ರೋಗಿಗಳ ಸೇವೆಯೇ ದೇವರಿಗೆ ಸಲ್ಲಿಸುವ ನಿಜ ಸೇವೆ- ಶಿವಯೋಗಿ ರಾಜೇಂದ್ರ ಸ್ವಾಮೀಜಿ


Team Udayavani, Aug 19, 2024, 5:05 PM IST

ರೋಗಿಗಳ ಸೇವೆಯೇ ದೇವರಿಗೆ ಸಲ್ಲಿಸುವ ನಿಜ ಸೇವೆ- ಶಿವಯೋಗಿ ರಾಜೇಂದ್ರ ಸ್ವಾಮೀಜಿ

ಉದಯವಾಣಿ ಸಮಾಚಾರ
ಮಹಾಲಿಂಗಪುರ: ವೈದ್ಯರನ್ನು ಜೀವಂತ ದೇವರ ಸ್ವರೂಪದಲ್ಲಿ ಕಾಣುವ ರೋಗಿಗಳ ಸೇವೆಯೇ ಭಗವಂತನಿಗೆ ಮತ್ತು ಸಮಾಜಕ್ಕೆ ಸಲ್ಲಿಸುವ ನಿಜವಾದ ಸೇವೆಯಾಗಿದೆ ಎಂದು ಮಹಾಲಿಂಗೇಶ್ವರ ಮಠದ ಪೀಠಾಧಿಪತಿ ಮಹಾಲಿಂಗೇಶ್ವರ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಹೇಳಿದರು.

ಪಟ್ಟಣದ ಡಾ|ವಿಜಯ ಹಂಚಿನಾಳ ಅವರ ಅನುಪ ಆಸ್ಪತ್ರೆ ಹಾಗೂ ಹಾರ್ಟಕೇರ್‌ ಸೆಂಟರ್‌ಲ್ಲಿ ನೂತನವಾಗಿ ಆರಂಭಿಸುತ್ತಿರುವ ಅತ್ಯಾಧುನಿಕ ಸೌಲಭ್ಯವುಳ್ಳ ನಾಲ್ಕು ನೂತನ ಘಟಕಗಳನ್ನು ಉದ್ಘಾಟಿಸಿ ಮಾತನಾಡಿದ ಅವರು, ಡಾ| ಹಂಚಿನಾಳ ಕುಟುಂಬವು ಕಳೆದ ಮೂರು ದಶಕಗಳ ಆರೋಗ್ಯಸೇವೆಯಿಂದಾಗಿ ಬಾಗಲಕೋಟೆ- ಬೆಳಗಾವಿ, ವಿಜಯಪುರ ಜಿಲ್ಲೆಗಳ ವೈದ್ಯಕೀಯ ಕ್ಷೇತ್ರದಲ್ಲಿ ಖ್ಯಾತಿ ಪಡೆದಿರುವ ಕುಟುಂಬವಾಗಿದೆ.

ಮಹಾಲಿಂಗಪುರದಂತಹ ಪಟ್ಟಣದಲ್ಲಿ ಮಹಾನಗರಗಳಲ್ಲಿ ಇರುವಂತಹ ಅತ್ಯಾಧುನೀಕ ಸೌಲಭ್ಯಯುಳ್ಳ ಘಟಕಗಳನ್ನು ಆರಂಭಿಸಿದ್ದು, ಈ ಭಾಗದ ಸಾರ್ವಜನಿಕರಿಗೆ ಅನುಕೂಲವಾಗಲಿದೆ ಎಂದರು.

