Mulur: 7 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಮಹಿಳೆ ಬಂಧನ
Team Udayavani, Aug 19, 2024, 11:14 PM IST
ಕಾಪು: ಆಸ್ತಿ ವಿಚಾರದ ಗಲಾಟೆಗೆ ಸಂಬಂಧಿಸಿ ಆಪಾದಿತಳಾಗಿ ಏಳು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಅನುರಾಧಾ ಕರ್ಕೆàರ ಎಂಬಾಕೆಯನ್ನು ಕಾಪು ಪೊಲೀಸರು ಮುಂಬಯಿಯಲ್ಲಿ ಬಂಧಿಸಿ, ಕರೆ ತಂದಿದ್ದಾರೆ.
ಮೂಳೂರಿನ ಆಸ್ತಿ ಬಗ್ಗೆ ಸಂಬಂಧಿಗಳ ನಡುವೆ ಗಲಾಟೆ ನಡೆದಿದ್ದು, 2012ರಲ್ಲಿ ಪ್ರಕರಣ ದಾಖಲಾಗಿತ್ತು. ಆಕೆಯ ಸಹೋದರಿ ನೀತಾ ನೀಡಿದ್ದ ದೂರಿನಂತೆ ಅನುರಾಧಾ ವಿರುದ್ಧ ಪ್ರಕರಣ ದಾಖಲಾಗಿತ್ತು.
2017ರ ವರೆಗೆ ಕೋರ್ಟ್ಗೆ ಹಾಜರಾಗಿ ಬಳಿಕ ತಲೆಮರೆಸಿ ಕೊಂಡಿದ್ದಳು. ಈ ಬಗ್ಗೆ ಉಡುಪಿಯ 2ನೇ ಎಸಿಜೆ ಮತ್ತು ಜೆಎಂಎಫ್ಸಿ ನ್ಯಾಯಾಲಯದ ಆದೇಶದಂತೆ ಮುಂಬಯಿಗೆ ತೆರಳಿದ್ದ ಕಾಪು ಎಎಸ್ಐ ರವೀಶ್ ಹೊಳ್ಳ, ಎಚ್ಸಿಗಳಾದ ಮೊಹಮ್ಮದ್ ರಫೀಕ್ ಮತ್ತು ಸುಲೋಚನಾ ಅವರು ಎಸ್ಐ ಅಬ್ದುಲ್ ಖಾದರ್ ಮಾರ್ಗದರ್ಶನದಂತೆ ಆರೋಪಿಯನ್ನು ಆ. 18ರಂದು ಸಿಯಾನ್ನಲ್ಲಿ ಬಂಧಿಸಿ, ಊರಿಗೆ ಕರೆ ತಂದಿದ್ದಾರೆ.
ಆಕೆಯನ್ನು ಉಡುಪಿ ಕೋರ್ಟ್ಗೆ ಹಾಜರುಪಡಿಸಲಾಗಿದ್ದು ನ್ಯಾಯಾಲಯವು 15,000 ರೂ. ದಂಡ ವಿಧಿಸಿ, ಆ. 21ರಂದು ಮತ್ತೆ ಹಾಜರಾಗುವಂತೆ ಸೂಚಿಸಿ ಜಾಮೀನು ನೀಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.