Hemmadi: ದೇಗುಲದಿಂದ ಕದ್ದ ಹಣ ಶಾಲೆಯಲ್ಲಿ ಪತ್ತೆ!
Team Udayavani, Aug 19, 2024, 9:04 PM IST
ಕುಂದಾಪುರ: ಹೆಮ್ಮಾಡಿಯ ಶ್ರೀ ಲಕ್ಷ್ಮೀ ನಾರಾಯಣ ದೇವಸ್ಥಾನದಿಂದ ಶುಕ್ರವಾರ ರಾತ್ರಿ ಕದ್ದೊಯ್ದ ಹಣವನ್ನು ಕಳ್ಳನು ಅಲ್ಲಿಯೇ ಸಮೀಪದ ಶಾಲೆಯೊಂದರಲ್ಲಿ ಇಟ್ಟು ಹೋಗಿದ್ದು, ಅದು ಸೋಮವಾರ ಸಂಜೆ ಪತ್ತೆಯಾಗಿದೆ.
ಸೋಮವಾರವೇ ದೇವಸ್ಥಾನದಲ್ಲಿ ಪ್ರತಿ ಹುಣ್ಣಿಮೆ ದಿನ ನಡೆಯುವ ಸತ್ಯನಾರಾಯಣ ಪೂಜೆ ನಡೆದಿದ್ದು, ಕಳವಾದುದರಲ್ಲಿ ಸ್ವಲ್ಪ ಹಣ ಈ ದಿನವೇ ಸಿಕ್ಕಿರುವುದು ವಿಶೇಷ.
ಶುಕ್ರವಾರ ಮಧ್ಯರಾತ್ರಿ ದೇಗುಲದ ಬಾಗಿಲು ಮುರಿದು ನುಗ್ಗಿದ್ದ ಕಳ್ಳ ಹುಂಡಿಯಲ್ಲಿದ್ದ ಹಣ, ಅರ್ಚಕರ ಕೊಠಡಿಯಲ್ಲಿದ್ದ ರಶೀದಿ ಹಣವನ್ನು ಒಯ್ದಿರುವ ದೃಶ್ಯ ದೇವಸ್ಥಾನದ ಸಿಸಿಟಿವಿಯಲ್ಲಿ ಸೆರೆಯಾಗಿತ್ತು. ಸಮೀಪದ ಮೂರು ಮನೆಗಳಿಂದಲೂ ಚಿಲ್ಲರೆ ಹಣವನ್ನು ಕದ್ದಿದ್ದ.
ದೇವಸ್ಥಾನಕ್ಕಿಂತ ತುಸು ದೂರದಲ್ಲಿರುವ ಹೆಮ್ಮಾಡಿಯ ಸರಕಾರಿ ಹಿ.ಪ್ರಾ. ಶಾಲೆಯ ಜಗಲಿಯಲ್ಲಿ ಹಸುರು ಚೀಲ ಇದ್ದುದನ್ನು ಶನಿವಾರವೇ ಶಿಕ್ಷಕರು ಗಮನಿಸಿದ್ದರು. ಆದರೆ ಅದನ್ನು ಗಂಭೀರವಾಗಿ ಪರಿಗಣಿಸಿರಲಿಲ್ಲ. ಸೋಮವಾರವೂ ಅದೇ ಸ್ಥಳದಲ್ಲಿದ್ದ ಆ ಚೀಲವನ್ನು ಗಮನಿಸಿದ ವಿದ್ಯಾರ್ಥಿಗಳು ಬಿಡಿಸಿ ನೋಡಿದಾಗ ಅದರಲ್ಲಿ ಹಣ ಪತ್ತೆಯಾಗಿದೆ.
ಕೂಡಲೇ ಮುಖ್ಯೋಪಾಧ್ಯಾಯರು ದೇವಸ್ಥಾನದ ಆಡಳಿತ ಮಂಡಳಿಯ ಗಮನಕ್ಕೆ ತಂದಿದ್ದು, ಬಳಿಕ ದೇವಸ್ಥಾನದ ವತಿಯಿಂದ ಪೊಲೀಸರಿಗೆ ಮಾಹಿತಿ ನೀಡಲಾಗಿದೆ. ಕುಂದಾಪುರ ಅಪರಾಧ ವಿಭಾಗದ ಪಿಎಸ್ಐ ಪುಷ್ಪಾ ಹಾಗೂ ಸಿಬಂದಿ ಸ್ಥಳಕ್ಕಾಗಮಿಸಿ ಹಣವನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಕೋರ್ಟ್ ಸುಪರ್ದಿಯಲ್ಲಿ ಆ ಹಣ ದೇಗುಲಕ್ಕೆ ಹಸ್ತಾಂತರವಾಗಲಿದೆ.
ಎಷ್ಟು ಹಣ ಕಳ್ಳತನ ? ಇಟ್ಟಿರುವುದೆಷ್ಟು?
ಕಳ್ಳನು ಒಟ್ಟು 45 ಸಾ.ರೂ. ಕಳವು ಮಾಡಿದ್ದ. ಈಗ ಚೀಲದಲ್ಲಿ ಸಿಕ್ಕಿದ್ದು 3,035 ರೂ. ಮಾತ್ರ. ಆತ ಉಳಿದ ಹಣವನ್ನು ಕೂಡ ಪಶ್ಚಾತ್ತಾಪದಿಂದ ಬೇರೆಲ್ಲಿಯಾದರೂ ಇಟ್ಟಿರಬಹುದೇ ಅನ್ನುವ ಅನುಮಾನ ಈಗ ಮೂಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kundapura: ಗಾಂಧಿ ಮೈದಾನದಲ್ಲಿ ಸಮಸ್ಯೆಗಳದ್ದೇ ಆಟ!
Katapady:ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಮೇಲೇರಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ವಾಹನ
Udupi: ಭಿಕ್ಷುಕರ ಪರಿಹಾರ ಕೇಂದ್ರಕ್ಕೆ ಜಿಲ್ಲಾಡಳಿತದಲ್ಲಿ ಭಿಕ್ಷೆ ಬೇಡಬೇಕಾದ ಸ್ಥಿತಿ
ISPRL Programme: ಪಾದೂರು ಜಲ್ಲಿ ಕ್ರಷರ್: ಸರ್ವೆಗೆ ಬಂದ ಅಧಿಕಾರಿಗಳಿಗೆ ತಡೆ
MAHE University: ವಾಗ್ಶಾ ವಿದ್ಯಾರ್ಥಿಗೆ ವಿಶ್ವ ಪಾಕಶಾಲೆ ಶ್ರೇಷ್ಠತೆ ಗರಿ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Lokesh Kanagaraj: ʼಕೂಲಿʼ ಸಿನಿಮಾದ ದೃಶ್ಯ ಲೀಕ್; ಬೇಸರ ಹೊರ ಹಾಕಿದ ನಿರ್ದೇಶಕ ಲೋಕೇಶ್
Kundapura: ಗಾಂಧಿ ಮೈದಾನದಲ್ಲಿ ಸಮಸ್ಯೆಗಳದ್ದೇ ಆಟ!
ರಸ್ತೆ ಪಕ್ಕ ನಡೆದುಕೊಂಡು ಹೋಗುತ್ತಿದ್ದವರ ಮೇಲೆ ಲಾರಿ ಹರಿದು ಇಬ್ಬರು ಸಾವು
Chikkaballapura; ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ದಲಿತ ಸಂಘಟನೆಗಳ ಪ್ರತಿಭಟನೆ
Bajpe ಬಸ್ ನಿಲ್ದಾಣ ಕಟ್ಟಡ ಪೂರ್ಣ; 90 ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.