ನಾಲ್ಕು ನೂತನ ಘಟಕಗಳ ಉದ್ಘಾಟನೆ: ಅನುಪ ಆಸ್ಪತ್ರೆಯಲ್ಲಿ ನೂತನವಾಗಿ ಆರಂಭಿಸಿರುವ ಹೃದಯರೋಗಕ್ಕೆ ಸಂಬಂಧಿಸಿದ ಕಾರ್ಡಿಯಾಕ್‌ ಕ್ಯಾತ ಲ್ಯಾಬ್‌, ಸ್ತ್ರೀ ರೋಗಗಳಿಗೆ ಸಂಬಂ  ವೂಮೆನ್ಸ್‌ ಕ್ಲಿನಿಕ್‌, ವಿವಿಧ ಶಸ್ತ್ರಚಿಕಿತ್ಸಾ ರೋಗಿಗಳ ಸಂಬಂಧಿಸಿದ ಮ್ಯಾಡೂಲರ್‌ ಆಪರೇಷನ್‌ ಥಿಯೇಟರ್‌, ತುರ್ತು ರೋಗಿಗಳ ಸಂಬಂಧಿಸಿದ ಆಯ್‌ .ಸಿ.ಸಿ.ಯು(ತುರ್ತು ನಿಗಾ ಘಟಕ) ಸೇರಿದಂತೆ ನಾಲ್ಕು ಘಟಕಗಳನ್ನು ಮಹಾಲಿಂಗೇಶ್ವರ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಉದ್ಘಾಟಿಸಿದರು.

ಅತಿಥಿಗಳಾಗಿ ಭಾಗವಹಿಸಿದ್ದ ಬೆಳಗಾವಿಯ ನರರೋಗ ತಜ್ಞ ಡಾ| ಜಿ.ಎಂ.ವಾಲಿ, ಮಹಾಲಿಂಗಪುರದ ಶಸ್ತ್ರ ಚಿಕಿತ್ಸಾತಜ್ಞ ಡಾ| ಎ.ಆರ್‌ .ಬೆಳಗಲಿ ಮಾತನಾಡಿ, ಡಾ| ಅನೂಪ ಮತ್ತು ಡಾ| ಅಪೂರ್ವ ಹಂಚಿನಾಳ ದಂಪತಿ ಹುಟ್ಟೂರು ಮತ್ತು ಸುತ್ತಮುತ್ತಲಿನ ಗ್ರಾಮೀಣ ಭಾಗದ ಜನರ ಸೇವೆ ಮಾಡಬೇಕೆಂಬ ಸಂಕಲ್ಪದೊಂದಿಗೆ ಪಟ್ಟಣದಲ್ಲಿ ಸುಸಜ್ಜಿತ ಆಸ್ಪತ್ರೆ ಆರಂಭಿಸಿ ಈ ಭಾಗದ ಜನರಿಗೆ ಉತ್ತಮ ಆರೋಗ್ಯ ಸೇವೆ ನೀಡಲು ಮುಂದಾಗಿದ್ದು ಸ್ವಾಗತಾರ್ಹ. ಭವಿಷ್ಯದಲ್ಲಿ ಅನುಪ ಆಸ್ಪತ್ರೆ ಹಾಗೂ ಹಾರ್ಟ್‌ಕೇರ್‌ ಸೆಂಟರ್‌ ಜೊತೆಗೆ ಇಂದು ಪ್ರಾರಂಭವಾದ ವಿವಿಧ ಘಟಕಗಳೊಂದಿಗೆ ಅನುಪ ಆಸ್ಪತ್ರೆ ಹಾಗೂ ಹಾರ್ಟಕೇರ್‌ ಸೆಂಟರ್‌ ಆಸ್ಪತ್ರೆಯು
ಈ ಭಾಗದಲ್ಲಿನ ರೋಗಿಗಳ ಪಾಲಿನ ಸಂಜೀವಿನಿಯಾಗಿ ಬೆಳೆದು, ಉತ್ತಮ ಆರೋಗ್ಯ ಸೇವೆ ನೀಡಲಿ ಎಂದು ಶುಭ ಹಾರೈಸಿದರು.

