Mudhol;ಮುಂದುವರಿದ ಕಾರ್ಯಾಚರಣೆ; ಕಳ್ಳಭಟ್ಟಿ ಕೇಂದ್ರದ ಮೇಲೆ ದಾಳಿ ಮಾಡಿದ ಅರಣ್ಯ ಇಲಾಖೆ
Team Udayavani, Aug 19, 2024, 5:06 PM IST
ಮುಧೋಳ: ಯಡಹಳ್ಳಿ ಚೀಂಕಾರ ರಕ್ಷಿತಾರಣ್ಯದಲ್ಲಿನ ಕಳ್ಳಭಟ್ಟಿ ಕೇಂದ್ರಗಳ ಮೇಲಿನ ದಾಳಿಯನ್ನು ಮುಂದುವರಿಸಿರುವ ಅರಣ್ಯ ಇಲಾಖೆ ಸಿಬ್ಬಂದಿ ಸೋಮವಾರ ನಾಲ್ಕು ಕಡೆಗಳಲ್ಲಿ ದಾಳಿ ನಡೆಸಿ ಕಳ್ಳಭಟ್ಟಿ ತಯಾರಿಕೆಯ ಪರಿಕರಗಳನ್ನು ನಾಶಪಡಿಸಿದ್ದಾರೆ.
ಆ.16ರಂದು ಉದಯವಾಣಿಯಲ್ಲಿ ಪ್ರಕಟಗೊಂಡಿದ್ದ ಚೀಂಕಾರ ರಕ್ಷಿತಾರಣ್ಯಕ್ಕೆ ಕಳ್ಳಕಾಕರ ಕಾಕದೃಷ್ಟಿಯೆಂಬ ತಲೆಬರಹದ ವಿಸ್ತೃತ ವರದಿಯಿಂದ ಎಚ್ಚೆತ್ತು ದಾಳಿ ನಡೆಸುತ್ತಿರುವ ಅರಣ್ಯ ಇಲಾಖೆ ಸಿಬ್ಬಂದಿ ವರದಿ ಪ್ರಕಟಗೊಂಡ ದಿನದಂದೇ ಮೂರುಕಡೆಗಳಲ್ಲಿ ದಾಳಿ ನಡೆಸಿ ಅಪಾರ ಪ್ರಮಣದ ಕಳ್ಳಭಟ್ಟಿ ಪರಿಕರಗಳನ್ನು ನಾಶಪಡಿಸಿತ್ತು. ದಾಳಿಯ ಮುಂದುವರಿದ ಭಾಗವಾಗಿ ಸೋಮವಾರ ನಾಲ್ಕು ಕಡೆಗಳಲ್ಲಿ ದಾಳಿ ನಡೆಸಿ ಕಳ್ಳಭಟ್ಟಿ ಕೇಂದ್ರಗಳನ್ನು ನಾಶಪಡಿಸಿದ್ದಾರೆ.
ಡಿಎಫ್ಓ ಸಿ.ಜೆ.ಮಿರ್ಜಿ, ಎಸಿಎಫ್ ಹಾಗೂ ವಲಯ ಅರಣ್ಯಾಧಿಕಾರಿ ಎಚ್.ಬಿ. ಡೋಣಿ ಮಾರ್ಗದರ್ಶನದಲ್ಲಿ ನಡೆದ ದಾಳಿ ಕಾರ್ಯಾಚರಣೆಯಲ್ಲಿ ಉಪವಲಯ ಅರಣ್ಯಾಧಿಕಾರಿ ರಮೇಶ ಮೆಟಗುಡ್ಡ, ಗಸ್ತು ಅರಣ್ಯಪಾಲಕರಾದ ಶಿವರಾಜ ಸಜ್ಜನ, ಚಂದ್ರಶೇಖರ ಉಪ್ಪಾರ, ಆನಂದ ಸಾಗರ, ಗುರಪ್ಪ ಬಾಗೇವಾಡಿ ಹಾಗೂ ವಾಚರ್ ಗಳಾದ ಹನಮಂತ ತಳವಾರ, ಈರಪ್ಪ ಕೋಲೂರ, ತಿಪ್ಪಣ್ಣ ವಾಬನ್ನವರ ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Rabkavi Banhatti: ತೇರಿನ ಮೇಲಿನಿಂದ ಬಿದ್ದ ವ್ಯಕ್ತಿ ಸ್ಥಳದಲ್ಲೇ ಸಾವು
ಮಹಾಲಿಂಗಪುರದ ಮಹಾಜಾತ್ರೆ…: ಲಕ್ಷಾಂತರ ಭಕ್ತರು ಭಾಗಿ… ರಾತ್ರಿಯಿಡಿ ಸಾಗುವ ರಥೋತ್ಸವ
Pak flag ಹಾರಾಡುವ ವಾಟ್ಸಪ್ ಸ್ಟೇಟಸ್: ಯುವಕ ಪೊಲೀಸರ ವಶಕ್ಕೆ
Mudhol: ಆರ್ಎಸ್ಎಸ್ನಿಂದ ದೇಶಕ್ಕೆ ಕಂಟಕ: ಆರ್.ಬಿ.ತಿಮ್ಮಾಪುರ
Farmers; ರೈತನ ಬೆಳೆ ಕಾಯುಲು ಸಿನಿ ತಾರೆಯರು; ಉತ್ತಮ ಬೆಳೆಗೆ ರೈತನ ಹೊಸ ಪ್ರಯೋಗ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Kundapura: ಗಾಂಧಿ ಮೈದಾನದಲ್ಲಿ ಸಮಸ್ಯೆಗಳದ್ದೇ ಆಟ!
ರಸ್ತೆ ಪಕ್ಕ ನಡೆದುಕೊಂಡು ಹೋಗುತ್ತಿದ್ದವರ ಮೇಲೆ ಲಾರಿ ಹರಿದು ಇಬ್ಬರು ಸಾವು
Chikkaballapura; ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ದಲಿತ ಸಂಘಟನೆಗಳ ಪ್ರತಿಭಟನೆ
Bajpe ಬಸ್ ನಿಲ್ದಾಣ ಕಟ್ಟಡ ಪೂರ್ಣ; 90 ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣ
Jammu and Kashmir:ಕಲಂ 370 ಪುನರ್ ಜಾರಿ-ಕಾಂಗ್ರೆಸ್, ಎನ್ ಸಿ ನಿಲುವಿಗೆ ಪಾಕ್ ಬೆಂಬಲ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.