Hunasuru: ಕಾಡು ಹಂದಿ ದಾಳಿ; ತೀವ್ರ ಗಾಯಗೊಂಡ ರೈತ
ಅರಣ್ಯ ಇಲಾಖೆ ವತಿಯಿಂದ ಚಿಕಿತ್ಸಾ ವೆಚ್ಚ ಭರಿಸಲಾಗುವುದು: ಆರ್ ಎಫ್ಒ ನಂದಕುಮಾರ್
Team Udayavani, Aug 19, 2024, 8:58 PM IST
ಹುಣಸೂರು: ಕಾಡು ಹಂದಿ ದಾಳಿ ನಡೆಸಿ ರೈತರೊಬ್ಬರನ್ನು ತೀವ್ರ ಗಾಯಗೊಳಿಸಿರುವ ಘಟನೆ ತಾಲೂಕಿನ ಧರ್ಮಾಪುರದಲ್ಲಿ ನಡೆದಿದೆ.
ಬಿಳಿಕೆರೆ ಹೋಬಳಿಯ ಧರ್ಮಾಪುರದ ಲೇ.ಸ್ವಾಮಿಗೌಡರ ಪುತ್ರ ಕರೀಗೌಡ ಗಾಯಗೊಂಡು ಹುಣಸೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕರೀಗೌಡರು ತಮ್ಮ ಜಮೀನಿನಲ್ಲಿ ದನಗಳ ಮೇಯಿಸುತ್ತಿದ್ದ ವೇಳೆ ಕಾಡು ಹಂದಿ ಏಕಾಏಕಿ ದಾಳಿ ನಡೆಸಿದಾಗ ಕಿರುಚಿಕೊಂಡಾಗ ಅಕ್ಕಪಕ್ಕದ ರೈತರು ಬರುವ ವೇಳೆಗಾಗಲೇ ಕೋರೆಯಿಂದ ಹೊಟ್ಟೆ, ಎದೆ, ಬೆನ್ನಿನ ಭಾಗಕ್ಕೆ ತಿವಿದು ಗಾಯಗೊಳಿಸಿದೆ. ಜನರು ಬರುವುದು ಕಂಡು ಕಾಡು ಹಂದಿ ಪರಾರಿಯಾಗಿದೆ.
ತೀವ್ರ ಗಾಯಗೊಂಡು ಅಸ್ವಸ್ಥಗೊಂಡಿದ್ದ ಕರೀಗೌಡರ ಗ್ರಾಮಸ್ಥರು ಹುಣಸೂರಿನ ಕಾವೇರಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ವಿಷಯ ತಿಳಿದ ಅರಣ್ಯ ಇಲಾಖೆ ಸಿಬ್ಬಂದಿ ಘಟನಾ ಸ್ಥಳ ಪರಿಶೀಲಿಸಿದ್ದಾರೆ. ಚಿಕಿತ್ಸಾವೆಚ್ಚವನ್ನು ಇಲಾಖೆ ಭರಿಸುವುದಾಗಿ ಆರ್ ಎಫ್ ಒ ನಂದಕುಮಾರ್ ತಿಳಿಸಿದ್ದಾರೆ.
ಹಂದಿ ಹಾವಳಿ ತಪ್ಪಿಸಲು ರೈತರ ಆಗ್ರಹ:
ಹಂದಿ ಹಾವಳಿಯಿಂದ ಧರ್ಮಾಪುರ, ಗೌರಿಪುರ, ನಂಜಾಪುರ ಭಾಗದ ರೈತರು ಬೆಳೆದ ಬೆಳೆಗಳು ಹಾನಿಯಾಗಿ ಆತಂಕದಲ್ಲಿದ್ದು, ಸಿಕ್ಕಷ್ಟು ಬೆಲೆಗಳಿಗೆ ಬೆಳೆ ಮಾರಾಟ ಮಾಡುವಂತಾಗಿದೆ. ಹಂದಿ ಹಾವಳಿ ತಪ್ಪಿಸಲು ಕ್ರಮ ಕೈಗೊಳ್ಳದಿದ್ದಲ್ಲಿ ಅರಣ್ಯ ಇಲಾಖೆ ಎದುರು ಪ್ರತಿಭಟನೆ ನಡೆಸಲಾಗುವುದೆಂದು ನಂಜಾಪುರ ಮನು, ರಾಕೇಶ್, ಮಹದೇವ್ ಎಚ್ಚರಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
PM ಮೋದಿಗೆ ಕಾಂಗ್ರೆಸಿಗರಿಂದ ಬೈಗುಳ: ಖರ್ಗೆ ಪತ್ರಕ್ಕೆ ನಡ್ಡಾ ತೀಕ್ಷ್ಣ ಪ್ರತ್ಯುತ್ತರ
Tungabhadra ಡ್ಯಾಂನ ಎಲ್ಲ 33 ಗೇಟ್ ಬದಲಿಸಲು ತಜ್ಞರ ಸಲಹೆ
Congress-NC ಮೈತ್ರಿಗೆ ಪಾಕ್ ಬೆಂಬಲ, 370ನೇ ವಿಧಿ ಮರುಸ್ಥಾಪನೆ ಅಸಾಧ್ಯ: ಪ್ರಧಾನಿ: ಮೋದಿ
Chess Olympiad: ಚೀನ, ಜಾರ್ಜಿಯ ವಿರುದ್ಧ ಭಾರತಕ್ಕೆ ಜಯ
High Court: ಬಾಂಬ್ ಸ್ಫೋಟ ಹೇಳಿಕೆ; ಶೋಭಾ ಕರಂದ್ಲಾಜೆ ಮೇಲಿನ ಕೇಸ್ ರದ್ದು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.