ಅನುಪ ಆಸ್ಪತ್ರೆಯ ಮುಖ್ಯಸ್ಥರಾದ ಡಾ| ವಿಜಯ ಹಂಚಿನಾಳ ಮಾತನಾಡಿ, ಕಳೆದ ಮೂರು ದಶಕಗಳಿಂದ ಆಸ್ಪತ್ರೆಯು ಜನರಿಗೆ ಉತ್ತಮ ಆರೋಗ್ಯ ಸೇವೆನೀಡುತ್ತಾ ಬಂದಿದೆ. ಇದೀಗ ಮಹಾಲಿಂಗಪುರದ ಜನತೆಯು ಹೆಚ್ಚಿನ ಆರೋಗ್ಯ ಚಿಕಿತ್ಸೆಗಾಗಿ ಬೇರೆ ಬೇರೆ ಮಹಾನಗರಗಳಿಗೆ ಹೋಗುವುದನ್ನು ತಪ್ಪಿಸುವದಕ್ಕಾಗಿ, ರೋಗಿಗಳಿಗೆ ಅವಶ್ಯವಿರುವ ಎಲ್ಲ ಚಿಕಿತ್ಸೆಗಳನ್ನು ಒಂದೇ
ಆಸ್ಪತ್ರೆಯ ಅಡಿಯಲ್ಲಿ ನೀಡುವ ಉದ್ದೇಶದಿಂದ ನೂತನವಾಗಿ 4 ಪ್ರತ್ಯೇಕ ಘಟಕ ಆರಂಭಿಸಿದ್ದೇವೆ. ನುರಿತ ಹಾಗೂ ತಜ್ಞವೈದ್ಯರ ತಂಡವನ್ನು ಒಳಗೊಂಡ ಅನುಪ ಆಸ್ಪತ್ರೆಯು 24ಗಿ7 ಆರೋಗ್ಯ ಸೇವೆ ಒದಗಿಸಲಿದೆ. ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದರು.

ಡಾ|ಅನೂಪ ಹಂಚಿನಾಳ, ಡಾ| ಎಂ.ಜಿ.ಹಿರೇಮಠ, ಡಾ|ಅಪೂರ್ವ ಹಂಚಿನಾಳ, ನಲಿನಿ ಹಂಚಿನಾಳ, ಡಾ| ಸುಭಾಶಿನಿ ಹಿರೇಮಠ, ಡಾ| ಎಂ.ಜಿ.ಹಿರೇಮಠ ಇದ್ದರು. ಅನುಪ ಆಸ್ಪತ್ರೆಯ ನೂತನ ಘಟಕಗಳನ್ನು  ಪ್ರಾರಂಭಿಸಿದ ಡಾ|ವಿಜಯ ಹಂಚಿನಾಳ, ಡಾ|ಅನುಪ ಹಂಚಿನಾಳ ಅವರಿಗೆ ತೇರದಾಳ ಶಾಸಕ ಸಿದ್ದು ಸವದಿ ಸೇರಿದಂತೆ ವಿವಿಧ ಊರುಗಳ ವೈದ್ಯರು, ಉದ್ಯಮಿಗಳು, ಜನಪ್ರತಿನಿಧಿಗಳು, ಸಾರ್ವಜನಿಕರು ಶುಭ ಹಾರೈಸಿದರು.

ಟಾಪ್ ನ್ಯೂಸ್

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Modi (2)

PM ಮೋದಿ ಅಮೆರಿಕ ಪ್ರವಾಸ; ಮಣಿಪುರಕ್ಕೆ ಹೋಗುವುದಿಲ್ಲವೇಕೆ?:ಕಾಂಗ್ರೆಸ್ ಪ್ರಶ್ನೆ

High Court: ಮಹಿಳೆ ಅಪಹರಣ ಕೇಸ್‌; ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

High Court: ಮಹಿಳೆ ಅಪಹರಣ ಕೇಸ್‌; ಎಚ್‌.ಡಿ.ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

11

Eshwara Khandre: ಮಹದಾಯಿಗೆ ಅನುಮತಿ ಸಿಗೋವರೆಗೂ ಮರ ಕಡಿಯಲು ಬಿಡಲ್ಲ

H.D.Kumaraswamy

H. D. Kumaraswamy: ರಾಜಕೀಯ ಮಾಡಲು, ಬೆಂಕಿ ಹಚ್ಚಲು ಬಂದಿಲ್ಲ

1-frr

BJP ಶಾಸಕ ಮುನಿರತ್ನಗೆ ಷರತ್ತುಬದ್ಧ ಜಾಮೀನು; ಆದರೂ ತಪ್ಪಿಲ್ಲ ಸಂಕಷ್ಟ!

