Congress Protest; ರಾಜ್ಯಪಾಲರು ಬಿಜೆಪಿ ಏಜೆಂಟ್ ಆಗಿದ್ದಾರೆ: ಬೇಳೂರು ಗೋಪಾಲಕೃಷ್ಣ
Team Udayavani, Aug 19, 2024, 3:28 PM IST
ಶಿವಮೊಗ್ಗ: ರಾಜ್ಯಪಾಲರ ನಡೆಯಿಂದ ಪ್ರಜಾಪ್ರಭುತ್ವ ಕೊಲೆ, ಸಂವಿಧಾನ ಕೊಲೆಯಾಗಿದೆ. ಪ್ರಾಸಿಕ್ಯೂಷನ್ ಗೆ ಅನುಮತಿ ಕೊಟ್ಟಿರುವುದು ರಾಜ್ಯಪಾಲರಿಗೆ ಗೌರವ ತರುವುದಿಲ್ಲ. ಬಿಜೆಪಿ ಏಜೆಂಟ್ ಆಗಿ ಕೆಲಸ ಮಾಡುತ್ತಿರುವ ರಾಜ್ಯಪಾಲರಿಗೆ ನಾನು ಧಿಕ್ಕಾರ ಹೇಳುತ್ತೇನೆ ಎಂದು ಶಾಸಕ ಬೇಳೂರು ಗೋಪಾಲಕೃಷ್ಣ ಹೇಳಿದರು.
ಸಿಎಂ ಸಿದ್ಧರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಗೆ ರಾಜ್ಯಪಾಲರು ಅನುಮತಿ ಹಿನ್ನೆಲೆಯಲ್ಲಿ ಶಿವಮೊಗ್ಗದಲ್ಲಿ ಪ್ರತಿಭಟನೆ ವೇಳೆ ಮಾತನಾಡಿದ ಅವರು, ರಾಜ್ಯಪಾಲರೇ ಯಾವ ಉದ್ದೇಶ ಹೀಗೆ ಮಾಡುತ್ತಿದ್ದೀರಾ ನೀವು? ಕುಮಾರಸ್ವಾಮಿ, ನಿರಾಣಿ, ಶಶಿಕಲಾ ಜೊಲ್ಲೆ, ಜರ್ನಾದನ ರೆಡ್ಡಿ ವಿರುದ್ಧ ಯಾಕೆ ನೀವು ಕ್ರಮ ತೆಗೆದುಕೊಂಡಿಲ್ಲ. ಬಿಜೆಪಿ ಏಜೆಂಟ್ ಆಗಿ ಕೆಲಸ ಮಾಡಲು ನಿಮಗೆ ಹಕ್ಕಿಲ್ಲ. ಮೋದಿಯವರ ಪರವಾಗಿ, ಕುಮಾರಸ್ವಾಮಿ, ಬಿಜೆಪಿ ಪರವಾಗಿ ರಾಜ್ಯಪಾಲರೇ ನೀವು ಕೆಲಸ ಮಾಡುತ್ತಿದ್ದೀರಿ. ರಾಜ್ಯಪಾಲರೇ ನಿಮಗೆ ನಾಚಿಕೆ ಆಗಬೇಕು ಎಂದರು.
ಯಾವ ಉದ್ದೇಶ ಇಟ್ಟುಕೊಂಡು ಕೆಲಸ ಮಾಡುತ್ತಿದ್ದೀರಿ. 136 ಸೀಟ್ ಗೆದ್ದಿದ್ದೀವಿ, ಬಿಜೆಪಿಯವರು ಏನು ಮಾಡಲು ಸಾಧ್ಯವಿಲ್ಲ. ನಮ್ಮ ಸರ್ಕಾರ ಬಗ್ಗೆ ಮಾತನಾಡಲು ಬಿಜೆಪಿಯವರಿಗೆ ತಾಕತ್ತು, ಧಮ್ ಇದೆಯಾ? ನಾವು 136 ಶಾಸಕರು ಸಿದ್ದರಾಮಯ್ಯ ಪರವಿದ್ದೇವೆ. ಯಾವ ಕಾರಣಕ್ಕೂ ನಮ್ಮ ಸರ್ಕಾರ ಬೀಳುವುದಕ್ಕೆ ಆಗುವುದಿಲ್ಲ ಎಂದು ಬೇಳೂರು ಹೇಳಿದರು.
ಪಿಎಸ್ ಐ ಹಗರಣ ತನಿಖೆ ಮಾಡಿದರೆ ವಿಜಯೇಂದ್ರ ಜೈಲಿಗೆ ಹೋಗುತ್ತಾರೆ. ಯಡಿಯೂರಪ್ಪ ಹಾಗೂ ಅವರ ಮಕ್ಕಳ ಜೈಲಿಗೆ ಹೋಗುತ್ತಿದ್ದರು. ವಿಜಯೇಂದ್ರ ನೀವು ಜೈಲಿಗೆ ಹೋಗುತ್ತೀರಾ, ನಿಮ್ಮ ಅಣ್ಣನೂ ಜೈಲಿಗೆ ಹೋಗುತ್ತಾರೆ, ನೋಡುತ್ತಿರು. ನಿಮ್ಮ ಹಗರಣವನ್ನು ತೆಗೆಯುತ್ತೀವೆ, ನಿಮ್ಮ ಹಗರಣ ಬಿಡುವುದಿಲ್ಲ. ರಾಜ್ಯಪಾಲರ ಮನೆಗೆ ಮುತ್ತಿಗೆ ಹಾಕುತ್ತೇವೆ, ಬಿಡುವುದಿಲ್ಲ ಎಂದು ಬೇಳೂರು ಗೋಪಾಲಕೃಷ್ಣ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shivamogga ವಾಯುವಿಹಾರ ಮಾಡುತ್ತಿದ್ದ ಎಂಬಿಬಿಎಸ್ ವಿದ್ಯಾರ್ಥಿ ಕುಸಿದು ಸಾ*ವು !
Sagara: ವಿದ್ಯುತ್ ಸಂಪರ್ಕ ಕಡಿತಗೊಳಿಸುತ್ತಿರುವ ಮೆಸ್ಕಾಂ ನೀತಿ ಖಂಡನೆ; ಪ್ರತಿಭಟನೆ
Shimoga: ವಿವಾದಿತ ಫ್ಲೆಕ್ಸ್ ಹಾಗು ಖಡ್ಗ ತೆರವು ಮಾಡಿದ ಪೊಲೀಸರು
Traffic: ಆಗುಂಬೆ ಘಾಟಿಯಲ್ಲಿ ವಾಹನ ಬ್ರೇಕ್ ಫೇಲ್, ಟ್ರಾಫಿಕ್ ನಲ್ಲಿ ಸಿಲುಕಿದ ಆಂಬ್ಯುಲೆನ್ಸ್
B. Y. Vijayendra ಬಗ್ಗೆ ಹಾದಿಯಲ್ಲಿ ಮಾತನಾಡುವುದು ಸಲ್ಲ: ರೇಣುಕಾಚಾರ್ಯ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.