಂಬ ಅಭಿಪ್ರಾಯ ಕೂಡ ವ್ಯಕ್ತವಾಗಿದೆ.
ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪಿಎಸ್ಐ ಶಿವಾನಂದ ಕೋಳಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.

ಒಟ್ಟಾರೆ ನಗರ ಮಾಸ್ತಿಕಟ್ಟೆ ಭಾಗದಲ್ಲಿ ಕಳೆದ ಒಂದು ವಾರದಿಂದ ನಡೆಯುತ್ತಿರುವ ಕಳ್ಳತನ ಮತ್ತು ಯತ್ನ ಪ್ರಕರಣಗಳು ಪೊಲೀಸರ‌ ನಿದ್ದೆಗೆಡಿಸಿರುವುದು ಮಾತ್ರ ಸತ್ಯ.

ಟಾಪ್ ನ್ಯೂಸ್

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-doco

Shivamogga ವಾಯುವಿಹಾರ ಮಾಡುತ್ತಿದ್ದ ಎಂಬಿಬಿಎಸ್ ವಿದ್ಯಾರ್ಥಿ ಕುಸಿದು ಸಾ*ವು !

10-sagara

Sagara: ವಿದ್ಯುತ್ ಸಂಪರ್ಕ ಕಡಿತಗೊಳಿಸುತ್ತಿರುವ ಮೆಸ್ಕಾಂ ನೀತಿ ಖಂಡನೆ; ಪ್ರತಿಭಟನೆ

Shimoga: ವಿವಾದಿತ ಫ್ಲೆಕ್ಸ್ ಹಾಗು ಖಡ್ಗ ತೆರವು ಮಾಡಿದ ಪೊಲೀಸರು

Shimoga: ವಿವಾದಿತ ಫ್ಲೆಕ್ಸ್ ಹಾಗು ಖಡ್ಗ ತೆರವು ಮಾಡಿದ ಪೊಲೀಸರು

Traffic: ಆಗುಂಬೆ ಘಾಟಿಯಲ್ಲಿ ವಾಹನ ಬ್ರೇಕ್ ಫೇಲ್, ಟ್ರಾಫಿಕ್ ನಲ್ಲಿ ಸಿಲುಕಿದ ಆಂಬ್ಯುಲೆನ್ಸ್

Traffic: ಆಗುಂಬೆ ಘಾಟಿಯಲ್ಲಿ ವಾಹನ ಬ್ರೇಕ್ ಫೇಲ್, ಟ್ರಾಫಿಕ್ ನಲ್ಲಿ ಸಿಲುಕಿದ ಆಂಬ್ಯುಲೆನ್ಸ್

B. Y. Vijayendra ಬಗ್ಗೆ ಹಾದಿಯಲ್ಲಿ ಮಾತನಾಡುವುದು ಸಲ್ಲ: ರೇಣುಕಾಚಾರ್ಯ

B. Y. Vijayendra ಬಗ್ಗೆ ಹಾದಿಯಲ್ಲಿ ಮಾತನಾಡುವುದು ಸಲ್ಲ: ರೇಣುಕಾಚಾರ್ಯ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.