HP ಯಿಂದ ಹೊಸ ಪ್ರಿಂಟರ್‌ಗಳ ಬಿಡುಗಡೆ

HP ಯಿಂದ ಹೊಸ ಪ್ರಿಂಟರ್‌ಗಳ ಬಿಡುಗಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-rabakavi

Rabkavi Banhatti: ತೇರಿನ ಮೇಲಿನಿಂದ ಬಿದ್ದ ವ್ಯಕ್ತಿ ಸ್ಥಳದಲ್ಲೇ ಸಾವು

ಮಹಾಲಿಂಗಪುರದ ಮಹಾಜಾತ್ರೆ…: ಲಕ್ಷಾಂತರ ಭಕ್ತರು ಭಾಗಿ..ರಾತ್ರಿಯಿಡಿ ಸಾಗುವ ರಥೋತ್ಸವ

ಮಹಾಲಿಂಗಪುರದ ಮಹಾಜಾತ್ರೆ…: ಲಕ್ಷಾಂತರ ಭಕ್ತರು ಭಾಗಿ… ರಾತ್ರಿಯಿಡಿ ಸಾಗುವ ರಥೋತ್ಸವ

Pak flag ಹಾರಾಡುವ ರೀಲ್ಸ್ ವಾಟ್ಸಪ್ ಸ್ಟೇಟಸ್: ಯುವಕ ಪೊಲೀಸರ ವಶಕ್ಕೆ; ಪ್ರಕರಣ ದಾಖಲು

Pak flag ಹಾರಾಡುವ ವಾಟ್ಸಪ್ ಸ್ಟೇಟಸ್: ಯುವಕ ಪೊಲೀಸರ ವಶಕ್ಕೆ

Mudhol: ಆರ್‌ಎಸ್‌ಎಸ್‌ನಿಂದ ದೇಶಕ್ಕೆ ಕಂಟಕ: ಆರ್‌.ಬಿ.ತಿಮ್ಮಾಪುರ

Mudhol: ಆರ್‌ಎಸ್‌ಎಸ್‌ನಿಂದ ದೇಶಕ್ಕೆ ಕಂಟಕ: ಆರ್‌.ಬಿ.ತಿಮ್ಮಾಪುರ

Farmers

Farmers; ರೈತನ ಬೆಳೆ ಕಾಯುಲು ಸಿನಿ ತಾರೆಯರು; ಉತ್ತಮ ಬೆಳೆಗೆ ರೈತನ ಹೊಸ ಪ್ರಯೋಗ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

POCSO ಪ್ರಕರಣ : ಜ್ಯೋತಿಷಿ ನರಸಿಂಹ ಪ್ರಸಾದ್‌ ಪಾಂಗಣ್ಣಾಯ ಬಂಧನ

POCSO ಪ್ರಕರಣ : ಜ್ಯೋತಿಷಿ ನರಸಿಂಹ ಪ್ರಸಾದ್‌ ಪಾಂಗಣ್ಣಾಯ ಬಂಧನ

Kundapura: ಪ್ರಾಣಿ ತ್ಯಾಜ್ಯ ಚೀಲದಲ್ಲಿ ಪತ್ತೆ… ಕೇಸು ದಾಖಲು

Kundapura: ಪ್ರಾಣಿ ತ್ಯಾಜ್ಯ ಚೀಲದಲ್ಲಿ ಪತ್ತೆ… ಕೇಸು ದಾಖಲು

1-baa

Mangalore Port ಇಬ್ಬರು ಬಾಲಕಾರ್ಮಿಕರ ರಕ್ಷಣೆ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

12

High Court: ಬಿಎಸ್‌ವೈ ಪೋಕ್ಸೋ ಕೇಸ್‌: ಸೆ.27ಕ್ಕೆ ವಿಚಾರಣೆ ಮುಂದಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.